ನಕಲಿ ಪತ್ರಕರ್ತರ ವಿರುದ್ಧ ಶೀಘ್ರ ಕ್ರಮ


Team Udayavani, Jun 21, 2021, 8:54 PM IST

21-5

ಹರಿಹರ: ಜಿಲ್ಲೆಯಲ್ಲಿ ನೋಂದಣಿ ಇಲ್ಲದ ಪತ್ರಕರ್ತರ ಮಾಹಿತಿ ಕಲೆ ಹಾಕುತ್ತಿದ್ದು, ಶೀಘ್ರದಲ್ಲಿ ನಕಲಿ ಮಾಧ್ಯಮವರ ವಿರುದ್ಧ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಜಿಲ್ಲಾ ಪೊಲೀಸ್‌ ವರಿಷ್ಠಾ ಧಿಕಾರಿ ಸಿ.ಬಿ. ರಿಷ್ಯಂತ್‌ ಹೇಳಿದರು.

ನಗರದ ತರಳಬಾಳು ಶಾಲೆ ಅವರಣದಲ್ಲಿ ತರಳಬಾಳು ಸೇವಾ ಸಮಿತಿಯವರು ಕಳೆದ 35 ದಿನಗಳಿಂದ ಕೋವಿಡ್‌ ಸೋಂಕಿತರ ಪರಿಚಾರಕರಿಗಾಗಿ ಊಟ ತಯಾರಿಸುತ್ತಿರುವ ಸ್ಥಳಕ್ಕೆ ಭೇಟಿ ನೀಡಿ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ವಾರ್ತಾ ಇಲಾಖೆಯೊಂದಿಗೆ ನೋಂದಣಿ ಇಲ್ಲದಿದ್ದರೂ ಪತ್ರಕರ್ತರ ಸೋಗಿನಲ್ಲಿ ಅಧಿ ಕಾರಿಗಳಿಗೆ ಹಾಗೂ ಜನಪ್ರತಿನಿಧಿ ಗಳಿಗೆ ಮಾನಸಿಕ ನೆಮ್ಮದಿ ಹಾಳು ಮಾಡುವ ಕೆಲಸ ಮಾಡುತ್ತಿದ್ದಾರೆ ಎಂಬ ದೂರುಗಳು ಬಂದಿವೆ. ಯುಟ್ಯೂಬ್‌ ಚಾನಲ್‌ ಹೆಸರು ಹೇಳಿಕೊಂಡು ಜನರ ಶೋಷಣೆ ಮಾಡುವುದನ್ನು ಸಹಿಸಲಾಗದು ಎಂದರು.

ಈಗಾಗಲೆ ಜಿಲ್ಲೆಯ ಎಲ್ಲಾ ತಾಲೂಕುಗಳಿಂದ ಇಂಥವರ ಮಾಹಿತಿ ಸಂಗ್ರಹಿಸಲಾಗುತ್ತಿದೆ. ಸ್ಥಳೀಯ ಅಧಿ ಕಾರಿಗಳು ಹಾಗೂ ಪತ್ರಕರ್ತ ಸಂಘದ ಪದಾ ಧಿಕಾರಿಗಳೊಂದಿಗೆ ಸಭೆ ನಡೆಸಿ ನಕಲಿ ಪತ್ರಕರ್ತರು, ಪೀತ ಪತ್ರಿಕೋದ್ಯಮಿಗಳನ್ನು ಮಟ್ಟ ಹಾಕಲಾಗುವುದು ಎಂದರು.

ಹಲವು ಬಾರಿ ಕೋರಿದ್ದರೂ ನಗರಕ್ಕೆ ಸಂಚಾರಿ ಪೊಲೀಸ್‌ ಠಾಣೆ ಮಂಜೂರು ಮಾಡದ ಕುರಿತ ಪ್ರಶ್ನೆಗೆ ನಗರದಲ್ಲಿ ಸಂಚಾರಿ ದಟ್ಟಣೆ ಗಮನಿಸಿ ಅವಶ್ಯವಿದ್ದಲ್ಲಿ ಮತ್ತೂಮ್ಮೆ ದಾಖಲಾತಿಗಳನ್ನು ಪರಿಶೀಲಿಸಿ ಗೃಹ ಇಲಾಖೆಗೆ ಪ್ರಸ್ತಾವನೆ ಸಲ್ಲಿಸಲಾಗುವುದು ಎಂದರು. ನಗರ ಬೆಳೆದಂತೆಲ್ಲ ಅಪರಾಧ ಪ್ರಕರಣಗಳು ಹೆಚ್ಚುತ್ತಿವೆ. ಇದಕ್ಕೆ ತಕ್ಕಂತೆ ಹೊರ ಪೊಲೀಸ್‌ ಠಾಣೆ ತೆರೆಯುವ ಬಗ್ಗೆ ಕೇಳಿದಾಗ ನಗರದಲ್ಲಿ ನಡೆಯುವ ಅಪರಾಧ ಪ್ರಕರಣಗಳು ಹಾಗೂ ಜನಸಂಖ್ಯೆ ಮಾಹಿತಿ ಆಧಾರದ ಮೇಲೆ ಪರಿಶೀಲನೆ ಮಾಡಿ ಅಗತ್ಯವಿದ್ದಲ್ಲಿ ಸರಕಾರದ ಗಮನಕ್ಕೆ ತಂದು ಹೊರಠಾಣೆಯ ವ್ಯವಸ್ಥೆಗೆ ಕ್ರಮ ಕೈಗೊಳ್ಳಲಾಗುವುದು ಎಂದರು.

