ದೇವದಾಸಿ ಪದ್ಧತಿ ನಿರ್ಮೂಲನೆಗೆ ಯೋಜನೆ
ಪ್ರಗತಿ ಪರಿಶೀಲನಾ ಸಭೆಯಲ್ಲಿ ರಾಜ್ಯ ಮಹಿಳಾ ಅಭಿವೃದ್ಧಿ ನಿಗಮದ ಅಧ್ಯಕ್ಷೆ ಶಶಿಕಲಾ ವಿ. ಟೆಂಗಳಿ ಮಾತನಾಡಿದರು.
Team Udayavani, Jan 21, 2021, 5:52 PM IST
ದಾವಣಗೆರೆ: ದೇವದಾಸಿ ಪದ್ಧತಿ ನಿರ್ಮೂಲನೆಗಾಗಿ ಹಾಗೂ ಮಾಜಿ ದೇವದಾಸಿಯರ ಮಕ್ಕಳ ಸ್ವಾವಲಂಬನೆಗಾಗಿ ಹೊಸ ಯೋಜನೆ ರೂಪಿಸಲಾಗಿದೆ ಎಂದು ರಾಜ್ಯ ಮಹಿಳಾ ಅಭಿವೃದ್ಧಿ ನಿಗಮದ ಅಧ್ಯಕ್ಷೆ ಶಶಿಕಲಾ ವಿ. ಟೆಂಗಳಿ ತಿಳಿಸಿದ್ದಾರೆ.
ಜಿಲ್ಲಾ ಪಂಚಾಯತಿ ಸಭಾಂಗಣದಲ್ಲಿ ನಡೆದ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಈಗಾಗಲೇ 2-3 ಜಿಲ್ಲೆಗಳಲ್ಲಿ ಯೋಜನೆ ಜಾರಿಗೆ ಬಂದಿದೆ. ದೇವಸ್ಥಾನಗಳ ಆವರಣದಲ್ಲಿ ತರಬೇತಿ ಕೇಂದ್ರ ತೆರೆಯುವುದು. ಮಾಜಿ ದೇವದಾಸಿಯರ ಮಕ್ಕಳಿಗೆ ಹೊಲಿಗೆ ಮತ್ತು·ಕಂಪ್ಯೂಟರ್ ತರಬೇತಿ ನೀಡಲಾಗುವುದು.ದಾವಣಗೆರೆ ಜಿಲ್ಲೆಯಲ್ಲೂ ಮಾಜಿದೇವದಾಸಿಯರು ಆಸಕ್ತಿ ತೋರಿದಲ್ಲಿ ತರಬೇತಿ ಕೇಂದ್ರವನ್ನು ನಿಗಮದ ವತಿಯಿಂದ ಆರಂಭಿಸಲಾಗುವುದು ಎಂದು ತಿಳಿಸಿದರು.
ಇದನ್ನೂ ಓದಿ : ಅಭಿವೃದ್ಧಿಗಾಗಿ ಜೀವ ವೈವಿಧ್ಯಕ್ಕೆ ಧಕ್ಕೆ ಬೇಡ
ದೇವದಾಸಿ ಪದ್ಧ ತಿ ನಿರ್ಮೂಲನೆಗಾಗಿ ಈಗಾಗಲೇ ಕಿತ್ತೂರು ರಾಣಿ ಚೆನ್ನಮ್ಮ ಪ್ರಶಸ್ತಿ, ಸ್ವ ಉದ್ಯೋಗ ಕೈಗೊಳ್ಳಲು 50 ಸಾವಿರ ಸಾಲ, 50 ಸಾವಿರ ಸಬ್ಸಿಡಿ ಸೌಲಭ್ಯ ನೀಡಲಾಗುತ್ತಿದೆ. 1985ರ ಕಾಯ್ದೆ ಪ್ರಕಾರ ಮುತ್ತು ಕಟ್ಟುವುದು, ದೇವರಿಗೆ ಬಿಡುವುದು ಕಾನೂನಿನ ಉಲ್ಲಂಘನೆ ಮಾಡುವರ ವಿರುದ್ದ ಬಗ್ಗೆ ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಸಿದರು. ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕ ವಿಜಯಕುಮಾರ್ ಮಾತನಾಡಿ, ದಾವಣಗೆರೆ ಜಿಲ್ಲೆಯಲ್ಲಿ ಏ. 1 ರಿಂದ ಮಹಿಳಾ ಒಕ್ಕೂಟದಿಂದ ಶೇಂಗಾ ಚಿಕ್ಕಿ ಘಟಕ ಆರಂಭಿಸಲು ಯೋಜಿಸಲಾಗಿದೆ ಎಂದರು. ಲಿಂಗತ್ವ ಅಲ್ಪಸಂಖ್ಯಾತರ ಸಂಘದ ವ್ಯವಸ್ಥಾಪಕ ಕಾರ್ಯದರ್ಶಿ ಮಾತನಾಡಿದರು. ಮಹಾನಗರ ಪಾಲಿಕೆ ಸದಸ್ಯೆಯರಾದ ಉಮಾ ಪ್ರಕಾಶ್, ಎಚ್.ಸಿ. ಜಯಮ್ಮ, ದಿಶಾ ವಿಚಕ್ಷಣಾ ಸಮಿತಿ ಸದಸ್ಯೆ ಚೇತನಾ ಶಿವಕುಮಾರ್, ಜಿ.ಪಂ ಮಾಜಿ ಉಪಾಧ್ಯಕ್ಷೆ ಜಯಲಕ್ಷ್ಮೀ ಇತರರು ಇದ್ದರು.
