ವಲಸೆ ಕಾರ್ಮಿಕರ ಸ್ಥಿತಿ-ಸೌಲಭ್ಯ ಪರಿಶೀಲನೆ

ಸ್ಥಳಕ್ಕೆ ತೆರಳಿ ಕಾರ್ಮಿಕರ ಸ್ಥಿತಿಗತಿ ಅವಲೋಕಿಸಿದ ಹಿರಿಯ ಸಿವಿಲ್‌ ನ್ಯಾಯಾಧೀಶ

Team Udayavani, Apr 12, 2020, 11:50 AM IST

12-April-15

ದಾವಣಗೆರೆ: ಹಿರಿಯ ಸಿವಿಲ್‌ ನ್ಯಾಯಾಲಯದ ನ್ಯಾಯಾಧೀಶ ಪ್ರಭು ಎನ್‌.ಬಡಿಗೇರ್‌ ವಲಸೆ ಕಟ್ಟಡ ಕಾರ್ಮಿಕರ ಸ್ಥಿತಿಗತಿ ಬಗ್ಗೆ ವಿಚಾರಿಸಿದರು.

ದಾವಣಗೆರೆ: ಕರೊನಾ ವೈರಸ್‌ ಹಬ್ಬುತ್ತಿರುವ ಹಿನ್ನೆಲೆಯಲ್ಲಿ ಹೈಕೋರ್ಟ್‌ ಹಾಗೂ ಕೇಂದ್ರ ಕಾನೂನು ಸೇವಾ ಪ್ರಾಧಿಕಾರದ ಸೂಚನೆಯಂತೆ ಹಿರಿಯ ಸಿವಿಲ್‌ ನ್ಯಾಯಾಧೀಶ ಪ್ರಭು ಎನ್‌. ಬಡಿಗೇರ್‌ ಶನಿವಾರ ನಗರದಲ್ಲಿನ ವಲಸೆ ಕೂಲಿ ಕಾರ್ಮಿಕರ ಸ್ಥಿತಿಗತಿ ಅವಲೋಕಿಸಿದರು.

ಪಾಲಿಕೆಯ 381 ಪೌರಕಾರ್ಮಿಕರಿಗಾಗಿ ದೊಡ್ಡ ಬೂದಿಹಾಳ್‌ನಲ್ಲಿ ನಿರ್ಮಿಸುತ್ತಿರುವ ಗೃಹಭಾಗ್ಯ ವಸತಿ ಸಮುಚ್ಚಯದ ಕಟ್ಟಡ ಕಾಮಗಾರಿಯಲ್ಲಿ 42 ಮಂದಿ ಕಾರ್ಮಿಕರು ತೊಡಗಿದ್ದಾರೆ. ಈ ಪೈಕಿ ಮಧ್ಯಪ್ರದೇಶದ 27, ತಮಿಳುನಾಡಿನ ಒಬ್ಬರು ಹಾಗೂ ಕರ್ನಾಟಕದ ವಿಜಯಪುರ, ರಾಯಚೂರು, ಉಡುಪಿ ಜಿಲ್ಲೆಗಳ 14 ಕಾರ್ಮಿಕರಿದ್ದಾರೆ. ಕಾಮಗಾರಿ ಸ್ಥಳಕ್ಕೆ ಭೇಟಿ ನೀಡಿದ ನ್ಯಾಯಾಧೀಶ ಪ್ರಭು ಎನ್‌. ಬಡಿಗೇರ್‌, ಪಾಲಿಕೆ ವತಿಯಿಂದ ಮಾಸ್ಕ್, ಕೈಗವಸು, ಕುಡಿವ ನೀರು, ಶೌಚಗೃಹ ವ್ಯವಸ್ಥೆ ಮಾಡಿದ್ದಾರೆಯೇ ಎಂಬುದಾಗಿ ಪ್ರಶ್ನಿಸಿ, ಎಲ್ಲರೂ ತಪ್ಪದೇ ಮಾಸ್ಕ್ ಧರಿಸಬೇಕೆಂದರು.