ನಂತರ ದಾಸೋಹಕ್ಕೆ ಸ್ವಾಮೀಜಿಯವರೊಂದಿಗೆ ಚಾಲನೆ ನೀಡಿದರು. ನಗರದ ರಾಮಕೃಷ್ಣಾಶ್ರಮದ ಅಧ್ಯಕ್ಷ ಶಾರದೇಶಾನಂದ ಸ್ವಾಮೀಜಿ, ಬಿಜೆಪಿ ಜಿಲ್ಲಾಧ್ಯಕ್ಷ ಎಸ್‌.ಎಂ.ವೀರೇಶ್‌ ಹನಗವಾಡಿ, ನಗರಸಭಾ ಸದಸ್ಯೆ ಅಶ್ವಿ‌ನಿ ಕೃಷ್ಣ, ಸೇವಾ ಸಮಿತಿಯ ವೀರೇಶ್‌ ಕೊಂಡಜ್ಜಿ, ಭೂಮಿ ಬ್ಯಾಂಕ್‌ ಮಾಜಿ ರಾಜ್ಯ ಉಪಾಧ್ಯಕ್ಷ ಬೆಳ್ಳೂಡಿ ರಾಮಚಂದ್ರಪ್ಪ, ಕಿರಣ್‌ ಮೂಲಿಮನಿ, ಬೆಳ್ಳೂಡಿ ಗೀತಕ್ಕ, ಕೊಂಡಜ್ಜಿ ಶಿವಕುಮಾರ್‌, ಉಮೇಶ್‌ ಹುಲ್ಮನಿ, ಹನಗವಾಡಿ ಬಿ.ಮಂಜಣ್ಣ, ಕೆ.ಜಿ. ಕೃಷ್ಣ, ಎನ್‌.ಇ. ಸುರೇಶ್‌ ಸ್ವಾಮಿ ಇತರರು ಇದ್ದರು.

ಟಾಪ್ ನ್ಯೂಸ್

Karkala ಮಾಳ: ನಿಯಂತ್ರಣ ತಪ್ಪಿದ ಗೂಡ್ಸ್‌ ವಾಹನ ಅಪಘಾತ

Karkala ಮಾಳ: ನಿಯಂತ್ರಣ ತಪ್ಪಿದ ಗೂಡ್ಸ್‌ ವಾಹನ ಅಪಘಾತ

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು

Ullal: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆಗೆ ಶರಣು

Ullal: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆಗೆ ಶರಣು

Road Mishap ಸುಳ್ಯ: ಬೈಕ್‌ಗಳ ನಡುವೆ ಅಪಘಾತ

Road Mishap ಸುಳ್ಯ: ಬೈಕ್‌ಗಳ ನಡುವೆ ಅಪಘಾತ

CAR

Road Mishap; ಕಾರು -ಬೈಕ್‌ ಢಿಕ್ಕಿ: ದಂಪತಿಗೆ ತೀವ್ರ ಗಾಯ

Puttur: ಮನೆಯಿಂದ ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣ ಕಳವು

Puttur: ಮನೆಯಿಂದ ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣ ಕಳವು

Subramanya: ಕಸ ವಿಲೇವಾರಿ ವಾಹನ ಚರಂಡಿಗೆ

Subramanya: ಕಸ ವಿಲೇವಾರಿ ವಾಹನ ಚರಂಡಿಗೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

Davanagere; ಸಮಾವೇಶ ನಡೆದ ಮೈದಾನ ಸ್ವಚ್ಛಗೊಳಿಸಿದ ಗಾಯಿತ್ರಿ ಸಿದ್ದೇಶ್ವರ

Davanagere; ಸಮಾವೇಶ ನಡೆದ ಮೈದಾನ ಸ್ವಚ್ಛಗೊಳಿಸಿದ ಗಾಯಿತ್ರಿ ಸಿದ್ದೇಶ್ವರ

ನಾರಿಶಕ್ತಿ ವಿರೋಧಿಸುವ ಕಾಂಗ್ರೆಸ್‌ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ

ನಾರಿ ಶಕ್ತಿ ವಿರೋಧಿಸುವ ಕಾಂಗ್ರೆಸ್‌ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ

1-eewqeqwe

Davanagere;ಬೆಣ್ಣೆದೋಸೆಯೊಂದಿಗೆ ವಿಜಯೋತ್ಸವ ಆಚರಿಸಲು ಸಿದ್ಧತೆ ಮಾಡಿಕೊಳ್ಳಿ: ಮೋದಿ

Davanagere ಮೋದಿ ಸಮಾವೇಶ: ಬಿಸಿಲಿನ ನಡುವೆಯೂ ಸೇರಿದ ಸಹಸ್ರಾರು ಜನರು

Davanagere ಮೋದಿ ಸಮಾವೇಶ: ಬಿಸಿಲಿನ ನಡುವೆಯೂ ಸೇರಿದ ಸಹಸ್ರಾರು ಜನರು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Karkala ಮಾಳ: ನಿಯಂತ್ರಣ ತಪ್ಪಿದ ಗೂಡ್ಸ್‌ ವಾಹನ ಅಪಘಾತ

Karkala ಮಾಳ: ನಿಯಂತ್ರಣ ತಪ್ಪಿದ ಗೂಡ್ಸ್‌ ವಾಹನ ಅಪಘಾತ

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು

Ullal: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆಗೆ ಶರಣು

Ullal: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆಗೆ ಶರಣು

Road Mishap ಸುಳ್ಯ: ಬೈಕ್‌ಗಳ ನಡುವೆ ಅಪಘಾತ

Road Mishap ಸುಳ್ಯ: ಬೈಕ್‌ಗಳ ನಡುವೆ ಅಪಘಾತ

CAR

Road Mishap; ಕಾರು -ಬೈಕ್‌ ಢಿಕ್ಕಿ: ದಂಪತಿಗೆ ತೀವ್ರ ಗಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.