ಕೋವಿಡ್ 19 ಭೀತಿಯಲ್ಲೇ ಪಾಲಿಕೆ ಬಜೆಟ್‌


Team Udayavani, Mar 29, 2020, 1:07 PM IST

ಕೋವಿಡ್ 19 ಭೀತಿಯಲ್ಲೇ ಪಾಲಿಕೆ ಬಜೆಟ್‌

ದಾವಣಗೆರೆ: ದಾವಣಗೆರೆ ಮಹಾನಗರಪಾಲಿಕೆಯ 2020-21ನೇ ಸಾಲಿನಲ್ಲಿ ಒಟ್ಟು 284.89 ಲಕ್ಷ ರೂ. ಗಳ ಉಳಿತಾಯ ಆಯ-ವ್ಯಯ ಮಂಡಿಸಲಾಗಿದೆ.

ಶನಿವಾರ, ಪಾಲಿಕೆ ಸಭಾಂಗಣದಲ್ಲಿ ಮೇಯರ್‌ ಬಿ.ಜಿ.ಅಜಯಕುಮಾರ್‌ ಮಂಡಿಸಿದ ನೂತನ ಸಾಲಿನ ಆಯ-ವ್ಯಯದ ಅಂದಾಜು ಪಟ್ಟಿಯಲ್ಲಿ 40,191.13 ಲಕ್ಷ ರೂ. ಸ್ವೀಕೃತಿ ನಿರೀಕ್ಷಿಸಲಾಗಿದ್ದು, ಒಟ್ಟು 39,906.23 ಲಕ್ಷ ರೂ. ಒಟ್ಟು ಪಾವತಿಗಳಿದ್ದು. 284.89 ಲಕ್ಷ ರೂ. ಉಳಿತಾಯ ಅಂದಾಜಿಸಲಾಗಿದೆ. ಹೊಸ ಆರ್ಥಿಕ ಸಾಲಿನಲ್ಲಿ ಪ್ರಾರಂಭಿಕ ಶಿಲ್ಕು 3030.47 ಲಕ್ಷ ರೂ. ಸೇರಿ ರಾಜಸ್ವ ಸ್ವೀಕೃತಿಗಳು 11140.15, ಬಂಡವಾಳ ಸ್ವೀಕೃತಿಗಳು 11140.00 ಹಾಗೂ ಅಸಾಮಾನ್ಯ ಸ್ವೀಕೃತಿಗಳು 14880.50 ರೂ. ಒಳಗೊಂಡಂತೆ 40,191.13 ಜಮೆ ಅಂದಾಜಿಸಲಾಗಿದೆ.

ಹಾಗೆಯೇ ಈ ಸಾಲಿನಲ್ಲಿ ರಾಜಸ್ವ ಪಾವತಿ 11005.23, ಬಂಡವಾಳ ಪಾವತಿ 13,890.00 ಹಾಗೂ ಅಸಾಮಾನ್ಯ ಪಾವತಿಗಳು  5011.00 ಲಕ್ಷ ರೂ. ಸೇರಿದಂತೆ ಒಟ್ಟು 39906.23 ಲಕ್ಷ ರೂ. ವೆಚ್ಚ ಅಂದಾಜಿಸಿ, ಒಟ್ಟು 284.89 ಲಕ್ಷ ರೂ ಉಳಿತಾಯ ನಿರೀಕ್ಷಿಸಲಾಗಿದೆ ಎಂದು ಅವರು ಹೊಸ ಸಾಲಿನ ಲೆಕ್ಕಾಚಾರ ಮಂಡಿಸಿದರು.

