ಸರ್ಕಾರ ವಿದ್ಯುತ್‌ ಕ್ಷೇತ್ರದ ಖಾಸಗೀಕರಣ ಪ್ರಕ್ರಿಯೆ ಕೈಬಿಡಲಿ


Team Udayavani, Oct 6, 2020, 4:49 PM IST

ಸರ್ಕಾರ ವಿದ್ಯುತ್‌ ಕ್ಷೇತ್ರದ ಖಾಸಗೀಕರಣ ಪ್ರಕ್ರಿಯೆ ಕೈಬಿಡಲಿ

ದಾವಣಗೆರೆ: ಕೇಂದ್ರ ಸರ್ಕಾರದ 2003ರ ಕಾಯ್ದೆಯ ಪ್ರಸ್ತಾಪಿತ ತಿದ್ದುಪಡಿ ವಿರೋಧಿಸಿ ಕೆಪಿಟಿಸಿ ಎಂಪ್ಲಾಯಿಸ್‌ ಯೂನಿಯನ್‌, ಕರ್ನಾಟಕ ವಿದ್ಯುತ್‌ ಪ್ರಸರಣ ನಿಗಮ ನೌಕರರ ಸಂಘಗಳ ನೇತೃತ್ವದಲ್ಲಿಸೋಮವಾರ ಬೆಸ್ಕಾಂ ಅಧೀಕ್ಷಕರ ಕಚೇರಿ ಎದುರು ಬೆಸ್ಕಾಂ ನೌಕರರು, ಅಧಿಕಾರಿಗಳು  ಕಪ್ಪುಪಟ್ಟಿ ಧರಿಸಿ ಸಾಂಕೇತಿಕ ಪ್ರತಿಭಟನೆ ನಡೆಸಿದರು.

ಕೇಂದ್ರ ಸರ್ಕಾರದ 2003-ರ ಕಾಯ್ದೆಯ ಪ್ರಸ್ತಾಪಿತ ತಿದ್ದುಪಡಿ ತರಲು ಉದ್ದೇಶಿಸಿದ್ದು ಬೆಸ್ಕಾಂ ಒಳಗೊಂಡಂತೆ ಎಲ್ಲಾ ವಿದ್ಯುತ್‌ ಪ್ರಸರಣ ಕಂಪನಿಗಳನ್ನು ಖಾಸಗೀಕರಣ ಮಾಡುವ ಪ್ರಕ್ರಿಯೆಗೆ ಚಾಲನೆ ನೀಡ ಹೊರಟಿರುವುದು ಎಲ್ಲಾ ವರ್ಗದ ಅಧಿಕಾರಿಗಳು, ನೌಕರರನ್ನು ಸಂಕಷ್ಟಕ್ಕೀಡು ಮಾಡಲಿದೆ. ಖಾಸಗೀಕರಣದಿಂದ ನಲುಗಿ ಹೋಗಿರುವ ಸಾರ್ವಜನಿಕರ ಮೇಲೆಯೂ ಪ್ರಸ್ತಾಪಿತ ತಿದ್ದುಪಡಿ ಭಾರೀ ಕೆಟ್ಟ ಪರಿಣಾಮ ಉಂಟು ಮಾಡಲಿದೆ. ಹಾಗಾಗಿ ಕೇಂದ್ರ ಸರ್ಕಾರ ತಿದ್ದುಪಡಿ ಪ್ರಸ್ತಾಪವನ್ನೇ ಕೈ ಬಿಡಬೇಕು. ಈಗಿರುವ ವ್ಯವಸ್ಥೆಯನ್ನೇ ಇನ್ನೂ ಹೆಚ್ಚಿನ ಮಟ್ಟದಲ್ಲಿ ಸುಧಾರಣೆ  ಮಾಡಬೇಕು ಎಂದು ಪ್ರತಿಭಟನಾಕಾರರು ಒತ್ತಾಯಿಸಿದರು.

ಎಲ್ಲಾ ವಿದ್ಯುತ್‌ ಪ್ರಸರಣ ಕಂಪನಿಗಳನ್ನು ಖಾಸಗೀಕರಣ ಮಾಡುವುದರಿಂದ ಗ್ರಾಹಕರಿಗೆ ಇನ್ನಿಲ್ಲದ ಸಮಸ್ಯೆ ಅನುಭವಿಸಲೇಬೇಕಾಗುತ್ತದೆ. ಹಲವಾರು ಸೌಲಭ್ಯಗಳು ದೊರೆಯದಂತಾಗುತ್ತದೆ. ಭಾಗ್ಯಜ್ಯೋತಿ, ಕುಟೀರ ಜ್ಯೋತಿ, ನಿರಂತರ ಜ್ಯೋತಿ ಇತರೆ ಸೌಲಭ್ಯಗಳು ಅಕ್ಷರಶಃಮರೀಚಿಕೆ ಆಗಲಿವೆ. ಖಾಸಗೀಕರಣದಿಂದ ಕಂಪನಿಯವರು ಹೇಳಿದಂತೆ ನಡೆಯಬೇಕಾಗುತ್ತದೆ ಎಂದು ದೂರಿದರು.

