ನಾಳೆ ಬೀರಲಿಂಗೇಶ್ವರ ಸಮುದಾಯ ಭವನ ಉದ್ಘಾಟನೆ
Team Udayavani, May 14, 2022, 7:41 PM IST
ಹೊನ್ನಾಳಿ: ಪಟ್ಟಣದ ದೊಡ್ಡಕೇರಿ ಶ್ರೀಬೀರಲಿಂಗೇಶ್ವರ ಟ್ರಸ್ಟ್ ಕಮಿಟಿ ವತಿಯಿಂದದೊಡ್ಡಕೇರಿಯಲ್ಲಿ ಸರ್ವಾಂಗ ಸುಂದರವಾಗಿನಿರ್ಮಿಸಿರುವ ನೂತನ ಬೀರಲಿಂಗೇಶ್ವರಸಮುದಾಯ ಭವನದ ಉದ್ಘಾಟನೆ, ಶ್ರೀರೇವಣಸಿದ್ದೇಶ್ವರ ಮೂರ್ತಿ ಪ್ರತಿಷ್ಠಾಪನೆ,
ಕಳಸಾರೋಹಣ ಹಾಗೂ ಸಾಮೂಹಿಕವಿವಾಹ ಕಾರ್ಯಕ್ರಮಗಳನ್ನು ಮೇ 15ರಭಾನುವಾರ ಹಮ್ಮಿಕೊಳ್ಳಲಾಗಿದೆ ಎಂದು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ , ಹಾಲುಮತಸಮಾಜದ ಮುಖಂಡ ಎಚ್.ಬಿ. ಮಂಜಪ್ಪಹೇಳಿದರು.ಪಟ್ಟಣದ ದೊಡ್ಡಕೇರಿ ಬೀರಲೆಂಗೇಶ್ವರ ಸಮುದಾಯ ಭವನದಲ್ಲಿ ಶುಕ್ರವಾರಕರೆದಿದ್ದ ಸುದ್ದಿಗೋಷ್ಠಿಯಲ್ಲಿ ಅವರುಮಾತನಾಡಿದರು.
ಅಂದು ನಡೆಯುವಧಾರ್ಮಿಕ ಹಾಗೂ ಧರ್ಮಸಭೆಯಸಾನ್ನಿಧ್ಯವನ್ನು ಕಾಗಿನೆಲೆ ಕನಕ ಗುರುಪೀಠದಜಗದ್ಗುರು ನಿರಂಜನಾನಂದಪುರಿಸ್ವಾಮೀಜಿ, ಹೊಸದುರ್ಗ ಶಾಖಾ ಮಠದಈಶ್ವರಾನಂದಪುರಿ ಸ್ವಾಮೀಜಿ, ಹಿರೇಕಲ್ಮಠದಡಾ| ಒಡೆಯರ್ ಚನ್ನಮಲ್ಲಿಕಾರ್ಜುನಶಿವಾಚಾರ್ಯ ಸ್ವಾಮೀಜಿ ವಹಿಸುವರುಎಂದು ತಿಳಿಸಿದರು.ಸಮುದಾಯ ಭವನದ ನಿವೇಶನವನ್ನುಹಿರೇಕಲ್ಮಠದ ಲಿಂ.ಒಡೆಯರ್ ಚಂದ್ರಶೇಖರಶಿವಾಚಾರ್ಯ ಸ್ವಾಮೀಜಿ ದಾನವಾಗಿಸಮಾಜಕ್ಕೆ ನೀಡಿದ್ದರು.
