ದಾವಣಗೆರೆ: ಕೊಟ್ಟ ಸಾಲ ಕೇಳಿದ್ದಕ್ಕೆ ವಯೋವೃದ್ಧನಿಗೆ ಹನಿಟ್ರ್ಯಾಪ್ ಮಾಡಿದ ಯುವತಿ!
Team Udayavani, Nov 8, 2022, 1:30 PM IST
ದಾವಣಗೆರೆ: ಕೊಟ್ಟ ಸಾಲ ಕೇಳಿದ್ದಕ್ಕೆ ವಯೋವೃದ್ಧನಿಗೆ ಹನಿಟ್ರ್ಯಾಪ್ ಗೆ ಮಾಡಿ 15 ಲಕ್ಷಕ್ಕೆ ಬೇಡಿಕೆ ಇಟ್ಟ ಮಹಿಳೆಯನ್ನು ಕೆಟಿಜೆ ನಗರ ಪೊಲೀಸರು ಬಂಧಿಸಿದ್ದಾರೆ.
ದಾವಣಗೆರೆಯ ಸರಸ್ವತಿ ನಗರದ ಯಶೋಧ ಬಂಧಿತ ಮಹಿಳೆ.
ಏನಿದು ಘಟನೆ: ಶಿವಕುಮಾರ ಸ್ವಾಮಿ ಬಡಾವಣೆ ನಿವಾಸಿ ಚಿದಾನಂದಪ್ಪ ಅವರಿಗೆ ಸರಸ್ವತಿ ನಗರ ನಿವಾಸಿಯಾದ 32 ವರ್ಷದ ಯಶೋಧ ಪರಿಚಯವಾಗಿದೆ. ಹೀಗೆ ಪರಿಚಯವಾಗಿ ಇಬ್ಬರ ನಡುವೆ ಸ್ನೇಹ ಶುರುವಾಗಿದೆ. ಯಶೋಧ ಅವರು ಚಿದಾನಂದಪ್ಪರನ್ನು ಮನೆಗೆ ಆಹ್ವಾನಿಸುವುದು ಟೀ, ಕಾಫಿ ಜ್ಯೂಸ್ ಕುಡಿಸುವುದು ಸಾಮಾನ್ಯವಾಗಿದೆ. ಹೀಗೆ ಕರೆದು ಯಶೋಧ ಚಿದಾನಂದಪ್ಪನ ಬಳಿ ಬರೋಬರಿ 86 ಸಾವಿರ ರೂಪಾಯಿ ಸಾಲ ಪಡೆದಿದ್ದಾಳೆ.
ಇದನ್ನೂ ಓದಿ:95ನೇ ಹುಟ್ಟುಹಬ್ಬ:ಎಲ್.ಕೆ.ಅಡ್ವಾಣಿ ನಿವಾಸಕ್ಕೆ ತೆರಳಿ ಶುಭಾಶಯ ಕೋರಿದ ಪ್ರಧಾನಿ ಮೋದಿ, ಸಿಂಗ್
ಒಂದು ದಿನ ವಾಕಿಂಗ್ ಮುಗಿಸಿ ಯಶೋಧ ಮನೆಯ ಮುಂದೆ ಹಾಯ್ದು ಚಿದಾನಂದಪ್ಪ ಹೋಗುತ್ತಿದ್ದ. ಈ ವೇಳೆ ಯಶೋಧ ಚಿದಾನಂದಪ್ಪನನ್ನು ಕರೆದಿದ್ದಾಳೆ. ಜ್ಯೂಸ್ ಕೊಟ್ಟಿದ್ದಾಳೆ. ಆ ಜ್ಯೂಸ್ ಕುಡಿದ ಸ್ವಲ್ಪ ಸಮಯದಲ್ಲಿ ಚಿದಾನಂದಪ್ಪನ ಪ್ರಜ್ಞೆ ತಪ್ಪಿದೆ. ಎಚ್ಚರವಾದಾಗ ಮೇಲೆ ಬಟ್ಟೆ ಇರಲಿಲ್ಲ. ಭಯಗೊಂಡು ಬಟ್ಟೆ ಹಾಕಿಕೊಂಡು ಮನೆಗೆ ಬಂದಿದ್ದಾರೆ. ಬಳಿಕ ಎರಡು ದಿನ ನಂತರ ಮಹಿಳೆ ಹಣಕ್ಕಾಗಿ ಮತ್ತೆ ಚಿದಾನಂದಪ್ಪನವರಿಗೆ ಫೋನ್ ಮಾಡಿದ್ದಾಳೆ. ಅಶ್ಲೀಲ ವಿಡಿಯೋ ನನ್ನ ಬಳಿ ಇದೆ. 15 ಲಕ್ಷ ಕೊಡು ಇಲ್ಲವಾದರೆ ಕುಟುಂಬ ಸದಸ್ಯರಿಗೆ ತೋರಿಸುವ ಬೆದರಿಕೆ ಹಾಕಿದ್ದಾಳೆ. ಹೆದರಿ ಈ ವಿಚಾರವನ್ನು ಚಿದಾನಂದಪ್ಪ ತಮ್ಮ ಪರಿಚಯದವರಿಗೆ ಹೇಳಿದ್ದಾರೆ. ಅವರು ಏಳರಿಂದ ಎಂಟು ಲಕ್ಷಕ್ಕೆ ಮಾತಾಡಿ ಮುಗಿಸಲು ಮುಂದಾಗಿದ್ದಾರೆ. ಆದರೆ, ಮಹಿಳೆ 15 ಲಕ್ಷ ಕೊಡಬೇಕೆಂದು ಪಟ್ಟು ಹಿಡಿದಿದ್ದಾಳೆ.
ಈ ವೇಳೆ ಚಿದಾನಂದಪ್ಪನ ವಾಟ್ಸಪ್ ಗೆ ಒಂದು ನಗ್ನ ಫೋಟೋ ಕಳಿಸಿ ಬೆದರಿಸಿದ್ದಾಳೆ. ಇದಕ್ಕೆ ಹೆದರಿದ ಚಿದಾನಂದಪ್ಪ ವಿಚಾರವನ್ನು ಪುತ್ರನಿಗೆ ಹೇಳಿದ್ದಾರೆ. ಬಳಿಕ ಕೆಟಿಜೆ ನಗರ ಠಾಣೆಯಲ್ಲಿ ದೂರು ದಾಖಲಿಸಿದ್ದು, ಪೊಲೀಸರು ಯಶೋಧಳನ್ನು ವಶಕ್ಕೆ ಪಡೆದಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್
Vijaypura:ರಾಹುಲ್ ಗಾಂಧಿ ನಿರ್ಗಮಿಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ
INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್
Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್
LS Polls: ರಾಜ್ಯದಲ್ಲಿ ಕಾಂಗ್ರೆಸ್ ವಿರೋಧಿ ಅಲೆ: ರಾಘವೇಂದ್ರ
MUST WATCH
ಹೊಸ ಸೇರ್ಪಡೆ
Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !
EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ
Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ
Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್
Davanagere; ಪ್ರಧಾನಿ ಮೋದಿ ರ್ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