ಹೆಣ್ಣು ಭ್ರೂ ಣಹತ್ಯೆ ಮಾಡಬೇಡಿ

ಮಹಿಳಾ ದಿನಾಚರಣೆಹೆಣ್ಣು ಮಗುವನ್ನು ಪ್ರೀತಿಸಿ-ಶಿಕ್ಷಣ ಕೊಡಿಸಿಮಹಿಳೆ ಮುಖ್ಯವಾಹಿನಿಗೆ ಬರಲಿ

Team Udayavani, Mar 9, 2020, 11:45 AM IST

9-March-4

ದಾವಣಗೆರೆ: ಹೆಣ್ಣು ಮಕ್ಕಳು ಒಳಗೊಂಡಂತೆ ಯಾರೇ ಆಗಲಿ ಹೆಣ್ಣು ಭ್ರೂಣ ಹತ್ಯೆಗೆ ಮುಂದಾಗಬಾರದು. ಯಾವುದೇ ಮಗುವಾಗಲಿ ಪ್ರೀತಿಯಿಂದ ಉತ್ತಮ ವಿದ್ಯಾವಂತರನ್ನಾಗಿ ಬೆಳೆಸಬೇಕು ಎಂದು ದಾವಣಗೆರೆ ಉತ್ತರ ವಿಧಾನಸಭಾ ಕ್ಷೇತ್ರದ ಶಾಸಕ ಎಸ್‌.ಎ. ರವೀಂದ್ರನಾಥ್‌ ಮನವಿ ಮಾಡಿದ್ದಾರೆ.

ಭಾನುವಾರ ಜಿಲ್ಲಾ ಗುರುಭವನದಲ್ಲಿ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ ಸಮಾರಂಭದ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಹೆಣ್ಣು ಭ್ರೂಣ ಹತ್ಯೆ ಸರಿ ಅಲ್ಲವೇ ಅಲ್ಲ. ನನಗೂ ನಾಲ್ವರು ಹೆಣ್ಣು ಮಕ್ಕಳಿದ್ದಾರೆ. ಯಾವುದೇ ಹುಟ್ಟಲಿ ಬಹಳ ಪ್ರೀತಿಯಿಂದ ಸಾಕಿ ಸಲುಹಬೇಕು ಎಂದರು.

ಮಹಿಳೆಯರು ಅತ್ತೆ, ಗಂಡ, ಸಂಬಂಧಿಕರಿಂದ ದೌರ್ಜನ್ಯ, ಶೋಷಣೆಗೆ ಒಳಗಾಗುತ್ತಿದ್ದರೆ ನಿರ್ದಾಕ್ಷಿಣ್ಯವಾಗಿ ಎದುರಿಸಿ ಸಮಾಜದ ಮುಖ್ಯವಾಹಿನಿಗೆ ಬರುವಂತಾಗಬೇಕು. ಈಗ ಮಹಿಳಾ ಸಂಘಟನೆಗಳು ಉತ್ತಮ ಕೆಲಸ ಮಾಡುತ್ತಿವೆ. ಲೋಕಸಭೆ, ವಿಧಾನಸಭೆ ಹೊರತುಪಡಿಸಿ ಬೇರೆ ಎಲ್ಲಾ ಕಡೆ ಶೇ.50 ಮೀಸಲಾತಿ ಇರುವುದನ್ನ ಸದುಪಯೋಗಪಡಿಸಿಕೊಂಡು ರಾಜಕೀಯಕ್ಕೆ ಬಂದು, ಚುನಾವಣೆಯಲ್ಲಿ ಸ್ಪರ್ಧಿಸಿ, ಒಳ್ಳೆಯ ಕೆಲಸ ಮಾಡಿ ಎಂದು ಆಶಿಸಿದರು.

