ಪೊಲೀಸರಿಗೆ ಹೆಚ್ಚಿನ ಸವಲತ್ತು ಸಿಗಲಿ: ಸಿದ್ದೇಶ್ವರ
Team Udayavani, Sep 27, 2021, 2:56 PM IST
ದಾವಣಗೆರೆ: ಪೊಲೀಸ್ ಅಧಿಕಾರಿಗಳು, ಸಿಬ್ಬಂದಿನಿರ್ವಹಿಸುವ ಕೆಲಸ ದೇಶಸೇವೆಯೇ ಆಗಿದೆ ಎಂದು ಸಂಸದಡಾ| ಜಿ.ಎಂ. ಸಿದ್ದೇಶ್ವರ ಹೇಳಿದರು.
ನಗರದ ಹಳೆ ಡಿ.ಎ.ಆರ್. ಕಚೇರಿ ಆವರಣದಲ್ಲಿ ಭಾನುವಾರ ನಡೆದ ಜಿಲ್ಲಾ ನಿವೃತ್ತ ಪೊಲೀಸ್ ಅಧಿಕಾರಿಗಳ ಭವನ ಉದ್ಘಾಟನಾ ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿಪಾಲ್ಗೊಂಡು ಅವರು ಮಾತನಾಡಿದರು. ಸೈನಿಕರು ದೇಶದಗಡಿ ಭಾಗದಲ್ಲಿ ರಕ್ಷಣೆ ನೀಡಿದರೆ, ಪೊಲೀಸರು ದೇಶದಒಳಗೆ ಜನಸಾಮಾನ್ಯರಿಗೆ ರಕ್ಷಣೆ ನೀಡುವ ಮೂಲಕದೇಶಸೇವೆಯಲ್ಲಿ ತೊಡಗಿದ್ದಾರೆ ಎಂದು ಬಣ್ಣಿಸಿದರು.
ಪೊಲೀಸ್ ಕೆಲಸ ಬಹಳ ಗೌರವದ ಕೆಲಸ. ಯಾವುದೇಗಣ್ಯರ ಆಗಮನದ ಸಂದರ್ಭದಲ್ಲಿ ರಕ್ಷಣೆ ಒದಗಿಸುವಕಾರ್ಯದಲ್ಲಿ ಪೊಲೀಸರು ಪಡುವ ಕಷ್ಟ ನೋಡಿದರೆ ಅಯ್ಯೋ ಅನ್ನಿಸುತ್ತದೆ. ಆದರೆ ಪೊಲೀಸರು ತಮ್ಮ ಪಾಲಿನ ಕರ್ತವ್ಯನಿರ್ವಹಿಸುತ್ತಲೇ ಇರುತ್ತಾರೆ.
ಕಾನೂನು ಮತ್ತು ಸುವ್ಯವಸ್ಥೆ ಕಾಪಾಡುತ್ತಿರುವ ಪೊಲೀಸರು ಇಲ್ಲದೆ ಹೋಗಿದ್ದರೆ ಒಬ್ಬರತಲೆ ಇನ್ನೊಬ್ಬರ ಕೈಯಲ್ಲಿ ಇರುವಂತಹ ವಾತಾವರಣನಿರ್ಮಾಣವಾಗುತ್ತಿತ್ತು. ದೇಶದ ಒಳಗೆ ಕಾನೂನು ರಕ್ಷಣೆಮಾಡುವ ಇಲಾಖೆ ಅಂದರೆ ಅದು ಪೊಲೀಸ್ ಇಲಾಖೆಎಂದು ಮೆಚ್ಚುಗೆ ವ್ಯಕ್ತಪಡಿಸಿದರು.
