
Davanagere ನಾನು ಬಿಜೆಪಿ ಕಟ್ಟಾಳು, ಕಾಂಗ್ರೆಸ್ ಸೇರಲ್ಲ: ರೇಣುಕಾಚಾರ್ಯ
ಕ್ಷೇತ್ರದ ವಿಚಾರಕ್ಕೆ ಕಾಂಗ್ರೆಸ್ ನಾಯಕರ ಭೇಟಿಯಾದರೆ ತಪ್ಪೇ?
Team Udayavani, Sep 27, 2023, 6:53 PM IST

ದಾವಣಗೆರೆ: ಸಚಿವ ಎಸ್.ಎಸ್. ಮಲ್ಲಿಕಾರ್ಜುನ್, ಶಾಸಕ ಶಾಮನೂರು ಶಿವಶಂಕರಪ್ಪ ಸೇರಿದಂತೆ ಯಾರೂ ಸಹ ನನ್ನನ್ನು ಕಾಂಗ್ರೆಸ್ಗೆ ಕರೆದಿಲ್ಲ. ನಾನು ಕಾಂಗ್ರೆಸ್ಗೆ ಹೋಗುವುದೂ ಇಲ್ಲ. ಏಕೆಂದರೆ ನಾನು ಬಿಜೆಪಿಯ ಕಟ್ಟಾಳು ಎಂದು ಮಾಜಿ ಸಚಿವ ಎಂ.ಪಿ. ರೇಣುಕಾಚಾರ್ಯ ಹೇಳಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ. ಶಿವಕುಮಾರ್, ಉಸ್ತುವಾರಿ ಸಚಿವ ಎಸ್.ಎಸ್. ಮಲ್ಲಿಕಾರ್ಜುನ್ ಮನೆಗಳಿಗೆ ಕಾಂಗ್ರೆಸ್ ಮುಖಂಡರೇ ಹೋಗುವುದಿಲ್ಲ. ನನ್ನ ವೈಯಕ್ತಿಕ ಕೆಲಸಕ್ಕಾಗಿ ಅವರೆಲ್ಲರನ್ನು ಭೇಟಿ ಮಾಡಿಲ್ಲ. ಕ್ಷೇತ್ರದ ವಿಚಾರಗಳ ಬಗ್ಗೆ ಚರ್ಚಿಸಲು ಹೋಗುತ್ತೇನೆ. ಅವರು ಪ್ರೀತಿಯಿಂದ ಮಾತನಾಡಿಸುತ್ತಾರೆ. ನಾನು ಕೂಡ ಪ್ರೀತಿಯಿಂದಲೇ ಮಾತನಾಡುತ್ತೇನೆ. ಅಂದ ಮಾತ್ರಕ್ಕೆ ಕಾಂಗ್ರೆಸ್ ಸೇರಲು ಹೋದಂತಾಗುತ್ತದೆಯೇ, ಅಧಿಕಾರದಲ್ಲಿದ್ದವರ ಮನೆಗೆ ಹೋಗಬಾರದಾ ಎಂದು ಪ್ರಶ್ನಿಸಿದರು.
ನಾನು ಬಕೆಟ್ ಹಿಡಿಯುವ ರಾಜಕಾರಣಿ ಅಲ್ಲವೇ ಅಲ್ಲ. ಜೆಪಿ ಕಾಲದಿಂದಲೂ ಹೋರಾಟ ಮಾಡಿಕೊಂಡು ಬಂದವನು. ಕ್ಷೇತ್ರದ ಅಭಿವೃದ್ಧಿ ವಿಚಾರವಾಗಿ ಎರಡು ಬಾರಿ ಜೈಲಿಗೆ ಹೋಗಿ ಬಂದಿದ್ದೇನೆ. ರಾಮಜ್ಯೋತಿ ಯಾತ್ರೆಯಲ್ಲಿ ಪಾಲ್ಗೊಂಡಿದ್ದೆ. 1990ರಲ್ಲಿ ಬಿಜೆಪಿಗೆ ಅಧಿಕೃತವಾಗಿ ಸೇರಿದ್ದೇನೆ. ಯಡಿಯೂರಪ್ಪ ನನ್ನನ್ನು ಗುರುತಿಸಿ ಟಿಕೆಟ್ ಕೊಡದೆ ಹೋಗಿದ್ದರೆ ರಾಜ್ಯದ ಜನರಿಗೆ ರೇಣುಕಾಚಾರ್ಯ ಯಾರು ಎಂಬುದು ಗೊತ್ತೇ ಆಗುತ್ತಿರಲಿಲ್ಲ.
