19 ಖಾಸಗಿ ಆಸ್ಪತ್ರೆಗಳಲ್ಲಿ ಕೋವಿಡ್ ಚಿಕಿತ್ಸೆ

ಸೋಂಕಿತರ ಸಂಖ್ಯೆ ಹೆಚ್ಚಾದಲ್ಲಿ ತೊಂದರೆಯಾಗದಿರಲೆಂದು ಮುಂಜಾಗ್ರತಾ ಕ್ರಮ

Team Udayavani, Jun 22, 2020, 11:29 AM IST

22-June-03

ದಾವಣಗೆರೆ: ಮುಂಜಾಗ್ರತಾ ಕ್ರಮವಾಗಿ ಮಹಾಮಾರಿ ಕೋವಿಡ್ ಚಿಕಿತ್ಸೆಗಾಗಿ ರಾಜ್ಯ ಸರ್ಕಾರ ಜಿಲ್ಲೆಯ 19 ಖಾಸಗಿ ಆಸ್ಪತ್ರೆಗಳ ಪಟ್ಟಿ ಸಿದ್ಧ ಮಾಡಿಟ್ಟುಕೊಂಡಿದೆ.

ಮಹಾಮಾರಿ ಕೋವಿಡ್ ಸೋಂಕಿತರ ಪ್ರಮಾಣ ಹೆಚ್ಚಾಗಿ ಕೋವಿಡ್‌ ಮತ್ತು ನಿಗದಿತ ಕೋವಿಡ್‌ ಆಸ್ಪತ್ರೆಯಲ್ಲಿ ಹಾಸಿಗೆ ಒಳಗೊಂಡಂತೆ ಅಗತ್ಯ ಚಿಕಿತ್ಸಾ ಸೌಲಭ್ಯದ ಕೊರತೆ ಉಂಟಾದಲ್ಲಿ ಮುಂಜಾಗ್ರತಾ ಕ್ರಮವಾಗಿ ಆರೋಗ್ಯ ಕರ್ನಾಟಕ ಮತ್ತು ಆಯುಷ್ಮಾನ್‌ ಭಾರತ್‌ ಯೋಜನೆಯಡಿ ನೋಂದಾಯಿಸಿಕೊಂಡಿರುವ ಜಿಲ್ಲೆಯ 19 ಆಸ್ಪತ್ರೆಗಳನ್ನು ಆಯ್ಕೆ ಮಾಡಿಕೊಳ್ಳಲಾಗಿದೆ.

