ಎಲ್ಲರಿಗೂ ದೊರೆಯಲಿ ಕಾನೂನು ಸೌಲಭ್ಯ
Team Udayavani, Sep 17, 2021, 10:52 AM IST
ದಾವಣಗೆರೆ: ಕೇಂದ್ರ ಮತ್ತು ರಾಜ್ಯ ಸರ್ಕಾರಗಳಿಂದರೂಪಿತವಾಗುವ ಕಾನೂನುಗಳ ಸದುಪಯೋಗವನ್ನುಎಲ್ಲ ವರ್ಗದವರು ಪಡೆಯಬೇಕು ಎನ್ನುವುದೇಕಾನೂನು ಸೇವಾ ಪ್ರಾಧಿ ಕಾರದ ಮೂಲ ಉದ್ದೇಶ ಎಂದು ಹಿರಿಯ ಸಿವಿಲ್ ನ್ಯಾಯಾ ಧೀಶ, ಕಾನೂನುಸೇವಾ ಪ್ರಾಧಿ ಕಾರದ ಸದಸ್ಯ ಕಾರ್ಯದರ್ಶಿ ಪ್ರವೀಣ್ನಾಯಕ್ ಹೇಳಿದರು.
ನಗರದ ದೇವರಾಜ ಅರಸು ಬಡಾವಣೆಯನೆರಳು ಬೀಡಿ ಕಾರ್ಮಿಕರ ಯೂನಿಯನ್ಕಚೇರಿಯಲ್ಲಿ ಗುರುವಾರ ನಡೆದ ಕಾನೂನು ಅರಿವುಕಾರ್ಯಕ್ರಮ ಹಾಗೂ ಜಿಲ್ಲಾ ಕಾರ್ಮಿಕ ಇಲಾಖೆಯಿಂದಅಸಂಘಟಿತ ಕಾರ್ಮಿಕರಿಗೆ ಕೊಡಮಾಡುವ ಅಹಾರಧಾನ್ಯಗಳ ಕಿಟ್ ವಿತರಣಾ ಸಮಾರಂಭದಲ್ಲಿ ಅವರುಮಾತನಾಡಿದರು.
ಕೇಂದ್ರ ಮತ್ತು ರಾಜ್ಯ ಸರ್ಕಾರಯಾವುದೇ ಕಾನೂನುಗಳನ್ನು ರೂಪಿಸಿದರೂ ಅವೆಲ್ಲವೂಸಂವಿಧಾನದ ಅಡಿಯಲ್ಲೇ ಬರುತ್ತವೆ. ಅವುಗಳನ್ನುಪ್ರತಿಯೊಬ್ಬರು ಸದುಪಯೋಗಪಡಿಸಿಕೊಳ್ಳಬೇಕುಎಂದರು.
ಹಿರಿಯ ನ್ಯಾಯವಾದಿ ಎಲ್.ಎಚ್. ಅರುಣ್ಕುಮಾರ್ ಮಾತನಾಡಿ, ಕೊರೊನಾ ಸಂದರ್ಭದಲ್ಲಿ ಕೂಲಿ ಕಾರ್ಮಿಕರು ಮತ್ತು ಅಸಂಘಟಿತ ಕಾರ್ಮಿಕರ ಜೀವನ ದಾರುಣ ಸ್ಥಿತಿಗೆ ತಲುಪಿತ್ತು. ಆ ಸಂದರ್ಭದಲ್ಲಿಹಲವಾರು ದಾನಿಗಳು, ಸಂಘ-ಸಂಸ್ಥೆಗಳು ಹಸಿದುಹೈರಾಣಾಗಿದ್ದ ಕುಟುಂಬಗಳಿಗೆ ಆಹಾರ ಧಾನ್ಯಸೇರಿದಂತೆ ಇತರೆ ವಸ್ತುಗಳನ್ನು ನೀಡುವ ಮೂಲಕಸಹಾಯಹಸ್ತ ಚಾಚಿದರು.
