ಭಾರೀ ಗಾಳಿ-ಮಳೆಗೆ ದೇವನಗರಿ ಜನ ತತ್ತರ
1 ಎಕರೆ ಮೆಕ್ಕೆಜೋಳ ಬೆಳೆ ಹಾನಿಯಾಗಿದ್ದು ಒಟ್ಟು 5.75 ಲಕ್ಷ ರೂ.ಗಳಷ್ಟು ನಷ್ಟ ಸಂಭವಿಸಿದೆ
Team Udayavani, Apr 20, 2022, 5:36 PM IST
ದಾವಣಗೆರೆ: ನಗರದಲ್ಲಿ ಸೋಮವಾರ ರಾತ್ರಿ ಮಳೆ, ಗಾಳಿಯಿಂದ ಜನರು ತೀವ್ರ ತೊಂದರೆ ಅನುಭವಿಸಿದರು. ಎಸ್ಪಿಎಸ್ ನಗರದಲ್ಲಿ ಉಪ್ಪಾಲ ನಾಗರಾಜ್ ಎಂಬುವರ ಮನೆ ಬಿದ್ದಿದೆ. ಭಾರೀ ಮಳೆ ಮತ್ತು ಗಾಳಿಗೆ ಮನೆಯ ಮೇಲ್ಛಾವಣಿ ಕುಸಿದಿದ್ದು ಕುಟುಂಬ ಸದಸ್ಯರು ಬಯಲಲ್ಲೇ ಇಡೀ ರಾತ್ರಿ ಕಳೆಯಬೇಕಾಯಿತು.
ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಎಂಸಿಸಿ ಬಿ ಬ್ಲಾಕ್ನ ತೊಗಟವೀರ ಕಲ್ಯಾಣ ಮಂಟಪ ರಸ್ತೆಯಲ್ಲಿ ಭಾರೀ ಗಾತ್ರದ ಮರ ಉರುಳಿ ಬಿದ್ದ ಪರಿಣಾಮ ಕಾರ ಜಖಂಗೊಂಡಿದೆ. ಇತರೆ ವಾಹನಗಳಿಗೂ ಹಾನಿಯಾಗಿದೆ. ಹಗೇದಿಬ್ಬ ವೃತ್ತದಲ್ಲಿ ಮರ ಬಿದ್ದ ಪರಿಣಾಮ ಮೂರು ಬೈಕ್ಗಳು ಜಖಂಗೊಂಡಿವೆ. ಮಹಾನಗರ ಪಾಲಿಕೆ ಮುಂಭಾಗ ಇರುವ ರೈಲ್ವೆ ಕೆಳ ಸೇತುವೆಯಲ್ಲಿ ಮಳೆ ನೀರು ನಿಂತ ಪರಿಣಾಮ ಸಂಚಾರಕ್ಕೆ ಅಡಚಣೆ ಉಂಟಾಗಿತ್ತು.
ಇತ್ತೀಚಿಗೆ 70 ಲಕ್ಷ ರೂಪಾಯಿ ವ್ಯಯಿಸಿ ನೀರು ನಿಲ್ಲದಂತೆ ವ್ಯವಸ್ಥೆ ಮಾಡಲಾಗಿದೆಯಾದರೂ ಸಮಸ್ಯೆ ಮಾತ್ರ ಬಗೆಹರಿದಿಲ್ಲ. ಮೇಯರ್ ಜಯಮ್ಮ ಗೋಪಿ ನಾಯ್ಕ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಕೂಡಲೇ ಸಮಸ್ಯೆ ಬಗೆಹರಿಸುವಂತೆ ಅಧಿಕಾರಿಗಳಿಗೆ ಸೂಚಿಸಿದರು.
ಮಳೆಗಾಲ ಪ್ರಾರಂಭವಾಗುತ್ತಿರುವ ಹಿನ್ನೆಲೆಯಲ್ಲಿ ಎಲ್ಲಿಯೂ ಮಳೆ ನೀರು ನಿಲ್ಲದಂತೆ ಕ್ರಮ ತೆಗೆದುಕೊಳ್ಳಬೇಕು. ರಾಜಕಾಲುವೆಯಲ್ಲಿನ ಹೂಳು ತೆಗೆಸಿ ನೀರು ಸರಾಗವಾಗಿ ಹರಿದು ಹೋಗುವ ವ್ಯವಸ್ಥೆ ಮಾಡಬೇಕು ಎಂದು ಆಯುಕ್ತ ವಿಶ್ವನಾಥ್ ಪಿ. ಮುದಜ್ಜಿ ಅವರಿಗೆ ತಿಳಿಸಿದರು. ಭಾನುವಾರ ಮತ್ತು ಸೋಮವಾರ ರಾತ್ರಿ ದಿಢೀರ್ ಸುರಿದ ಮಳೆಯಿಂದ ತಂಪಿನ ವಾತಾವರಣ ನಿರ್ಮಾಣವಾದರೂ ಮಳೆ ಸಮಸ್ಯೆ ಉಂಟು ಮಾಡಿದೆ.
