ಹೊಸದಾಗಿ 6 ಮಂದಿಗೆ ವಕ್ಕರಿಸಿದ ಮಹಾಮಾರಿ

ಮೂವರ ಸೋಂಕಿನ ಮೂಲ ಪತ್ತೆ ಹಚ್ಚುವುದೇ ಜಿಲ್ಲಾಡಳಿತ- ಆರೋಗ್ಯ ಇಲಾಖೆಗೆ ಸವಾಲು

Team Udayavani, Jun 1, 2020, 11:34 AM IST

01-June-03

ದಾವಣಗೆರೆ: ದಾವಣಗೆರೆಯಲ್ಲಿ ಭಾನುವಾರ ಹೊಸದಾಗಿ ಆರು ಜನರಲ್ಲಿ ಮಹಾಮಾರಿ ಕೋವಿಡ್ ಸೋಂಕು ಕಾಣಿಸಿಕೊಂಡಿದೆ. 27 ವರ್ಷದ ಹೆಣ್ಣುಮಗಳು (ರೋಗಿ ನಂಬರ್‌ 3070), 32 ವರ್ಷದ ಗಂಡು (ರೋಗಿ ನಂಬರ್‌ 3071) ಹಾಗೂ 22 ವರ್ಷದ ಯುವಕ ಸೋಂಕಿಗೆ ತುತ್ತಾಗಿದ್ದಾರೆ.

ಮೂವರಿಗೂ ಸೋಂಕು ಕಾಣಿಸಿಕೊಂಡಿರುವ ಮೂಲವನ್ನು ಪತ್ತೆ ಹಚ್ಚಲಾಗುತ್ತಿದೆ. ಮೂವರ ಟ್ರಾವೆಲ್‌ ಹಿಸ್ಟರಿ, ಯಾರ ಸಂಪರ್ಕ ಮತ್ತು ಹೇಗೆ ಸೋಂಕಿಗೆ ಒಳಗಾಗಿದ್ದಾರೆ ಎಂಬುದು ಜಿಲ್ಲಾಡಳಿತ ಮತ್ತು ಆರೋಗ್ಯ ಇಲಾಖೆಗೆ ಸವಾಲಾಗಿದೆ. 14 ವರ್ಷದ ಬಾಲಕಿಗೆ (ರೋಗಿ ನಂಬರ್‌ 3073) ರೋಗಿ ನಂಬರ್‌ 1251 ಸಂಪರ್ಕದಿಂದ ಸೋಂಕು ಕಾಣಿಸಿ ಕೊಂಡಿದೆ. ರೋಗಿ ನಂಬರ್‌ 1852ರ ಸಂಪರ್ಕದಿಂದ 12 ವರ್ಷದ ಬಾಲಕ (ರೋಗಿ ನಂಬರ್‌ 3216) ಹಾಗೂ ರೋಗಿ ನಂಬರ್‌ 1373 ಸಂಪರ್ಕದಿಂದ 31 ವರ್ಷದ ಮಹಿಳೆಯಲ್ಲಿ ಸೋಂಕು ಕಾಣಿಸಿಕೊಂಡಿದೆ.

ಕೋವಿಡ್‌-19 ಗುಣಮುಖರಾದ 17 ಜನರನ್ನು ಭಾನುವಾರ ಡಿಸ್ಚಾರ್ಜ್‌ ಮಾಡಲಾಗಿದೆ. ಜಿಲ್ಲಾ ಕೋವಿಡ್‌ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ರೋಗಿ ನಂಬರ್‌ 625, 1483, 1488, 1656, 1657, 1658, 1808, 1809, 1852, 1963, 1964, 1992, 2274, 2275, 2277, 2278 ಹಾಗೂ ರೋಗಿ ನಂಬರ್‌ 2281 ನಿನ್ನೆ ಆಸ್ಪತ್ರೆಯಿಂದ ಡಿಸ್ಚಾರ್ಜ್‌ ಆದವರು. ಜಿಲ್ಲಾ ಕೋವಿಡ್‌ ಆಸ್ಪತ್ರೆಯ ವೈದ್ಯರು, ವೈದ್ಯಕೀಯ ಸಿಬ್ಬಂದಿ ಚಪ್ಪಾಳೆ ತಟ್ಟುವ ಮೂಲಕ ಬೀಳ್ಕೊಟ್ಟರು.