ಅದನ್ನು ಮನಗಂಡನಾವು ಚುನಾಯಿಸಿದ ಸರ್ಕಾರಗಳು ನಮ್ಮ ನೆರವಿಗೆಬಂದವು. ಯಾವುದೇ ಸಂದರ್ಭ ಆಗಲಿ, ಹಸಿದವರನೆರವಿಗೆ ಬರಬೇಕಾದುದ್ದು ನಮ್ಮನ್ನು ಆಳುವಸರ್ಕಾರಗಳ ಆದ್ಯ ಕರ್ತವ್ಯ ಎಂದರು.ದಾವಣಗೆರೆಯಲ್ಲಿ ಕಾನೂನು ಸೇವಾ ಪ್ರಾಧಿಕಾರ ಅತ್ಯುತ್ತಮವಾಗಿ ಕಾರ್ಯನಿರ್ವಹಿಸುತ್ತಿದೆ.ಮಾನವೀಯ ಕಳಕಳಿ, ಜನಪರ ಕಾಳಜಿಇರುವ ನ್ಯಾಯಾಧಿಧೀಶರು ಜಿಲ್ಲೆಯಲ್ಲಿ ಕಾರ್ಯನಿರ್ವಹಿಸುತ್ತಿದ್ದಾರೆ. ಅಧಿ ಕಾರಿಗಳೇ ಜನರ ಬಳಿಗೆಹೋಗುವುದು ಕಷ್ಟ. ಅಂತಹ ವೇಳೆ ನ್ಯಾಯಾಧೀಶರು ಜನರ ಮಧ್ಯೆ ವಿವಿಧ ಕಾರ್ಯಕ್ರಮಗಳಲ್ಲಿಪಾಲ್ಗೊಳ್ಳುತ್ತಿರುವುದು ನಿಜಕ್ಕೂ ಶ್ಲಾಘನೀಯ ಎಂದುಮೆಚ್ಚುಗೆ ವ್ಯಕ್ತಪಡಿಸಿದರು.
ಜಿಲ್ಲಾ ಕಾರ್ಮಿಕ ಅ ಧಿಕಾರಿ ಇಬ್ರಾಹಿಂ ಸಾಬ್,ನೆರಳು ಬೀಡಿ ಕಾರ್ಮಿಕರ ಯೂನಿಯನ್ ಅಧ್ಯಕ್ಷೆಜಬೀನಾಖಾನಂ, ಕಾರ್ಯದರ್ಶಿ ಎಂ. ಕರಿಬಸಪ್ಪ ಇದ್ದರು.ಮನೆ ಕೆಲಸ ಮಾಡುವ ಮಹಿಳೆಯರು, ಗೂಡ್ಸ್ಶೆಡ್ಕಾರ್ಮಿಕರಿಗೆ ಆಹಾರದ ಕಿಟ್ ವಿತರಿಸಲಾಯಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Election: ಮಠಾಧೀಶರ ಆಶೀರ್ವಾದ ಪಡೆದ ಬಿಜೆಪಿ ಅಭ್ಯರ್ಥಿ ಗಾಯತ್ರಿ ಸಿದ್ದೇಶ್ವರ
Panchamasali ಎಂಬ ಕಾರಣಕ್ಕೆ ಯತ್ನಾಳ್ಗೆ ಸಿಎಂ ಅವಕಾಶ ನಿರಾಕರಣೆ: ವಚನಾನಂದ ಶ್ರೀ
Election Campaign: ಕಾಂಗ್ರೆಸ್ನಲ್ಲಿಲ್ಲ ಮೋದಿಗೆ ಸಮಾನ ನಾಯಕತ್ವ: ಗಾಯಿತ್ರಿ ಸಿದ್ದೇಶ್ವರ
Gayathri Siddeshwar: ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಗಾಯಿತ್ರಿ ಜನ್ಮದಿನ ಆಚರಣೆ
Eshwarappa ವಿರುದ್ಧ ಕ್ರಮದ ಬಗ್ಗೆ ಪಕ್ಷದಿಂದಲೇ ನಿರ್ಧಾರ: ಯಡಿಯೂರಪ್ಪ
MUST WATCH
ಹೊಸ ಸೇರ್ಪಡೆ
Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!
Kushtagi:ವಿದ್ಯುತ್ದೀಪದ ಕಂಬಗಳಿಗೆ ಬಲ್ಬ್ ಅಳವಡಿಸುವ ವೇಳೆ ಅವಘಡ; ಪುರಸಭೆ ಸಿಬ್ಬಂದಿಗೆ ಗಾಯ
Festivals: ಹಬ್ಬಗಳು ಮರೆಯಾಗುತ್ತಿವೆಯೇ?
Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್ರಿಂದ ಪರಿಶೀಲನೆ
Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!