ನಿವೇಶನ ಹಂಚಿಕೆಯಲ್ಲಿ ಬಡವರಿಗೆ ಅನ್ಯಾಯ
Team Udayavani, Oct 5, 2021, 6:32 PM IST
ದಾವಣಗೆರೆ: ದಾವಣಗೆರೆ- ಹರಿಹರನಗರಾಭಿವೃದ್ಧಿ ಪ್ರಾಧಿಕಾರ 2014ರಲ್ಲಿ ನಿರ್ಮಿಸಿದ ಜೆ.ಎಚ್. ಪಟೇಲ್ ಬಡಾವಣೆಯನಿವೇಶನಗಳನ್ನು ನಿಯ ಮಬಾಹಿರವಾಗಿ ಹಂಚಿಕೆಮಾಡಿ ಬಡವರಿಗೆ ಅನ್ಯಾಯ ಮಾಡಲಾಗಿದೆ ಎಂದು ಶ್ರೀರಾಮಸೇನೆ ರಾಷ್ಟ್ರೀಯ ಅಧ್ಯಕ್ಷ ಪ್ರಮೋದ್ ಮುತಾಲಿಕ್ ಆರೋಪಿಸಿದರು.
ಸೋಮವಾರ ನಗರದಲ್ಲಿ ಸುದ್ದಿಗೋಷ್ಠಿಯಲ್ಲಿಮಾತನಾಡಿದ ಅವರು, ಸುಳ್ಳು ಪ್ರಮಾಣಪತ್ರನೀಡಿ ನಿವೇಶನ ಪಡೆದ ಜಿಲ್ಲೆಯ ಜನಪ್ರತಿನಿಧಿಗಳವಿರುದ್ಧ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷನ್ಯಾಯಾಲಯದಲ್ಲಿ ಈಗಾಗಲೇ ಪ್ರಕರಣದಾಖಲಿಸಲಾಗಿದ್ದು ವಿಚಾರಣೆ ನಡೆಯುತ್ತಿದೆ ಎಂದರು.
ಕಾನೂನು ಉಲ್ಲಂಘಿಸಿ ನಿವೇಶನ ಪಡೆದ ಪ್ರಭಾವಿಗಳು, ನಿವೇಶನ ಹಾಗೂ ಮನೆಉಳ್ಳವರ ವಿರುದ್ಧವೂ ಉಚ್ಚ ನ್ಯಾಯಾಲಯದಲ್ಲಿದೂರು ದಾಖಲಿಸಲಾಗುವುದು. ಒಟ್ಟು 103ನಿವೇಶನಗಳನ್ನು ನಿಯಮ ಮೀರಿ ನೀಡಲಾಗಿದೆ.ಅದೇ ರೀತಿ ಅಕ್ರಮ ಆಸ್ತಿ ಗಳಿಕೆ ಆರೋಪಕ್ಕೆಸಂಬಂಧಿಸಿ ದೂಡಾದ ಹಾಲಿ ಆಯುಕ್ತರ ವಿರುದ್ಧವೂ ಲೋಕಾಯುಕ್ತದಲ್ಲಿ ಪ್ರಕರಣ ದಾಖಲಾಗಿದೆ.
ನಿವೇಶನ ಹಂಚಿಕೆಯಲ್ಲಿ ಈ ಹಿಂದೆಅಕ್ರಮ ನಡೆದಿರುವುದರಿಂದ ದೂಡಾದಿಂದಈಗ ನಿರ್ಮಿಸಲು ಉದ್ದೇಶಿಸಿರುವ ಹೊಸಬಡಾವಣೆ ಪ್ರಕ್ರಿಯೆಗೆ ತಡೆಯಾಜ್ಞೆ ನೀಡುವಂತೆನ್ಯಾಯಾಲಯದ ಮೊರೆ ಹೋಗಲಾಗುವುದುಎಂದು ಹೇಳಿದರು.ನಿವೇಶನ ಹಂಚಿಕೆ ಹಗರಣದಲ್ಲಿಕಾಂಗ್ರೆಸ್ ಹಾಗೂ ಬಿಜೆಪಿ ಎರಡೂ ಪಕ್ಷಗಳಪ್ರಮುಖರು ಭಾಗಿಯಾಗಿದ್ದಾರೆ.
