ದಾವಣಗೆರೆಯಲ್ಲಿ ಈರುಳ್ಳಿ ಬೆಲೆ ಕೆಜಿಗೆ 50 ಪೈಸೆ!
Team Udayavani, Sep 20, 2021, 4:47 PM IST
ದಾವಣಗೆರೆ: ನಡು ಕರ್ನಾಟಕದ ಕೇಂದ್ರ ಬಿಂದು ದಾವಣಗೆರೆಯ ಎಪಿಎಂಸಿಯಲ್ಲಿ ಕ್ವಿಂಟಲ್ ಈರುಳ್ಳಿ ಧಾರಣೆ ಕನಿಷ್ಟ100 ರೂಪಾಯಿಯಿಂದ ಗರಿಷ್ಠ 900 ರೂಪಾಯಿವರೆಗೆ ಇದೆ. ಕೆಲವು ಕಡೆ ಕೆಜಿಗೆ 50 ಪೈಸೆ ಧಾರಣೆಯೂ ಇದೆ. ಹಾಗಾಗಿ ಈರುಳ್ಳಿ ಬೆಳೆಗಾರರು ಕಣ್ಣೀರಲ್ಲಿ ಕೈ ತೊಳೆಯುವಂತಾಗಿದೆ.
ದಾವಣಗೆರೆ ಜಿಲ್ಲೆಯ ಜಗಳೂರಲ್ಲಿ 1500-1800, ನ್ಯಾಮತಿಯಲ್ಲಿ 500-600, ಹರಿಹರದಲ್ಲಿ 150,ದಾವಣಗೆರೆ ತಾಲೂಕಿನಲ್ಲಿ 100 ಹೆಕ್ಟೇರ್ನಲ್ಲಿ ಈರುಳ್ಳಿ ಬೆಳೆಯಲಾಗುತ್ತದೆ. ಅತಿವೃಷ್ಟಿಯ ಪರಿಣಾಮ 950 ಹೆಕ್ಟೇರ್ನಲ್ಲಿನ ಈರುಳ್ಳಿ ಸಂಪೂರ್ಣ ಹಾಳಾಗಿದೆ.ಅತೀ ಹೆಚ್ಚು ಜಗಳೂರು ತಾಲೂಕಿನಲ್ಲಿ 950, ಹೊನ್ನಾಳಿಯಲ್ಲಿ 50, ಹರಿಹರದಲ್ಲಿ30, ದಾವಣಗೆರೆಯಲ್ಲಿ 20 ಹೆಕ್ಟೇರ್ನಲ್ಲಿದ್ದ ಈರುಳ್ಳಿ ಸಂಪೂರ್ಣವಾಗಿ ನಾಶವಾಗಿದೆ. ಅತಿವೃಷ್ಟಿಯಿಂದ ಬೆಳೆಕಳೆದುಕೊಂಡಿರುವ ಜೊತೆಗೆ ಮುಕ್ತಮಾರುಕಟ್ಟೆಯಲ್ಲಿ ಬೆಲೆಯೂ ದೊರೆಯದಂತಾಗಿ ರೈತರು ತೀವ್ರ ಸಂಕಷ್ಟ ಅನುಭವಿಸುವಂತಾಗಿದೆ.
ಇದನ್ನೂ ಓದಿ:ಗಾಂಧಿ ಜಯಂತಿಯಂದು ಕನ್ನಯ್ಯ, ಜಿಗ್ನೇಶ್ ಮೇವಾನಿ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆ?
ಸರ್ಕಾರದಿಂದಪ್ರತಿ ಹೆಕ್ಟೇರ್ಗೆ 6,800 ರೂಪಾಯಿಪರಿಹಾರ ನೀಡಲಾಗುತ್ತದೆ. ಪ್ರತಿ ಹೆಕ್ಟೇರ್ನಲ್ಲಿ ಈರುಳ್ಳಿ ಬೆಳೆಯಲು 25 ರಿಂದ 30 ಸಾವಿರ ಖರ್ಚು ಮಾಡುವ ರೈತರಿಗೆಸರ್ಕಾರ ನೀಡುವ ಪರಿಹಾರ ಭೀಮನಹೊಟ್ಟೆಗೆ ಅರೆ ಕಾಸಿನಮಜ್ಜಿಗೆ ಎನ್ನುವಂತಾಗಿದೆ.ಅತಿವೃಷ್ಟಿಯಿಂದ ಈರುಳ್ಳಿ ನಾಶವಾಗಿರುವ ಜೊತೆಗೆ ಮಹಾರಾಷ್ಟ್ರದ ನಾಸಿಕ್ ಇತರೆ ಭಾಗದಿಂದ ಹೆಚ್ಚಾಗಿಈರುಳ್ಳಿ ದಾವಣಗೆರೆ ಮಾರುಕಟ್ಟೆಗೆ ಬರುತ್ತಿರುವುದು ಬೆಲೆ ಕುಸಿತಕ್ಕೆ ಕಾರಣ ಎನ್ನುತ್ತಾರೆ ತೋಟಗಾರಿಕಾ ಇಲಾಖೆ ಉಪನಿರ್ದೇಶಕ ಲಕ್ಷ್ಮೀಕಾಂತ್ ಬೊಮ್ಮನಾರ್
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ
PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ
Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್
Gayatri Siddeshwar: ಸಮಗ್ರ ನೀರಾವರಿ ಸೌಲಭ್ಯಕ್ಕೆ ಆದ್ಯತೆ; ಗಾಯಿತ್ರಿ
Harihara ಬಿಜೆಪಿ ಶಾಸಕ ಬಿ.ಪಿ.ಹರೀಶ್ಗೆ ಜೀವ ಬೆದರಿಕೆ
MUST WATCH
ಹೊಸ ಸೇರ್ಪಡೆ
Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…
Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ
Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ
EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…
Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು