Davanagere; ಗೆಲುವಿನ ಕಮಲ ಮೋದಿ ಅವರಿಗೆ ಅರ್ಪಿಸುವೆ: ಗಾಯತ್ರಿ ಸಿದ್ದೇಶ್ವರ್‌


Team Udayavani, Mar 23, 2024, 11:36 AM IST

Davanagere; ಗೆಲುವಿನ ಕಮಲ ಮೋದಿ ಅವರಿಗೆ ಅರ್ಪಿಸುವೆ: ಗಾಯತ್ರಿ ಸಿದ್ದೇಶ್ವರ್‌

ದಾವಣಗೆರೆ: ಲೋಕಸಭಾ ಚುನಾವಣೆಯಲ್ಲಿ ದಾವಣಗೆರೆ ಕ್ಷೇತ್ರದ ಜನ, ಕಾರ್ಯಕರ್ತರು, ಅಭಿಮಾನಿಗಳು ನನ್ನ ಕೈಹಿಡಿದು ಗೆಲ್ಲಿಸುತ್ತಾರೆ. ದಾವಣಗೆರೆಯಿಂದ ಕಮಲ ತೆಗೆದುಕೊಂಡು ಹೋಗಿ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಅರ್ಪಿಸುತ್ತೇನೆ ಎಂದು ಬಿಜೆಪಿ ಅಭ್ಯರ್ಥಿ ಗಾಯತ್ರಿ ಸಿದ್ದೇಶ್ವರ್‌ ತಿಳಿಸಿದರು.

ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮೊದಲ ಬಾರಿಗೆ ದಾವಣಗೆರೆಯಲ್ಲಿ ಮಹಿಳೆಯರಿಗೆ ಅವಕಾಶ ಸಿಕ್ಕಿದೆ. ಶೇ. 33 ಮೀಸಲಾತಿಯಂತೆ ಟಿಕೆಟ್‌ ಸಿಕ್ಕಿರುವುದು ಸಂತೋಷ ಎಂದರು.

ನನಗೆ ವಿಶ್ವನಾಯಕರಾಗಿರುವ ಪ್ರಧಾನಿ ನರೇಂದ್ರ ಮೋದಿಯವವರ ಆಶೀರ್ವಾದ ದೊರೆತಿದೆ. ಕೇಂದ್ರದ, ರಾಜ್ಯದ ನಾಯಕರು ನನ್ನನ್ನು ಅಭ್ಯರ್ಥಿಯನ್ನಾಗಿ ಮಾಡಿರುವ ಅವಕಾಶ ಸದುಪಯೋಗ ಪಡಿಸಿಕೊಳ್ಳುತ್ತೇನೆ. ಕ್ಷೇತ್ರದ ಎಲ್ಲರಿಗೂ ನ್ಯಾಯಯುತವಾಗಿ ಸೇವೆ ಸಲ್ಲಿಸುತ್ತೇನೆ. ವಿಶೇಷವಾಗಿ ಹೆಣ್ಣುಮಕ್ಕಳಿಗೆ ಸೂಕ್ತ ರೀತಿ ಸ್ಪಂದಿಸುವ ಕೆಲಸ ಮಾಡುತ್ತೇನೆ ಎಂದು ತಿಳಿಸಿದರು. ಎಲ್ಲಿಯೂ ವಿರೋಧ ಇಲ್ಲ. ಅವರು ಸಹ ಟಿಕೆಟ್‌ ಕೇಳಿದ್ದರು. ಸಿಕ್ಕಿಲ್ಲ ಎಂಬ ಕಾರಣಕ್ಕೆ ಸಹಜವಾಗಿಯೇ ಅವರಿಗೆ ಬೇಸರ ಆಗಿದೆ. ಅವರೆಲ್ಲರನ್ನೂ ಅಣ್ಣ ಎಂದೇ ಮಾತಾಡಿಸುತ್ತಿದ್ದೆ. ಎಲ್ಲರನ್ನೂ ಭೇಟಿಯಾಗಿ ಮಾತಾಡಿದ್ದೇನೆ. ಎಲ್ಲರೂ ಖುಷಿಯಾಗಿಯೇ ಇದ್ದಾರೆ. ನನ್ನನ್ನು ಒಪ್ಪಿಕೊಳ್ಳುತ್ತಾರೆ ಎಂಬ ವಿಶ್ವಾಸ ಇದೆ. ಎಲ್ಲವೂ ಸರಿ ಆಗುತ್ತದೆ ಎಂದು ತಿಳಿಸಿದರು.

