ಬ್ಯಾಂಕ್‌ ಕಾರ್ಮಿಕ ಸಂಘಟನೆಗಳ ಪ್ರತಿಭಟನೆ

ವೇತನ ಪರಿಷ್ಕರಣೆ ಸೇರಿದಂತೆ ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹವಿಳಂಬ ನೀತಿಗೆ ಖಂಡನೆ

Team Udayavani, Feb 1, 2020, 12:03 PM IST

Feburary-4

ದಾವಣಗೆರೆ: 11 ನೇ ದ್ವಿ ಪಕ್ಷೀಯ ವೇತನ ಪರಿಷ್ಕರಣೆ ಒಪ್ಪಂದ ಜಾರಿ ವಿಳಂಬ ಖಂಡಿಸಿ ಮತ್ತು ತ್ವರಿತವಾಗಿ ವೇತನ ಪರಿಷ್ಕರಣೆ ಜಾರಿ ಒಳಗೊಂಡಂತೆ ವಿವಿಧ ಬೇಡಿಕೆ ಈಡೇರಿಕೆಗೆ ಒತ್ತಾಯಿಸಿ ಬ್ಯಾಂಕ್‌ ಕಾರ್ಮಿಕ ಸಂಘಟನೆಗಳ ಸಂಯುಕ್ತ ವೇದಿಕೆಯ ಕರೆ ನೀಡಿದ್ದ ಅಖೀಲ ಭಾರತ ಬ್ಯಾಂಕ್‌ ಮುಷ್ಕರದ ಮೊದಲ ದಿನ ಶುಕ್ರವಾರ ಮಂಡಿಪೇಟೆ ಯ ಕೆನರಾ ಬ್ಯಾಂಕ್‌ ಆವರಣದಲ್ಲಿ ಪ್ರತಿಭಟನಾ ಮತಪ್ರದರ್ಶನ ನಡೆಸಲಾಯಿತು.

2007 ರ ನ. 1 ರಿಂದಲೇ ಜಾರಿಗೆ ಬರಬೇಕಾಗಿದ್ದ ಬ್ಯಾಂಕ್‌ ಉದ್ಯೋಗಿಗಳ 11 ನೇ ದ್ವಿ ಪಕ್ಷೀಯ ವೇತನ ಪರಿಷ್ಕರಣೆ ಒಪ್ಪಂದ ಈವರೆಗೂ ಜಾರಿಗೆ ಬಂದಿಲ್ಲ. ಕೇಂದ್ರ ಸರಕಾರ ಮತ್ತು ಐಬಿಎ ನ ಉದಾಸೀನ ಹಾಗೂ ನಿರ್ಲಕ್ಷ್ಯತನದ ಧೋರಣೆಯೇ ವಿಳಂಬಕ್ಕೆ ಕಾರಣ ಎಂದು ಪ್ರತಿಭಟನಾ ನಿರತರು ತೀವ್ರ ಆಕ್ರೋಶ ವ್ಯಕ್ತಪಡಿಸಿದರು.

11 ನೇ ದ್ವಿ ಪಕ್ಷೀಯ ವೇತನ ಪರಿಷ್ಕರಣೆ ಒಪ್ಪಂದ ಜಾರಿಗೆ ಸಂಬಂಧಿಸಿದಂತೆ
ಯುಎಫ್‌ಬಿಯು ಸಂಘಟನೆಗಳ ಹಾಗೂ ಐಬಿಎ ಪ್ರತಿನಿಧಿ ಗಳ ನಡುವೆ ಸುಮಾರು 20 ಕ್ಕೂ ಹೆಚ್ಚು ಸಭೆ ನಡೆದಿವೆ. ಆದರೆ, ಆಡಳಿತ ಮಂಡಳಿಗಳ ಹಠಮಾರಿತನದಿಂದಾಗಿ 27 ತಿಂಗಳು ನಂತರವೂ ನ್ಯಾಯಯುತವಾದ ವೇತನ ಪರಿಷ್ಕರಣೆ ಜಾರಿಗೆ ಬಂದಿಲ್ಲ. ಕೇಂದ್ರ ಕಾರ್ಮಿಕ ಆಯುಕ್ತರ ಸಮ್ಮುಖದಲ್ಲಿ ನಡೆದ ಸಂಧಾನ ಸಭೆ ಕೂಡಾ ವಿಫಲವಾಗಿರುವ ಹಿನ್ನಲೆಯಲ್ಲಿ ಎರಡು ದಿನಗಳ ಮುಷ್ಕರ ಅನಿವಾರ್ಯವಾಗಿದೆ ಎಂದು ತಿಳಿಸಿದರು.

ವೇತನ ಪರಿಷ್ಕರಣೆ ಬೇಡಿಕೆಯ ಜೊತೆಗೆ 5 ದಿನಗಳ ಬ್ಯಾಂಕಿಂಗ್‌ ವ್ಯವಸ್ಥೆಯ ಜಾರಿ,
ಮೂಲ ವೇತನದಲ್ಲಿ ವಿಶೇಷ ಭತ್ಯೆ ವಿಲೀನ, ಹೊಸ ಪಿಂಚಣಿ ವ್ಯವಸ್ಥೆ ರದ್ದು, ಹಳೆಯ
ಪಿಂಚಣಿ ಸೌಲಭ್ಯದ ವಿಸ್ತರಣೆ, ಕಳೆದ 25 ವರ್ಷಗಳಿಂದ ನನೆಗುದಿಗೆ ಬಿದ್ದಿರುವ ಪಿಂಚಣಿ ಪರಿಷ್ಕರಣೆ, ಕುಟುಂಬ ಪಿಂಚಣಿ ಪರಿಷ್ಕರಣೆ, ಬ್ಯಾಂಕುಗಳ ಒಟ್ಟಾರೆ ನಿರ್ವಹಣಾ ಲಾಭದ ಆಧಾರದಲ್ಲಿ ಸಿಬ್ಬಂದಿ ಕಲ್ಯಾಣ ನಿಧಿ ನಿಗದಿ, ನಿವೃತ್ತಿ ಸಮಯದಲ್ಲಿ ಬರುವ ಹಣವನ್ನು ಸಂಪೂರ್ಣವಾಗಿ ತೆರಿಗೆಮುಕ್ತಗೊಳಿಸುವುದು ಮುಂತಾದ ಬೇಡಿಕೆ ಈಡೇರಿಸಬೇಕು ಎಂದು
ಒತ್ತಾಯಿಸಿದರು.

ಅವೈಜ್ಞಾನಿಕವಾಗಿ ಮಾಡುತ್ತಿರುವ ಬ್ಯಾಂಕುಗಳ ವಿಲೀನ ಪ್ರಕ್ರಿಯೆ
ನಿಲ್ಲಿಸಬೇಕು. ಉದ್ದೇಶಪೂರ್ವಕವಾಗಿ ಸಾಲ ಮರು ಪಾವತಿಸದಿರುವ ಬೃಹತ್‌ ಖಾಸಗಿ ಬಂಡವಾಳಶಾಹಿಗಳಿಂದ ಸಾಲ ಮರುಪಾವತಿಗೆ ಕಠಿಣ ಕ್ರಮ ತೆಗೆದುಕೊಳ್ಳಬೇಕು ಎಂದು
ಆಗ್ರಹಿಸಿದರು. ಅತೀ ಶೀಘ್ರವೇ ವೇತನ ಪರಿಷ್ಕರಣೆ ಹಾಗೂ ಇನ್ನಿತರ ಬೇಡಿಕೆಗಳ
ಈಡೇರಿಸದಿದ್ದಲ್ಲಿ ಮಾರ್ಚ್‌ನಲ್ಲಿ 2 ದಿನಗಳ ಮುಷ್ಕರ ಹಾಗೂ ಏ. 1 ರಿಂದ ಅನಿರ್ದಿಷ್ಟಾವ ಧಿ ಕಾಲದವರೆಗೆ ಮುಷ್ಕರ ನಡೆಸಲಾಗುವುದು ಎಂದು ಎಚ್ಚರಿಸಿದರು.

