ಮೀಸಲು ಹೋರಾಟ ತೀವ್ರಗೊಳಿಸಲು ನಿರ್ಧಾರ
Team Udayavani, May 14, 2022, 8:12 PM IST
ದಾವಣಗೆರೆ: ಪರಿಶಿಷ್ಟ ಪಂಗಡದ ಮೀಸಲಾತಿ ಹೆಚ್ಚಳಕ್ಕೆಒತ್ತಾಯಿಸಿ ತೀವ್ರ ಸ್ವರೂಪದ ಹೋರಾಟ ನಡೆಸಲುಮಂಗಳವಾರ ನಾಯಕರ ಹಾಸ್ಟೆಲ್ನಲ್ಲಿ ನಡೆದನಾಯಕ ಸಮಾಜದ ಜಿಲ್ಲಾ ಮಟ್ಟದ ಸಭೆಯಲ್ಲಿನಿರ್ಧರಿಸಲಾಯಿತು.ವಾಲ್ಮೀಕಿ ಸಮಾಜಕ್ಕೆ ಶಿಕ್ಷಣ ಮತ್ತು ಉದ್ಯೋಗಕ್ಷೇತ್ರದಲ್ಲಿ ಅನ್ವಯವಾಗುವಂತೆ ಶೇ. 7.5 ಮೀಸಲಾತಿನೀಡಬೇಕು ಎಂದು ಒತ್ತಾಯಿಸಿ ರಾಜನಹಳ್ಳಿ ವಾಲ್ಮೀಕಿಗುರುಪೀಠದ ಶ್ರೀ ಪ್ರಸನ್ನಾನಂದಪುರಿ ಸ್ವಾಮೀಜಿಫೆ.10ರಿಂದ ಬೆಂಗಳೂರಿನ ಸ್ವಾತಂತ್ರÂ ಉದ್ಯಾನದಲ್ಲಿನಿರಂತರ ಹೋರಾಟ ನಡೆಸುತ್ತಿದ್ದರೂ ಸರ್ಕಾರ,ಜನಪ್ರತಿನಿಧಿಗಳು ಸ್ಪಂದಿಸುತ್ತಿಲ್ಲ ಎಂದು ಸಭೆಯಲ್ಲಿತೀವ್ರ ಆಕ್ರೋಶ ವ್ಯಕ್ತವಾಯಿತು.
ವಾಲ್ಮೀಕಿ ಶ್ರೀಗಳ ಹೋರಾಟಕ್ಕೆ 90 ದಿನಗಳುಕಳೆದರೂ ಸರ್ಕಾರದಿಂದ ಈ ಕ್ಷಣಕ್ಕೂ ಯಾವುದೇರೀತಿಯ ಆಶ್ವಾಸನೆ, ನಿರ್ಧಾರವಾಗಲೀ ಹೊರಬಂದಿಲ್ಲ. ಹಾಗಾಗಿ ಶ್ರೀಗಳು ರಾಜ್ಯದಾದ್ಯಂತಹೋರಾಟ ನಡೆಸಲು ಅಗತ್ಯ ರೂಪುರೇಷೆಸಿದ್ಧಪಡಿಸಲು ಆದೇಶಿಸಿದ್ದಾರೆ. ಅದರ ಪ್ರಕಾರಮುಂದಿನ ದಿನಗಳಲ್ಲಿ ರಾಜ್ಯದ ಎಲ್ಲಾ ಭಾಗದಲ್ಲಿ ತೀವ್ರಸ್ವರೂಪದ ಹೋರಾಟ ನಡೆಸಲಾಗುವುದು. ಜಿಲ್ಲಾಕೇಂದ್ರ ದಾವಣಗೆರೆ ಒಳಗೊಂಡಂತೆ ಎಲ್ಲ ತಾಲೂಕಿನಲ್ಲಿಹೋರಾಟ ನಡೆಸಲು ಚರ್ಚಿಸಲಾಯಿತು.