ನಗರದ ಸರ್ವಾಂಗೀಣ ಅಭಿವೃದ್ಧಿ ಮಾತ್ರವೇ ಮಾನದಂಡವಾಗಿಸಿಕೊಂಡು ಈ ಸಾಲಿನ ಆಯ-ವ್ಯಯ ಸಿದ್ಧಪಡಿಸಲಾಗಿದೆ. ಪಕ್ಷಾತೀತವಾಗಿ ಎಲ್ಲಾ ಸದಸ್ಯರ ಸಲಹೆ, ಆಶೋತ್ತರ, ನಗರದ ನಾಗರಿಕರು ಮತ್ತು ಸಂಘ-ಸಂಸ್ಥೆಗಳ ಪದಾಧಿಕಾರಿಗಳೊಂದಿಗೆ ನಡೆಸಿದ ಬಜೆಟ್‌ ಪೂರ್ವಭಾವಿ ಸಭೆಯಲ್ಲಿ ವ್ಯಕ್ತವಾದ ಸಲಹೆ-ಸೂಚನೆ ಜತೆಗೆ, ನಗರದಅಭಿವೃದ್ಧಿಗೆ ಹೊಂದಿರುವ ನನ್ನದೇ ಆದ ಕೆಲವು ಕನಸು ನನಸು ಮಾಡುವ ನಿಟ್ಟಿನಲ್ಲಿ ಸೀಮಿತ ಸಂಪನ್ಮೂಲಗಳಲ್ಲೇ ಸಾಧ್ಯವಾದಷ್ಟು ಉತ್ತಮ ಆಯ-ವ್ಯಯ ಸಿದ್ಧಪಡಿಸಲು ಪ್ರಯತ್ನಿಸಿದ್ದೇನೆ ಎಂದು ಮೇಯರ್‌ ಬಜೆಟ್‌ ಮಂಡಿಸುವ ವೇಳೆ ಪ್ರಸ್ತಾಪಿಸಿದರು.

ಕಳೆದ ನವೆಂಬರ್‌ನಲ್ಲಿ ಪಾಲಿಕೆಗೆ ಚುನಾವಣೆ ನಡೆದು, ಹೊಸದಾಗಿ ರಚನೆಗೊಂಡ ಕೌನ್ಸಿಲ್‌ ಬಗ್ಗೆ ನಗರದ ಜನತೆಗೆ ಹಲವು ನಿರೀಕ್ಷೆಗಳಿರುವುದು ಸಹಜ. ಆ ನಿರೀಕ್ಷೆ ನೆರವೇರಿಸುವ ನಿಟ್ಟಿನಲ್ಲಿ ತಮ್ಮ ನೇತೃತ್ವದ ಆಡಳಿತ ಕಟಿಬದ್ಧವಾಗಿದೆ. ಸರ್ಕಾರದ ಹಳೇ ಯೋಜನೆಗಳು ಮುಂದುವರಿಯಲಿದ್ದು, ನಗರಗಳ ಮೂಲ ಸೌಕರ್ಯ ಅಭಿವೃದ್ಧಿ ಗುರಿ ಹೊಂದಿದ ರಾಜ್ಯ ಬಿಜೆಪಿ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾದ ಮಹಾತ್ಮ ಗಾಂಧಿ ನಗರ ವಿಕಾಸ ಯೋಜನೆಯಡಿ ವಿವಿಧ ಕಾಮಗಾರಿಗಳು ಈ ಸಾಲಿನಲ್ಲಿ ಅನುಷ್ಟಾನಗೊಳ್ಳಲಿವೆ. ದಾವಣಗೆರೆ ಉತ್ತರ ವಿಧಾನ ಸಭಾ ಕ್ಷೇತ್ರದ ಶಾಸಕ ಎಸ್‌.ಎ.ರವೀಂದ್ರನಾಥ್‌ ಅವರ ವಿಶೇಷ ಆಸಕ್ತಿಯಿಂದ ರಾಜ್ಯ ಸರ್ಕಾರದಿಂದ ವಿಶೇಷ ಅನುದಾನ ಬಿಡುಗಡೆಯಾಗಲಿದ್ದು, ಹಲವಾರು ಕಾಮಗಾರಿಗಳು ಅನುಷ್ಟಾನಗೊಳ್ಳಲಿವೆ ಎಂದು ಅವರು ಹೇಳಿದರು.