ಪುನರ್ ಸಮೀಕ್ಷೆ ಇಲ್ಲ..
2007-08 ರಿಂದ ಮಾಜಿ ದೇವದಾಸಿ ಸರ್ವೇ ನಿಲ್ಲಿಸಲಾಗಿದೆ. ದೇವದಾಸಿ ಪದ್ಧತಿ ನಿರ್ಮೂಲನೆ ಆಗಬೇಕೆಂಬ ಉದ್ದೇಶದಿಂದ ಪುನರ್ ಸರ್ವೇ ನಿಲ್ಲಿಸಲಾಗಿದೆ. ರಾಜ್ಯದಲ್ಲಿ 14 ಜಿಲ್ಲೆಗಳಲ್ಲಿ 44,660 ಮಾಜಿ ದೇವದಾಸಿಯರಿದ್ದು, 24,184 ಜನರಿಗೆ ವಸತಿ ಒದಗಿಸಲಾಗಿದೆ. ಈ ಅನಿಷ್ಟ ಪದ್ಧತಿ ಮುಂದಿನ ಪೀಳಿಗೆಗೆ ಮುಂದುವರೆಯಬಾರದು ಎಂದು ಅಧ್ಯಕ್ಷೆ ಶಶಿಕಲಾ ವಿ. ಟೆಂಗಳಿ ಮನವಿ ಮಾಡಿದರು.
ರಾಜ್ಯದಲ್ಲೇ ಮೊದಲು..
ಉದ್ಯೋಗಿನಿ ಯೋಜನೆಯಡಿ ರಾಜ್ಯದಲ್ಲೇ ಮೊದಲ ಬಾರಿಗೆ ಜಿಲ್ಲೆಯ ಕೆನರಾ ಬ್ಯಾಂಕಿನಿಂದ 5 ಲಕ್ಷ ರೂಪಾಯಿ ಸಾಲಸೌಲಭ್ಯವನ್ನು ಪಡೆದ ನಿಟುವಳ್ಳಿಯಲ್ಲಿ ಬ್ಯೂಟಿಪಾರ್ಲರ್ ನಡೆಸುತ್ತಿರುವ ಫಲಾನುಭವಿ ಕವಿತಾ ಆವರಿಗೆ ಸಾಂಕೇತಿಕವಾಗಿ ಚೆಕ್ ವಿತರಣೆ ಮಾಡಲಾಯಿತು.
ಇದನ್ನೂ ಓದಿ : ಫ್ಯಾಂಟಮ್ ಈಗ “ವಿಕ್ರಾಂತ್ ರೋಣ”: ಬುರ್ಜ್ ಖಲೀಫಾದಲ್ಲಿ ರಾರಾಜಿಸಲಿದೆ ಕಿಚ್ಚನ ಕಟೌಟ್
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Davanagere; ಪ್ರಧಾನಿ ಮೋದಿ ರ್ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ
Lok Sabha Election: ಮೋದಿಗೆ ಪರ್ಯಾಯ ನಾಯಕ ಮತ್ತೊಬ್ಬರಿಲ್ಲ… ಗಾಯಿತ್ರಿ ಸಿದ್ದೇಶ್ವರ
Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ
PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ
Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್
MUST WATCH
ಹೊಸ ಸೇರ್ಪಡೆ
Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ
Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ
Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !
EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ
Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