ದೂಡಾದಹಾಲಿ ಅಧ್ಯಕ್ಷರು ಸಹ ನಿಯಮ ಉಲ್ಲಂಘಿಸಿನಿವೇಶನ ಪಡೆದಿರುವ ಬಗ್ಗೆ ದಾಖಲೆಗಳಿವೆ.ಆದ್ದರಿಂದ ಅವರು ನೈತಿಕ ಹೊಣೆ ಹೊತ್ತುಕೂಡಲೇ ರಾಜೀನಾಮೆ ನೀಡಬೇಕು. ಇಲ್ಲವೇದೂಡಾ ಅಧ್ಯಕ್ಷ ಸ್ಥಾನ ನೀಡಿದ ಬಿಜೆಪಿಯವರುಅವರಿಂದ ರಾಜೀನಾಮೆ ಪಡೆಯಬೇಕು.ಇಲ್ಲದಿದ್ದರೆ ದೂಡಾ ಕಚೇರಿ ಹಾಗೂ ಬಿಜೆಪಿಕಚೇರಿ ಎದುರು ಶ್ರೀರಾಮಸೇನೆಯಿಂದ ಧರಣಿನಡೆಸಲಾಗುವುದು ಎಂದು ಮುತಾಲಿಕ್ ಎಚ್ಚರಿಕೆನೀಡಿದರು.ಶ್ರೀರಾಮಸೇನೆ ಸಂಘಟನೆಯ ಜಿಲ್ಲಾಧ್ಯಕ್ಷಮಣಿ ಸರ್ಕಾರ್, ಪ್ರಮುಖರಾದ ಸಾಗರ್,ಆಲೂರ ರಾಜಶೇಖರ್ ಇನ್ನಿತರರು ಸುದ್ದಿಗೋಷ್ಠಿಯಲ್ಲಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Gayatri Siddeshwar: ಸಮಗ್ರ ನೀರಾವರಿ ಸೌಲಭ್ಯಕ್ಕೆ ಆದ್ಯತೆ; ಗಾಯಿತ್ರಿ
Harihara ಬಿಜೆಪಿ ಶಾಸಕ ಬಿ.ಪಿ.ಹರೀಶ್ಗೆ ಜೀವ ಬೆದರಿಕೆ
Harihara; ಅಕ್ರಮ ಮರಳುಗಾರಿಕೆ ಮಾಹಿತಿ ನೀಡಿದ್ದಕ್ಕೆ ಬಿಜೆಪಿ ಶಾಸಕರಿಗೆ ಜೀವ ಬೆದರಿಕೆ
Lok Sabha Election: ಕಾಂಗ್ರೆಸ್ನಿಂದ ಜನರಿಗೆ ಸುಳ್ಳಿನ ಗ್ಯಾರಂಟಿ: ಗಾಯಿತ್ರಿ ಸಿದ್ದೇಶ್ವರ
Davanagere: ಮತದಾನ ಜಾಗೃತಿ ಲಾಂಛನದಲ್ಲಿ ಅಪರೂಪದ ಪ್ರಾಣಿ ಚಿತ್ರ ಬಳಕೆ
MUST WATCH
ಹೊಸ ಸೇರ್ಪಡೆ
Kundapura: ಕಳಚಿದ ಕೊಂಡಿ: ಭಾಗವತ ಸುಬ್ರಹ್ಮಣ್ಯ ಧಾರೇಶ್ವರ ಇನ್ನಿಲ್ಲ
Lok Sabha Election 2024; ನಿಮ್ಮ ಮತವನ್ನು ಮಾರಿಕೊಳ್ಳಬೇಡಿ: ಗಣ್ಯರ ಮನವಿ
Daily Horoscope: ಉದ್ಯೋಗದಲ್ಲಿ ಮೇಲಧಿಕಾರಿಗಳಿಗೆ ತೃಪ್ತಿ, ಅಪೇಕ್ಷಿತ ಆರ್ಥಿಕ ನೆರವು ಲಭ್ಯ
Modi ಹಸಿ ಸುಳ್ಳು: ಸಿಎಂ ಸಿದ್ದರಾಮಯ್ಯ ಕೆಂಡ; ಒಬಿಸಿ, ಎಸ್ಸಿ ಮೀಸಲಾತಿ ಹೇಳಿಕೆಗೆ ವಿರೋಧ
Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