ಮೋದಿಯವರು ವಿಶ್ವನಾಯಕರು. ಅವರನ್ನು ಮತ್ತೆ ಪ್ರಧಾನಿ ಮಾಡಬೇಕು ಎಂಬುದು ಕಾರ್ಯಕರ್ತರ, ಮತದಾರರ ಆಶಯ. ಅದರಂತೆ ಮೂರನೇ ಬಾರಿಗೆ ಪ್ರಧಾನಿ ಆಗುತ್ತಾರೆ ಎಂದು ಸಂತಸ ವ್ಯಕ್ತಪಡಿಸಿದರು.

ದಾವಣಗೆರೆಯಲ್ಲಿ ಸಿದ್ದೇಶ್ವರ್‌ ಅವರು 20 ವರ್ಷ ಸಂಸದರಾಗಿ ಮಾಡಿರುವ ಹಲವಾರು ಅಭಿವೃದ್ಧಿ ಕೆಲಸಗಳ ರಿಪೋರ್ಟ್‌ ಕಾರ್ಡ್‌ ಬಿಡುಗಡೆ ಮಾಡಿದ್ದೇವೆ. ನಮ್ಮ ಮಾವ ಮಲ್ಲಿಕಾರ್ಜುನಪ್ಪ ಅವರು ಒಬ್ಬ ಸಂಸದರು ಹೇಗೆ ಜನರಿಗೆ ಸಿಗುತ್ತಾರೆ ಎನ್ನುವುದನ್ನು ತೋರಿಸಿಕೊಟ್ಟಿದ್ದಾರೆ. ನಾನೂ ಕಾರ್ಯಕರ್ತರಿಗೆ ಸ್ಪಂದಿಸಿದ್ದೇನೆ, ಹೋದ ಎಲ್ಲ ಕಡೆ ಒಳ್ಳೆಯ ಪ್ರತಿಕ್ರಿಯೆ, ಸ್ಪಂದನೆ ಇದೆ. ಎಲ್ಲರೂ ಖುಷಿಯಿಂದ ಬೆಂಬಲ ನೀಡುತ್ತಿದ್ದಾರೆ ಎಂದು ತಿಳಿಸಿದರು.

ಕಾಂಗ್ರೆಸ್‌ನಿಂದ ಪ್ರಭಾ ಮಲ್ಲಿಕಾರ್ಜುನ್‌ ಸ್ಪರ್ಧೆ ಕುರಿತ ಪ್ರಶ್ನೆಗೆ ಪ್ರತಿಕ್ರಿಯಿಸಿ ಹೌದು ನಾವು ಬೀಗರಾಗುತ್ತೇವೆ. ನಾನು ತಾಯಿ ಸ್ಥಾನದಲ್ಲಿದ್ದೇನೆ. ಅವರು (ಡಾ| ಪ್ರಭಾ ಮಲ್ಲಿಕಾರ್ಜುನ್‌) ಮಗಳು ಎಂದರು.

