ದಾವಣಗೆರೆ: ಸೇವೆ ಪೂರೈಸಿ ಬಂದ ಯೋಧರಿಬ್ಬರಿಗೆ ಭವ್ಯ ಸ್ವಾಗತ


Team Udayavani, Jan 5, 2022, 7:21 PM IST

1-asdad

ದಾವಣಗೆರೆ: ಗಡಿ ಭದ್ರತಾ ಪಡೆಯಲ್ಲಿ 27 ವರ್ಷಗಳ ಕಾಲ ಸುದೀರ್ಘ ಸೇವೆ ಸಲ್ಲಿಸಿ  ಬುಧವಾರ ದಾವಣಗೆರೆಗೆ ಆಗಮಿಸಿದ ನಾಗರಾಜಶೆಟ್ಟಿ ಮತ್ತು ರಾಘವೇಂದ್ರ ಅವರಿಗೆ ಮೇಯರ್ ಎಸ್.ಟಿ. ವೀರೇಶ್ ಒಳಗೊಂಡಂತೆ ಅನೇಕರು ಭವ್ಯ ಸ್ವಾಗತ ಕೋರಿದರು.

ದಾವಣಗೆರೆ ರೈಲ್ವೆ ನಿಲ್ದಾಣದಲ್ಲಿ ವೀರ ಯೋಧರ ಸ್ವಾಗತಕ್ಕಾಗಿ ಅನೇಕರು ನೆರೆದಿದ್ದರು. ಇಬ್ಬರು ಯೋಧರು ಆಗಮಿಸುತ್ತಿದ್ದಂತೆ ನಾಗರಾಜಶೆಟ್ಟಿ, ರಾಘವೇಂದ್ರ ಅವರಿಗೆ ಜಯವಾಗಲಿ, ಭಾರತ್ ಮಾತಾ ಕೀ ಜೈ..ಎಂಬ ಘೋಷಣೆ ಮೊಳಗಿದವು. ದಾವಣಗೆರೆಯ ವೀರಪುತ್ರರಿಗೆ ಹೂಮಾಲೆಯಿಂದಿಗೆ ಸ್ವಾಗತಿಸಲಾಯಿತು.

ಈ ಸಂದರ್ಭದಲ್ಲಿ ಮಾತನಾಡಿದ ಮೇಯರ್ ಎಸ್.ಟಿ. ವೀರೇಶ್, ಕೋಟ್ಯಾಂತರ ಭಾರತೀಯರ ನೆಮ್ಮದಿಯ ಜೀವನಕ್ಕೆ ಕಾರಣವಾಗಿರುವ ವೀರಯೋಧರ ಕರ್ತವ್ಯ ಎನ್ನುವುದು ಅವರ ಮರಣದವರೆಗೂ ಇರುತ್ತದೆ. ಸೈನಿಕರು ತಮ್ಮ ಕುಟುಂಬದಿಂದ ಸಾವಿರಾರು ಕಿಲೋಮೀಟರ್ ದೂರವಿದ್ದು,ವೈಯಕ್ತಿಕ, ಕುಟುಂಬದ ಆಸೆಗಳನ್ನು ಬದಿಗೊತ್ತಿ, ಭಾರತಮಾತೆಯ ರಕ್ಷಣೆಗೋಸ್ಕರ ಗಡಿ ಭಾಗದಲ್ಲಿ ಕಾವಲು ಕಾಯುತ್ತಿರುತ್ತಾರೆ. ಅವರ ಸೇವೆ ಸದಾ ಸ್ಮರಣೀಯ ಎಂದರು.

ನೆರೆಯ ಪಾಪಿ ಪಾಕಿಸ್ತಾನ ಹಾಗೂ ಚೀನಾ ಪದೆ ಪದೇ ಕುತಂತ್ರ ಮಾಡುತ್ತಲೇ ಬರುತ್ತಿವೆ. ನಮ್ಮ ಭಾರತೀಯ ವೀರ ಯೋಧರು ತಕ್ಕ ಉತ್ತರ ನೀಡುತ್ತಾ ಬಂದಿದ್ದಾರೆ. ಅಂತಹ ಯೋಧರನ್ನು ಗೌರವಿಸುತ್ತಿರುವುದು ಹೆಮ್ಮೆಯ ವಿಚಾರ. ಗಡಿ ಭದ್ರತಾ ಪಡೆಯಲ್ಲಿ ೨೭ ವರ್ಷಗಳ ಕಾಲ ಸೇವೆ ಸಲ್ಲಿಸಿ, ನಿವೃತ್ತಿ ನಂತರ ದಾವಣಗೆರೆಗೆ ಆಗಮಿಸಿರುವ ನಾಗರಾಜ ಶೆಟ್ಟಿ, ರಾಘವೇಂದ್ರ ಅವರ ಮುಂದಿನ ಜೀವನ ಸುಖಕರವಾಗಿರಲಿ ಎಂದು ಆಶಿಸಿದರು.

