ಜಿಪಂ ಸಭೆಯಲ್ಲಿ ಅಶಿಸ್ತು ಪ್ರದರ್ಶನ!

ಕೊನೆಯ ಸಭೆಯಲ್ಲೂ ಆರೋಪ-ಪ್ರತ್ಯಾರೋಪ! ­ಚರ್ಚೆಯಲ್ಲಿಯೂ ನುಸುಳಿದ ರಾಜಕಾರಣ

Team Udayavani, Feb 27, 2021, 3:04 PM IST

Davanagere ZP Meeting

ದಾವಣಗೆರೆ: ಜಿಲ್ಲಾ ಪಂಚಾಯಿತಿ ಸದಸ್ಯರ ಪ್ರಸ್ತುತ ಆಡಳಿತಾವಧಿ ಮುಗಿಯುತ್ತಿರುವ ಈ ಸಂದರ್ಭದಲ್ಲಿಯೂ ಶಿಸ್ತಿನ ಬಗ್ಗೆ ಉಲ್ಲೇಖೀಸುತ್ತಲೇ ಅಶಿಸ್ತು ಪ್ರದರ್ಶಿಸಿದ ಘಟನೆಗೆ ಶುಕ್ರವಾರ ನಡೆದ ಜಿಪಂ ಸಾಮಾನ್ಯ ಸಭೆ ಸಾಕ್ಷಿಯಾಯಿತು.

ಜಿಪಂ ಚುನಾವಣೆ ಅಧಿಸೂಚನೆ ಸದ್ಯದಲ್ಲಿಯೇ ಹೊರಬೀಳುವ ಸಾಧ್ಯತೆ ಇರುವುದರಿಂದ ಇದು ನಮ್ಮ ಆಡಳಿತಾವಧಿಯ ಕೊನೆಯ ಸಭೆಯಾಗಿದೆ. ಈ ಸಭೆಯಲ್ಲಾದರೂ ಶಿಸ್ತಿನಿಂದ ನಡೆದುಕೊಳ್ಳೋಣ ಎಂದು ಹೇಳುವ ಮೂಲಕ ಸದಸ್ಯರು ಸಭೆ ಆರಂಭಿಸಿದರು. ಆದರೆ, ಸಭೆ ಮುಂದುವರಿಯುತ್ತಿದ್ದಂತೆ ಕೆಲ ಸದಸ್ಯರು ಶಿಸ್ತು ಮರೆತು ಬಿಟ್ಟರು. ಜಿಪಂ ಅಧಿಕಾರ ವ್ಯಾಪ್ತಿ ಮೀರಿದ ಹಾಗೂ ಈ ಹಿಂದೆ ಸಾಕಷ್ಟು ಬಾರಿ ಚರ್ಚೆಯಾದ ಹಾಗೂ ಸರ್ಕಾರ ಮಟ್ಟದ ವಿಚಾರಗಳನ್ನು ತಾಸುಗಟ್ಟಲೆ ಚರ್ಚೆ ಮಾಡಿದರು. ಜತೆಗೆ ರಾಜಕೀಯವಾಗಿ ಪರಸ್ಪರ ಆರೋಪ-ಪ್ರತ್ಯಾರೋಪಗಳಲ್ಲಿ ತೊಡಗಿಕೊಂಡು ತಮ್ಮ ಕೊನೆಯ ಸಭೆಯಲ್ಲಿಯೂ ಅಶಿಸ್ತು ಪ್ರದರ್ಶಿಸಿದರು.

ಸಭೆ ಆರಂಭದಲ್ಲಿ ಸದಸ್ಯ ಕೆ.ಎಚ್‌.ಬಸವಂತಪ್ಪ, ಕಳೆದ ಸಭೆಯಲ್ಲಿ ಕೇಳಿದ ಗ್ರಾಮಗಳಲ್ಲಿ ಸ್ವತ್ಛತೆ ವಿಚಾರ ಪ್ರಸ್ತಾಪಿಸಿದಾಗ ಇನ್ನೋರ್ವ ಸದಸ್ಯ ಎನ್‌.ಜಿ. ನಟರಾಜ್‌, ಸದಸ್ಯರು ಏಕಾಏಕಿ ತಮ್ಮ ವಿಚಾರ  ಮಂಡಿಸುವುದಕ್ಕಿಂತ ಅಧ್ಯಕ್ಷರ ಸೂಚನೆ ಮೇರೆಗೆ ಇಲಾಖಾವಾರು ಚರ್ಚೆ ಮಾಡೋಣ ಎಂದರು.