ಮಳೆಯಿಂದ 17.85 ಲಕ್ಷ ರೂ. ನಷ್ಟ
ದಾವಣಗೆರೆ: ಜಿಲ್ಲೆಯಲ್ಲಿ ಕಳೆದ 24 ಗಂಟೆಗಳಲ್ಲಿ ಸರಾಸರಿ 10 ಮಿಮೀ ಮಳೆ ದಾಖಲಾಗಿದ್ದು, ಅಂದಾಜು 17.85 ಲಕ್ಷ ರೂ.ಗಳಷ್ಟು ನಷ್ಟ ಸಂಭವಿಸಿದೆ. ಚನ್ನಗಿರಿ
ತಾಲೂಕಿನಲ್ಲಿ 9 ಮಿಮೀ, ದಾವಣಗೆರೆ ತಾಲೂಕಿನಲ್ಲಿ 4, ಹರಿಹರ ತಾಲೂಕಿನಲ್ಲಿ 4, ಹೊನ್ನಾಳಿ ತಾಲೂಕಿನಲ್ಲಿ 12, ಜಗಳೂರು ತಾಲೂಕಿನಲ್ಲಿ 5.04 ಹಾಗೂ ನ್ಯಾಮತಿ ತಾಲೂಕಿನಲ್ಲಿ 9 ಮಿಮೀ ಮಳೆಯಾಗಿದೆ. ದಾವಣಗೆರೆ ತಾಲೂಕು ವ್ಯಾಪ್ತಿಯಲ್ಲಿ ಮೂರು ಕಚ್ಚಾ ಮನೆಗಳಿಗೆ ಭಾಗಶಃ ಹಾನಿಯಾಗಿದೆ.
5 ಎಕರೆ ಬಾಳೆ ಬೆಳೆ ಮತ್ತು 1 ಎಕರೆ ಮೆಕ್ಕೆಜೋಳ ಬೆಳೆ ಹಾನಿಯಾಗಿದ್ದು ಒಟ್ಟು 5.75 ಲಕ್ಷ ರೂ.ಗಳಷ್ಟು ನಷ್ಟ ಸಂಭವಿಸಿದೆ. ಹರಿಹರ ತಾಲೂಕಿನಲ್ಲಿ ಎರಡು ಕಚ್ಚಾ ಮನೆಗಳಿಗೆ ಭಾಗಶಃ ಹಾನಿಯಾಗಿದ್ದು, 60ಸಾವಿರ ರೂ.ಗಳಷ್ಟು ನಷ್ಟ ಸಂಭವಿಸಿದೆ. ನ್ಯಾಮತಿ ತಾಲೂಕಿನಲ್ಲಿ ಎರಡು ಎಕರೆ ಬಾಳೆ ಮತ್ತು 3.20 ಎಕರೆ ಮೆಕ್ಕೆಜೋಳ ಬೆಳೆಗೆ ಹಾನಿಯಾಗಿ ಒಟ್ಟು 1.30 ಲಕ್ಷ ರೂ. ನಷ್ಟ ಸಂಭವಿಸಿದೆ. ಚನ್ನಗಿರಿ ತಾಲೂಕಿನಲ್ಲಿ ಒಂದು ಕಚ್ಚಾ ಮನೆಗೆ ಹಾನಿಯಾಗಿದ್ದು 70 ಸಾವಿರ ರೂ. ನಷ್ಟ ಸಂಭವಿಸಿದೆ.
ಜಗಳೂರು ತಾಲೂಕಿನಲ್ಲಿ 15 ಕಚ್ಚಾ ಮನೆಗಳಿಗೆ ಭಾಗಶಃ ಹಾನಿಯಾಗಿದೆ. ಎರಡು ಎಕರೆ ಈರುಳ್ಳಿ ಬೆಳೆ ಮತ್ತು 7 ಎಕರೆ ಬಾಳೆ ಬೆಳೆ ಹಾನಿಯಾಗಿದ್ದು ಒಟ್ಟು 9.50 ಲಕ್ಷ ರೂ. ನಷ್ಟ ಸಂಭವಿಸಿದೆ. ಸರ್ಕಾರದ ಮಾರ್ಗಸೂಚಿ ಅನ್ವಯ ಸಂತ್ರಸ್ತರಿಗೆ ಪರಿಹಾರ ವಿತರಿಸಲು ಕ್ರಮ ವಹಿಸಲಾಗುವುದು ಎಂದು ಜಿಲ್ಲಾಧಿಕಾರಿ ಮಹಾಂತೇಶ ಬೀಳಗಿ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ
Davanagere; ಸಮಾವೇಶ ನಡೆದ ಮೈದಾನ ಸ್ವಚ್ಛಗೊಳಿಸಿದ ಗಾಯಿತ್ರಿ ಸಿದ್ದೇಶ್ವರ
ನಾರಿ ಶಕ್ತಿ ವಿರೋಧಿಸುವ ಕಾಂಗ್ರೆಸ್ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ
Davanagere;ಬೆಣ್ಣೆದೋಸೆಯೊಂದಿಗೆ ವಿಜಯೋತ್ಸವ ಆಚರಿಸಲು ಸಿದ್ಧತೆ ಮಾಡಿಕೊಳ್ಳಿ: ಮೋದಿ
Davanagere ಮೋದಿ ಸಮಾವೇಶ: ಬಿಸಿಲಿನ ನಡುವೆಯೂ ಸೇರಿದ ಸಹಸ್ರಾರು ಜನರು
MUST WATCH
ಹೊಸ ಸೇರ್ಪಡೆ
Father; ಚಂದ್ರು ನಿರ್ಮಾಣದ ‘ಫಾದರ್’ ಚಿತ್ರಕ್ಕೆ ಮುಹೂರ್ತ
Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ
Hassan ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ
ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್
Lok Sabha Elections: ಸೋಲು,ಗೆಲುವಿನ ಲೆಕ್ಕಾಚಾರ