ದಾವಣಗರೆ: ಪೊಲೀಸ್ ಭದ್ರತೆಯಲ್ಲಿ ಬಸ್ ಸಂಚಾರ ಆರಂಭ; 3 ದಿನದಿಂದ 1.20 ಕೋಟಿ ರೂ. ನಷ್ಟ
Team Udayavani, Dec 14, 2020, 3:05 PM IST
ದಾವಣಗರೆ: ನಗರದಲ್ಲಿ ಪೊಲೀಸ್ ಭದ್ರತೆಯಲ್ಲಿ ಸೋಮವಾರ ಬಸ್ಗಳ ಸಂಚಾರ ಆರಂಭವಾಗಿದೆ. ಮಧ್ಯಾಹ್ನದವರೆಗೆ ರಾಣೇಬೆನ್ನೂರು, ಚಿತ್ರದುರ್ಗ ಹಾಗೂ ಹರಿಹರ ಪಟ್ಟಣಗಳಿಗೆ ತಲಾ ಎರಡು ಹಾಗೂ ಹರಪನಹಳ್ಳಿಗೆ ಒಂದು ಸೇರಿ 7 ಬಸ್ಗಳು ಸಂಚರಿಸಿದವು ಎಂದು ವರದಿಯಾಗಿದೆ.
ಬಸ್ ಸಂಚಾರ ಆರಂಭವಾಗುತ್ತಿರುವ ಸುದ್ದಿ ತಿಳಿದು ವಿವಿಧ ನಗರ ಹಾಗೂ ಪಟ್ಟಣಗಳಿಗೆ ತೆರಳಲು ಜನರು ನಿಲ್ದಾಣಗಳತ್ತ ಬರುತ್ತಿದ್ದು, ಕೆಲವು ಪ್ರಯಾಣಿಕರು ಬೆಳಿಗ್ಗೆಯಿಂದ ಕಾದು ಕುಳಿತಿದ್ದಾರೆ. ಆದರೆ ನಿಗದಿತ ಸಮಯಕ್ಕೆ ಬಸ್ಗಳು ಹೊರಡುತ್ತಿಲ್ಲ ಎಂದು ಅಳಲು ತೋಡಿಕೊಂಡಿದ್ದಾರೆ.
ದಾವಣಗೆರೆ 12 ಹಾಗೂ ಹರಿಹರ ಘಟಕಗಳ 1,132 ನೌಕರರಲ್ಲಿ ಕೇವಲ 14 ಮಂದಿ ಕರ್ತವ್ಯಕ್ಕೆ ಹಾಜರಾಗಿದ್ದಾರೆ. ಭಾನುವಾರ ರಾತ್ರಿ ಬೆಂಗಳೂರು, ಕಲಬುರ್ಗಿ, ರಾಯಚೂರು, ಹುಮ್ನಾಬಾದ್ಗಳಿಗೆ 7 ಬಸ್ಗಳು ಸಂಚರಿಸಿವೆ. ಬೆಳಿಗ್ಗೆಯಿಂದಲೇ ಬಸ್ ಸಂಚಾರ ಆರಂಭವಾಗಿದ್ದು, ಯಾವುದೇ ತೊಂದರೆಯಾಗಿಲ್ಲ. ಚಾಲಕರು ಬಂದ ನಂತರ ಪ್ರಯಾಣಿಕರ ಅಗತ್ಯಗಳನ್ನು ನೋಡಿಕೊಂಡು ಬಸ್ಗಳನ್ನು ಕಳುಹಿಸಲಾಗುವುದು ಎಂದು ವಿಭಾಗೀಯ ನಿಯಂತ್ರಣಾಧಿಕಾರಿ ಸಿದ್ದೇಶ್ವರ್ ಹೆಬ್ಬಾಳ್ ತಿಳಿಸಿದರು.
ದಿನಕ್ಕೆ ₹40 ಲಕ್ಷದಂತೆ ಮೂರು ದಿವಸದಿಂದ ₹1.20 ಕೋಟಿ ನಷ್ಟವಾಗಿದೆ. ಚಾಲಕರು ಸ್ವಇಚ್ಛೆಯಿಂದ ಕರ್ತವ್ಯಕ್ಕೆ ಮರಳುತ್ತಿದ್ದಾರೆ. ಸಂಜೆಯ ವೇಳೆಗೆ ಎಲ್ಲವೂ ಸರಿಹೋಗುವ ನಿರೀಕ್ಷೆ ಇದೆ ಎಂದು ಸಿದ್ದೇಶ್ವರ್ ಈ ವೇಳೆ ತಿಳಿಸಿದರು.
ಇದನ್ನೂ ಓದಿ: ಮುಗ್ಧರ ಬದುಕಲ್ಲಿ ಕೋಡಿಹಳ್ಳಿ ಚಂದ್ರಶೇಖರ್ ಚೆಲ್ಲಾಟ: ಸಚಿವ ಸೋಮಣ್ಣ ವಾಗ್ದಾಳಿ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hosapete; ಕೆಲವು ದೇಶಗಳು ಭಾರತ ಸರ್ಕಾರ ದುರ್ಬಲವಾಗಿರಲು ಬಯಸುತ್ತಿವೆ: ಮೋದಿ
Indi ಲಚ್ಯಾಣ ಮಹಾರಥೋತ್ಸವದಲ್ಲಿ ಅವಘಡ: ರಥದ ಗಾಲಿಗೆ ಸಿಲುಕಿ ಇಬ್ಬರು ಮೃತ್ಯು
China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ
ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಬಂದ ಬಳಿಕ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ: ಪ್ರಧಾನಿ ಮೋದಿ
Congress Protest; ಕೇಳಿದ್ದು 18,172 ಕೋಟಿ ರೂ. ಕೊಟ್ಟಿದ್ದು 3,400 ಕೋಟಿ ರೂ. ಮಾತ್ರ
MUST WATCH
ಹೊಸ ಸೇರ್ಪಡೆ
Hosapete; ಕೆಲವು ದೇಶಗಳು ಭಾರತ ಸರ್ಕಾರ ದುರ್ಬಲವಾಗಿರಲು ಬಯಸುತ್ತಿವೆ: ಮೋದಿ
Sirsi ; ಪ್ರಧಾನಿ ಮುಡಿಗೇರಿದ ಬೇಡರ ವೇಷದ ಕಿರೀಟ!
Strike rate; ಜನರು ಏನು ಬೇಕಾದರೂ ಮಾತನಾಡಬಹುದು.. : ವಿರಾಟ್ ಕೊಹ್ಲಿ
Gujarat ಕರಾವಳಿಯಲ್ಲಿ ಪಾಕ್ ಬೋಟ್ ನಿಂದ 600 ಕೋಟಿ ಮೌಲ್ಯದ ಹೆರಾಯಿನ್ ವಶ
Mangaluru Airport; ಗುದನಾಳದಲ್ಲಿ ಬಚ್ಚಿಟ್ಟ 54 ಲಕ್ಷ ರೂ. ಮೌಲ್ಯದ ಅಕ್ರಮ ಚಿನ್ನ ಪತ್ತೆ !