ಕೆಲವರು ಮಾಸ್ಕ್ ಬದಲಿ ಕರವಸ್ತ್ರ ಧರಿಸಿದ್ದವರು ಮಾಸ್ಕ್ ತೊಳೆಯಲು ಹಾಕಿದ್ದೇವೆ ಎಂದು ತಿಳಿಸಿದರು. ಗುತ್ತಿಗೆದಾರರೇ ಈ ಕಾರ್ಮಿಕರಿಗೆ ಊಟ ಕಲ್ಪಿಸುತ್ತಿದ್ದಾರೆ ಎಂದು ಪಾಲಿಕೆ ಆಯುಕ್ತ ವಿಶ್ವನಾಥ ಮುದಜ್ಜಿ ನ್ಯಾಯಾಧೀಶರ ಗಮನಕ್ಕೆ ತಂದರು. ಸ್ಮಾರ್ಟ್‌ಸಿಟಿ ಯೋಜನೆಯಡಿ ಚರಂಡಿ ಕಾಮಗಾರಿಯನ್ನು ತೆಲಂಗಾಣದ 15 ಹಾಗೂ ಕರ್ನಾಟಕದ 8 ಮಂದಿ ನಿರ್ವಹಿಸುತ್ತಿದ್ದಾರೆ. ಲಾಕ್‌ಡೌನ್‌ ಹಿನ್ನೆಲೆಯಲ್ಲಿ ಇವರೆಲ್ಲರೂ ರಾಜೀವ್‌ಗಾಂಧಿ ಬಡಾವಣೆಯ ಪಾರ್ಕ್‌ ಜಾಗದಲ್ಲಿ ತಂಗಿದ್ದಾರೆ. ಅಲ್ಲಿಯೂ ಭೇಟಿಯಿತ್ತ ನ್ಯಾಯಾಧೀಶರು ಸ್ಮಾರ್ಟ್ ಸಿಟಿ ಎಂಡಿ ಭೇಟಿ ನೀಡಿದ್ದಾರೆಯೆ? ನಿಮಗೆ ಊಟ, ನೀರಿನ ಸಮಸ್ಯೆ ಇದೆಯೇ ಎಂದು ಪ್ರಶ್ನಿಸಿದರು.

ಜಿಲ್ಲಾಡಳಿತದಿಂದ ಈ ಭಾಗಕ್ಕೆ ಎರಡು ಬಾರಿ ಆಹಾರಧಾನ್ಯ ನೀಡಲಾಗಿದೆ. ಪಾಲಿಕೆಯಿಂದ ಐದು ದಿನಗಳ ಕಾಲ ಹಾಲು ವಿತರಿಸಿದ್ದೇವೆ. ವಿದ್ಯುತ್‌ ಸರಬರಾಜು ವ್ಯವಸ್ಥೆ ಸರಿಪಡಿಸಲಾಗುವುದು ಎಂದು ಆಯುಕ್ತರು ಇದೇ ಸಂದರ್ಭದಲ್ಲಿ ತಿಳಿಸಿದರು. ಲಾಕ್‌ಡೌನ್‌ ಹಿನ್ನೆಲೆಯಲ್ಲಿ ಕಾರ್ಮಿಕರು ಕೆಲಸ ನಿರ್ವಹಿಸದಿದ್ದರೂ ಕೂಲಿ ನಿಲ್ಲಿಸದಿರುವಂತೆ ಸೂಚನೆ ಇದೆ. ಅದರಂತೆ ಸಂಬಳ ನಿಲ್ಲಿಸಬೇಡಿ ಎಂದು ಸ್ಮಾರ್ಟ್‌ಸಿಟಿ ಅಧಿಕಾರಿಗಳಿಗೆ ಅವರು ಸೂಚಿಸಿದರು.

ಟಾಪ್ ನ್ಯೂಸ್

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Vijayendra (2)

PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ

Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್

Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್

Gayatri Siddeshwar: ಸಮಗ್ರ ನೀರಾವರಿ ಸೌಲಭ್ಯಕ್ಕೆ ಆದ್ಯತೆ; ಗಾಯಿತ್ರಿ

Gayatri Siddeshwar: ಸಮಗ್ರ ನೀರಾವರಿ ಸೌಲಭ್ಯಕ್ಕೆ ಆದ್ಯತೆ; ಗಾಯಿತ್ರಿ

Harihara ಬಿಜೆಪಿ ಶಾಸಕ ಬಿ.ಪಿ.ಹರೀಶ್‌ಗೆ ಜೀವ ಬೆದರಿಕೆ,

Harihara ಬಿಜೆಪಿ ಶಾಸಕ ಬಿ.ಪಿ.ಹರೀಶ್‌ಗೆ ಜೀವ ಬೆದರಿಕೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.