ಪಾಲಿಕೆಗೆ ಸ್ವಂತ ಆದಾಯ ಸಂಪನ್ಮೂಲಗಳು ಸೀಮಿತವಾಗಿದ್ದು, ಇರುವ ಮೂಲಗಳನ್ನೇ ಬಲಪಡಿಸಿ, ಆದಾಯ ವೃದ್ಧಿಗೆ ಶ್ರಮಿಸಲಾಗುವುದು. ಈಗಾಗಲೇ ಜಾರಿಯಲ್ಲಿರುವ ಆಸ್ತಿ, ನೀರಿನ ಸಂಪರ್ಕಗಳ ದಾಖಲೆ ಗಣಕೀಕರಣ ಕಾರ್ಯ ಮುಂದಿನ ಸಾಲಿನಲ್ಲಿ ಪೂರ್ಣಗೊಳ್ಳಲಿದ್ದು, ಆಸ್ತಿ ಹಾಗೂ ನೀರಿನ ತೆರಿಗೆ ಸಂಗ್ರಹದಲ್ಲಿ ಗಣನೀಯ ಪ್ರಗತಿ ಸಾಧಿಸಲಾಗುವುದು ಎಂದರು.

ಟಾಪ್ ನ್ಯೂಸ್

Kharge (2)

Kalaburagi; ಸತ್ತಾಗ ಮಣ್ಣಿಗಾದರೂ ಬನ್ನಿ: ಭಾವನಾತ್ಮಕವಾಗಿ ಮತಯಾಚಿಸಿದ ಖರ್ಗೆ

voter

Vote ಚಲಾಯಿಸಲು ಭಾರೀ ಸಂಖ್ಯೆಯಲ್ಲಿ ಬರುತ್ತಿರುವ ಕೇರಳ ಎನ್‌ಆರ್‌ಐಗಳು

ತಂಗಿಯ ಸಮಾಧಿ ಸ್ಥಳಕ್ಕೆ  ಭೇಟಿ ನೀಡುವುದನ್ನು ವ್ಲಾಗ್‌ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ

ತಂಗಿಯ ಸಮಾಧಿ ಸ್ಥಳಕ್ಕೆ ಭೇಟಿ ನೀಡುವುದನ್ನು ವ್ಲಾಗ್‌ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ

ಹಳದಿ ಶಾಸ್ತ್ರದ ವೇಳೆ ವರನಿಗೆ ವಿದ್ಯುತ್ ಸ್ಪರ್ಶ… ಆಸ್ಪತ್ರೆ ದಾರಿಯಲ್ಲಿ ಕೊನೆಯುಸಿರು

ಹಳದಿ ಶಾಸ್ತ್ರದ ವೇಳೆ ವಿದ್ಯುತ್ ಸ್ಪರ್ಶ… ಆಸ್ಪತ್ರೆ ದಾರಿ ಮಧ್ಯೆ ಕೊನೆಯುಸಿರೆಳೆದ ವರ

Inheritance Tax:  ಸ್ಯಾಮ್‌ ಪಿತ್ರೋಡಾ ಹೇಳಿದ್ದೇನು-ಏನಿದು ಪಿತ್ರಾರ್ಜಿತ ತೆರಿಗೆ ಜಟಾಪಟಿ!

Inheritance Tax:  ಸ್ಯಾಮ್‌ ಪಿತ್ರೋಡಾ ಹೇಳಿದ್ದೇನು-ಏನಿದು ಪಿತ್ರಾರ್ಜಿತ ತೆರಿಗೆ ಜಟಾಪಟಿ!