ಭಾನುವಾರ ಐವರು ಒಳಗೊಂಡಂತೆ ಇದುವರೆಗೆ 860 ಮಂದಿ ಅವಲೋಕನದಲ್ಲಿದ್ದಾರೆ. ನಾಲ್ವರು ಸೇರಿ ಒಟ್ಟಾರೆ 606 ಮಂದಿ ಹೋಂ, 37 ಜನರು ಸಾಂಸ್ಥಿಕ ಕ್ವಾರಂಟೈನ್‌ನಲ್ಲಿ ಇದ್ದಾರೆ. 9 ಜನರು ಒಳಗೊಂಡಂತೆ 582 ಜನರು ಜಿಲ್ಲಾ ಕೋವಿಡ್‌ ಆಸ್ಪತ್ರೆಯಲ್ಲಿದ್ದಾರೆ. ಭಾನುವಾರ 171 ಜನರ ಗಂಟಲು ದ್ರವ ಮಾದರಿ ಸಂಗ್ರಹಿಸಲಾಗಿದೆ. ಇದುವರೆಗೆ ಕೋವಿಡ್‌ ಸಂಬಂಧಿತ ಪರೀಕ್ಷೆಗೆ ಕಳಿಸಲಾಗಿರುವ 8496 ಗಂಟಲು ದ್ರವ ಮಾದರಿಗಳಲ್ಲಿ 7489 ಮಾದರಿಗಳ ವರದಿ ನೆಗೆಟಿವ್‌ ಬಂದಿದೆ.

ನಿನ್ನೆ 164 ಜನರ ಗಂಟಲು ದ್ರವ ಮಾದರಿ ನೆಗೆಟಿವ್‌ ಎಂಬ ವರದಿ ಬಂದಿದೆ.ದಾವಣಗೆರೆ ಜಿಲ್ಲೆಯಲ್ಲಿ ಇದುವರೆಗೆ ಕೋವಿಡ್‌ ಸೋಂಕಿಗೆ ತುತ್ತಾಗಿರುವ 156 ಜನರಲ್ಲಿ ಒಟ್ಟು 121 ಜನರು ಗುಣಮುಖರಾಗಿ ಡಿಸ್ಚಾರ್ಜ್‌ ಆಗಿದ್ದಾರೆ. ನಾಲ್ವರು ಮೃತಪಟ್ಟಿದ್ದಾರೆ. 31 ಸಕ್ರಿಯ ಪ್ರಕರಣಗಳಿವೆ.

ಮೂರನೇ ಸ್ಥಾನದಲ್ಲಿದ್ದ ಜಿಲ್ಲೆ ಹತ್ತನೇ ಸ್ಥಾನಕ್ಕೆ
ಕೋವಿಡ್‌ ಪ್ರಕರಣಗಳ ಹೆಚ್ಚಳದಿಂದ ತತ್ತರಿಸಿ ಹೋಗಿದ್ದ ದಾವಣಗೆರೆಯಲ್ಲಿ ಸೋಂಕಿತರ ನೋಡ ನೋಡುತ್ತಿದ್ದಂತೆ ನೂರು ತಲುಪಿತ್ತು. ಕೆಲ ದಿನಗಳಲ್ಲಿ 150ರ ಗಡಿ ದಾಟಿದ್ದು ಜನರಲ್ಲಿ ಭಯ, ಆತಂಕಕ್ಕೆ ಕಾರಣವಾಗಿತ್ತು. ಮೇ 20 ರಂದು ಏಳು ಜನರು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಗೊಂಡ ನಂತರದಲ್ಲಿ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗುವ ಪರ್ವವೇ ಪ್ರಾರಂಭವಾಯಿತು. ದಿನದಿಂದ ದಿನಕ್ಕೆ ಡಿಸ್ಚಾರ್ಜ್‌ ಆಗುವರ ಸಂಖ್ಯೆ ಹೆಚ್ಚಾಗತೊಡಗಿತು. 8 ತಿಂಗಳು ಗಂಡು ಮಗು, ಸ್ಟಾಫ್‌ ನರ್ಸ್‌, ಸಂಚಾರಿ ಪೇದೆ, 73 ವರ್ಷದ ವಯೋವೃದ್ದರೊಬ್ಬರು ಒಳಗೊಂಡಂತೆ ಈವರೆಗೆ 121 ಜನರು ಬಿಡುಗಡೆಯಾಗಿರುವುದು ದಾವಣಗೆರೆಯಲ್ಲಿದ್ದ ಆತಂಕವನ್ನು ದೂರ ಮಾಡುತ್ತಿದೆ. ಸೋಂಕಿತ ಪ್ರಕರಣಗಳ ಪತ್ತೆ ಆಗುವ ಜೊತೆಗೆ ಡಿಸ್ಚಾರ್ಜ್‌ ಪ್ರಮಾಣವೂ ಹೆಚ್ಚುತ್ತಿದೆ. ಕೆಲವೇ ದಿನಗಳ ಅಂತರದಲ್ಲಿ ಹೇಗೆ ಸೋಂಕಿತರ ಪ್ರಮಾಣ ನೂರರ ಗಡಿ ದಾಟಿತ್ತೋ ಅದೇ ತೆರನಾಗಿ ಗುಣಮುಖರ ಸಂಖ್ಯೆಯೂ ಶತಕದ ಗಡಿ ದಾಟಿದೆ. ಇನ್ನು 31 ಸಕ್ರಿಯ ಪ್ರಕರಣಗಳಿವೆ. ಕೋವಿಡ್‌ ಸೋಂಕಿತರ ಪ್ರಮಾಣದಲ್ಲಿ ರಾಜ್ಯದಲ್ಲೇ ಮೂರನೇ ಸ್ಥಾನದಲ್ಲಿದ್ದ ದಾವಣಗೆರೆ ಜಿಲ್ಲೆ ಭಾನುವಾರ 10ನೇ ಸ್ಥಾನಕ್ಕೆ ಬಂದಿರುವುದು ಸಮಾಧಾನದ ವಿಚಾರ.

ಟಾಪ್ ನ್ಯೂಸ್

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

1-aaasdeqweqw

India-Sri Lanka ಟಿ20 ಸರಣಿ ಇಂದಿನಿಂದ : ಸೂರ್ಯ, ಗಂಭೀರ್‌ ಯುಗಾರಂಭ

1-hockey

Paris Olympics ಹಾಕಿ ಕಂಚಿನಿಂದಾಚೆ ಮಿಂಚಲಿ ಭಾರತ

modi (4)

NITI Aayog ಸಭೆ ಇಂದು; “ವಿಕಸಿತ ಭಾರತ’ದ ಬಗ್ಗೆ ಚರ್ಚೆ: 7 ರಾಜ್ಯಗಳಿಂದ ಬಹಿಷ್ಕಾರ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Davanagere: ಕಾಳಸಂತೆಯಲ್ಲಿ ಮಾರಾಟ ಮಾಡಲು ಅಕ್ರಮವಾಗಿ ರಾಗಿ ಸಂಗ್ರಹ; ಓರ್ವ ಬಂಧನ

Davanagere: ಕಾಳಸಂತೆಯಲ್ಲಿ ಮಾರಾಟ ಮಾಡಲು ಅಕ್ರಮವಾಗಿ ರಾಗಿ ಸಂಗ್ರಹ; ಓರ್ವ ಬಂಧನ

13-davangere

Davanagere: ಕಾರು- ಬಸ್ ಅಪಘಾತ; ಸ್ಥಳದಲ್ಲೇ ಮೃತಪಟ್ಟ ಕ್ರೈಸ್ತ ಧರ್ಮಗುರು

drowned

Harihara; ಕೊಚ್ಚಿ ಹೋಗಿದ್ದ ಯುವಕನ ಶವ 2 ಕಿ.ಮೀ ದೂರದಲ್ಲಿ ಪತ್ತೆ

Renukacharya ಎಲ್ಲ ಸರ್ಕಾರಗಳ ಅವಧಿಯ ಭ್ರಷ್ಟಾಚಾರ ತನಿಖೆಯಾಗಲಿ

Renukacharya ಎಲ್ಲ ಸರ್ಕಾರಗಳ ಅವಧಿಯ ಭ್ರಷ್ಟಾಚಾರ ತನಿಖೆಯಾಗಲಿ

BJP: ದಾವಣಗೆರೆಯಲ್ಲಿ ಬಿಜೆಪಿ ಸೋಲಿಗೆ ರೇಣುಕಾಚಾರ್ಯ ತಂಡವೇ ಕಾರಣ: ಸ್ವಪಕ್ಷೀಯರ ಆರೋಪ

BJP: ದಾವಣಗೆರೆಯಲ್ಲಿ ಬಿಜೆಪಿ ಸೋಲಿಗೆ ರೇಣುಕಾಚಾರ್ಯ ತಂಡವೇ ಕಾರಣ: ಸ್ವಪಕ್ಷೀಯರ ಆರೋಪ

MUST WATCH

udayavani youtube

ಸರ್ಕಾರದ ವಿರುದ್ಧ ವಿಧಾನಸಭೆಯಲ್ಲಿ ಬಿಜೆಪಿ-JDS ಶಾಸಕರಿಂದ ಭಜನೆ

udayavani youtube

ಶಿರೂರು ಗುಡ್ಡಕುಸಿತ; ಕಾಣೆಯಾದವರ ಹುಡುಕಾಟಕ್ಕೆ ಡ್ರೋನ್ ಬಳಸಿ ಕಾರ್ಯಾಚರಣೆ

udayavani youtube

ಕರ್ಮಫಲ ಶಿಕ್ಷಣದಿಂದ ಆತ್ಮೋನ್ನತಿ

udayavani youtube

ತಪ್ತ ಮುದ್ರಾ ಧಾರಣೆ ವಿಶೇಷ ಮಹತ್ವದ್ದು, ಯಾಕೆ?

udayavani youtube

ಬಾಳೆಯಿಂದ ವಾರ್ಷಿಕ 50-60 ಲಕ್ಷ ರೂ. ಆದಾಯ

ಹೊಸ ಸೇರ್ಪಡೆ

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

1-aaasdeqweqw

India-Sri Lanka ಟಿ20 ಸರಣಿ ಇಂದಿನಿಂದ : ಸೂರ್ಯ, ಗಂಭೀರ್‌ ಯುಗಾರಂಭ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.