ಶ್ರೀ ದುರ್ಗಾಂಬಿಕಾ ದೇಗುಲಕ್ಕೆ ಗಾಯತ್ರಿ ಸಿದ್ದೇಶ್ವರ ಭೇಟಿ -ವಿಶೇಷ ಪೂಜೆ

ದಾವಣಗೆರೆ: ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಗಾಯತ್ರಿ ಸಿದ್ದೇಶ್ವರ್‌ ಅವರು ಶುಕ್ರವಾರ ದಾವಣಗೆರೆ ನಗರ ದೇವತೆ ಶ್ರೀ ದುರ್ಗಾಂಬಿಕಾ ದೇವಸ್ಥಾನ, ಜಗಳೂರು ತಾಲೂಕಿನ ಮಡ್ರಳ್ಳಿ ಶ್ರೀ ಚೌಡೇಶ್ವರಿ ಜಾತ್ರಾ ಮಹೋತ್ಸವ ಹಾಗೂ ನರಸೀಪುರ ಗ್ರಾಮದ ಅಂಬಿಗರ ಚೌಡಯ್ಯ ಗುರುಪೀಠಕ್ಕೆ ಭೇಟಿ ನೀಡಿದರು.

ದಾವಣಗೆರೆ ನಗರ ದೇವತೆ ಶ್ರೀ ದುರ್ಗಾಂಬಿಕಾ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಿದರು. ಸಂಸದ ಡಾ| ಜಿ.ಎಂ. ಸಿದ್ದೇಶರ, ದೂಡಾ ಮಾಜಿ ಅಧ್ಯಕ್ಷ ಯಶವಂತ್‌ರಾವ್‌ ಜಾಧವ್‌, ಹಿಂದುಳಿದ ವರ್ಗಗಳ ಮೋರ್ಚಾ ರಾಜ್ಯ ಉಪಾಧ್ಯಕ್ಷ ರಾಜನಹಳ್ಳಿ ಶಿವಕುಮಾರ್‌, ಶ್ರೀನಿವಾಸ್‌, ಶಿವಣ್ಣ, ಮಂಜಣ್ಣ, ಶಿವನಗೌಡ ಟಿ. ಪಾಟೀಲ್‌ ಇತರರು ಇದ್ದರು. ದುರ್ಗಾಂಬಿಕಾ ದೇವಿ ದರ್ಶನದ ಬಳಿಕ ಬಿಜೆಪಿ ಮುಖಂಡ ಗೋಪಾಲಗೌಡ ಅವರ ಮನೆಗೆ ಭೇಟಿ ನೀಡಿ ಮಾತುಕತೆ ನಡೆಸಿದರು. ಬಳಿಕ ಜಗಳೂರು ತಾಲೂಕಿನ ಮಡ್ರಳ್ಳಿ ಚೌಡೇಶ್ವರಿ ಜಾತ್ರಾ ಮಹೋತ್ಸವದಲ್ಲಿ ಪೂಜೆ ಸಲ್ಲಿಸಿದರು. ಮಾಜಿ ಶಾಸಕರಾದ ಎಸ್‌ .ವಿ.ರಾಮಚಂದ್ರಪ್ಪ, ಎಚ್‌.ಪಿ.ರಾಜೇಶ್‌, ಗ್ಯಾರೆಹಳ್ಳಿ ಶಿವಕುಮಾರ್‌ ಇದ್ದರು.

ರಾಣೆಬೆನ್ನೂರಿನ ನರಸೀಪುರದ ಅಂಬಿಗರ ಚೌಡಯ್ಯ ಗುರು ಪೀಠಕ್ಕೆ ಭೇಟಿ ನೀಡಿ ಶಾಂತಮುನಿ ಶ್ರೀಗಳ ಗದ್ದುಗೆಗೆ ಪೂಜೆ ಸಲ್ಲಿಸಿ, ಪೀಠಾಧ್ಯಕ್ಷ ಶಾಂತಭೀಷ್ಮ ಚೌಡಯ್ಯ ಶ್ರೀ ಅವರಿಗೆ ಗೌರವ ಸಲ್ಲಿಸಿದರು. ಬಿ.ಪಿ.ಹರೀಶ್‌, ಶಿವಣ್ಣ, ಜಯಮ್ಮ, ಕೆಂಚನಹಳ್ಳಿ ಮಹಾಂತೇಶಪ್ಪ ಇದ್ದರು.

