ಹೊಸದಾಗಿ 6 ಮಂದಿಗೆ ವಕ್ಕರಿಸಿದ ಮಹಾಮಾರಿ

ಮೂವರ ಸೋಂಕಿನ ಮೂಲ ಪತ್ತೆ ಹಚ್ಚುವುದೇ ಜಿಲ್ಲಾಡಳಿತ- ಆರೋಗ್ಯ ಇಲಾಖೆಗೆ ಸವಾಲು

Team Udayavani, Jun 1, 2020, 11:34 AM IST

01-June-03

ದಾವಣಗೆರೆ: ದಾವಣಗೆರೆಯಲ್ಲಿ ಭಾನುವಾರ ಹೊಸದಾಗಿ ಆರು ಜನರಲ್ಲಿ ಮಹಾಮಾರಿ ಕೋವಿಡ್ ಸೋಂಕು ಕಾಣಿಸಿಕೊಂಡಿದೆ. 27 ವರ್ಷದ ಹೆಣ್ಣುಮಗಳು (ರೋಗಿ ನಂಬರ್‌ 3070), 32 ವರ್ಷದ ಗಂಡು (ರೋಗಿ ನಂಬರ್‌ 3071) ಹಾಗೂ 22 ವರ್ಷದ ಯುವಕ ಸೋಂಕಿಗೆ ತುತ್ತಾಗಿದ್ದಾರೆ.

ಮೂವರಿಗೂ ಸೋಂಕು ಕಾಣಿಸಿಕೊಂಡಿರುವ ಮೂಲವನ್ನು ಪತ್ತೆ ಹಚ್ಚಲಾಗುತ್ತಿದೆ. ಮೂವರ ಟ್ರಾವೆಲ್‌ ಹಿಸ್ಟರಿ, ಯಾರ ಸಂಪರ್ಕ ಮತ್ತು ಹೇಗೆ ಸೋಂಕಿಗೆ ಒಳಗಾಗಿದ್ದಾರೆ ಎಂಬುದು ಜಿಲ್ಲಾಡಳಿತ ಮತ್ತು ಆರೋಗ್ಯ ಇಲಾಖೆಗೆ ಸವಾಲಾಗಿದೆ. 14 ವರ್ಷದ ಬಾಲಕಿಗೆ (ರೋಗಿ ನಂಬರ್‌ 3073) ರೋಗಿ ನಂಬರ್‌ 1251 ಸಂಪರ್ಕದಿಂದ ಸೋಂಕು ಕಾಣಿಸಿ ಕೊಂಡಿದೆ. ರೋಗಿ ನಂಬರ್‌ 1852ರ ಸಂಪರ್ಕದಿಂದ 12 ವರ್ಷದ ಬಾಲಕ (ರೋಗಿ ನಂಬರ್‌ 3216) ಹಾಗೂ ರೋಗಿ ನಂಬರ್‌ 1373 ಸಂಪರ್ಕದಿಂದ 31 ವರ್ಷದ ಮಹಿಳೆಯಲ್ಲಿ ಸೋಂಕು ಕಾಣಿಸಿಕೊಂಡಿದೆ.

ಕೋವಿಡ್‌-19 ಗುಣಮುಖರಾದ 17 ಜನರನ್ನು ಭಾನುವಾರ ಡಿಸ್ಚಾರ್ಜ್‌ ಮಾಡಲಾಗಿದೆ. ಜಿಲ್ಲಾ ಕೋವಿಡ್‌ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ರೋಗಿ ನಂಬರ್‌ 625, 1483, 1488, 1656, 1657, 1658, 1808, 1809, 1852, 1963, 1964, 1992, 2274, 2275, 2277, 2278 ಹಾಗೂ ರೋಗಿ ನಂಬರ್‌ 2281 ನಿನ್ನೆ ಆಸ್ಪತ್ರೆಯಿಂದ ಡಿಸ್ಚಾರ್ಜ್‌ ಆದವರು. ಜಿಲ್ಲಾ ಕೋವಿಡ್‌ ಆಸ್ಪತ್ರೆಯ ವೈದ್ಯರು, ವೈದ್ಯಕೀಯ ಸಿಬ್ಬಂದಿ ಚಪ್ಪಾಳೆ ತಟ್ಟುವ ಮೂಲಕ ಬೀಳ್ಕೊಟ್ಟರು.

ಭಾನುವಾರ ಐವರು ಒಳಗೊಂಡಂತೆ ಇದುವರೆಗೆ 860 ಮಂದಿ ಅವಲೋಕನದಲ್ಲಿದ್ದಾರೆ. ನಾಲ್ವರು ಸೇರಿ ಒಟ್ಟಾರೆ 606 ಮಂದಿ ಹೋಂ, 37 ಜನರು ಸಾಂಸ್ಥಿಕ ಕ್ವಾರಂಟೈನ್‌ನಲ್ಲಿ ಇದ್ದಾರೆ. 9 ಜನರು ಒಳಗೊಂಡಂತೆ 582 ಜನರು ಜಿಲ್ಲಾ ಕೋವಿಡ್‌ ಆಸ್ಪತ್ರೆಯಲ್ಲಿದ್ದಾರೆ. ಭಾನುವಾರ 171 ಜನರ ಗಂಟಲು ದ್ರವ ಮಾದರಿ ಸಂಗ್ರಹಿಸಲಾಗಿದೆ. ಇದುವರೆಗೆ ಕೋವಿಡ್‌ ಸಂಬಂಧಿತ ಪರೀಕ್ಷೆಗೆ ಕಳಿಸಲಾಗಿರುವ 8496 ಗಂಟಲು ದ್ರವ ಮಾದರಿಗಳಲ್ಲಿ 7489 ಮಾದರಿಗಳ ವರದಿ ನೆಗೆಟಿವ್‌ ಬಂದಿದೆ.