ಶ್ರೀಪ್ರಸನ್ನಾನಂದಪುರಿ ಸ್ವಾಮೀಜಿ ನಡೆಸುತ್ತಿರುವಹೋರಾಟದ 95ನೇ ದಿನ ಮೇ 15ರಂದುಮಾಧ್ಯಮ ಗೋಷ್ಠಿ ನಡೆಸಿ ಮುಂದಿನ ಹಂತದಹೋರಾಟ ನಡೆಸಿ ಸರ್ಕಾರದ ಗಮನ ಸೆಳೆಯಲುತೀರ್ಮಾನಿಸಲಾಯಿತು.ದಾವಣಗೆರೆ ತಾಲೂಕು ನಾಯಕ ಸಮಾಜದಅಧ್ಯಕ್ಷ ಹದಡಿ ಎಂ.ಬಿ. ಹಾಲಪ್ಪ ಅಧ್ಯಕ್ಷತೆವಹಿಸಿದ್ದರು.
ಸಮಾಜದ ಜಿಲ್ಲಾಧ್ಯಕ್ಷ ಬಿ. ವೀರಣ್ಣ,ಮಹಿಳಾ ಘಟಕದ ಅಧ್ಯಕ್ಷೆ ವಿಜಯಶ್ರೀ, ನಿವೃತ್ತಪ್ರಾಧ್ಯಾಪಕ ಡಾ| ಎ.ಬಿ. ರಾಮಚಂದ್ರಪ್ಪ, ಎನ್.ಎಂ.ಆಂಜನೇಯ ಗುರೂಜಿ, ಎಸ್.ಟಿ. ನೌಕರರ ಸಂಘದಜಿಲ್ಲಾಧ್ಯಕ್ಷ ಶ್ರೀನಿವಾಸಮೂರ್ತಿ, ಮಾರುತಿ, ಕೆಪಿಸಿಸಿಸದಸ್ಯ ಅಣಜಿ ಅಂಜಿನಪ್ಪ, ಗದಿಗೇಶ್, ನಾಗನೂರುನಾಗೇಂದ್ರಪ್ಪ, ಕಾಟೀಹಳ್ಳಿ ಶೇಖರಪ್ಪ, ಆನಗೋಡುತಿಪ್ಪಣ್ಣ, ವಿನಾಯಕ, ನಾಗಣ್ಣ, ಮಳ್ಳೆಕಟ್ಟೆ ರೇವಪ್ಪ,ಶ್ಯಾಗಲೆ ಸತೀಶ್, ಮಂಜುನಾಥ್, ವಿಜಯಕುಮಾರ್,ಬಿ.ಎನ್. ಸತೀಶ್ ಇತರರು ಭಾಗವಹಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Election: ಮಠಾಧೀಶರ ಆಶೀರ್ವಾದ ಪಡೆದ ಬಿಜೆಪಿ ಅಭ್ಯರ್ಥಿ ಗಾಯತ್ರಿ ಸಿದ್ದೇಶ್ವರ
Panchamasali ಎಂಬ ಕಾರಣಕ್ಕೆ ಯತ್ನಾಳ್ಗೆ ಸಿಎಂ ಅವಕಾಶ ನಿರಾಕರಣೆ: ವಚನಾನಂದ ಶ್ರೀ
Election Campaign: ಕಾಂಗ್ರೆಸ್ನಲ್ಲಿಲ್ಲ ಮೋದಿಗೆ ಸಮಾನ ನಾಯಕತ್ವ: ಗಾಯಿತ್ರಿ ಸಿದ್ದೇಶ್ವರ
Gayathri Siddeshwar: ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಗಾಯಿತ್ರಿ ಜನ್ಮದಿನ ಆಚರಣೆ
Eshwarappa ವಿರುದ್ಧ ಕ್ರಮದ ಬಗ್ಗೆ ಪಕ್ಷದಿಂದಲೇ ನಿರ್ಧಾರ: ಯಡಿಯೂರಪ್ಪ
MUST WATCH
ಹೊಸ ಸೇರ್ಪಡೆ
Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ
Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್ ಬೈಕ್ನಲ್ಲಿ 64ರ ಹಿರಿಯರ ಸಾಹಸ ಯಾನ
Lok Sabha Election: ‘ಬಿವೈಆರ್ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’
ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ
Kushtagi: ನಿರೀಕ್ಷಿತ ಫಲಿತಾಂಶ ಬಾರದ ಹಿನ್ನೆಲೆ ಮನನೊಂದು ವಿದ್ಯಾರ್ಥಿನಿ ಆತ್ಮಹತ್ಯೆ