ಬ್ಯಾಂಕ್‌ ಕಾರ್ಮಿಕ ಸಂಘಟನೆಗಳ ಸಂಯುಕ್ತ ವೇದಿಕೆ ಜಿಲ್ಲಾ ಸಂಚಾಲಕ
ಕೆ.ರಾಘವೇಂದ್ರ ನಾಯರಿ, ಕೆ.ಎನ್‌. ಗಿರಿರಾಜ…, ಆರ್‌.ಶ್ರೀನಿವಾಸ್‌, ವಾಗೀಶ್‌, ಪಿ.ಆರ್‌.ಪುರುಷೋತ್ತಮ…, ಜಿ.ರಂಗಸ್ವಾಮಿ, ಎಂ.ಆರ್‌.ರಾಘವೇಂದ್ರ, ಕಾರ್ಮಿಕ ಮುಖಂಡ ಕೆ.ಎಲ್‌.ಭಟ್‌, ವಿ.ನಂಜುಂಡೇಶ್ವರ, ಜಿ.ರಂಗಸ್ವಾಮಿ, ಅಜಿತ್‌ಕುಮಾರ್‌ ನ್ಯಾಮತಿ, ಎಚ್‌
.ನಾಗರಾಜ…, ಎನ್‌.ಟಿ.ಯರ್ರಿಸ್ವಾಮಿ, ವಿಶ್ವನಾಥ ಬಿಲ್ಲವ, ಆನಂದ ಮೂರ್ತಿ, ಆರ್‌.ಆಂಜನೇಯ, ನಾಗವೇಣಿ ನರೇಂದ್ರಕುಮಾರ್‌, ಉಷಾ ಆಂಜನೇಯ,
ಮಮತ, ಎಚ್‌.ಸೂಗುರಪ್ಪ, ಜಿ.ಎಂ. ಶಿವಕುಮಾರ, ಗುರುರಾಜ ಭಾಗವತ,
ಎನ್‌.ಎಚ್‌.ಮಂಜುನಾಥ, ಕೆ.ರವಿಶಂಕರ್‌, ಸುಮಂತ್‌ ಭಟ… ಇತರರು ಇದ್ದರು. ಶನಿವಾರ ಬೆಳಗ್ಗೆ 11ಕ್ಕೆ ಮಂಡಿಪೇಟೆಯ ಸ್ಟೇಟ್‌ ಬ್ಯಾಂಕ್‌ ಆಫ್‌ ಇಂಡಿಯಾದ ವಿಭಾಗೀಯ ಕಚೇರಿ ಆವರಣದಲ್ಲಿ ಮತಪ್ರದರ್ಶನ ನಡೆಯಲಿದೆ.

ಟಾಪ್ ನ್ಯೂಸ್

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

1-rerwer

IPL; ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ಜಯದ ನಗು ಬೀರಿದ ಆರ್ ಸಿಬಿ

MONEY (2)

Mysuru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 89 ಲಕ್ಷ ರೂ. ವಶಕ್ಕೆ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Vijayendra (2)

PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ

Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್

Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್

Gayatri Siddeshwar: ಸಮಗ್ರ ನೀರಾವರಿ ಸೌಲಭ್ಯಕ್ಕೆ ಆದ್ಯತೆ; ಗಾಯಿತ್ರಿ

Gayatri Siddeshwar: ಸಮಗ್ರ ನೀರಾವರಿ ಸೌಲಭ್ಯಕ್ಕೆ ಆದ್ಯತೆ; ಗಾಯಿತ್ರಿ

Harihara ಬಿಜೆಪಿ ಶಾಸಕ ಬಿ.ಪಿ.ಹರೀಶ್‌ಗೆ ಜೀವ ಬೆದರಿಕೆ,

Harihara ಬಿಜೆಪಿ ಶಾಸಕ ಬಿ.ಪಿ.ಹರೀಶ್‌ಗೆ ಜೀವ ಬೆದರಿಕೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

1-MB

Note Ban ವೇಳೆ ಮಹಿಳೆಯರು ಮಂಗಳಸೂತ್ರ ಅಡವಿಟ್ಟಾಗ ಮೋದಿ ಮೌನ: ಭಂಡಾರಿ

Exam

Udupi; ಪಿಯುಸಿ ಪರೀಕ್ಷೆ-2 : ನಿಷೇಧಾಜ್ಞೆ ಜಾರಿ

IMD

Dakshina Kannada ಜಿಲ್ಲೆಯಲ್ಲಿ ಮುಂದುವರಿದ ಉರಿಬಿಸಿಲು:ಮಳೆಯ ಮುನ್ಸೂಚನೆ ಇಲ್ಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.