ಜಿಲ್ಲಾ ಪಂಚಾಯತಿ ಮಾಜಿ ಅಧ್ಯಕ್ಷೆ ಶೈಲಜಾ ಬಸವರಾಜ್‌ ಮಾತನಾಡಿ, ಸಮಪಾಲು… ಸಮಬಾಳು… ಎಂಬ ಭಾವನೆಯೊಂದಿಗೆ ಜೀವನ ನಡೆಸುವಂತಾದಾಗ ಮಹಿಳಾ ದಿನಾಚರಣೆಗೆ ಅರ್ಥ ಬರುತ್ತದೆ. ಮಹಿಳಾ ದಿನಾಚರಣೆ ಎಂದರೆ ಒಂದು ವರ್ಗದ ಪರವಾಗಿಯೇ ಮಾತನಾಡುವುದು, ಪುರುಷರನ್ನು ವಿರೋಧಿಸುವುದು ಅಲ್ಲ. ಆರೋಗ್ಯಕರ ಸಮಾಜ ನಿರ್ಮಾಣ ಕಾರ್ಯದಲ್ಲಿ ಎಲ್ಲರೂ ಇರಬೇಕು. ಮಹಿಳೆಯರು ಭಾರತೀಯ ಸಂಸ್ಕೃತಿಯ ಹರಿಕಾರರಾಗಬೇಕು. ನಮ್ಮ ಮನೆ, ಕುಟುಂಬದ ನೆಮ್ಮದಿಯ ಹಾಳು ಮಾಡಿಕೊಂಡು ಸ್ವಾತಂತ್ರ್ಯ ಪಡೆಯುವುದು ಅಲ್ಲ. ಮನೆ ಗೆದ್ದು ಮಾರು ಗೆಲ್ಲು… ಎನ್ನುವಂತೆ ಮನೆ ಗೆಲ್ಲಬೇಕು. ಮಹಿಳೆಯರು ಎಲ್ಲಾ ಪಾತ್ರಗಳನ್ನು ಸರಿಯಾಗಿ ನಿಭಾಯಿಸಿ, ನ್ಯಾಯ ಒದಗಿಸಬೇಕು ಎಂದು ಸಲಹೆ ನೀಡಿದರು.

ತಾಲೂಕು ಪಂಚಾಯತಿ ಅಧ್ಯಕ್ಷೆ ಮಮತಾ ಮಲ್ಲೇಶಪ್ಪ ಮಾತನಾಡಿ, ಮಹಿಳೆಯರು ಉತ್ತಮ ಶಿಕ್ಷಣ ಪಡೆಯುವ ಮೂಲಕ ಎಲ್ಲಾ ಸಮಸ್ಯೆಗಳಿಂದ ಹೊರ ಬರಬೇಕು. ಮಹಿಳೆಯರು ಯಾವುದೇ ಕ್ಷೇತ್ರದಲ್ಲಿ ಏನೆಲ್ಲಾ ಸಾಧನೆ ಮಾಡಿದರೂ ಪುರುಷರ ಬೆಂಬಲ ಬೇಕಾಗುತ್ತದೆ. ಬಾಹ್ಯ ಪ್ರಪಂಚದಲ್ಲಿ ಸಾಧನೆ ಮಾಡಿದವರು ಮಾತ್ರವೇ ಸಾಧಕರು ಅಲ್ಲ. ಮನೆಯಲ್ಲಿನ ಎಲ್ಲಾ ಕೆಲಸವನ್ನ ಅತ್ಯಂತ ಸಮರ್ಥವಾಗಿ ನಿಭಾಯಿಸಿಕೊಂಡು ಹೋಗುವರು ಸಹ ನಿಜವಾದ ಸಾಧಕರು. ಮಹಿಳೆಯರನ್ನು ಮಹಿಳೆಯರೇ ತುಳಿಯುವುದು ಕೈ ಬಿಟ್ಟಲ್ಲಿ ಮುಂದೆ ಬರುತ್ತೇವೆ ಎಂದು ಹೇಳಿದರು.

ಜಿಲ್ಲಾ ಪಂಚಾಯತ್‌ ಸದಸ್ಯ ತೇಜಸ್ವಿ ಪಟೇಲ್‌ ಮಾತನಾಡಿ, ಮುಂದಿನ ಮಹಿಳಾ ದಿನಾಚರಣೆ ವೇಳೆಗೆ ವೃದ್ಧಾಶ್ರಮಕ್ಕೆ ಯಾರನ್ನೂ ಕಳಿಸುವುದಿಲ್ಲ. ಹೆಣ್ಣು ಭ್ರೂಣ ಹತ್ಯೆ ಮಾಡುವುದಿಲ್ಲ. 3 ವರ್ಷದವರೆಗೆ ಎದೆಹಾಲು ಕುಡಿಸುತ್ತೇವೆ. ಒಂದೇ ಮಗು ಪಡೆಯುತ್ತೇವೆ ಎಂಬ ಪ್ರತಿಜ್ಞೆ ಮಾಡಬೇಕು ಎಂದು ಮನವಿ ಮಾಡಿದರು.

