ಮತ್ತೆ ಎಂಟು ಜನರಿಗೆ ಕೋವಿಡ್
Team Udayavani, Jun 22, 2020, 11:19 AM IST
ದಾವಣಗೆರೆ: ದಾವಣಗೆರೆಯಲ್ಲಿ ಭಾನುವಾರ ಮತ್ತೆ ಎಂಟು ಜನರಲ್ಲಿ ಕೋವಿಡ್ ಸೋಂಕು ದೃಢಪಟ್ಟಿದೆ. ಕಳೆದ ಜೂ.17 ರಂದು ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಯಲ್ಲಿ ಕೋವಿಡ್ ನಿಂದ ಮೃತಪಟ್ಟಿರುವ 56 ವರ್ಷದ ವಯೋವೃದ್ಧೆ (ರೋಗಿ ನಂಬರ್ 7573) ಸಂಪರ್ಕದಿಂದ ಏಳು ಜನರಿಗೆ ಕೋವಿಡ್ ಮಹಾಮಾರಿ ವಕ್ಕರಿಸಿದೆ.
ಮೃತ ವಯೋವೃದ್ಧೆಯ ಸಂಪರ್ಕದಿಂದ 31 ವರ್ಷದ ವ್ಯಕ್ತಿ (ರೋಗಿ ನಂಬರ್ 8779), 58 ವರ್ಷದ ಮಹಿಳೆ (ರೋಗಿ ನಂಬರ್ 8801), 14 ವರ್ಷದ ಬಾಲಕ (ರೋಗಿ ನಂಬರ್ 8802), 56 ವರ್ಷದ ಮಹಿಳೆ (ರೋಗಿ ನಂಬರ್ 8803), 60 ವರ್ಷದ ವೃದ್ಧೆ (ರೋಗಿ ನಂಬರ್ 8804), 59 ವರ್ಷದ ವೃದ್ಧ (ರೋಗಿ ನಂಬರ್ 8805), 47 ವರ್ಷದ ವ್ಯಕ್ತಿ (ರೋಗಿ ನಂಬರ್ 8806)ಯಲ್ಲಿ ಸೋಂಕು ಕಾಣಿಸಿಕೊಂಡಿದೆ. ದಾವಣಗೆರೆಯ ಆನೆಕೊಂಡದ ಕಂಟೈನ್ ಮೆಂಟ್ ಝೋನ್ ಸಂಪರ್ಕದಿಂದ 39 ವರ್ಷದ ವ್ಯಕ್ತಿ (ರೋಗಿ ನಂಬರ್ 8800) ಸೋಂಕಿಗೆ ತುತ್ತಾಗಿದ್ದಾರೆ.
ದಾವಣಗೆರೆಯಲ್ಲಿ ಭಾನುವಾರ 14 ಜನರು ಸೇರಿ ಒಟ್ಟು 1,038 ಜನರು ಅವಲೋಕನದಲ್ಲಿದ್ದಾರೆ. 5 ಜನರು ಒಳಗೊಂಡಂತೆ 749 ಜನರು ಹೋಂ, 43 ಜನರು ಸಾಂಸ್ಥಿಕ ಕ್ವಾರಂಟೈನ್ನಲ್ಲಿದ್ದಾರೆ. 15 ಜನರು ಆಸ್ಪತ್ರೆಗೆ ದಾಖಲಾ ಗಿದ್ದಾರೆ. ಈವರೆಗೆ 735 ಜನರು ಆಸ್ಪತ್ರೆಯಲ್ಲಿದ್ದಾರೆ. ನಿನ್ನೆ 170 ಜನರ ಗಂಟಲು ದ್ರವ ಮಾದರಿ ಸಂಗ್ರಹಿಸಲಾಗಿದೆ.