ಯಡಿಯೂರಪ್ಪ ನನಗೆ ಮಾರ್ಗದರ್ಶಕರು. ಈಚೆಗೆ ಪಕ್ಷಕ್ಕೆ ಬಂದ ಕೆಲವರು ನನ್ನ ಬಗ್ಗೆ ಟೀಕೆ ಮಾಡಿದ್ದಾರೆ. ಅವರಿಗೆ ಈಗ ಉತ್ತರ ಕೊಡುವುದಿಲ್ಲ. ರೇಣುಕಾಚಾರ್ಯ “ನಾಟ್ ರೀಚಬಲ್’ ಎಂದು ಸಿ.ಟಿ. ರವಿ ಹೇಳಿದ್ದಾರೆ. ನಾನೇನು ಸಣ್ಣ ಮಗು ಅಥವಾ ಲಾಲಿಪಾಪ್ ತಿನ್ನುವವನಲ್ಲ. ಕಾಲಾಯ ತಸ್ಮೈ ನಮಃ, ಕಾಲ ಬಂದಾಗ ಎಲ್ಲದಕ್ಕೂ ಉತ್ತರ ಕೊಡುತ್ತೇನೆ. ವಿಧಾನ ಪರಿಷತ್ ಸದಸ್ಯ ಕೆ.ಎಸ್. ನವೀನ್ ಸಹ ನನ್ನ ಬಗ್ಗೆ ಹೇಳಿಕೆ ನೀಡಿದ್ದಾರೆ. ಅವರನ್ನು ನಾನು ದ್ವೇಷ ಮಾಡಲಿಕ್ಕೆ ಹೋಗುವುದಿಲ್ಲ ಎಂದರು.
ಲೋಕ ಚುನಾವಣೆಗೆ ಪ್ರಬಲ ಆಕಾಂಕ್ಷಿ:
ನಾನು ದಾವಣಗೆರೆ ಲೋಕಸಭಾ ಕ್ಷೇತ್ರದ ಬಿಜೆಪಿ ಟಿಕೆಟ್ ಪ್ರಬಲ ಆಕಾಂಕ್ಷಿ. ಅಂದ ಮಾತ್ರಕ್ಕೆ ನಾನು ಸಂಸದ ಜಿ.ಎಂ.ಸಿದ್ದೇಶ್ವರ ಅವರನ್ನು ದ್ವೇಷಿಸುತ್ತೇನೆ ಎಂದರ್ಥವಲ್ಲ. ಅವರ ವಿರುದ್ಧ ಮಾತನಾಡುವುದಿಲ್ಲ. ದಾವಣಗೆರೆ ಕ್ಷೇತ್ರದ ಜನರು, ಮುಖಂಡರು ಲೋಕಸಭಾ ಚುನಾವಣೆಗೆ ಸ್ಪರ್ಧಿಸುವಂತೆ ಒತ್ತಾಯ ಮಾಡುತ್ತಿದ್ದಾರೆ. ಹಾಗಾಗಿ ನಾನು ಸಹ ಟಿಕೆಟ್ ಆಕಾಂಕ್ಷಿ. ಚುನಾವಣೆಗೆ ಇನ್ನೂ ಸಮಯ ಇದ್ದು, ಏನಾಗುತ್ತೋ ನೋಡೋಣ. ಏಕೆಂದರೆ ರಾಜಕೀಯ ಎಂದಿಗೂ ನಿಂತ ನೀರಲ್ಲ. ಹರಿಯುವ ನೀರಿದ್ದಂತೆ ಎಂದರು.
ಟಾಪ್ ನ್ಯೂಸ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Siddaramaiah ಅವರ ಓಲೈಕೆ ರಾಜಕಾರಣ ಅತ್ಯಂತ ಖಂಡನೀಯ: ರೇಣುಕಾಚಾರ್ಯ

Davangere: ಚಿಕನ್ ಮಾಡಿಲ್ಲ ಎಂಬ ಕಾರಣಕ್ಕೆ ಪತ್ನಿಯ ಕೊಲೆ ಮಾಡಿದ್ದವನಿಗೆ ಶಿಕ್ಷೆ ಪ್ರಕಟ

Davanagere; ಟ್ರ್ಯಾಕ್ಟರ್ ಗೆ ಕಾರು ಢಿಕ್ಕಿ: ತಾಯಿ ಮತ್ತು ಮಗ ಸ್ಥಳದಲ್ಲೇ ಮೃತ್ಯು

ದಾವಣಗೆರೆಯ ಉತ್ಸಾಹಿ ಯುವಕನ “ಕೇಸರಿ ಕೃಷಿ” ಯಶೋಗಾಥೆ

Lok Sabha Elections ನಂತರ ರಾಜ್ಯ ಸರಕಾರ ಪತನ: ರೇಣುಕಾಚಾರ್ಯ