ಬೀರಲಿಂಗೇಶ್ವರಸಮುದಾಯ ಭವನವನ್ನು ಮಾಜಿ ಸಚಿವಎಚ್.ಎಂ.ರೇವಣ್ಣ ಉದ್ಘಾಟಿಸಲಿದ್ದಾರೆ.ಸಮಾರಂಭದ ಅಧ್ಯಕ್ಷತೆಯನ್ನು ಜಿಪಂಮಾಜಿ ಅಧ್ಯಕ್ಷ , ಜಿಲ್ಲಾ ಕಾಂಗ್ರೆಸ್ಅಧ್ಯಕ್ಷ ಎಚ್.ಬಿ.ಮಂಜಪ್ಪ ಅಧ್ಯಕ್ಷತೆವಹಿಸುವರು. ಜಿಲ್ಲಾ ಉಸ್ತುವಾರಿ ಸಚಿವಭೈರತಿ ಬಸವರಾಜ್, ವರುಣಾ ಶಾಸಕಡಾ| ಯತೀಂದ್ರಸಿದ್ದರಾಮಯ್ಯ, ಸಂಸದಜಿ.ಎಂ.ಸಿದ್ದೇಶ್, ಮಾಜಿ ಸಚಿವರಾದಎಸ್.ಎಸ್.ಮಲ್ಲಿಕಾರ್ಜುನ, ಕೆ.ಎಸ್.ಈಶ್ವರಪ್ಪ, ಎಚ್.ಆಂಜನೇಯ, ಹರಿಹರಶಾಸಕ ಎಸ್.ರಾಮಪ್ಪ, ಹೊನ್ನಾಳಿ ಶಾಸಕಎಂ.ಪಿ.ರೇಣುಕಾಚಾರ್ಯ, ವಿಧಾನಪರಿಷತ್ ಸದಸ್ಯ ಕೊಂಡಜ್ಜಿ ಮೋಹನ್,ಮಾಜಿ ವಿಧಾನ ಪರಿಷತ್ ಸದಸ್ಯಪ್ರಸನ್ನಕುಮಾರ್, ಮಾಜಿ ಶಾಸಕರಾದಡಿ.ಜಿ. ಶಾಂತನಗೌಡ, ಡಾ| ಡಿ.ಬಿ. ಗಂಗಪ್ಪಸೇರಿದಂತೆ ಇತರ ಜನಪ್ರತಿನಿ ಧಿಗಳುಅತಿಥಿಗಳಾಗಿ ಭಾಗವಹಿಸುವರು ಎಂದು ಹೇಳಿದರು.
ಧಾರ್ಮಿಕ ಹಾಗೂ ಧರ್ಮಸಭೆಕಾರ್ಯಕ್ರಮಗಳಿಗೆ ಹೆಚ್ಚಿನ ಸಂಖ್ಯೆಯಲ್ಲಿತಾಲೂಕಿನ ಜನತೆ ಆಗಮಿಸಿ ಕಾರ್ಯಕ್ರಮ ಯಶಸ್ವಿಗೊಳಿಸಬೇಕು ಎಂದು ಮನವಿಮಾಡಿದರು. ಸಮಿತಿ ಅಧ್ಯಕ್ಷ ಎಚ್.ಬಿ.ಗಿಡ್ಡಪ್ಪ, ಮುಖಂಡರಾದ ಮಾದಪ್ಪ,ವಿಜೇಂದ್ರಪ್ಪ, ನರಸಪ್ಪಗೌಡ, ಎಂ.ಪಿ.ನರಸಿಂಹಪ್ಪ, ಗಣಮಗ ಕುಮಾರಸ್ವಾಮಿಸುದ್ದಿಗೋಷ್ಠಿಯಲ್ಲಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ
PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ
Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್
Gayatri Siddeshwar: ಸಮಗ್ರ ನೀರಾವರಿ ಸೌಲಭ್ಯಕ್ಕೆ ಆದ್ಯತೆ; ಗಾಯಿತ್ರಿ
Harihara ಬಿಜೆಪಿ ಶಾಸಕ ಬಿ.ಪಿ.ಹರೀಶ್ಗೆ ಜೀವ ಬೆದರಿಕೆ
MUST WATCH
ಹೊಸ ಸೇರ್ಪಡೆ
Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…
Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್ ಟನ್ ವಿವಿ ವಿದ್ಯಾರ್ಥಿನಿ ಬಂಧನ
ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸೀಮರು: ಸಚಿವ ಪ್ರಹ್ಲಾದ್ ಜೋಶಿ
Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್
Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