ಅರ್ಹರಿಗೆ ಸೌಲಭ್ಯ ದೊರಕಿಸಲು ಜಿಲ್ಲಾಧಿಕಾರಿ ಸೂಚನೆ
Team Udayavani, Mar 10, 2022, 3:24 PM IST
ದಾವಣಗೆರೆ: ಪರಿಶಿಷ್ಟ ಜಾತಿ ಉಪಯೋಜನೆ,ಗಿರಿಜನ ಉಪಯೋಜನೆಯಲ್ಲಿ ನಿರ್ದಿಷ್ಟವಾಗಿಆಯಾ ಸಮುದಾಯಕ್ಕೆ ಮೂಲಭೂತಸೌಕರ್ಯ ತಲುಪುವಂತೆ ನೋಡಿಕೊಳ್ಳಬೇಕುಎಂದು ಜಿಲ್ಲಾಧಿಕಾರಿ ಮಹಾಂತೇಶ ಬೀಳಗಿ,ಅಧಿಕಾರಿಗಳಿಗೆ ಸೂಚಿಸಿದರು.ಬುಧವಾರ ಜಿಲ್ಲಾಧಿಕಾರಿ ಕಚೇರಿಸಭಾಂಗಣದಲ್ಲಿ ನಡೆದ ಪರಿಶಿಷ್ಟ ಜಾತಿಉಪಯೋಜನೆ, ಗಿರಿಜನ ಉಪಯೋಜನೆಯಜಿಲ್ಲಾ ಮಟ್ಟದ ಪ್ರಗತಿ ಪರಿಶೀಲನಾ ಸಭೆಯಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಸೌಲಭ್ಯ ವಂಚಿತ ಸಮುದಾಯಗಳಿಗೆಸಾಮಾಜಿಕ ನ್ಯಾಯ ಒದಗಿಸುವುದರ ಕುರಿತುಕೇವಲ ಮಾತನಾಡದೆ ಕಾರ್ಯರೂಪಕ್ಕೆಪ್ರಾಮಾಣಿಕ ಪ್ರಯತ್ನ ಮಾಡಬೇಕು. ವಿವಿಧಇಲಾಖೆಗಳಲ್ಲಿ ಬಾಕಿ ಉಳಿದ ಅನುದಾನವನ್ನುಸೂಕ್ತ ಫಲಾನುಭವಿಗಳನ್ನು ಗುರುತಿಸಿ ಸೌಲಭ್ಯಕಲ್ಪಿಸಿ, ತುಳಿತಕ್ಕೊಳಗಾದ ಸಮುದಾಯಗಳಕೆಲಸ ಮಾಡುವುದರಿಂದ ಪುಣ್ಯ ಬರುತ್ತದೆಎಂದರು.
ವಿವಿಧ ಇಲಾಖೆಗಳ ಅಧಿಕಾರಿಗಳುಪರಿಶಿಷ್ಟ ಜಾತಿ ಉಪಯೋಜನೆ, ಗಿರಿಜನಉಪಯೋಜನೆಯಲ್ಲಿ ತಮ್ಮ ತಮ್ಮಇಲಾಖೆಗಳಲ್ಲಿ ನಡೆದಿರುವ ಪ್ರಗತಿಪರಿಶೀಲನಾವರದಿ ಮಂಡಿಸಿದರು. ಸಮಾಜಕಲ್ಯಾಣಇಲಾಖೆ ಉಪನಿರ್ದೇಶಕಿ ರೇಷ್ಮಾ ಕೌಸರ್,ಜಿಲ್ಲಾ ಪಂಚಾಯಿತಿ ಉಪಕಾರ್ಯದರ್ಶಿಆನಂದ್, ಮಹಾನಗರ ಪಾಲಿಕೆ ಆಯುಕ್ತವಿಶ್ವನಾಥ್ ಮುದ್ದಜ್ಜಿ, ಪಶು ಸಂಗೋಪನಾಇಲಾಖೆಯ ಉಪನಿರ್ದೇಶಕ ಚಂದ್ರಶೇಖರ್ಸುಂಕದ್, ಮಹಿಳಾ ಮತ್ತು ಮಕ್ಕಳಕಲ್ಯಾಣ ಇಲಾಖೆಯ ಉಪನಿರ್ದೇಶಕವಿಜಯಕುಮಾರ್, ನಗರಾಭಿವೃದ್ಧಿ ಕೋಶದನಜ್ಮಾ ಸೇರಿದಂತೆ ವಿವಿಧ ಇಲಾಖೆಗಳಜಿಲ್ಲಾ ಮಟ್ಟದ ಅಧಿಕಾರಿಗಳು ಸಭೆಯಲ್ಲಿಭಾಗವಹಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Harihara ಬಿಜೆಪಿ ಶಾಸಕ ಬಿ.ಪಿ.ಹರೀಶ್ಗೆ ಜೀವ ಬೆದರಿಕೆ
Harihara; ಅಕ್ರಮ ಮರಳುಗಾರಿಕೆ ಮಾಹಿತಿ ನೀಡಿದ್ದಕ್ಕೆ ಬಿಜೆಪಿ ಶಾಸಕರಿಗೆ ಜೀವ ಬೆದರಿಕೆ
Lok Sabha Election: ಕಾಂಗ್ರೆಸ್ನಿಂದ ಜನರಿಗೆ ಸುಳ್ಳಿನ ಗ್ಯಾರಂಟಿ: ಗಾಯಿತ್ರಿ ಸಿದ್ದೇಶ್ವರ
Davanagere: ಮತದಾನ ಜಾಗೃತಿ ಲಾಂಛನದಲ್ಲಿ ಅಪರೂಪದ ಪ್ರಾಣಿ ಚಿತ್ರ ಬಳಕೆ
Neha Hiremath Case; ಬಿಜೆಪಿ-ಜೆಡಿಎಸ್-ಎಬಿವಿಪಿಯಿಂದ ರಾಜ್ಯದೆಲ್ಲೆಡೆ ಪ್ರತಿಭಟನೆ