ಹಿರಿಯ ಕಾರ್ಮಿಕ ಮುಖಂಡ ಎಚ್‌.ಕೆ. ರಾಮಚಂದ್ರಪ್ಪ ಮಾತನಾಡಿ, ಮಹಿಳಾ ದಿನಾಚರಣೆಗೆ ಮೂಲ ಕಾರಣ ಹತ್ತಿ ಮಿಲ್‌ನಲ್ಲಿ ಮೂಲಭೂತ ಸೌಲಭ್ಯಕ್ಕೆ ಒತ್ತಾಯಿಸಿ ಬೀದಿಗಿಳಿದು ಹೋರಾಟ ನಡೆಸಿದಂತ ಮಹಿಳಾ ಕಾರ್ಮಿಕರು. ಮಹಿಳೆಯರಿಗೆ ಗೌರವ…ನೀಡುವುದೇ ಬಹು ಮುಖ್ಯ ಕೊಡುಗೆ. ಅಂಬೇಡ್ಕರ್‌ರವರ ಶಿಕ್ಷಣ, ಸಂಘಟನೆ, ಹೋರಾಟದ ಮೂಲಕ ಮಹಿಳೆಯರು ಮುಖ್ಯವಾಹಿನಿಗೆ ಬರಬೇಕು ಎಂದು ಆಶಿಸಿದರು.

ಸರ್ಕಾರಿ ನೌಕರರ ಜಿಲ್ಲಾ ಸಂಘದ ಅಧ್ಯಕ್ಷ ಬಿ. ಪಾಲಾಕ್ಷಿ ಮಾತನಾಡಿ, ಮಹಿಳೆಯರನ್ನ ನೋಡುವ ದೃಷ್ಟಿಕೋನ ಬದಲಾವಣೆಯ ಮೂಲಕ ಎಲ್ಲಾ ಸಮಸ್ಯೆಗಳಿಗೆ ಇತಿಶ್ರೀ ಹಾಡಬೇಕು ಎಂದರು.

ಮಹಿಳೆಯರ ಸಮಸ್ಯೆಗಳು ಮತ್ತು ಸವಾಲುಗಳು… ವಿಷಯ ಕುರಿತು ರಾಜನಹಳ್ಳಿ ಸೀತಮ್ಮ ಪಿಯು ಕಾಲೇಜಿನ ಉಪನ್ಯಾಸಕಿ ಅರುಣಾಕುಮಾರಿ ಬಿರಾದಾರ್‌ ಉಪನ್ಯಾಸ ನೀಡಿದರು. ಜಿಲ್ಲಾ ಪಂಚಾಯತಿ ಸಾಮಾಜಿಕ ನ್ಯಾಯ ಸ್ಥಾಯಿ ಸಮಿತಿ ಅಧ್ಯಕ್ಷ ಎನ್‌. ಲೋಕೇಶ್ವರಪ್ಪ, ತಾಲೂಕು ಪಂಚಾಯತ್‌ ಸದಸ್ಯ ಜಿ.ಜಿ. ಸಂಗಜ್ಜಗೌಡ್ರು, ಜಿಲ್ಲಾ ಸ್ರ್ತೀ ಶಕ್ತಿ ಒಕ್ಕೂಟದ ಅಧ್ಯಕ್ಷೆ ಜಿ.ಸಿ.ಮಂಗಳಾ, ತಾಲೂಕು ಅಧ್ಯಕ್ಷೆ ಶಕುಂತಲ ಇತರರು ಇದ್ದರು. ಸರ್ಕಾರಿ ಅಂಧ ಮಕ್ಕಳ ಶಾಲಾ ವಿದ್ಯಾರ್ಥಿಗಳು ನಾಡಗೀತೆ ಹಾಡಿದರು. ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪ ನಿರ್ದೇಶಕ ಕೆ.ಎಚ್‌. ವಿಜಯ್‌ಕುಮಾರ್‌ ಸ್ವಾಗತಿಸಿದರು. ಪ್ರಶಸ್ತಿ ಪ್ರದಾನ ಮಾಡಲಾಯಿತು.