ಟಾಪ್ ನ್ಯೂಸ್

Shivrajkumar is frustrated with social media

Sandalwood: ಸೋಷಿಯಲ್‌ ಮೀಡಿಯಾ ವಿರುದ್ಧ ಶಿವರಾಜ್ ಕುಮಾರ್ ಬೇಸರ

Netherlands Trip: ಹೀಗೊಂದು ನಿಶ್ಶಬ್ದ ಪಯಣ!

Netherlands Trip: ಹೀಗೊಂದು ನಿಶ್ಶಬ್ದ ಪಯಣ!

7-modi

ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಬಂದ ಬಳಿಕ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ: ಪ್ರಧಾನಿ ಮೋದಿ

1-wqe-qweq

Congress Protest; ಕೇಳಿದ್ದು 18,172 ಕೋಟಿ ರೂ. ಕೊಟ್ಟಿದ್ದು 3,400 ಕೋಟಿ ರೂ. ಮಾತ್ರ

Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ

Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ

6-Fibromyalgia

Fibromyalgia: ಫೈಬ್ರೊಮಯಾಲ್ಜಿಯಾ ಜತೆಗೆ ಜೀವನ

ಗುಜರಾತ್ ಗೆ ಆರ್ ಸಿಬಿ ಸವಾಲು: ತಂಡಕ್ಕೆ ಮರಳಿದ ಗ್ಲೆನ್ ಮ್ಯಾಕ್ಸವೆಲ್

IPL 2024; ಗುಜರಾತ್ ಗೆ ಆರ್ ಸಿಬಿ ಸವಾಲು: ತಂಡಕ್ಕೆ ಮರಳಿದ ಗ್ಲೆನ್ ಮ್ಯಾಕ್ಸವೆಲ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Davanagere ಮೋದಿ ಸಮಾವೇಶ: ಬಿಸಿಲಿನ ನಡುವೆಯೂ ಸೇರಿದ ಸಹಸ್ರಾರು ಜನರು

Davanagere ಮೋದಿ ಸಮಾವೇಶ: ಬಿಸಿಲಿನ ನಡುವೆಯೂ ಸೇರಿದ ಸಹಸ್ರಾರು ಜನರು

ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ

Davanagere; ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ

randeep surjewala

Davanagere; ವಿಧಾನಸಭೆ ಸೋಲಿನ ಕಾರಣದಿಂದ ಬರಪರಿಹಾರ ನೀಡದೆ ಮೋದಿ-ಶಾ ಸೇಡು: ಸುರ್ಜೆವಾಲ ಆರೋಪ

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

1-adasdsad

Davanagere; ಪ್ರಧಾನಿ ಮೋದಿ ರ್‍ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Chikkaballapur: 13.63 ಕೋಟಿ ರೂ. ಚುನಾವಣಾ ಅಕ್ರಮ ಮದ್ಯ ಜಪ್ತಿ!

Chikkaballapur: 13.63 ಕೋಟಿ ರೂ. ಚುನಾವಣಾ ಅಕ್ರಮ ಮದ್ಯ ಜಪ್ತಿ!

Shivrajkumar is frustrated with social media

Sandalwood: ಸೋಷಿಯಲ್‌ ಮೀಡಿಯಾ ವಿರುದ್ಧ ಶಿವರಾಜ್ ಕುಮಾರ್ ಬೇಸರ

Netherlands Trip: ಹೀಗೊಂದು ನಿಶ್ಶಬ್ದ ಪಯಣ!

Netherlands Trip: ಹೀಗೊಂದು ನಿಶ್ಶಬ್ದ ಪಯಣ!

10

ಕುತ್ತಿಗೆಗೇ ಬಂತು… ಕುತ್ತಿಗೆ ಸ್ಪ್ರಿಂಗ್‌ ಇದ್ದಂತೆ…

7-modi

ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಬಂದ ಬಳಿಕ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ: ಪ್ರಧಾನಿ ಮೋದಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.