ಶಾಮನೂರು ರಸ್ತೆಯಲ್ಲಿನ ಸುಕ್ಷೇಮ ಆಸ್ಪತ್ರೆ, ಎಂಸಿಸಿ ಬಿ ಬ್ಲಾಕ್‌ 2ನೇ ಮುಖ್ಯ ರಸ್ತೆಯಲ್ಲಿನ ಕಡ್ಲಿ ನಾಗಮ್ಮ ಮೆಮೋರಿಯಲ್‌ ಆಸ್ಪತ್ರೆ, ಪಿ.ಜೆ. ಬಡಾವಣೆಯಲ್ಲಿನ ಸುಚೇತನ ಆಸ್ಪತ್ರೆ, ಅರುಣಾ ಚಿತ್ರಮಂದಿರ ರಸ್ತೆಯಲ್ಲಿನ ಸ್ಪಂದನಾ ಯೂರಿಯಾಲಜಿ ಸೆಂಟರ್‌, ಪಿ.ಜೆ. ಬಡಾವಣೆಯ 5ನೇ ಕ್ರಾಸ್‌ನಲ್ಲಿರುವ ಯೂನಿಟಿ ಹೆಲ್ತ್‌ ಸೆಂಟರ್‌, ಹಳೆ ಪಿಬಿ ರಸ್ತೆಯಲ್ಲಿನ ವಿಶ್ವಾರಾಧ್ಯ ಕ್ಯಾನ್ಸರ್‌ ಆಸ್ಪತ್ರೆ, ಹರಿಹರ ತಾಲೂಕಿನ ಮಲೇಬೆನ್ನೂರುನ ದರ್ಗಾ ರಸ್ತೆಯಲ್ಲಿ ಇರುವ ಅಪೂರ್ವ ಮಲ್ಪಿಸ್ಪೆಷಾಲಿಟಿ ಆಸ್ಪತ್ರೆ, ದಾವಣಗೆರೆಯ ಬಾಪೂಜಿ ಆಸ್ಪತ್ರೆ, ಅಕ್ಕಮಹಾದೇವಿ ರಸ್ತೆಯ ಸಿಟಿ ಸೆಂಟ್ರಲ್‌ ಆಸ್ಪತ್ರೆ, ನಿಜಲಿಂಗಪ್ಪ ಬಡಾವಣೆಯ ರಿಂಗ್‌ ರಸ್ತೆ ಸಮೀಪದ ಸಂಜೀವಿನಿ ಆಸ್ಪತ್ರೆ, ಎಂಸಿಸಿ ಬಿ ಬ್ಲಾಕ್‌ನ ಆಶ್ರಯ ಹಾಸ್ಪಿಟಲ್‌, ಎಂಸಿಸಿ ಬಿ ಬ್ಲಾಕ್‌ನ ನಯನ ಹಾಸ್ಪಿಟಲ್‌, ನಾರಾಯಣ ನೇತ್ರಾಲಯ, ಹದಡಿ ರಸ್ತೆಯ ಆರೈಕೆ ಸೂಪರ್‌ ಸ್ಪೆಷಾಲಿಟಿ ಆಸ್ಪತ್ರೆ, ಬಾಪೂಜಿ ಮಕ್ಕಳ ಆರೋಗ್ಯ ಕೇಂದ್ರ, ಸುಶೃತ ಐ ಕ್ಲಿನಿಕ್‌, ಎಸ್‌.ಎಸ್‌. ಹೈಟೆಕ್‌ ಆಸ್ಪತ್ರೆ ಮತ್ತು ಸಂಶೋಧನಾ ಕೇಂದ್ರ, ಪಿ.ಜೆ. ಬಡಾವಣೆಯ 3ನೇ ಮುಖ್ಯ ರಸ್ತೆ 8 ನೇ ಕ್ರಾಸ್‌ನಲ್ಲಿರುವ ಗುರುಶ್ರೀ ಆಸ್ಪತ್ರೆ ಮತ್ತು ಎಸ್‌.ಎಸ್‌. ನಾರಾಯಣ ಹೃದಯಾಲಯಗಳ ಪಟ್ಟಿ ಮಾಡಿದೆ.

ರಾಜ್ಯ ಸರ್ಕಾರ ಪಟ್ಟಿ ಮಾಡಿರುವ ಆಸ್ಪತ್ರೆಗಳ ಪೈಕಿ ಬಾಪೂಜಿ ಆಸ್ಪತ್ರೆ, ವಿಶ್ವಾರಾಧ್ಯ ಕ್ಯಾನ್ಸರ್‌ ಆಸ್ಪತ್ರೆ, ಆರೈಕೆ ಸೂಪರ್‌ ಸ್ಪೆಷಾಲಿಟಿ ಆಸ್ಪತ್ರೆ, ಎಸ್‌.ಎಸ್‌. ಹೈಟೆಕ್‌ ಆಸ್ಪತ್ರೆ ಮತ್ತು ಸಂಶೋಧನಾ ಕೇಂದ್ರದ ಜೊತೆಗೆ ದೊಡ್ಡಬಾತಿಯ ತಪೋವನ ಆಸ್ಪತ್ರೆಯನ್ನ ಈಗಾಗಲೇ ಜಿಲ್ಲಾಡಳಿತ ಮುಂಜಾಗ್ರತಾ ಕ್ರಮವಾಗಿ ಕೋವಿಡ್‌-19 ಚಿಕಿತ್ಸೆಗೆ ಸಜ್ಜುಗೊಳಿಸಿದೆ.

