ಶುಲ್ಕ ಏರಿಕೆ ವಿರೋಧಿಸಿ ಎಬಿವಿಪಿ ಪ್ರತಿಭಟನೆ
Team Udayavani, Dec 29, 2021, 3:15 PM IST
ದಾವಣಗೆರೆ: ಸರ್ಕಾರಿ ಕೋಟಾದಡಿ ಎಂಜಿನಿಯರಿಂಗ್ಪ್ರವೇಶ ಪಡೆಯುವ ವಿದ್ಯಾರ್ಥಿಗಳ ಶುಲ್ಕ ಏರಿಕೆ ವಿರೋಧಿಸಿಮಂಗಳವಾರ ಅಖೀಲ ಭಾರತ ವಿದ್ಯಾರ್ಥಿ ಪರಿಷತ್(ಎಬಿವಿಪಿ) ನೇತೃತ್ವದಲ್ಲಿ ವಿದ್ಯಾರ್ಥಿಗಳು ನಗರದಲ್ಲಿ ಪ್ರತಿಭಟನೆನಡೆಸಿದರು.ಕೊರೊನಾ ಹಿನ್ನೆಲೆಯಲ್ಲಿ ಖಾಸಗಿ ಎಂಜಿನಿಯರಿಂಗ್ಕಾಲೇಜುಗಳ ಶುಲ್ಕದಲ್ಲಿ ಯಾವುದೇ ಹೆಚ್ಚಳ ಮಾಡದೆ ಹಿಂದಿನವರ್ಷದ ಶುಲ್ಕವನ್ನೇ ಮುಂದುವರೆಸಲು ತೀರ್ಮಾನಿಸಲಾಗಿದೆಎಂದು ಉನ್ನತ ಶಿಕ್ಷಣ ಸಚಿವ ಡಾ| ಅÍತ್ಥ Ì ನಾರಾಯಣಹೇಳಿದ್ದರು.
ಆದರೆ ಈಗ ಸರ್ಕಾರ ಕೆಲವು ಪರೋಕ್ಷ ಕ್ರಮಗಳಮೂಲಕ ಶುಲ್ಕ ಹೆಚ್ಚಳಕ್ಕೆ ದಾರಿ ಮಾಡಿಕೊಡುವ ಆದೇಶಹೊರಡಿಸಿರುವುದರಿಂದಾಗಿಇಂಜಿನಿಯರಿಂಗ್ ಓದುವ ಕನಸುಕಂಡಿರುವ ರಾಜ್ಯದ ಬಡ ಮತ್ತು ಪ್ರತಿಭಾವಂತ ವಿದ್ಯಾರ್ಥಿಗಳಕನಸು ಕನಸಾಗಿಯೇ ಉಳಿಯುವಂತಾಗಿದೆ ಎಂದುಪ್ರತಿಭಟನಾಕಾರರು ದೂರಿದರು.ರಾಜ್ಯದ ಸರ್ಕಾರಿಹಾಗೂಖಾಸಗಿವಿಶ್ವವಿದ್ಯಾಲಯಗಳಲ್ಲಿನಸರ್ಕಾರಿ ಕೋಟಾದಡಿ ಎಂಜಿನಿಯರಿಂಗ್ ಕೋರ್ಸ್ಗಳಿಗೆಪ್ರವೇಶ ಪಡೆಯುವ ವಿದ್ಯಾರ್ಥಿಗಳಿಗೆ ಪ್ರಸ್ತಕ ಸಾಲಿನಿಂದ83,526ರೂ.ಹಾಗೂ90,060ರೂ.ಗಳಿಗೆನಿಗದಿಪಡಿಸಲಾಗಿದೆ.ಹಿಂದಿನ ವರ್ಷ 58,806 ರೂ. ಹಾಗೂ 65,340 ರೂ. (ವಿವಿಶುಲ್ಕ ಒಳಗೊಂಡಂತೆ) ನಿಗದಿಪಡಿಸಲಾಗಿತ್ತು.
ಆದರೆ ಸರ್ಕಾರ2021-2022ನೇ ಸಾಲಿನಿಂದ 20 ಸಾವಿರ ರೂಪಾಯಿಕಾಲೇಜುಗಳ ಇತರ ಶುಲ್ಕ ಹಾಗೂ ಇತರೆ ಸೌಲಭ್ಯಕ್ಕಾಗಿ 10ಸಾವಿರ ರೂಪಾಯಿಯಿಂದ 20 ಸಾವಿರ ರೂಪಾಯಿವರೆಗೆಹೆಚುcವ ರಿ ಶುಲ್ಕ ವಸೂಲಿಗೆ ಸರ್ಕಾರ ಕಾಲೇಜುಗಳಿಗೆಅವಕಾಶ ನೀಡಿರುವುದರಿಂದ 40 ಸಾವಿರ ರೂಪಾಯಿವರೆಗೆಹೆಚುcವ ರಿಯಾಗಿದೆ ಎಂದು ಆರೋಪಿಸಿದರು.
