ಕಸ ವಿಲೇವಾರಿ ಗ್ರಾಮ ಪಂಚಾಯಿತಿ ಜವಾಬ್ದಾರಿ
Team Udayavani, Nov 3, 2021, 4:54 PM IST
ದಾವಣಗೆರೆ: ರಾಷ್ಟ್ರೀಯ ಗ್ರಾಮೀಣಜೀವನೋಪಾಯ ಮಿಷನ್, ಗ್ರಾಮ ಪಂಚಾಯತಿಮಟ್ಟದಲ್ಲಿ ಸ್ವತ್ಛ ಸಂಕೀರ್ಣ ಘಟಕದ ನಿರ್ವಹಣೆ ವಹಿಸಿಕೊಂಡಿದೆ. ಕಸ ವಿಲೇವಾರಿ ಮಾಡುವುದು ಆಯಾ ಗ್ರಾಮ ಪಂಚಾಯಿತಿಗಳ ಜವಾಬ್ದಾರಿ ಎಂದುಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ರಾಜ್ಇಲಾಖೆ ಸಚಿವ ಕೆ.ಎಸ್. ಈಶ್ವರಪ್ಪ ಹೇಳಿದರು.
ಮಂಗಳವಾರ ಜಿಲ್ಲಾ ಪಂಚಾಯತ್ ಆವರಣದಲ್ಲಿವಿವಿಧ ಕಾರ್ಯಕ್ರಮಗಳಿಗೆ ಚಾಲನೆ ನೀಡಿದ ಬಳಿಕಮಾತನಾಡಿದ ಅವರು, ಕಸ ವಿಲೇವಾರಿಗಾಗಿಹೊರಗುತ್ತಿಗೆ ಆಧಾರದ ಮೇಲೆ ಅದಕ್ಕೆ ಸಿಬ್ಬಂದಿನೇಮಕ, ತರಬೇತಿ, ವೇತನ ನೀಡಲಾಗುತ್ತದೆಎಂದರು. ಘನ ತ್ಯಾಜ್ಯ ವಿಲೇವಾರಿ ನಿರ್ವಹಣೆ ದೃಷ್ಟಿಯಿಂದ ರಾಜ್ಯದಲ್ಲಿ ಕಸ ಸಂಗ್ರಹಣೆಗೆವಾಹನ ಖರೀದಿಸಲಾಗಿದೆ.
ಅದಕ್ಕೆ ಮಹಿಳಾ ಚಾಲಕರೇ ಬೇಕೆಂದು ಅಪೇಕ್ಷೆ ವ್ಯಕ್ತವಾಗಿತ್ತು. ಅದಕ್ಕೆಅವಕಾಶ ಮಾಡಿಕೊಡಲಾಗಿದೆ. ತರಬೇತಿ ಪಡೆದಮಹಿಳೆಯರು ಗ್ರಾಮ ಪಂಚಾಯತಿ ವ್ಯಾಪ್ತಿಯಎಲ್ಲ ಗ್ರಾಮಗಳಿಂದಲೂ ಕಸ ಸಂಗ್ರಹಿಸಿ ವಿಲೇವಾರಿಮಾಡಬೇಕು. ಕಸದಿಂದ ಬಂದ ಆದಾಯವನ್ನುಸಿಬ್ಬಂದಿ, ವಾಹನ ವೆಚ್ಚಕ್ಕೆ ಬಳಸಿಕೊಳ್ಳಲು ಅವಕಾಶನೀಡಲಾಗಿದೆ ಎಂದು ತಿಳಿಸಿದರು.
