ಜಯದೇವ ಆಸ್ಪತ್ರೆ ಸ್ಥಾಪನೆ ಪ್ರಕ್ರಿಯೆ ಶುರು
Team Udayavani, Jan 20, 2022, 3:00 PM IST
ದಾವಣಗೆರೆ: ಪ್ರಸಕ್ತ ಸಾಲಿನ ರಾಜ್ಯ ಬಜೆಟ್ನಲ್ಲಿ (2021-22 ನೇ ಸಾಲಿನ) ಜಿಲ್ಲೆಗೆಘೋಷಣೆಯಾಗಿರುವ ಶ್ರೀ ಜಯದೇವಹೃದ್ರೋಗ ವಿಜ್ಞಾನ ಮತ್ತು ಸಂಶೋಧನಾ ಸಂಸ್ಥೆಯಉಪಕೇಂದ್ರ ಸ್ಥಾಪನೆ ಪ್ರಕ್ರಿಯೆಗೆ ಚಾಲನೆ ದೊರಕಿದ್ದುಸ್ಥಳ ಹಸ್ತಾಂತರ ಕಾರ್ಯ ನಡೆದಿದೆ.
ಆದಷ್ಟು ಬೇಗಈ ಉಪಕೇಂದ್ರ ಕಾರ್ಯಾರಂಭ ಮಾಡಿ ಸಾವಿರಾರುಬಡ ಹೃದಯಗಳಿಗೆ ಜೀವಬಲ ತುಂಬುವ ನಿರೀಕ್ಷೆಗರಿಗೆದರಿದೆ.ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು2021-22ನೇ ಸಾಲಿನ ತಮ್ಮ ಬಜೆಟ್ನಲ್ಲಿ ನಗರಕ್ಕೆ 20ಕೋಟಿ ರೂ. ವೆಚ್ಚದ 50 ಹಾಸಿಗೆಯ ಶ್ರೀಜಯದೇವಹೃದ್ರೋಗ ವಿಜ್ಞಾನ ಮತ್ತು ಸಂಶೋಧನಾ ಸಂಸ್ಥೆಯಉಪಕೇಂದ್ರ ಘೋಷಿಸಿದ್ದರು.
ಬಜೆಟ್ ಘೋಷಣೆಹಿನ್ನೆಲೆಯಲ್ಲಿ ಈಗ ಜಯದೇವ ಆಸ್ಪತ್ರೆಯತಂಡವೊಂದು ಶೀಘ್ರದಲ್ಲಿ ಜಿಲ್ಲೆಗೆ ಭೇಟಿ ನೀಡುತ್ತಿದ್ದುನಗರದ ಚಿಗಟೇರಿ ಆಸ್ಪತ್ರೆ ಆವರಣದಲ್ಲಿ ಉಪಕೇಂದ್ರಸ್ಥಾಪನೆಗಾಗಿ ನೀಡಲಾಗಿರುವ 1.28 ಎಕರೆಜಮೀನು ಹಸ್ತಾಂತರ ಸಹಿತ ವಿವಿಧ ಪ್ರಕ್ರಿಯೆಗಳನ್ನುಆಸ್ಪತ್ರೆಯ ತಂಡ ಕೈಗೊಳ್ಳಲಿದೆ. ಇದಕ್ಕಾಗಿದಿನಾಂಕ ಸೂಚಿಸುವಂತೆ ಜಯದೇವ ಆಸ್ಪತ್ರೆಯನಿರ್ದೇಶಕ ಸಿ.ಎನ್. ಮಂಜುನಾಥ್ ಅವರು ಜಿಲ್ಲಾಆರೋಗ್ಯಾಧಿಕಾರಿಗಳಿಗೆ ಪತ್ರ ಬರೆದಿದ್ದಾರೆ.
ಶ್ರೀ ಜಯದೇವ ಹೃದ್ರೋಗ ವಿಜ್ಞಾನ ಮತ್ತುಸಂಶೋಧನಾ ಸಂಸ್ಥೆಯ ಉಪಕೇಂದ್ರ ಶೀಘ್ರಕಾರ್ಯ ನಿರ್ವಹಿಸಿದರೆ, ಸರ್ಕಾರಿ ವ್ಯವಸ್ಥೆಯಲ್ಲಿಹೃದ್ರೋಗಗಳಿಗೆ ಉತ್ತಮ ವೈದ್ಯಕೀಯ ಸೇವೆ ಸಿಗುವಜತೆಗೆ ಬಡವರು ಹೃದಯ ಸಂಬಂಧಿ ಕಾಯಿಲೆಚಿಕಿತ್ಸೆಗಾಗಿ ದೂರದ ಊರುಗಳಿಗೆ ಅಲೆದಾಡುವುದುತಪ್ಪಲಿದೆ. ಜಿಲ್ಲೆ ಸೇರಿದಂತೆ ಸುತ್ತಲಿನ ಚಿತ್ರದುರ್ಗ,ಶಿವಮೊಗ್ಗ, ಹಾವೇರಿ, ಗದಗ, ಬಳ್ಳಾರಿ ಭಾಗದಬಡವರ ಹೃದಯಕ್ಕೂ ಇದು ಆರೈಕೆ ನೀಡಲುಅನುಕೂಲವಾಗಲಿದೆ.
ಎಚ್.ಕೆ. ನಟರಾಜ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ
PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ
Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್
Gayatri Siddeshwar: ಸಮಗ್ರ ನೀರಾವರಿ ಸೌಲಭ್ಯಕ್ಕೆ ಆದ್ಯತೆ; ಗಾಯಿತ್ರಿ
Harihara ಬಿಜೆಪಿ ಶಾಸಕ ಬಿ.ಪಿ.ಹರೀಶ್ಗೆ ಜೀವ ಬೆದರಿಕೆ
MUST WATCH
ಹೊಸ ಸೇರ್ಪಡೆ
Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…
ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು
LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ
Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ
IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್