ಟಾಪ್ ನ್ಯೂಸ್

1-asaa

Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..

who will be the Indian fast bowlers for t20 world cup

T20 World Cup; ಯಾರಿಲ್ಲ.. ಯಾರಿಲ್ಲ.. ವಿಶ್ವಕಪ್ ಗೆ ವೇಗದ ಬೌಲರ್ ಗಳು ಯಾರೆಲ್ಲಾ?

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಮಾಡುವ ಹಾಗಿಲ್ಲ

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ

1-qwqwewqe

IPL ಅಕ್ರಮ ಪ್ರಸಾರ ಕೇಸ್; ನಟಿ ತಮನ್ನಾಗೆ ಸಂಕಷ್ಟ: ಸೈಬರ್ ಸೆಲ್ ನೋಟಿಸ್

1-wqqwewqe

BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್

Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್

Gayatri Siddeshwar: ಸಮಗ್ರ ನೀರಾವರಿ ಸೌಲಭ್ಯಕ್ಕೆ ಆದ್ಯತೆ; ಗಾಯಿತ್ರಿ

Gayatri Siddeshwar: ಸಮಗ್ರ ನೀರಾವರಿ ಸೌಲಭ್ಯಕ್ಕೆ ಆದ್ಯತೆ; ಗಾಯಿತ್ರಿ

Harihara ಬಿಜೆಪಿ ಶಾಸಕ ಬಿ.ಪಿ.ಹರೀಶ್‌ಗೆ ಜೀವ ಬೆದರಿಕೆ,

Harihara ಬಿಜೆಪಿ ಶಾಸಕ ಬಿ.ಪಿ.ಹರೀಶ್‌ಗೆ ಜೀವ ಬೆದರಿಕೆ

bp harish

Harihara; ಅಕ್ರಮ ಮರಳುಗಾರಿಕೆ ಮಾಹಿತಿ ನೀಡಿದ್ದಕ್ಕೆ ಬಿಜೆಪಿ ಶಾಸಕರಿಗೆ ಜೀವ ಬೆದರಿಕೆ

Lok Sabha Election: ಕಾಂಗ್ರೆಸ್‌ನಿಂದ ಜನರಿಗೆ ಸುಳ್ಳಿನ ಗ್ಯಾರಂಟಿ: ಗಾಯಿತ್ರಿ ಸಿದ್ದೇಶ್ವರ

Lok Sabha Election: ಕಾಂಗ್ರೆಸ್‌ನಿಂದ ಜನರಿಗೆ ಸುಳ್ಳಿನ ಗ್ಯಾರಂಟಿ: ಗಾಯಿತ್ರಿ ಸಿದ್ದೇಶ್ವರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-asaa

Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..

who will be the Indian fast bowlers for t20 world cup

T20 World Cup; ಯಾರಿಲ್ಲ.. ಯಾರಿಲ್ಲ.. ವಿಶ್ವಕಪ್ ಗೆ ವೇಗದ ಬೌಲರ್ ಗಳು ಯಾರೆಲ್ಲಾ?

ನರಗುಂದ: ಸಮಾಜದಲ್ಲಿ ದೇವಸ್ಥಾನಗಳು ಭಕ್ತಿಯ ಸಂಗಮ- ಶಾಂತಲಿಂಗ ಸ್ವಾಮೀಜಿ

ನರಗುಂದ: ಸಮಾಜದಲ್ಲಿ ದೇವಸ್ಥಾನಗಳು ಭಕ್ತಿಯ ಸಂಗಮ- ಶಾಂತಲಿಂಗ ಸ್ವಾಮೀಜಿ

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಮಾಡುವ ಹಾಗಿಲ್ಲ

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ

ಕೊಡಪಾಡಿ: ಮೃತ ವ್ಯಕ್ತಿಯ ಹೆಸರಲ್ಲಿ ನಕಲಿ ಸಹಿ ಬಳಸಿ ಪವರ್‌ ಆಫ್‌ ಅಟಾರ್ನಿ, ದೂರು ದಾಖಲು

ಕೊಡಪಾಡಿ: ಮೃತ ವ್ಯಕ್ತಿಯ ಹೆಸರಲ್ಲಿ ನಕಲಿ ಸಹಿ ಬಳಸಿ ಪವರ್‌ ಆಫ್‌ ಅಟಾರ್ನಿ, ದೂರು ದಾಖಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.