ದೇಶ, ಸಮಾಜಕ್ಕೆ ಗೌರವ ತರುವ ಕೆಲಸ ಮಾಡುತ್ತಿರುವಪೊಲೀಸ್ ಸಿಬ್ಬಂದಿಗೆ ಹಿಂದೆ ಅಂತಹ ಸೌಲಭ್ಯಗಳುದೊರೆಯುತ್ತಿರಲಿಲ್ಲ. ಈಗ ಮನೆ ಒಳಗೊಂಡಂತೆ ಇತರೆಸೌಲಭ್ಯಗಳು ದೊರೆಯುತ್ತಿದೆ. ಇನ್ನೂ ಹೆಚ್ಚಿನ ಮಟ್ಟದಲ್ಲಿಸೌಲಭ್ಯಗಳು ದೊರೆಯಬೇಕಿದೆ. ಎಲ್ಲ ಜಿಲ್ಲೆಗಳಲ್ಲೂದಾವಣಗೆರೆ ಮಾದರಿಯಲ್ಲಿ ಸುಂದರ, ಸುಸಜ್ಜಿತ ನಿವೃತ್ತಪೊಲೀಸ್ ಅಧಿಕಾರಿಗಳ ಭವನಗಳು ಆಗಬೇಕು ಎಂದು ಆಶಿಸಿದರು.
ದಾವಣಗೆರೆ ಉತ್ತರ ವಿಧಾನಸಭಾ ಕ್ಷೇತ್ರದ ಶಾಸಕಎಸ್.ಎ. ರವೀಂದ್ರನಾಥ್ ಮಾತನಾಡಿ, ಪೊಲೀಸರುಒಳ್ಳೆಯ ರೀತಿಯಲ್ಲಿ ಕೆಲಸ ಮಾಡಬೇಕು. ಯಾರಿಗೇಆಗಲಿ ಪೊಲೀಸ್ ಭಾಷೆಯ ಬಳಸದೆ ಸುಸಂಸ್ಕೃತ ಭಾಷೆಬಳಸಬೇಕು. ಒಳ್ಳೆಯ ಕೆಲಸ ಮಾಡಿದರೆ ನಿವೃತ್ತಿ ನಂತರವೂಆರೋಗ್ಯ ಉತ್ತಮವಾಗಿ ಇರುತ್ತದೆ. ಮುಠಾuಳಗಿರಿ ಕೆಲಸಮಾಡಿದರೆ ಕಾಯಿಲೆ ಬರುತ್ತದೆ.
ನಿವೃತ್ತ ಪೊಲೀಸ್ಅಧಿಕಾರಿಗಳ ಭವನಕ್ಕೆ 10 ಲಕ್ಷ ಅನುದಾನ ನೀಡಿದ್ದು,ಇನ್ನೂ ಹೆಚ್ಚಿನ ಸಹಾಯ ಮಾಡಲು ಸಿದ್ಧ ಎಂದು ಭರವಸೆನೀಡಿದರು.ಜಿಲ್ಲಾಧಿಕಾರಿ ಮಹಾಂತೇಶ ಬೀಳಗಿ ಮಾತನಾಡಿ,ಐದು ಪೈಸೆ ಕೆಲಸ ಮಾಡಿ ಒಂದು ರೂಪಾಯಿ ಪ್ರಚಾರಪಡೆಯುವಂತಹವರು ಇದ್ದಾರೆ.
ಆ ರೀತಿಯಾಗದೆಇತರರಿಗೆ ಮಾದರಿಯಾಗುವಂತೆ ಪೊಲೀಸ್ ಅಧಿಕಾರಿಗಳು,ಸಿಬ್ಬಂದಿ ಕಾಯಕ ಶ್ರದ್ಧೆಯಿಂದ ಕೆಲಸ ಮಾಡಬೇಕು ಎಂದುಕರೆ ನೀಡಿದರು.ಜಿಲ್ಲಾ ರಕ್ಷಣಾಧಿಕಾರಿ ಸಿ.ಬಿ. ರಿಷ್ಯಂತ್ ಮಾತನಾಡಿ, ನಿವೃತ್ತಪೊಲೀಸ್ ಅಧಿಕಾರಿಗಳು, ಸಿಬ್ಬಂದಿ ಇಲಾಖೆಗೆ ಆಸ್ತಿ ಇದ್ದಂತೆ.ಎಲ್ಲರ ಸಹಕಾರದಿಂದ ಉತ್ತಮ ಭವನ ನಿರ್ಮಾಣವಾಗಿದೆ.