ಈ ನಡುವೆಯೇ ಗ್ರಾಪಂಗಳಲ್ಲಿ ಅನುದಾನ ದುರ್ಬಳಕೆ ಬಗ್ಗೆ ಆಗುತ್ತಿರುವ ಬಗ್ಗೆ ಗಂಭೀರ ಚರ್ಚೆ ಮಾಡಿದ  ಸದಸ್ಯರು, ಕೊನೆಗೆ ಇಲಾಖಾವಾರು ಚರ್ಚೆಗೆ ಅಣಿಯಾದರು.

ಸರ್ಕಾರ ಮಟ್ಟದ ವಿಚಾರ: ಕೃಷಿ ಇಲಾಖೆ ಕುರಿತ ಚರ್ಚೆ ವೇಳೆ ಈ ಹಿಂದಿನ ಹಲವು ಸಭೆಯಲ್ಲಿ ಪ್ರಸ್ತಾಪಿತ ಬೆಂಬಲಬೆಲೆಯಲ್ಲಿ ಮೆಕ್ಕೆಜೋಳ ಖರೀದಿಸುವ ವಿಚಾರವನ್ನು ಸದಸ್ಯ ಡಿ.ಜಿ. ವಿಶ್ವನಾಥ್‌ ಪ್ರಸ್ತಾಪಿಸಿ, ಸರ್ಕಾರ ಬೆಂಬಲ ಬೆಲೆಯಲ್ಲಿ ಮೆಕ್ಕೆಜೋಳ ಖರೀದಿಸದೆ ಇರುವುದರಿಂದ ರೈತರಿಗೆ ಭಾರಿ ತೊಂದರೆಯಾಗಿದೆ ಎಂದರು.

ಈ ಸಂದರ್ಭದಲ್ಲಿ ಮಾತನಾಡಿದ ಸದಸ್ಯ ಮಹೇಶ್‌, ರೈತರಿಗೆ ತೊಂದರೆಯಾಗಬಾರದೆಂದೇ ನಮ್ಮ ಸರ್ಕಾರ ಎಪಿಎಂಪಿ ಕಾಯ್ದೆ, ಕೃಷಿ ಕಾಯ್ದೆ ಜಾರಿಗೆ ತರುತ್ತಿದೆ ಎಂದರು. ಈ ಹೇಳಿಕೆಯಿಂದ ಆಕ್ರೋಶಗೊಂಡ ಹದಡಿ ನಿಂಗಪ್ಪ, ಓಬಳಪ್ಪ ಹಾಗೂ ಕೆ.ಎಸ್‌. ಬಸವಂತಪ್ಪ, ಕಾಯ್ದೆ ಬಗ್ಗೆ ಇಲ್ಲಿ ಚರ್ಚೆ ಬೇಡ. ಇದನ್ನು ನಮ್ಮ ಪಕ್ಷದವರು ಹೊರಗೆ ಹೋರಾಟ ಮಾಡುತ್ತಿದ್ದಾರೆ. ನೀವು ಬೆಂಬಲ ಬೆಲೆ ನಿಗದಿ  ಮಾಡಿದ ಮೇಲೆ ಖರೀದಿ ಏಕೆ ಮಾಡುತ್ತಿಲ್ಲ. ನೀವು ಒಬ್ಬ ರೈತನ ಮಗನಾಗಿ ರೈತರಿಗೆ ನ್ಯಾಯ ಒದಗಿಸುವ ಬಗ್ಗೆ ಮಾತನಾಡಬಾರದೇ ಎಂದೆಲ್ಲ ಪ್ರತಿ ವಾಗ್ಧಾಳಿ ನಡೆಸಿದರು. ಇದರಿಂದ ಇಡೀ ಚರ್ಚೆ ರಾಜಕೀಯ ತಿರುವು ಪಡೆದುಕೊಂಡು ಕೆಲಹೊತ್ತು ಗದ್ದಲದ ವಾತಾವರಣ ನಿರ್ಮಾಣವಾಯಿತು.