ದಾವಣಗೆರೆ ಜಿಲ್ಲೆಯಲ್ಲಿ ಮಾರ್ಚ್‌ ಅಂತ್ಯಕ್ಕೆ ಮೊದಲ ಬಾರಿಗೆ ಕೋವಿಡ್ ಸೋಂಕು ಕಾಣಿಸಿಕೊಂಡ ನಂತರ ಇಬ್ಬರಲ್ಲಿ ಕಾಣಿಸಿಕೊಂಡಿತ್ತು. ಮೂವರು ಗುಣಮುಖರಾದ ನಂತರ 32 ದಿನಗಳ ಕಾಲ ಯಾವುದೇ ಸೋಂಕಿನ ಪ್ರಕರಣ ವರದಿ ಆಗಿರಲಿಲ್ಲ. ಆ ಅವಧಿಯಲ್ಲಿ ಜಿಲ್ಲಾಡಳಿತ ಜಿಲ್ಲಾ ಚಿಗಟೇರಿ ಆಸ್ಪತ್ರೆಯಲ್ಲಿ 80 ಹಾಸಿಗೆಯ ವಿಭಾಗವನ್ನ ಕೋವಿಡ್‌ ಆಸ್ಪತ್ರೆಯನ್ನಾಗಿ ಹಾಗೂ 150 ಹಾಸಿಗೆ ವಿಭಾಗವನ್ನು ನಿಗದಿತ ಕೋವಿಡ್‌ ಆಸ್ಪತ್ರೆಯನ್ನಾಗಿ ಮಾರ್ಪಡಿಸಿ ಚಿಕಿತ್ಸೆಗೆ ಎಲ್ಲಾ ಅಗತ್ಯ ಸಿದ್ಧತೆ ಮಾಡಿಕೊಂಡಿದ್ದು, ಚಿಕಿತ್ಸೆ ನೀಡಲಾಗುತ್ತಿದೆ. ಜಿಲ್ಲಾ ಆಸ್ಪತ್ರೆ ಜೊತೆಗೆ ಬಾಪೂಜಿ, ಎಸ್‌.ಎಸ್‌. ಹೈಟೆಕ್‌ ಆಸ್ಪತ್ರೆಯಲ್ಲೂ ಅಗತ್ಯ ಸಿದ್ಧತೆ ಮಾಡಿಕೊಂಡಿದೆ. ನಾಲ್ಕು ತಾಲೂಕು ಕೇಂದ್ರಗಳಲ್ಲೂ 10 ಐಸೋಲೇಷನ್‌ ವಾರ್ಡ್‌ ಸಿದ್ಧಪಡಿಸಿದೆ.

ಸರಿ ಸುಮಾರು 32 ದಿನಗಳ ನಂತರ ಏ. 29 ರಂದು ಜಿಲ್ಲೆಯಲ್ಲಿ ಪ್ರಥಮ ಕೋವಿಡ್ ಸೋಂಕಿನ ಪ್ರಕರಣ ದೃಢಪಟ್ಟಿತ್ತು. ನೋಡ ನೋಡುತ್ತಿದ್ದಂತೆ ಸೋಂಕಿನ ಪ್ರಮಾಣ ಜರ್ರನೆ ಏರಿತ್ತು. ಮೇ 19ರ ವೇಳೆಗೆ 109 ಸಕ್ರಿಯ ಪ್ರಕರಣಗಳಿದ್ದವು ಎಂದರೆ ಎಷ್ಟು ವೇಗವಾಗಿ ಕೋವಿಡ್ ವೇಗವಾಗಿ ವ್ಯಾಪಿಸಿತ್ತು ಎಂಬುದರ ಲೆಕ್ಕ ಹಾಕಬಹುದು. ಮೇ 20 ರಂದು ಪ್ರಥಮ ಬಾರಿಗೆ 7 ಜನ ಸೋಂಕಿತರು ಜಿಲ್ಲಾ ಕೋವಿಡ್‌ ಆಸ್ಪತ್ರೆಯಿಂದ ಬಿಡುಗಡೆಯಾದರು. ಅಲ್ಲಿಂದ ಡಿಸ್ಚಾರ್ಜ್‌ ಆಗುವಂತಹವರ ಸಂಖ್ಯೆಯೂ ಹೆಚ್ಚಾಗತೊಡಗಿತು. ಈಗ ಡಿಸ್ಚಾರ್ಜ್‌ ಆದವರ ಸಂಖ್ಯೆಯೇ 220. ಸಕ್ರಿಯ ಪ್ರಕರಣಗಳ ಸಂಖ್ಯೆ 29 ಇದೆ. ಹಾಗಾಗಿ ಸದ್ಯಕ್ಕಂತೂ ಖಾಸಗಿ ಆಸ್ಪತ್ರೆಗೆ ಮೊರೆ ಹೋಗಬೇಕಾದ ಪ್ರಮೇಯ ಕಂಡು ಬರುತ್ತಿಲ್ಲ.

