ಹೋಳಿ ಮೇಲೂ ಕೊರೊನಾ ಕರಿಛಾಯೆ

ರಾಸಾಯನಿಕ ಬಣ್ಣಗಳಿಂದ ದೂರವಿರಿಹೋಳಿ ಆಚರಿಸದಿದ್ದರೆ ಉತ್ತಮಶಾಂತಿ ಕಾಪಾಡಿ

Team Udayavani, Mar 9, 2020, 11:39 AM IST

9-March-3

ದಾವಣಗೆರೆ: ಕೊರೊನಾ ಹಿನ್ನೆಲೆಯಲ್ಲಿ ಹೋಳಿ ರಾಸಾಯನಿಕ ಬಣ್ಣಗಳಿಂದ ದೂರ ಉಳಿಯುವುದು ಉತ್ತಮ ಎಂದು ಮೇಯರ್‌ ಬಿ.ಜೆ. ಅಜಯ್‌ಕುಮಾರ್‌ ಸಲಹೆ ನೀಡಿದ್ದಾರೆ.

ಹೋಳಿ ಹಬ್ಬದ ಹಿನ್ನೆಲೆಯಲ್ಲಿ ಭಾನುವಾರ ನಡೆದ ನಾಗರಿಕ ಸೌಹಾರ್ದ ಸಭೆಯಲ್ಲಿ ಮಾತನಾಡಿದ ಅವರು, ಎಲ್ಲಾ ಕಡೆ ಕೊರೊನಾ ವೈರಸ್‌ ಬಗ್ಗೆ ಕೇಳಿ ಬರುತ್ತಿರುವ ಹಿನ್ನೆಲೆಯಲ್ಲಿ ರಾಸಾಯನಿಕ ಬಣ್ಣ, ಮಿಶ್ರಣಗಳ ಬದಲಿಗೆ ಅರಿಸಿನ, ಕುಂಕುಮ ಬಳಕೆ ಮಾಡಬೇಕು. ಕೊರೊನಾ ಹಿನ್ನೆಲೆಯಲ್ಲಿ ಹೋಳಿ ಆಡಲೇಬಾರದು ಎಂಬ ನಿರ್ಧಾರ ಮಾಡುವುದು ಇನ್ನೂ ಒಳಿತು. ಶಾಂತಿಯುತವಾಗಿ ಹೋಳಿ ಆಚರಿಸಬೇಕು ಎಂದು ಮನವಿ ಮಾಡಿದರು.

ಜಿಲ್ಲಾ ರಕ್ಷಣಾಧಿಕಾರಿ ಹನುಮಂತರಾಯ ಮಾತನಾಡಿ, ಹೋಳಿ ಹಬ್ಬದ ಸಂದರ್ಭದಲ್ಲಿ ಕಾನೂನು, ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಅಗತ್ಯ ಕ್ರಮ ತೆಗೆದುಕೊಳ್ಳಲಾಗಿದೆ. ಕಾಮದಹನವನ್ನು ಸೋಮವಾರ ರಾತ್ರಿ 10.30 ರ ಒಳಗೆ, ಹೋಳಿಯನ್ನ ಮಂಗಳವಾರ ಮಧ್ಯಾಹ್ನ 1ರ ಒಳಗೆ ಮುಗಿಸಬೇಕು ಎಂದರು.

ಈಚೆಗೆ ಕೇಳಿ ಬರುತ್ತಿರುವ ಕೊರೊನಾ, ಪಿಯು ಇತರೆ ಪರೀಕ್ಷೆ ಹಾಗೂ ಕೆರೆಗಳ ಸಂರಕ್ಷಣೆ ಹಿನ್ನೆಲೆಯಲ್ಲಿ ಯಾವುದೇ ಕಾರಣಕ್ಕೂ ವಿದ್ಯಾರ್ಥಿಗಳು, ಸಾರ್ವಜನಿಕರಿಗೆ ತೊಂದರೆ ಆಗದ ರೀತಿ ಹಬ್ಬ ಆಚರಿಸಬೇಕು ಎಂದು ಮನವಿ ಮಾಡಿದರು.