ನಿನ್ನೆ 164 ಜನರ ಗಂಟಲು ದ್ರವ ಮಾದರಿ ನೆಗೆಟಿವ್‌ ಎಂಬ ವರದಿ ಬಂದಿದೆ.ದಾವಣಗೆರೆ ಜಿಲ್ಲೆಯಲ್ಲಿ ಇದುವರೆಗೆ ಕೋವಿಡ್‌ ಸೋಂಕಿಗೆ ತುತ್ತಾಗಿರುವ 156 ಜನರಲ್ಲಿ ಒಟ್ಟು 121 ಜನರು ಗುಣಮುಖರಾಗಿ ಡಿಸ್ಚಾರ್ಜ್‌ ಆಗಿದ್ದಾರೆ. ನಾಲ್ವರು ಮೃತಪಟ್ಟಿದ್ದಾರೆ. 31 ಸಕ್ರಿಯ ಪ್ರಕರಣಗಳಿವೆ.

ಮೂರನೇ ಸ್ಥಾನದಲ್ಲಿದ್ದ ಜಿಲ್ಲೆ ಹತ್ತನೇ ಸ್ಥಾನಕ್ಕೆ
ಕೋವಿಡ್‌ ಪ್ರಕರಣಗಳ ಹೆಚ್ಚಳದಿಂದ ತತ್ತರಿಸಿ ಹೋಗಿದ್ದ ದಾವಣಗೆರೆಯಲ್ಲಿ ಸೋಂಕಿತರ ನೋಡ ನೋಡುತ್ತಿದ್ದಂತೆ ನೂರು ತಲುಪಿತ್ತು. ಕೆಲ ದಿನಗಳಲ್ಲಿ 150ರ ಗಡಿ ದಾಟಿದ್ದು ಜನರಲ್ಲಿ ಭಯ, ಆತಂಕಕ್ಕೆ ಕಾರಣವಾಗಿತ್ತು. ಮೇ 20 ರಂದು ಏಳು ಜನರು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಗೊಂಡ ನಂತರದಲ್ಲಿ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗುವ ಪರ್ವವೇ ಪ್ರಾರಂಭವಾಯಿತು. ದಿನದಿಂದ ದಿನಕ್ಕೆ ಡಿಸ್ಚಾರ್ಜ್‌ ಆಗುವರ ಸಂಖ್ಯೆ ಹೆಚ್ಚಾಗತೊಡಗಿತು. 8 ತಿಂಗಳು ಗಂಡು ಮಗು, ಸ್ಟಾಫ್‌ ನರ್ಸ್‌, ಸಂಚಾರಿ ಪೇದೆ, 73 ವರ್ಷದ ವಯೋವೃದ್ದರೊಬ್ಬರು ಒಳಗೊಂಡಂತೆ ಈವರೆಗೆ 121 ಜನರು ಬಿಡುಗಡೆಯಾಗಿರುವುದು ದಾವಣಗೆರೆಯಲ್ಲಿದ್ದ ಆತಂಕವನ್ನು ದೂರ ಮಾಡುತ್ತಿದೆ. ಸೋಂಕಿತ ಪ್ರಕರಣಗಳ ಪತ್ತೆ ಆಗುವ ಜೊತೆಗೆ ಡಿಸ್ಚಾರ್ಜ್‌ ಪ್ರಮಾಣವೂ ಹೆಚ್ಚುತ್ತಿದೆ. ಕೆಲವೇ ದಿನಗಳ ಅಂತರದಲ್ಲಿ ಹೇಗೆ ಸೋಂಕಿತರ ಪ್ರಮಾಣ ನೂರರ ಗಡಿ ದಾಟಿತ್ತೋ ಅದೇ ತೆರನಾಗಿ ಗುಣಮುಖರ ಸಂಖ್ಯೆಯೂ ಶತಕದ ಗಡಿ ದಾಟಿದೆ. ಇನ್ನು 31 ಸಕ್ರಿಯ ಪ್ರಕರಣಗಳಿವೆ. ಕೋವಿಡ್‌ ಸೋಂಕಿತರ ಪ್ರಮಾಣದಲ್ಲಿ ರಾಜ್ಯದಲ್ಲೇ ಮೂರನೇ ಸ್ಥಾನದಲ್ಲಿದ್ದ ದಾವಣಗೆರೆ ಜಿಲ್ಲೆ ಭಾನುವಾರ 10ನೇ ಸ್ಥಾನಕ್ಕೆ ಬಂದಿರುವುದು ಸಮಾಧಾನದ ವಿಚಾರ.

ಟಾಪ್ ನ್ಯೂಸ್

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

Dakshina Kannada ಅಭ್ಯರ್ಥಿಗಳ ದಿನಚರಿ

Dakshina Kannada ಅಭ್ಯರ್ಥಿಗಳ ದಿನಚರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-adasdsad

Davanagere; ಪ್ರಧಾನಿ ಮೋದಿ ರ್‍ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ

Lok Sabha Election: ಮೋದಿಗೆ ಪರ್ಯಾಯ ನಾಯಕ ಮತ್ತೊಬ್ಬರಿಲ್ಲ… ಗಾಯಿತ್ರಿ ಸಿದ್ದೇಶ್ವರ

Lok Sabha Election: ಮೋದಿಗೆ ಪರ್ಯಾಯ ನಾಯಕ ಮತ್ತೊಬ್ಬರಿಲ್ಲ… ಗಾಯಿತ್ರಿ ಸಿದ್ದೇಶ್ವರ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Vijayendra (2)

PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ

Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್

Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.