ಸೀಲ್ಡೌನ್ ತೆರವಿಗೆ ಒತ್ತಾಯ
Team Udayavani, May 22, 2020, 11:45 AM IST
ಸಾಂದರ್ಭಿಕ ಚಿತ್ರ
ದಾವಣಗೆರೆ: ಕೆ.ಟಿ.ಜೆ ನಗರದಲ್ಲಿ ಕಂಟೈನ್ಮೆಂಟ್ ಝೋನ್, ಸೀಲ್ಡೌನ್ ತೆರವುಗೊಳಿಸಬೇಕು ಎಂದು ಕೆಪಿಸಿಸಿ ಎಸ್ಸಿ ವಿಭಾಗದ ಕಾರ್ಯದರ್ಶಿ ಸೋಮಲಾಪುರ ಹನುಮಂತಪ್ಪ ಜಿಲ್ಲಾಡಳಿತವನ್ನು ಒತ್ತಾಯಿಸಿದ್ದಾರೆ.
ಕೆ.ಟಿ.ಜೆ ನಗರದ 1ನೇ ಮುಖ್ಯರಸ್ತೆ, 15ನೇ ತಿರುವಿನಲ್ಲಿ ವಾಸವಾಗಿರುವ ಉರ್ದು ಶಾಲೆಯ ಶಿಕ್ಷಿಕಿ ಕೋವಿಡ್ ಸೋಂಕಿಗೆ ತುತ್ತಾಗಿದ್ದಾರೆ. ಆ ಶಿಕ್ಷಕಿ ಶಾಲೆಯ ರಜಾ ದಿನದಿಂದಲೂ ತಮ್ಮ ಸಂಬಂಧಿಕರ ಮನೆಗೆ ಹೋಗಿದ್ದವರು ಮನೆಗೆ ವಾಪಸ್ ಬಂದಿಲ್ಲ. ಅವರ ಆಧಾರ್ ಕಾರ್ಡ್, ಐಡಿ ಕಾರ್ಡ್ ಕೆಟಿಜೆ ನಗರ ವಿಳಾಸದಲ್ಲಿ ಇರುವುದರಿಂದ ಜಿಲ್ಲಾಡಳಿತ ಸೀಲ್ಡೌನ್ ಮಾಡಿದೆ. ಕೆ.ಟಿ.ಜೆ ನಗರದಲ್ಲಿ ಪರಿಶಿಷ್ಟ ಜಾತಿ, ಪರಿಶಿಷ್ಟ ವರ್ಗದವರು ಹಾಗೂ ಹಿಂದುಳಿದ ವರ್ಗದವರೇ ಹೆಚ್ಚಾಗಿ ವಾಸವಾಗಿದ್ದು ಅಂದು ದುಡಿದು ಅಂದೇ ತಿನ್ನುವವರು ಹೆಚ್ಚಾಗಿದ್ದಾರೆ.
ಕಳೆದ ಎರಡು ತಿಂಗಳನಿಂದ ಯಾವುದೇ ಕೆಲಸವಿಲ್ಲದೆ ಸಾಕಷ್ಟು ತೊಂದರೆ ಅನುಭವಿಸುತ್ತಿದ್ದಾರೆ. 10ನೇ ಕ್ರಾಸ್ ನಿಂದ 18ನೇ ಕ್ರಾಸ್, 1 ಹಾಗೂ 2ನೇ ಮುಖ್ಯರಸ್ತೆಗಳನ್ನು ಸಂಪೂರ್ಣವಾಗಿ ಸೀಲ್ಡೌನ್ ಮಾಡಿರುವುದರಿಂದ ಜನರಿಗೆ ಅನಾನುಕೂಲವಾಗಿದೆ. ಕೋವಿಡ್ ರೋಗಿಗಳು ಇಲ್ಲದೇ ಇರುವುದರಿಂದ ಜಿಲ್ಲಾಡಳಿತ ಮರುಪರಿಶೀಲಿಸಿ ಸೀಲ್ಡೌನ್ ತೆರೆವುಗೊಳಿಸಿ ಸಾಮಾನ್ಯ ಜನರಿಗೆ ಅನುಕೂಲ ಮಾಡಿಕೊಡಬೇಕು ಎಂದು ಡಾ| ಎಂ.ಡಿ. ಬಾಷಾ, ಮುಖಂಡರಾದ ಕೇರಂ ಗಣೇಶ್, ಎಸ್. ಮಾನು, ಚೇತನ್ ಕುಮಾರ್, ಮಹಾದೇವಮ್ಮ, ಗೋಣೆಪ್ಪ, ನಾಸೀರ್, ಅಂಗಡಿ ರಾಜು ಇತರರು ಒತ್ತಾಯಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಮೋದಿ 3ನೇ ಬಾರಿ ಪ್ರಧಾನಿಯಾಗಲು ಸಹಕರಿಸಿ: ಗಾಯತ್ರಿ ಸಿದ್ದೇಶ್ವರ
ಕರ್ತವ್ಯ ಲೋಪ: ಪರೀಕ್ಷಾ ಕೇಂದ್ರದ ಕೊಠಡಿ ಮೇಲ್ವಿಚಾರಕ ರಿಯಾಜ್ ಅಹಮ್ಮದ್ ಅಮಾನತು
Election Campaign: ಮೋದಿಯವರಿಂದ ಮಹಿಳಾ ಶಕ್ತಿಗೆ ಮುನ್ನುಡಿ
Davanagere: ಬಿಜೆಪಿ ಅಸಮಾಧಾನ ತಣಿಸಿದ ಬಿಎಸ್ ವೈ; ರವೀಂದ್ರನಾಥ್ ಗೆ ಚುನಾವಣೆ ಹೊಣೆ
Gayatri Siddeshwar: ಮೋದಿ ಕೈ ಬಲಪಡಿಸಲು ಬಿಜೆಪಿ ಗೆಲ್ಲಿಸಿ; ಗಾಯತ್ರಿ
MUST WATCH
ಹೊಸ ಸೇರ್ಪಡೆ
Australia; ಕೇಂದ್ರೀಯ ಗುತ್ತಿಗೆ ಪಟ್ಟಿ: ವಾರ್ನರ್, ಸ್ಟೋಯಿನಿಸ್, ಅಗರ್ ಹೊರಕ್ಕೆ
ACA ವಿರುದ್ಧ ಹೇಳಿಕೆ: ಕ್ರಿಕೆಟಿಗ ಹನುಮ ವಿಹಾರಿಗೆ ನೋಟಿಸ್
Rajasthan Royals; ಪ್ರಸಿದ್ಧ್ ಕೃಷ್ಣ ಬದಲಿಗೆ ಕೇಶವ ಮಹಾರಾಜ್
Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್ಗಳು: ಪ್ರವಾಸಿಗರಿಗೆ ಭಯ
IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್ಗಳ ಜಯ