ಹೋಳಿ ಹಬ್ಬದ ನೆಪದಲ್ಲಿ ದಾವಣಗೆರೆ ನಗರದ ಕುಡಿಯುವ ನೀರಿನ ಮೂಲಗಳಾದ ಟಿವಿ ಸ್ಟೇಷನ್‌, ಕುಂದುವಾಡ ಕೆರೆಗಳ ನೀರು ಬಳಸಬಾರದು. ಕೆರೆ ನೀರು ಮಲಿನಗೊಳಿಸುವುದ ತಡೆಗಟ್ಟಲಿಕ್ಕೆ 25 ವಿಶೇಷ ವಾಹನ, ಪ್ರತಿ ಪೊಲೀಸ್‌ ಠಾಣೆಗೆ 13 ಗಸ್ತು ವಾಹನ, 2 ಇಂಟರ್‌ ಸೆಪ್ಟರ್‌, 10 ಹೈವೇ ಪೆಟ್ರೋಲಿಂಗ್‌ ವಾಹನ ನಿಯೋಜಿಸಲಾಗುವುದು ಎಂದು ತಿಳಿಸಿದರು.

ಅತೀ ವೇಗ, ಕರ್ಕಶವಾಗಿ ಬೈಕ್‌ ಓಡಿಸುವುದು, ರ್ಯಾಲಿ ನಡೆಸುವುದು ಕಂಡು ಬಂದರೆ ಸೂಕ್ತ ಕಾನೂನು ಕ್ರಮ ತೆಗೆದುಕೊಳ್ಳಲಾಗುವುದು ಎಂದು ತಿಳಿಸಿದರು.

ಕೊರೊನಾದಿಂದ ಜಗತ್ತಿನ ಬೇರೆ ದೇಶಗಳಲ್ಲಿ 3 ಸಾವಿರ ಜನರು ಸಾವನ್ನಪ್ಪಿದ್ದಾರೆ. ಹೆಲ್ಮೆಟ್‌ ಬಳಸದೆ ಜಿಲ್ಲೆಯಲ್ಲಿ ಪ್ರತಿ ವರ್ಷ 300
ಜನರು, ದೇಶದಲ್ಲಿ ಪ್ರತಿ ವರ್ಷ 13 ಲಕ್ಷ ಜನರು ಸಾಯುತ್ತಿದ್ದಾರೆ. ರೋಗ ತಡೆಗಟ್ಟಲು ಮಾಸ್ಕ್ ಧರಿಸುತ್ತಾರೆ. ರೋಗದ ಬಗ್ಗೆ ಇರುವ ಜಾಗೃತಿ ಹೆಲ್ಮೆಟ್‌ ಧರಿಸಲು ಕಂಡು ಬರುತ್ತಿಲ್ಲ ಎಂದರು.

ಹಂದಿ, ಬೀದಿನಾಯಿ ಹಾವಳಿ ತಡೆಗಟ್ಟುವ ಮತ್ತು ಸುಗಮ ಸಂಚಾರ ವ್ಯವಸ್ಥೆಗಾಗಿ ತ್ತೈಮಾಸಿಕ ಸಭೆ ನಡೆಸಲಾಗುವುದು. ದಾವಣಗೆರೆ ಸ್ಮಾರ್ಟ್‌ಸಿಟಿ ಆಗಿರುವುದರಿಂದ ಸ್ಮಾರ್ಟ್‌ಸಿಟಿ ಅಧಿಕಾರಿಗಳು, ಜಿಲ್ಲಾಧಿಕಾರಿ, ಆಯುಕ್ತರೊಂದಿಗೆ ಪ್ರತ್ಯೇಕ ಸಭೆ ನಡೆಸಲಾಗುವುದು. ಸಾರ್ವಜನಿಕರ ಸಲಹೆಗಳನ್ನು ಸಹ ಅಳವಡಿಸಲಾಗುವುದು ಎಂದು ತಿಳಿಸಿದರು.