ರಕ್ತದಾನ, ಆರೋಗ್ಯ ಶಿಬಿರದಂತಹ ಒಳ್ಳೆಯ ಕೆಲಸಗಳುಭವನದಲ್ಲಿ ನಡೆಸಬೇಕು ಎಂದು ತಿಳಿಸಿದರು.ನಿವೃತ್ತ ಪೊಲೀಸ್ ಮಹಾ ನಿರ್ದೇಶಕ ಮತ್ತು ಪೊಲೀಸ್ಮಹಾ ನಿರೀಕ್ಷಕ ಡಾ| ಶಂಕರ ಬಿದರಿ ಭವನ ಉದ್ಘಾಟಿಸಿದರು.
ಜಿಲ್ಲಾ ನಿವೃತ್ತ ಪೊಲೀಸ್ ಅಧಿಕಾರಿಗಳ ಕ್ಷೇಮಾಭಿವೃದ್ಧಿಸಂಘದ ಅಧ್ಯಕ್ಷ ಜಿ.ಕೆ. ಬಸವರಾಜಪ್ಪ ಅಧ್ಯಕ್ಷತೆ ವಹಿಸಿದ್ದರು.ಸಂಘದ ರಾಜ್ಯಾಧ್ಯಕ್ಷ ಎನ್. ನಾಗರಾಜ್, ಕುಮಾರ್ಎಸ್. ಕರ್ನಿಂಗ್, ಎನ್. ಲಿಂಗಾರೆಡ್ಡಿ, ಎಂ.ಎಸ್.ಶಿವಾಚಾರ್ಯ, ಬಿ.ಬಿ. ಸಕ್ರಿ, ಕೆ.ಪಿ. ಚಂದ್ರಪ್ಪ, ಹಾವೇರಿ ಎಸ್ಪಿಹನುಮಂತರಾಯ, ನಿಖೀಲ್ ಕೊಂಡಜ್ಜಿ, ಉಮಾ ಶಂಕರಬಿದರಿ ಇತರರು ಇದ್ದರು. ಸಿದ್ಧಗಂಗಾ ಶಾಲಾ ಮಕ್ಕಳುಪ್ರಾರ್ಥಿಸಿದರು. ರವಿನಾರಾಯಣ ಸ್ವಾಗತಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Election: ಮೋದಿಗೆ ಪರ್ಯಾಯ ನಾಯಕ ಮತ್ತೊಬ್ಬರಿಲ್ಲ… ಗಾಯಿತ್ರಿ ಸಿದ್ದೇಶ್ವರ
Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ
PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ
Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್
Gayatri Siddeshwar: ಸಮಗ್ರ ನೀರಾವರಿ ಸೌಲಭ್ಯಕ್ಕೆ ಆದ್ಯತೆ; ಗಾಯಿತ್ರಿ
MUST WATCH
ಹೊಸ ಸೇರ್ಪಡೆ
INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್
ಹೆಸ್ಕತ್ತೂರು ಕಟ್ಟಿನಬುಡ: ಕೃಷಿಗೆ ಆಸರೆಯಾಗದ ವಾರಾಹಿ ಕಾಲುವೆ ನೀರು!
Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ
WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್ ಮೆಟ್ಟಿಲೇರಿದ ಪ್ರಕರಣ, ಏನಿದು?
ಏ.26ರಂದು 2ನೇ ಹಂತದ ಚುನಾವಣೆ;ರಾಹುಲ್, ತರೂರ್, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