ಅಧಿಕಾರ ಮಿತಿಯಲ್ಲಿರಲಿ ಚರ್ಚೆ: ಸದಸ್ಯರ ಈ ಚರ್ಚೆಯಿಂದ ಅಸಮಾಧಾನಗೊಂಡ ಸದಸ್ಯೆ ಶೈಲಜಾ ಬಸವರಾಜ್‌, ನಮ್ಮ ಆಡಳಿತಾವಧಿಯ ಕೊನೆಯ ಸಭೆ ಇದಾಗಿದ್ದು, ಈ ಸಭೆಯಲ್ಲಾದರೂ ಜಿಲ್ಲಾ  ಪಂಚಾಯಿತಿ ಅಧಿಕಾರ ವ್ಯಾಪ್ತಿಗೆ ಬರುವ ವಿಚಾರಗಳನ್ನು ಚರ್ಚೆ ಮಾಡಿ. ಸರ್ಕಾರ ಮಟ್ಟದ ವಿಚಾರಗಳನ್ನು ಜಿಪಂ ಅಧ್ಯಕ್ಷೆ, ಜಿಪಂ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಮುಂದೆ ಚರ್ಚೆ ಮಾಡಿದರೆ ಪ್ರಯೋಜನವಾಗದು. ಸುಮ್ಮನೇ ಸಮಯ ವ್ಯರ್ಥವಾಗುತ್ತದೆ ಎನ್ನುವ ಮೂಲಕ ಮೆಕ್ಕೆಜೋಳದ ಚರ್ಚೆಗೆ ತೆರೆಎಳೆಯಲಾಯಿತು.

ಟಾಪ್ ನ್ಯೂಸ್

Outrage over mistakes in CET exam question paper; Request for mercy marks

CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ

1-qweeweq

Viral video; ಯಾರಿವರು ಇಶಾ ಅರೋರಾ? ಮತದಾನದ ದಿನ ಭಾರಿ ಸುದ್ದಿ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Outrage over mistakes in CET exam question paper; Request for mercy marks

CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ

Karkala: ಕಾಂಗ್ರೆಸ್ಸಿನಿಂದ ಬೃಹತ್‌ ಪರಿವರ್ತನಾ ರ್‍ಯಾಲಿ

Karkala: ಕಾಂಗ್ರೆಸ್ಸಿನಿಂದ ಬೃಹತ್‌ ಪರಿವರ್ತನಾ ರ್‍ಯಾಲಿ

ಕೊಪ್ಪಳ: ಮಗ ರಾಜಶೇಖರ ವಿರುದ್ಧ ತಂದೆ ನಾಮಪತ್ರ ಸಲ್ಲಿಕೆ!

ಕೊಪ್ಪಳ: ಮಗ ರಾಜಶೇಖರ ವಿರುದ್ಧ ತಂದೆ ನಾಮಪತ್ರ ಸಲ್ಲಿಕೆ!

College Student ನೇಹಾ ಹತ್ಯೆ ಪ್ರಕರಣ: ಆರೋಪಿಗೆ ಗಲ್ಲು ಶಿಕ್ಷೆ ವಿಧಿಸಲು ಬಜರಂಗದಳ ಆಗ್ರಹ

College Student ನೇಹಾ ಹತ್ಯೆ ಪ್ರಕರಣ: ಆರೋಪಿಗೆ ಗಲ್ಲು ಶಿಕ್ಷೆ ವಿಧಿಸಲು ಬಜರಂಗದಳ ಆಗ್ರಹ

Mangaluru; ಪೆಟ್ರೋಲ್‌ ಬದಲು ಡೀಸೆಲ್‌ ತುಂಬಿಸಿದ ಆರೋಪ: ಕೋರ್ಟ್‌ಗೆ ಮೊರೆ

Mangaluru; ಕಾರಿಗೆ ಪೆಟ್ರೋಲ್‌ ಬದಲು ಡೀಸೆಲ್‌ ; ಕಾರು ಮಾಲಕರಿಗೆ ಲಕ್ಷಾಂತರ ರೂ.ನಷ್ಟ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Outrage over mistakes in CET exam question paper; Request for mercy marks

CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ

Karkala: ಕಾಂಗ್ರೆಸ್ಸಿನಿಂದ ಬೃಹತ್‌ ಪರಿವರ್ತನಾ ರ್‍ಯಾಲಿ

Karkala: ಕಾಂಗ್ರೆಸ್ಸಿನಿಂದ ಬೃಹತ್‌ ಪರಿವರ್ತನಾ ರ್‍ಯಾಲಿ

1-qweeweq

Viral video; ಯಾರಿವರು ಇಶಾ ಅರೋರಾ? ಮತದಾನದ ದಿನ ಭಾರಿ ಸುದ್ದಿ

ಕೊಪ್ಪಳ: ಮಗ ರಾಜಶೇಖರ ವಿರುದ್ಧ ತಂದೆ ನಾಮಪತ್ರ ಸಲ್ಲಿಕೆ!

ಕೊಪ್ಪಳ: ಮಗ ರಾಜಶೇಖರ ವಿರುದ್ಧ ತಂದೆ ನಾಮಪತ್ರ ಸಲ್ಲಿಕೆ!

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.