438 ಜನರ ಗಂಟಲು ದ್ರವ ಮಾದರಿ ವರದಿ ನೆಗೆಟಿವ್ ಬಂದಿದೆ. ಇದುವರೆಗೆ ಕೋವಿಡ್ ಸಂಬಂಧಿತ ಪರೀಕ್ಷೆಗೆ ಕಳಿಸಲಾಗಿರುವ 14,310 ಗಂಟಲು ದ್ರವ ಮಾದರಿಯಲ್ಲಿ 13,188 ಮಾದರಿಗಳ ವರದಿ ನೆಗೆಟಿವ್ ಆಗಿದೆ. ಇನ್ನೂ 686 ಮಾದರಿಗಳ ವರದಿ ಬರಬೇಕಾಗಿದೆ. ಜಿಲ್ಲೆಯಲ್ಲಿ ಒಟ್ಟು 256 ಪ್ರಕರಣಗಳಲ್ಲಿ ಇಲ್ಲಿಯವರೆಗೆ 220 ಜನರು ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಏಳು ಜನರು ಮೃತಪಟ್ಟಿದ್ದು, 29 ಸಕ್ರಿಯ ಪ್ರಕರಣಗಳಿವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
BJP ಶ್ರೀರಾಮುಲು, ಗಾಯತ್ರಿ ಸಿದ್ದೇಶ್ವರ್ ಈಗಾಗಲೇ ಗೆದ್ದಿದ್ದಾರೆ: ಜನಾರ್ದನ ರೆಡ್ಡಿ
Davanagere; ಮುಖ್ಯಮಂತ್ರಿ ಜವಾಬ್ದಾರಿಯಿಂದ ಹೇಳಿಕೆ ನೀಡಬೇಕು: ಎಂ.ಪಿ. ರೇಣುಕಾಚಾರ್ಯ
Lok Sabha Election: ಮಠಾಧೀಶರ ಆಶೀರ್ವಾದ ಪಡೆದ ಬಿಜೆಪಿ ಅಭ್ಯರ್ಥಿ ಗಾಯತ್ರಿ ಸಿದ್ದೇಶ್ವರ
Panchamasali ಎಂಬ ಕಾರಣಕ್ಕೆ ಯತ್ನಾಳ್ಗೆ ಸಿಎಂ ಅವಕಾಶ ನಿರಾಕರಣೆ: ವಚನಾನಂದ ಶ್ರೀ
Election Campaign: ಕಾಂಗ್ರೆಸ್ನಲ್ಲಿಲ್ಲ ಮೋದಿಗೆ ಸಮಾನ ನಾಯಕತ್ವ: ಗಾಯಿತ್ರಿ ಸಿದ್ದೇಶ್ವರ
MUST WATCH
ಹೊಸ ಸೇರ್ಪಡೆ
Congress;ಕಾರ್ಕಳ ಕ್ಷೇತ್ರದಿಂದ 40 ಸಾವಿರ ಲೀಡ್ ಗೆ ಪ್ರಯತ್ನ: ಮುನಿಯಾಲು
Belgavi; ತಂದೆ ಮಾಡಿದ ಅಭಿವೃದ್ಧಿ ಕೆಲಸಗಳನ್ನು ಮುಂದುವರಿಸುತ್ತೇವೆ: ಶ್ರದ್ಧಾ ಶೆಟ್ಟರ್
ಮೂಡುಬೆಳ್ಳೆ : ವೈಭವದ ಹಸಿರುವಾಣಿ ಹೊರೆಕಾಣಿಕೆ ಮೆರವಣಿಗೆ
Mudigere; ಹುಲಿ ಹತ್ಯೆ ಆರೋಪದ ಮೇಲೆ ಇಬ್ಬರ ಬಂಧನ
BJP ಶ್ರೀರಾಮುಲು, ಗಾಯತ್ರಿ ಸಿದ್ದೇಶ್ವರ್ ಈಗಾಗಲೇ ಗೆದ್ದಿದ್ದಾರೆ: ಜನಾರ್ದನ ರೆಡ್ಡಿ