ಇಬ್ಬರು ಯೋಧರು, ತಮ್ಮೂರಿನ ಜನರು ಕೋರಿದ ಸ್ವಾಗತಕ್ಕೆ ಸಂತಸ ವ್ಯಕ್ತಪಡಿಸಿದರು. ಯುವ ಜನಾಂಗ ಸೇನೆಗೆ ಸೇರುವ ಮೂಲಕ ಭಾರತ ಮಾತೆಯ ಸೇವೆ ಮಾಡಬೇಕು ಎಂದು ತಿಳಿಸಿದರು.

ಮಾಜಿ ಸೈನಿಕರ ಸಂಘದ ಅಧ್ಯಕ್ಷ ಸತ್ಯಪ್ರಕಾಶ್, ಮಂಜುನಾಥನಾಯ್ಕ, ನಗರ ಪೊಲೀಸ್ ಉಪಾಽಕ್ಷಕ ನರಸಿಂಹ ತಾಮ್ರಧ್ವಜ್, ಮಂಜುನಾಥ್, ಬಿ.ಎಸ್. ಬಸವರಾಜ್, ಎಂ. ನಾರಾಯಣಸ್ವಾಮಿ, ನಾಗರಾಜ್, ನೀಲಮ್ಮನ ತೋಟದ ಚಾಮುಂಡೇಶ್ವರಿ ಕಬಡ್ಡಿ ಕ್ರೀಡಾ ಸಮಿತಿ, ವಂದೇ ಮಾತರಂ ಕ್ರೀಡಾ ಸಮಿತಿ, ದಾವಣಗೆರೆ ಜಿಲ್ಲಾ ಸರ್ಕಾರಿ ನೌಕರರ ಕಬಡ್ಡಿ ಕ್ರೀಡಾ ಸಮಿತಿ, ಜಿಲ್ಲಾ ಪ್ಯಾರಾ ಮಿಲಿಟರಿ ಯೋಧರ ಸಂಘ, ದಾವಣಗೆರೆ ಜಿಲ್ಲಾ ಅಮೆಚೂರ್ ಕಬಡ್ಡಿ ಸಂಸ್ಥೆ ಪದಾಧಿಕಾರಿಗಳು, ಇತರೆ ಸಂಘ-ಸಂಸ್ಥೆಗಳ ಕಾರ್‍ಯಕರ್ತರು, ಕುಟುಂಬ ಸದಸ್ಯರು ಇದ್ದರು. ತೆರೆದ ಜೀಪಿನಲ್ಲಿ ಇಬ್ಬರು ಯೋಧರ ಮೆರವಣಿಗೆ ನಡೆಸಲಾಯಿತು.