Rahul Gandhi 3

U-turn ಹೊಡೆದ ರಾಹುಲ್: ಸಂಪತ್ತು ಹಂಚಿಕೆ ಬಗ್ಗೆ ಹೇಳಿಲ್ಲ,ಅನ್ಯಾಯ…

ತಂಗಿ ಮದುವೆಗೆ ಟಿವಿ ಗಿಫ್ಟ್‌ ಕೊಟ್ಟದ್ದಕ್ಕೆ ಅಸಮಾಧಾನ: ಪತಿಯನ್ನು ಥಳಿಸಿ ಕೊಲ್ಲಿಸಿದ ಪತ್ನಿ

ತಂಗಿ ಮದುವೆಗೆ ಟಿವಿ ಗಿಫ್ಟ್‌ ಕೊಟ್ಟದ್ದಕ್ಕೆ ಅಸಮಾಧಾನ: ಪತಿಯನ್ನು ಥಳಿಸಿ ಕೊಲ್ಲಿಸಿದ ಪತ್ನಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Gayatri Siddeshwar: ಸಮಗ್ರ ನೀರಾವರಿ ಸೌಲಭ್ಯಕ್ಕೆ ಆದ್ಯತೆ; ಗಾಯಿತ್ರಿ

Gayatri Siddeshwar: ಸಮಗ್ರ ನೀರಾವರಿ ಸೌಲಭ್ಯಕ್ಕೆ ಆದ್ಯತೆ; ಗಾಯಿತ್ರಿ

Harihara ಬಿಜೆಪಿ ಶಾಸಕ ಬಿ.ಪಿ.ಹರೀಶ್‌ಗೆ ಜೀವ ಬೆದರಿಕೆ,

Harihara ಬಿಜೆಪಿ ಶಾಸಕ ಬಿ.ಪಿ.ಹರೀಶ್‌ಗೆ ಜೀವ ಬೆದರಿಕೆ

bp harish

Harihara; ಅಕ್ರಮ ಮರಳುಗಾರಿಕೆ ಮಾಹಿತಿ ನೀಡಿದ್ದಕ್ಕೆ ಬಿಜೆಪಿ ಶಾಸಕರಿಗೆ ಜೀವ ಬೆದರಿಕೆ

Lok Sabha Election: ಕಾಂಗ್ರೆಸ್‌ನಿಂದ ಜನರಿಗೆ ಸುಳ್ಳಿನ ಗ್ಯಾರಂಟಿ: ಗಾಯಿತ್ರಿ ಸಿದ್ದೇಶ್ವರ

Lok Sabha Election: ಕಾಂಗ್ರೆಸ್‌ನಿಂದ ಜನರಿಗೆ ಸುಳ್ಳಿನ ಗ್ಯಾರಂಟಿ: ಗಾಯಿತ್ರಿ ಸಿದ್ದೇಶ್ವರ

1-wqeqwe

Davanagere: ಮತದಾನ ಜಾಗೃತಿ ಲಾಂಛನದಲ್ಲಿ ಅಪರೂಪದ ಪ್ರಾಣಿ ಚಿತ್ರ ಬಳಕೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

11-mallige

Bappanadu Durgaparameshwari: ಮಲ್ಲಿಗೆ ಪ್ರಿಯೆ ದೇವಿಗೆ ಲಕ್ಷ ಮಲ್ಲಿಗೆ ಶಯನೋತ್ಸವ

Kharge (2)

Kalaburagi; ಸತ್ತಾಗ ಮಣ್ಣಿಗಾದರೂ ಬನ್ನಿ: ಭಾವನಾತ್ಮಕವಾಗಿ ಮತಯಾಚಿಸಿದ ಖರ್ಗೆ

10-uv-fusion

Theater: ಅಳಿವು ಉಳಿವಿನ ದವಡೆಯಲ್ಲಿ ರಂಗಭೂಮಿ

voter

Vote ಚಲಾಯಿಸಲು ಭಾರೀ ಸಂಖ್ಯೆಯಲ್ಲಿ ಬರುತ್ತಿರುವ ಕೇರಳ ಎನ್‌ಆರ್‌ಐಗಳು

9-fusion

Friendship: ಕೈಜಾರದಿರಲಿ ಗೆಳೆತನವೆಂಬ ಆಪ್ತ ನಿಧಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.