ಎಲ್ಲಾ ವಿದ್ಯುತ್‌ ಪ್ರಸರಣ ಕಂಪನಿಗಳನ್ನು ಖಾಸಗೀಕರಣ ಮುಖ್ಯವಾಗಿ ರೈತಾಪಿ ವರ್ಗದ ಮೇಲೆ ಭಾರೀ ಪರಿಣಾಮ ಉಂಟು ಮಾಡಲಿದೆ. ರೈತರಿಗೆ ದೊರೆಯುತ್ತಿರುವ ಎಲ್ಲಾ ರೀತಿಯ ಸೌಲಭ್ಯ, ಯೋಜನೆಗಳು ಕೈ ತಪ್ಪಿ ಹೋಗಲಿವೆ. ಆಹಾರದ ಉತ್ಪಾದನಾ ಕ್ಷೇತ್ರದ ಮೇಲೆಯೂ ಕೇಂದ್ರ ಸರ್ಕಾರದ ನೀತಿ ಹೊಡೆತ ನೀಡಲಿದೆ. ರೈತರು, ಜನಸಾಮಾನ್ಯರ ವಿರೋಧಿ ನೀತಿ ಕೈ ಬಿಡಬೇಕು ಎಂದು ಒತ್ತಾಯಿಸಿದರು. ಎಲ್ಲಾ ವಿದ್ಯುತ್‌ ಪ್ರಸರಣ ಕಂಪನಿಗಳನ್ನು ಖಾಸಗೀಕರಣ ಪ್ರಸ್ತಾಪದ ವಿರುದ್ಧ ಸಾಂಕೇತಿಕ ಹೋರಾಟ ನಡೆಸಲಾಗಿದೆ. ಸರ್ಕಾರ ತನ್ನ ನಿರ್ಧಾರ ಕೈ ಬಿಡದಿದ್ದಲ್ಲಿ ಮುಂದಿನ ದಿನಗಳಲ್ಲಿ ಹಂತ ಹಂತದ ಹೋರಾಟ ನಡೆಸಲಾಗುವುದು ಎಂದು ತಿಳಿಸಿದರು.

ಅಧೀಕ್ಷಕ ಇಂಜಿನಿಯರ್‌ ಸುಭಾಶ್ಚಂದ್ರ, ಎಸ್‌.ಕೆ. ಪಾಟೀಲ್‌, ಎಸ್‌.ಜೆ. ಮುಕುಂದ್‌, ಡಿ.ಸಿ. ಕೊಟ್ರೇಶ್‌, ನಟರಾಜ್‌ ಹತ್ತಿಕಾಳು, ಎನ್‌.ಎಚ್‌. ಸುರೇಶ್‌, ಎನ್‌.ಎ. ರಾಘವೇಂದ್ರ, ಹನುಮಂತರಾಜ್‌ ಇತರರು ಇದ್ದರು.

ಟಾಪ್ ನ್ಯೂಸ್

gayi

Davanagere; ಗಾಯಿತ್ರಿ ಸಿದ್ದೇಶ್ವರ್‌ ಅಂತಿಮ ನಾಮಪತ್ರ ಸಲ್ಲಿಕೆ; ಭರ್ಜರಿ ಮೆರವಣಿಗೆ

4-shirva

Rain: ಕಟಪಾಡಿ-ಶಿರ್ವ ರಾಜ್ಯ ಹೆದ್ದಾರಿ; ಮೊದಲ ಮಳೆಯ ಅವಾಂತರ; ರಸ್ತೆ ಕೆಸರುಮಯ

Gadag ಬೆಳ್ಳಂಬೆಳಗ್ಗೆ ವರುಣಾರ್ಭಟ ಆರಂಭ; ಮುಂಗಾರು ನಿರೀಕ್ಷೆ ಹೆಚ್ಚಿಸಿದ ಅಶ್ವಿನಿ ಮಳೆ

Gadag ಬೆಳ್ಳಂಬೆಳಗ್ಗೆ ವರುಣಾರ್ಭಟ ಆರಂಭ; ಮುಂಗಾರು ನಿರೀಕ್ಷೆ ಹೆಚ್ಚಿಸಿದ ಅಶ್ವಿನಿ ಮಳೆ

Boat Capsizes In Odisha’s Mahanadi River

Mahanadi River Tragedy: ಮಗುಚಿದ 50 ಜನರಿದ್ದ ದೋಣಿ; ಇಬ್ಬರು ಸಾವು; ಎಂಟು ಮಂದಿ ನಾಪತ್ತೆ

Tamil Nadu BJP chief Annamalai demands re-poll due to missing voter names

Loksabha Election; ತಮಿಳುನಾಡಿನಲ್ಲಿ ಮರು ಮತದಾನಕ್ಕೆ ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ಆಗ್ರಹ

3-blthngady

ತಾಲೂಕಿನೆಲ್ಲೆಡೆ ಮುಂಜಾನೆ ಭಾರಿ ಮಳೆ;ಕೆಸರುಮಯ ರಾಷ್ಟ್ರೀಯ ಹೆದ್ದಾರಿಯಾಗಿಸಿದ ಗುತ್ತಿಗೆದಾರರು

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

gayi

Davanagere; ಗಾಯಿತ್ರಿ ಸಿದ್ದೇಶ್ವರ್‌ ಅಂತಿಮ ನಾಮಪತ್ರ ಸಲ್ಲಿಕೆ; ಭರ್ಜರಿ ಮೆರವಣಿಗೆ

1-weqwewqe

Davangere: 10 ರೂ.ಗಳ ನಾಣ್ಯ ರೂಪದಲ್ಲಿ 25 ಸಾವಿರ ರೂ. ಠೇವಣಿ ಕಟ್ಟಿದ ಅಭ್ಯರ್ಥಿ!

1-wwqwqe

BJP ಶ್ರೀರಾಮುಲು, ಗಾಯತ್ರಿ ಸಿದ್ದೇಶ್ವರ್ ಈಗಾಗಲೇ ಗೆದ್ದಿದ್ದಾರೆ: ಜನಾರ್ದನ ರೆಡ್ಡಿ

Davanagere; ಮುಖ್ಯಮಂತ್ರಿ ಜವಾಬ್ದಾರಿಯಿಂದ ಹೇಳಿಕೆ ನೀಡಬೇಕು: ಎಂ.ಪಿ. ರೇಣುಕಾಚಾರ್ಯ

Davanagere; ಮುಖ್ಯಮಂತ್ರಿ ಜವಾಬ್ದಾರಿಯಿಂದ ಹೇಳಿಕೆ ನೀಡಬೇಕು: ಎಂ.ಪಿ. ರೇಣುಕಾಚಾರ್ಯ

Lok Sabha Election: ಮಠಾಧೀಶರ ಆಶೀರ್ವಾದ ಪಡೆದ ಬಿಜೆಪಿ ಅಭ್ಯರ್ಥಿ ಗಾಯಿತಿ ಸಿದ್ದೇಶ್ವರ

Lok Sabha Election: ಮಠಾಧೀಶರ ಆಶೀರ್ವಾದ ಪಡೆದ ಬಿಜೆಪಿ ಅಭ್ಯರ್ಥಿ ಗಾಯತ್ರಿ ಸಿದ್ದೇಶ್ವರ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

gayi

Davanagere; ಗಾಯಿತ್ರಿ ಸಿದ್ದೇಶ್ವರ್‌ ಅಂತಿಮ ನಾಮಪತ್ರ ಸಲ್ಲಿಕೆ; ಭರ್ಜರಿ ಮೆರವಣಿಗೆ

4-shirva

Rain: ಕಟಪಾಡಿ-ಶಿರ್ವ ರಾಜ್ಯ ಹೆದ್ದಾರಿ; ಮೊದಲ ಮಳೆಯ ಅವಾಂತರ; ರಸ್ತೆ ಕೆಸರುಮಯ

Gadag ಬೆಳ್ಳಂಬೆಳಗ್ಗೆ ವರುಣಾರ್ಭಟ ಆರಂಭ; ಮುಂಗಾರು ನಿರೀಕ್ಷೆ ಹೆಚ್ಚಿಸಿದ ಅಶ್ವಿನಿ ಮಳೆ

Gadag ಬೆಳ್ಳಂಬೆಳಗ್ಗೆ ವರುಣಾರ್ಭಟ ಆರಂಭ; ಮುಂಗಾರು ನಿರೀಕ್ಷೆ ಹೆಚ್ಚಿಸಿದ ಅಶ್ವಿನಿ ಮಳೆ

Boat Capsizes In Odisha’s Mahanadi River

Mahanadi River Tragedy: ಮಗುಚಿದ 50 ಜನರಿದ್ದ ದೋಣಿ; ಇಬ್ಬರು ಸಾವು; ಎಂಟು ಮಂದಿ ನಾಪತ್ತೆ

Tamil Nadu BJP chief Annamalai demands re-poll due to missing voter names

Loksabha Election; ತಮಿಳುನಾಡಿನಲ್ಲಿ ಮರು ಮತದಾನಕ್ಕೆ ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ಆಗ್ರಹ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.