ಟಾಪ್ ನ್ಯೂಸ್

Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್‌ ಗಾಂಧಿ

Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್‌ ಗಾಂಧಿ

Sagara: ಮಹಿಳೆಯ ಗರ್ಭಕೋಶದಲ್ಲಿದ್ದ 7 ಕೆಜಿ ಗಡ್ಡೆ ಹೊರತೆಗೆದ ವೈದ್ಯರು

Sagara: ಮಹಿಳೆಯ ಗರ್ಭಕೋಶದಲ್ಲಿದ್ದ 7 ಕೆಜಿ ಗಡ್ಡೆ ಹೊರತೆಗೆದ ವೈದ್ಯರು

Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ

Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ

ಮೂಲಭೂತ ಸೌಕರ್ಯ ಕೊಡಿ ಎಂದಿದ್ದೇನೆ ಹೊರತು, ಒಕ್ಕಲೆಬ್ಬಿಸಿ ಎಂದಿಲ್ಲ; ಬೇಳೂರು ಸ್ಪಷ್ಟನೆ

ಮೂಲಭೂತ ಸೌಕರ್ಯ ಕೊಡಿ ಎಂದಿದ್ದೇನೆ ಹೊರತು, ಒಕ್ಕಲೆಬ್ಬಿಸಿ ಎಂದಿಲ್ಲ; ಬೇಳೂರು ಸ್ಪಷ್ಟನೆ

Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ

Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ

Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್‌ ಗಗನ ಯಾತ್ರೆ

Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್‌ ಗಗನ ಯಾತ್ರೆ

Rajveer Diler: ಬಿಜೆಪಿ ಸಂಸದ ರಾಜವೀರ್ ದಿಲೇರ್ ಹೃದಯಾಘಾತದಿಂದ ನಿಧನ

Rajveer Diler: ಹೃದಯಾಘಾತದಿಂದ ಬಿಜೆಪಿ ಸಂಸದ ರಾಜ್‌ವೀರ್ ದಿಲೇರ್ ನಿಧನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Gayatri Siddeshwar: ಸಮಗ್ರ ನೀರಾವರಿ ಸೌಲಭ್ಯಕ್ಕೆ ಆದ್ಯತೆ; ಗಾಯಿತ್ರಿ

Gayatri Siddeshwar: ಸಮಗ್ರ ನೀರಾವರಿ ಸೌಲಭ್ಯಕ್ಕೆ ಆದ್ಯತೆ; ಗಾಯಿತ್ರಿ

Harihara ಬಿಜೆಪಿ ಶಾಸಕ ಬಿ.ಪಿ.ಹರೀಶ್‌ಗೆ ಜೀವ ಬೆದರಿಕೆ,

Harihara ಬಿಜೆಪಿ ಶಾಸಕ ಬಿ.ಪಿ.ಹರೀಶ್‌ಗೆ ಜೀವ ಬೆದರಿಕೆ

bp harish

Harihara; ಅಕ್ರಮ ಮರಳುಗಾರಿಕೆ ಮಾಹಿತಿ ನೀಡಿದ್ದಕ್ಕೆ ಬಿಜೆಪಿ ಶಾಸಕರಿಗೆ ಜೀವ ಬೆದರಿಕೆ

Lok Sabha Election: ಕಾಂಗ್ರೆಸ್‌ನಿಂದ ಜನರಿಗೆ ಸುಳ್ಳಿನ ಗ್ಯಾರಂಟಿ: ಗಾಯಿತ್ರಿ ಸಿದ್ದೇಶ್ವರ

Lok Sabha Election: ಕಾಂಗ್ರೆಸ್‌ನಿಂದ ಜನರಿಗೆ ಸುಳ್ಳಿನ ಗ್ಯಾರಂಟಿ: ಗಾಯಿತ್ರಿ ಸಿದ್ದೇಶ್ವರ

1-wqeqwe

Davanagere: ಮತದಾನ ಜಾಗೃತಿ ಲಾಂಛನದಲ್ಲಿ ಅಪರೂಪದ ಪ್ರಾಣಿ ಚಿತ್ರ ಬಳಕೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್‌ ಗಾಂಧಿ

Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್‌ ಗಾಂಧಿ

Sagara: ಮಹಿಳೆಯ ಗರ್ಭಕೋಶದಲ್ಲಿದ್ದ 7 ಕೆಜಿ ಗಡ್ಡೆ ಹೊರತೆಗೆದ ವೈದ್ಯರು

Sagara: ಮಹಿಳೆಯ ಗರ್ಭಕೋಶದಲ್ಲಿದ್ದ 7 ಕೆಜಿ ಗಡ್ಡೆ ಹೊರತೆಗೆದ ವೈದ್ಯರು

Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ

Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ

ಮೂಲಭೂತ ಸೌಕರ್ಯ ಕೊಡಿ ಎಂದಿದ್ದೇನೆ ಹೊರತು, ಒಕ್ಕಲೆಬ್ಬಿಸಿ ಎಂದಿಲ್ಲ; ಬೇಳೂರು ಸ್ಪಷ್ಟನೆ

ಮೂಲಭೂತ ಸೌಕರ್ಯ ಕೊಡಿ ಎಂದಿದ್ದೇನೆ ಹೊರತು, ಒಕ್ಕಲೆಬ್ಬಿಸಿ ಎಂದಿಲ್ಲ; ಬೇಳೂರು ಸ್ಪಷ್ಟನೆ

Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ

Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.