ಮಹಾರಾಷ್ಟ್ರ ಇತರೆಡೆ ಡಿಜೆಯನ್ನ ಸಂಪೂರ್ಣವಾಗಿ ನಿಷೇಧಿಸಲಾಗಿದೆ. ಡಿಜೆ ಬಳಕೆಯಿಂದ ಗಂಭೀರ ಸಮಸ್ಯೆಗಳು ಉಂಟಾಗುವ ಹಿನ್ನೆಲೆಯಲ್ಲಿ ದಾವಣಗೆರೆಯಲ್ಲೂ ಬದಲಾವಣೆ ಆಗಬೇಕು. ಆ ನಿಟ್ಟಿನಲ್ಲಿ ಎಲ್ಲರೂ ಗಮನ ಹರಿಸಬೇಕು ಎಂದು ಸಲಹೆ ನೀಡಿದರು.

ಮಹಾನಗರ ಪಾಲಿಕೆ ಸದಸ್ಯರಾದ ಎ. ನಾಗರಾಜ್‌, ಸೋಗಿ ಶಾಂತಕುಮಾರ್‌, ಮಾಜಿ ಸದಸ್ಯ ಕೋಳಿ ಇಬ್ರಾಹಿಂ, ಸಾದಿಕ್‌ ಪೈಲ್ವಾನ್‌, ವೈ. ಮಲ್ಲೇಶ್‌, ಆವರಗೆರೆ ವಾಸು, ಹೆಚ್ಚುವರಿ ಅಧೀಕ್ಷಕ ಎಂ. ರಾಜೀವ್‌ ಇತರರು ಇದ್ದರು.

ಟಾಪ್ ನ್ಯೂಸ್

Award: ಅಮಿತಾಬ್ ಬಚ್ಚನ್, ಎಆರ್ ರೆಹಮಾನ್ ಗೆ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಗೌರವ

ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್

5-harikrishna

LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ

3-dinesh

33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್‌ ಗುಂಡೂರಾವ್‌

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್

Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್

Gayatri Siddeshwar: ಸಮಗ್ರ ನೀರಾವರಿ ಸೌಲಭ್ಯಕ್ಕೆ ಆದ್ಯತೆ; ಗಾಯಿತ್ರಿ

Gayatri Siddeshwar: ಸಮಗ್ರ ನೀರಾವರಿ ಸೌಲಭ್ಯಕ್ಕೆ ಆದ್ಯತೆ; ಗಾಯಿತ್ರಿ

Harihara ಬಿಜೆಪಿ ಶಾಸಕ ಬಿ.ಪಿ.ಹರೀಶ್‌ಗೆ ಜೀವ ಬೆದರಿಕೆ,

Harihara ಬಿಜೆಪಿ ಶಾಸಕ ಬಿ.ಪಿ.ಹರೀಶ್‌ಗೆ ಜೀವ ಬೆದರಿಕೆ

bp harish

Harihara; ಅಕ್ರಮ ಮರಳುಗಾರಿಕೆ ಮಾಹಿತಿ ನೀಡಿದ್ದಕ್ಕೆ ಬಿಜೆಪಿ ಶಾಸಕರಿಗೆ ಜೀವ ಬೆದರಿಕೆ

Lok Sabha Election: ಕಾಂಗ್ರೆಸ್‌ನಿಂದ ಜನರಿಗೆ ಸುಳ್ಳಿನ ಗ್ಯಾರಂಟಿ: ಗಾಯಿತ್ರಿ ಸಿದ್ದೇಶ್ವರ

Lok Sabha Election: ಕಾಂಗ್ರೆಸ್‌ನಿಂದ ಜನರಿಗೆ ಸುಳ್ಳಿನ ಗ್ಯಾರಂಟಿ: ಗಾಯಿತ್ರಿ ಸಿದ್ದೇಶ್ವರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್

Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್

4-annamalai

Modi ಕಲ್ಪನೆಯ ವಿಕಸಿತ ಭಾರತಕ್ಕಾಗಿ ಕೋಟ ಅವರನ್ನು ಗೆಲ್ಲಿಸೋಣ: ಅಣ್ಣಾ ಮಲೈ

Award: ಅಮಿತಾಬ್ ಬಚ್ಚನ್, ಎಆರ್ ರೆಹಮಾನ್ ಗೆ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಗೌರವ

ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್

5-harikrishna

LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ

3-dinesh

33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್‌ ಗುಂಡೂರಾವ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.