ಸರ್ಕಾರ ಈ ಹಿಂದಿನ ವರ್ಷಗಳಲ್ಲಿಕಾಲೇಜುಗÙಲ್ಲಿ ಈ ರೀತಿಹೆಚ್ಚಿನ ಶುಲ್ಕಗಳನ್ನು ಪಡೆಯದಂತೆ ನಿವೃತ್ತ ನ್ಯಾಯಾಧೀಶರನೇತೃತ Ìದ ಶುಲ್ಕ ನಿಯಂತ್ರಣ ಸಮಿತಿಯ ಮೂಲಕ ಕಡಿವಾಣಹಾಕಲಾಗಿತ್ತು.
“ಬೇಲಿಯೇ ಎದ್ದು ಹೊಲ ಮೇಯ್ದಂತೆ’ಎನ್ನುವಂತೆ ಸರ್ಕಾರವೇ ಎಲ್ಲ ಹೆಚ್ಚುವರಿ ಶುಲ್ಕಗಳ ನ್ನುವಿದ್ಯಾರ್ಥಿಗಳಿಂದ ವಸೂಲಿ ಮಾಡಲು ಕಾಲೇಜುಗಳಿಗೆಅವಕಾಶ ನೀಡುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.ಸರ್ಕಾರಿಎಂಜಿನಿಯರಿಂಗ್ಕಾಲೇಜುಗಳಲ್ಲಿನ ಶುಲ್ಕಗಳಿಗೂಹಾಗೂ ಸರ್ಕಾರಿ ಅನುದಾನಿತ ಎಂಜಿನಿಯರಿಂಗ್ ಕಾಲೇಜಿನಶುಲ್ಕಗಳಿಗೂ 40 ಸಾವಿರ ರೂಪಾಯಿಗಳವರೆಗೆ ಹೆಚ್ಚಳಮಾಡಲಾಗಿದೆ.
ಕೊರೊನಾದಿಂದ ಆರ್ಥಿಕ ಸಂಕಷ್ಟಕ್ಕೆ ಒಳಗಾದಪೋಷಕರಿಗೆ ಸರ್ಕಾರ ಪರೋಕ್ಷವಾಗಿ ಹೆಚ್ಚಳ ಮಾಡಿರುವ ಶುಲ್ಕಹೊರೆಯಾಗಲಿದೆ ಎಂದು ತಿಳಿಸಿದರು.ನೀಟ್ ಗೊಂದಲ ನಿವಾರಿಸುವುದಾಗಿ ಭರವಸೆ ನೀಡಿದ್ದಉನ್ನತ ಶಿಕ್ಷಣ ಇಲಾಖೆ ಸಿಇಟಿ ಗೊಂದಲಕ್ಕೆ ಕಾರಣವಾಗಿದೆ.
ಇಲಾಖಯ ೆ ಗೊಂದಲ ಸೃಷ್ಟಿಸಿ ರಾಜ್ಯದ ವಿದ್ಯಾರ್ಥಿಗಳಕನಸುಗಳನ್ನು ಭಗ್ನ ಮಾಡಲು ಹೊರಟಿರುವುದುಖಂಡನೀಯ. ಬಡ, ಪ್ರತಿಭಾವಂತ ವಿದ್ಯಾರ್ಥಿಗಳ ಮತ್ತುಕೊರೊನಾದಿಂದ ಆರ್ಥಿಕ ಸಂಕಷ್ಟಕ್ಕೆ ತುತ್ತಾಗಿರುವವರಹಿತವನ್ನು ಗಮನದಲ್ಲಿಟ್ಟುಕೊಂಡು ಸರ್ಕಾರ ಕೂಡಲೇ ಶುಲ್ಕಹೆಚಳ c ಕ್ಕೆ ಹೊರಡಿಸಿರುವ ಹಿಂದಕ್ಕೆ ಪಡೆಯಬೇಕು ಎಂದುಒತ್ತಾಯಿಸಿದರು. ಜಿಲ್ಲಾಸಂಘಟನಾ ಕಾÃÂದಶಿ ìಮಂಜುನಾಥಕೊಳೆ Ûàರ, ನರೇಂದ್ರ, ಭರತ್, ನವೀನ್ ಇತರರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Davanagere; ವಿಧಾನಸಭೆ ಸೋಲಿನ ಕಾರಣದಿಂದ ಬರಪರಿಹಾರ ನೀಡದೆ ಮೋದಿ-ಶಾ ಸೇಡು: ಸುರ್ಜೆವಾಲ ಆರೋಪ
Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್
Davanagere; ಪ್ರಧಾನಿ ಮೋದಿ ರ್ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ
Lok Sabha Election: ಮೋದಿಗೆ ಪರ್ಯಾಯ ನಾಯಕ ಮತ್ತೊಬ್ಬರಿಲ್ಲ… ಗಾಯಿತ್ರಿ ಸಿದ್ದೇಶ್ವರ
Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