ದಾವಣಗೆರೆ ತಾಲೂಕಿನ 10, ಚನ್ನಗಿರಿ ತಾಲೂಕಿನ17, ಹರಿಹರ ತಾಲೂಕಿನ 5, ಹೊನ್ನಾಳಿ ತಾಲೂಕಿನ7, ನ್ಯಾಮತಿ ತಾಲೂಕಿನ 3, ಮತ್ತು ಜಗಳೂರುತಾಲೂಕಿನ 1 ಗ್ರಾಮ ಪಂಚಾಯತಿಗಳಲ್ಲಿ ಸುಮಾರು17 ಲಕ್ಷ ರೂಪಾಯಿ ವೆಚ್ಚದಲ್ಲಿ ನಿರ್ಮಾಣವಾಗಿರುವಒಟ್ಟು 42 ಸ್ವತ್ಛ ಸಂಕೀರ್ಣ ಘಟಕಗಳು ಉದ್ಘಾಟನೆಗೆಸಿದ್ಧವಾಗಿವೆ. ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯ ಪರಿಣಾಮಕಾರಿಅನುಷ್ಠಾನಕ್ಕಾಗಿ ಜಿಲ್ಲೆಯಲ್ಲಿ ಉಚಿತ ಸಹಾಯವಾಣಿ 18004252203 ಪ್ರಾರಂಭಿಸಲಾಗಿದೆ ಎಂದ ಸಚಿವರು, ಇದಕ್ಕೆ ಸಂಬಂಧಿಸಿದ ಪೋಸ್ಟರ್ ಬಿಡುಗಡೆಮಾಡಿದರು.ಸಂಸದ ಡಾ| ಜಿ.ಎಂ. ಸಿದ್ದೇಶ್ವರ, ಶಾಸಕರಾದಎಸ್.ಎ. ರವೀಂದ್ರನಾಥ್, ಎಸ್.ವಿ. ರಾಮಚಂದ್ರ,ಪ್ರೊ| ಎನ್.ಲಿಂಗಣ್ಣ, ಜಿಲ್ಲಾಧಿಕಾರಿ ಮಹಾಂತೇಶಬೀಳಗಿ ಮತ್ತಿತರರು ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Harihara; ಅಕ್ರಮ ಮರಳುಗಾರಿಕೆ ಮಾಹಿತಿ ನೀಡಿದ್ದಕ್ಕೆ ಬಿಜೆಪಿ ಶಾಸಕರಿಗೆ ಜೀವ ಬೆದರಿಕೆ
Lok Sabha Election: ಕಾಂಗ್ರೆಸ್ನಿಂದ ಜನರಿಗೆ ಸುಳ್ಳಿನ ಗ್ಯಾರಂಟಿ: ಗಾಯಿತ್ರಿ ಸಿದ್ದೇಶ್ವರ
Davanagere: ಮತದಾನ ಜಾಗೃತಿ ಲಾಂಛನದಲ್ಲಿ ಅಪರೂಪದ ಪ್ರಾಣಿ ಚಿತ್ರ ಬಳಕೆ
Neha Hiremath Case; ಬಿಜೆಪಿ-ಜೆಡಿಎಸ್-ಎಬಿವಿಪಿಯಿಂದ ರಾಜ್ಯದೆಲ್ಲೆಡೆ ಪ್ರತಿಭಟನೆ
Gayatri Siddeshwar: ಅಡಕೆ ಮೌಲ್ಯವರ್ಧನೆಗೆ ಯೋಜನೆ: ಗಾಯಿತ್ರಿ
MUST WATCH
ಹೊಸ ಸೇರ್ಪಡೆ
Dharwad; ಕಾಂಗ್ರೆಸ್ ಬಂದ ಮೇಲೆ ಅಪರಾಧ ಪ್ರಕರಣಗಳ ಸಂಖ್ಯೆ ಹೆಚ್ಚಳ: ಸಚಿವ ಜೋಶಿ ಗಂಭೀರ ಆರೋಪ
Bridge Collapse: 8 ವರ್ಷಗಳಿಂದ ನಿರ್ಮಾಣವಾಗುತ್ತಿದ್ದ ಸೇತುವೆ ಕುಸಿತ… ತಪ್ಪಿದ ದುರಂತ
ಕಾಂಗ್ರೆಸ್ ಸುಳ್ಳನ್ನು ಜನ ನಂಬಲ್ಲ: ಗೋವಿಂದ ಕಾರಜೋಳ
ಹಗರಿಬೊಮ್ಮನಹಳ್ಳಿ: ಶುದ್ಧ ನೀರಿನ ಘಟಕಕ್ಕೆ ಉದ್ಘಾಟನೆ ಭಾಗ್ಯವೆಂದು?
Harihara; ಅಕ್ರಮ ಮರಳುಗಾರಿಕೆ ಮಾಹಿತಿ ನೀಡಿದ್ದಕ್ಕೆ ಬಿಜೆಪಿ ಶಾಸಕರಿಗೆ ಜೀವ ಬೆದರಿಕೆ