ಕಾಂಗ್ರೆಸ್ಗೆ ಅಧಿಕಾರದ ಚುಕ್ಕಾಣಿ
Team Udayavani, Jun 27, 2022, 3:37 PM IST
ದಾವಣಗೆರೆ: ಮುಂದಿನ 2023ರ ರಾಜ್ಯವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ಅಧಿಕಾರಕ್ಕೆ ಬರಲಿದೆ ಎಂದು ಪಕ್ಷದ ಸಾಂಸ್ಥಿಕಚುನಾವಣೆಗಳ ಉಸ್ತುವಾರಿ ಅಭಿಲಾಷ್ ರಾವ್ವಿಶ್ವಾಸ ವ್ಯಕ್ತಪಡಿಸಿದರು.ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಭಾನುವಾರನಡೆದ ಸಭೆಯಲ್ಲಿ ಮಾತನಾಡಿದ ಅವರು,ರಾಷ್ಟ್ರಪಿತ ಮಹಾತ್ಮ ಗಾಂಧಿ, ದೇಶದಮೊದಲ ಪ್ರಧಾನಿ ಜವಾಹರ ಲಾಲ್ ನೆಹರುಒಳಗೊಂಡಂತೆ ಅನೇಕರು ಕಟ್ಟಿರುವ ಕಾಂಗ್ರೆಸ್ನ್ನು ರಾಜ್ಯದಲ್ಲಿ ಮತ್ತೂಮ್ಮೆ ಅಧಿಕಾರಕ್ಕೆ ತರುವನಿಟ್ಟಿನಲ್ಲಿ ಎಲ್ಲರೂ ಶ್ರಮಿಸಬೇಕು.
ಮುಂದಿನಚುನಾವಣೆಯಲ್ಲಿ ಕರ್ನಾಟಕ ಮಾತ್ರವಲ್ಲತೆಲಂಗಾಣದಲ್ಲೂ ಕಾಂಗ್ರೆಸ್ ಅಧಿಕಾರಕ್ಕೆಬರಲಿದೆ ಎಂದರು.ಕೇಂದ್ರ ಮತ್ತು ರಾಜ್ಯದಲ್ಲಿ ಭ್ರಷ್ಟಸರ್ಕಾರಗಳಿವೆ. ಡಬ್ಬಲ್ ಇಂಜಿನ್ಸರ್ಕಾರಗಳು ಭ್ರಷ್ಟಾಚಾರದಲ್ಲಿ ತೊಡಗಿರುವಬಗ್ಗೆ ಕಾಂಗ್ರೆಸ್ ಮುಖಂಡರು, ಕಾರ್ಯಕರ್ತರುಜನರಿಗೆ ತಿಳಿಸಬೇಕು. ಸರ್ಕಾರಗಳವೈಫಲ್ಯಗಳ ಬಗ್ಗೆ ಜನಾರಿವು ರೂಪಿಸಬೇಕು.ಒಟ್ಟು ಮತದಾರರಲ್ಲಿ ಅರ್ಧದಷ್ಟುಇರುವ ಮಹಿಳೆಯರಿಗೆ ಪ್ರಾಮುಖ್ಯತೆಕೊಡಬೇಕಾಗಿದೆ. ಕಾಂಗ್ರೆಸ್ ಮಹಿಳೆಯರಿಗೆ ಪಕ್ಷದಲ್ಲಿ ಶೇ. 33ರಷ್ಟು ಸ್ಥಾನಗಳನ್ನುಕಡ್ಡಾಯವಾಗಿ ನೀಡಲಿದೆ.
ಸೋನಿಯಾಗಾಂಧಿ ಮತ್ತು ರಾಹುಲ್ ಗಾಂಧಿ ಯವರುದೇಶ, ಜನರ ಕಲ್ಯಾಣಕ್ಕಾಗಿ ದುಡಿಯುತ್ತಿದ್ದಾರೆ.ಎಲ್ಲರೂ ಸಂಘಟಿತರಾಗಿ ಮತ್ತೆ ಪಕ್ಷವನ್ನುಅಧಿಕಾರಕ್ಕೆ ತರೋಣ ಎಂದು ತಿಳಿಸಿದರು.ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಆಸಗೋಡುಜಯಸಿಂಹ ಮಾತನಾಡಿ, ಕಾಂಗ್ರೆಸ್ನಲ್ಲಿರುವನಾಯಕರು ಕೇವಲ ಅವರ ಜಾತಿಯವರನ್ನುಸುತ್ತಮುತ್ತ ಇಟ್ಟುಕೊಳ್ಳಬಾರದು. ಎಲ್ಲ ಜಾತಿ,ಧರ್ಮದವರನ್ನು ಜೊತೆಯಲ್ಲಿಟ್ಟುಕೊಳ್ಳಬೇಕು.ಕಾಂಗ್ರೆಸ್ಗೆ ಹಿನ್ನಡೆ ಇಲ್ಲ. ಕಾಂಗ್ರೆಸ್ ದೇಶಮತ್ತು ರಾಜ್ಯಕ್ಕೆ ಅನಿವಾರ್ಯವಾಗಿದೆ.
