ದಾವಣಗೆರೆ: ಸಂಚಾರದ ಒತ್ತಡದಲ್ಲಿ ಸಿಲುಕಿದ ರಾಹುಲ್ ಗಾಂಧಿ
Team Udayavani, Aug 3, 2022, 2:21 PM IST
ದಾವಣಗೆರೆ: ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಮೃತ ಮಹೋತ್ಸವ ಕಾರ್ಯಕ್ರಮಕ್ಕೆ ಆಗಮಿಸಿ ಮಧ್ಯಾಹ್ನ 2.30ರ ಒಳಗಾಗಿ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಬೆಂಗಳೂರಿಗೆ ವಾಪಾಸ್ಸಾಗಿ, ದೆಹಲಿಗೆ ತೆರಳಬೇಕಾಗಿದ್ದ ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಅವರು ಕೂಡ ಸಂಚಾರದ ಒತ್ತಡದಲ್ಲಿ ಸಿಲುಕಿದ್ದಾರೆ.
ಕೇವಲ ರಾಹುಲ್ ಗಾಂಧಿ ಮಾತ್ರವಲ್ಲದೇ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಸೇರಿದಂತೆ ಹಲವರು ಕೂಡ ಟ್ರಾಫಿಕ್ ಜಾಮ್ ನಲ್ಲಿ ಸಿಲುಕಿದ್ದಾರೆ. ಕಾರ್ಯಕ್ರಮದ ಸ್ಥಳದಿಂದ ಸುಮಾರು 20 ಕಿ.ಮೀ. ದೂರದಲ್ಲಿ ವಾಹನಗಳ ಸಂಚಾರದ ಒತ್ತಡದಿಂದಾಗಿ ಟ್ರಾಫಿಕ್ ಜಾಮ್ನಲ್ಲಿ ಸಿಲುಕಿದ್ದರು, ಕೈ ನಾಯಕರೂ ಸಹ ಟ್ರಾಫಿಕ್ ಜಾಮ್ ಬಿಸಿ ಅನುಭವಿಸಿದ್ದಾರೆ.
ಕಾರ್ಯಕ್ರಮದ ಸ್ಥಳಕ್ಕೆ ಚಿತ್ರದುರ್ಗದಿಂದ ದಾವಣಗೆರೆ ಕಡೆಗೆ ಆಗಮಿಸಿದ ರಾಹುಲ್ ಗಾಂಧಿ ಇತರರು ದಾವಣಗೆರೆಗಿಂತ ಮುಂಚೆಯೇ ಇರುವ ಆವರಗೆರೆಯ ರಾಷ್ಟ್ರೀಯ ಹೆದ್ದಾರಿಯಿಂದಲೂ ಟ್ರಾಫಿಕ್ ಜಾಮ್ ಆಗಿದೆ. ಕೇವಲ ವಾಹನಗಳು ಮಾತ್ರವಲ್ಲದೇ ಸಮಾರಂಭಕ್ಕೆ ಜನರು ರಸ್ತೆ ಮೂಲಕವೇ ಸಾಗುತ್ತಿರುವ ಕಾರಣ ಭದ್ರತೆ, ಝೀರೋ ಟ್ರಾಫಿಕ್ನಲ್ಲಿ ಸಾಗಬೇಕಾಗಿದ್ದ ಕೈ ವರಿಷ್ಠರು ಟ್ರಾಫಿಕ್ನಲ್ಲಿ ಸಿಲುಕಿದ್ದಾರೆ.
ಕಾರಣ ಅವರು ಕಾರ್ಯಕ್ರಮಕ್ಕೆ ಬರುವುದು ತಡವಾಗಲಿದೆ. ಅಲ್ಲದೇ ಕಾರ್ಯಕ್ರಮ ಮುಗಿಸಿಕೊಂಡು ಹೋಗುವುದು ನಿಗಧಿತ ಅವಧಿಯಲ್ಲಿ ನವದೆಹಲಿಗೆ ತೆರಳುವುದು ಅಸಾಧ್ಯ ಎನ್ನಲಾಗುತ್ತಿದೆ. ಈ ಮಧ್ಯೆ ದಾವಣಗೆರೆಯ ಕಾಂಗ್ರೆಸ್ ನಾಯಕರು ರಾಹುಲ್ ಗಾಂಧಿಯವರನ್ನು ಬೇರೊಂದು ಮಾರ್ಗದ ಮೂಲಕ ಕಾರ್ಯಕ್ರಮದ ಸ್ಥಳಕ್ಕೆ ಕರೆತರಲು ಪ್ರಯತ್ನ ಮಾಡುತ್ತಿದ್ದಾರೆ.
ಪೊಲೀಸರ ಹರಸಾಹಸ
ರಾಹುಲ್ ಗಾಂಧಿ ಅವರು ಸಂಚಾರದ ಒತ್ತಡದಿಂದಾಗಿ ಕಾರ್ಯಕ್ರಮದ ಸ್ಥಳಕ್ಕೆ ತಡವಾಗಿ ಆಗಮಿಸಿದರೂ ಸಹ ವೇದಿಕೆ ಬಳಿ ಸಾಗಲು ಹರಸಾಹಸ ಪಡಬೇಕಾಯಿತು. ಪೊಲೀಸರು ದಾರಿ ಮಾಡಿಕೊಡಲು ಪ್ರಯತ್ನ ನಡೆಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
PSI re-examination: ಪಿಎಸ್ಐ ಮರು ಪರೀಕ್ಷೆ, ಅಂತಿಮ ಅಂಕಪಟ್ಟಿ ಬಿಡುಗಡೆ
Lok sabha polls: ಸುರೇಶ್ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್ ದಾಸ್
Congress candidate: ನಾನು ಹುಟ್ಟಿದಾಗ ಒಕ್ಕಲಿಗ, ಬೆಳೆಯುತ್ತ ವಿಶ್ವಮಾನವ: ಲಕ್ಷ್ಮಣ್
Dinesh Gundu Rao: ಕ್ಷಯ ರೋಗ ನಿಯಂತ್ರಣ ಔಷಧ ಪೂರೈಕೆಗೆ ಕೇಂದ್ರಕ್ಕೆ ಮನವಿ; ದಿನೇಶ್
Lok Sabha elections: ಸಂಸದ ಬಸವರಾಜುಗೆ “ಗೋ ಬ್ಯಾಕ್’ ಎಂದ ಬಿಜೆಪಿಗರು!
MUST WATCH
ಹೊಸ ಸೇರ್ಪಡೆ
Australia; ಕೇಂದ್ರೀಯ ಗುತ್ತಿಗೆ ಪಟ್ಟಿ: ವಾರ್ನರ್, ಸ್ಟೋಯಿನಿಸ್, ಅಗರ್ ಹೊರಕ್ಕೆ
ACA ವಿರುದ್ಧ ಹೇಳಿಕೆ: ಕ್ರಿಕೆಟಿಗ ಹನುಮ ವಿಹಾರಿಗೆ ನೋಟಿಸ್
Rajasthan Royals; ಪ್ರಸಿದ್ಧ್ ಕೃಷ್ಣ ಬದಲಿಗೆ ಕೇಶವ ಮಹಾರಾಜ್
Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್ಗಳು: ಪ್ರವಾಸಿಗರಿಗೆ ಭಯ
IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್ಗಳ ಜಯ