ಬಿಜೆಪಿತಾತ್ಕಾಲಿಕವಾಗಿ ಅ ಧಿಕಾರದಲ್ಲಿ ಇದೆ. ಕಾಂಗ್ರೆಸ್ನಿಂದ ಮಾತ್ರ ಜನರಿಗೆ ಒಳಿತಾಗಲು ಸಾಧ್ಯಎಂದು ಪ್ರತಿಪಾದಿಸಿದರು. ಕಾಂಗ್ರೆಸ್ ಜಿಲ್ಲಾಧ್ಯಕ್ಷಎಚ್.ಬಿ. ಮಂಜಪ್ಪ ಮಾತನಾಡಿ, ಪಕ್ಷದ ಸಾಂಸ್ಥಿಕಚುನಾವಣೆಯಲ್ಲಿ ಶಾಂತಿ ರೀತಿಯಿಂದ ನಡೆದುಕೊಳ್ಳಬೇಕು. ವೀಕ್ಷಕರು ಯಾವುದೇ ಚುನಾವಣಾಅಭ್ಯರ್ಥಿ ಆಯ್ಕೆ ಮಾಡಲು ಬಂದಿಲ್ಲ. ಸಭೆ ಪಕ್ಷಕಟ್ಟುವ ಉದ್ದೇಶದಿಂದ ಕರೆದಿದ್ದೇವೆ. ಟಿಕೆಟ್ಕೊಡುವುದಕ್ಕಲ್ಲ. ಎಲ್ಲರೂ ಸೇರಿ ಜಿಲ್ಲೆಯಲ್ಲಿಕಾಂಗ್ರೆಸ್ ಬಲಿಷ್ಠಗೊಳಿಸುವ ಕೆಲಸ ಮಾಡೋಣಎಂದು ಮನವಿ ಮಾಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
LS Polls: ಪಂಚಮಸಾಲಿ ಜಗದ್ಗುರು ಶ್ರೀ ವಚನಾನಂದ ಸ್ವಾಮೀಜಿಗಳಿಂದ ಮತಗಟ್ಟೆಯಲ್ಲಿ ಮೊದಲ ಮತದಾನ
Lok Sabha Election: ಮತಗಟ್ಟೆಗಳಿಗೆ ತೆರಳಿದ ಅಧಿಕಾರಿಗಳು, ಸಿಬ್ಬಂದಿಗಳು
LS Polls: “ಕಾಂಗ್ರೆಸ್ಸಿಗರಿಗೆ ಬಡವರೆಂದರೆ ನಾಟಕೀಯ ಪ್ರೀತಿ’: ಗಾಯತ್ರಿ ಸಿದ್ದೇಶ್ವರ್
CT Ravi ಡಿಕೆಶಿಗೆ ಆಲೂ ಬಿತ್ತಿ ಬಂಗಾರ ಬೆಳೆಯುವ ವಿದ್ಯೆ ಕರಗತ
Davanagere; ಟೈರ್ ಸಿಡಿದು ಸೇತುವೆ ಮೇಲಿಂದ ಉರುಳಿದ ಕಾರು:ಇಬ್ಬರು ಮೃತ್ಯು
MUST WATCH
ಹೊಸ ಸೇರ್ಪಡೆ
BCCI: ಇಶಾನ್, ಅಯ್ಯರ್ ಗುತ್ತಿಗೆ ರದ್ದು ಮಾಡುವುದು ನನ್ನ ನಿರ್ಧಾರವಾಗಿರಲಿಲ್ಲ ಎಂದ ಜಯ್ ಶಾ
Sandalwood; ಎವಿಡೆನ್ಸ್ ಮೇಲೆ ಪ್ರವೀಣ್ ಕಾನ್ಫಿಡೆನ್
MASOCON: ಕೆಎಂಸಿಯಲ್ಲಿ ಮಣಿಪಾಲ್ ಸರ್ಜಿಕಲ್ ಆಂಕೊಲಾಜಿ ಕಾನ್ಫರೆನ್ಸ್ 2024
Arunagiri ರಥೋತ್ಸವದಲ್ಲಿ ಕಳ್ಳರ ಕೈಚಳಕ: ಐದು ಪವನ್ ತೂಕದ ಮಾಂಗಲ್ಯ ಸರ ಅಪಹರಣ
Head Coach: ಟೀಂ ಇಂಡಿಯಾಗೆ ಹೊಸ ಕೋಚ್; ಹುಡುಕಾಟ ಆರಂಭಿಸಿದ ಬಿಸಿಸಿಐ