ಸದ್ಯ ಅಂತಹ ಸ್ಥಿತಿ ಇಲ್ಲ
ದಾವಣಗೆರೆ ಜಿಲ್ಲೆಯಲ್ಲಿ 29 ಸಕ್ರಿಯ ಪ್ರಕರಣಗಳಿವೆ. ಕೋವಿಡ್‌ ಮತ್ತು ನಿಗದಿತ ಕೋವಿಡ್‌ ಆಸ್ಪತ್ರೆಯಲ್ಲಿ 230 ಹಾಸಿಗೆ ಸಿದ್ಧಪಡಿಸಲಾಗಿದೆ. ತಾಲೂಕು ಕೇಂದ್ರಗಳಲ್ಲಿ ಒಟ್ಟಾರೆ 40 ಐಸೋಲೇಷನ್‌ ಬೆಡ್‌ಗಳಿವೆ. ಕೊರೊನಾ ನಿಯಂತ್ರಣಕ್ಕೆ ಎಲ್ಲಾ ಅಗತ್ಯ ಮತ್ತು ಸೂಕ್ತ ಮುಂಜಾಗ್ರತಾ ಕ್ರಮ ತೆಗೆದುಕೊಳ್ಳಲಾಗುತ್ತಿದೆ. ಇಡೀ ಜಿಲ್ಲಾಡಳಿತ ಒಂದು ತಂಡವಾಗಿ ಕೆಲಸ ಮಾಡುತ್ತಿದೆ. ಸದ್ಯಕ್ಕಂತೂ ಕೊರೊನಾ ಚಿಕಿತ್ಸೆಗೆ ಖಾಸಗಿ ಆಸ್ಪತ್ರೆಗಳಿಗೆ ರೆಫರ್‌
ಮಾಡುವ ವಾತಾವರಣವೇ ಇಲ್ಲ. ಮುಂದೆಯೂ ಅಂತಹ ವಾತಾವರಣ ಬರಲಾರದು ಎಂಬ ವಿಶ್ವಾಸವೂ ಇದೆ. ಆ ರೀತಿ ಆಗದೇ ಇರಲಿ ಎಂಬ ಆಶಯದೊಂದಿಗೆ ಕೆಲಸ ಮಾಡುತ್ತಿದ್ದೇವೆ ಎಂದು ಜಿಲ್ಲಾಧಿಕಾರಿ ಮಹಾಂತೇಶ್‌ ಬೀಳಗಿ ತಿಳಿಸಿದರು.

ರಾ. ರವಿಬಾಬು

ಟಾಪ್ ನ್ಯೂಸ್

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

19-uv-fusion

Vote: ಬನ್ನಿ ಉತ್ತಮ ನಾಯಕನನ್ನು ಆಯ್ಕೆ ಮಾಡೋಣ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

18-aranthodu

Aranthodu: ಜೀಪ್-ಬೈಕ್ ಅಪಘಾತ; ಗಂಭೀರ ಗಾಯಗೊಂಡಿದ್ದ ಬೈಕ್ ಸವಾರ ಸಾವು

17-voting

Vote: ಮತದಾನದ ಮಹತ್ವ

Siddaramaiah

Haveri; ದೇಶ ಬಿಡುತ್ತೇನೆ ಎಂದಿದ್ದ ದೇವೇಗೌಡರು ಮೋದಿ ಜತೆ ಸೇರಿದ್ದಾರೆ: ಸಿದ್ದರಾಮಯ್ಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್

Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್

Gayatri Siddeshwar: ಸಮಗ್ರ ನೀರಾವರಿ ಸೌಲಭ್ಯಕ್ಕೆ ಆದ್ಯತೆ; ಗಾಯಿತ್ರಿ

Gayatri Siddeshwar: ಸಮಗ್ರ ನೀರಾವರಿ ಸೌಲಭ್ಯಕ್ಕೆ ಆದ್ಯತೆ; ಗಾಯಿತ್ರಿ

Harihara ಬಿಜೆಪಿ ಶಾಸಕ ಬಿ.ಪಿ.ಹರೀಶ್‌ಗೆ ಜೀವ ಬೆದರಿಕೆ,

Harihara ಬಿಜೆಪಿ ಶಾಸಕ ಬಿ.ಪಿ.ಹರೀಶ್‌ಗೆ ಜೀವ ಬೆದರಿಕೆ

bp harish

Harihara; ಅಕ್ರಮ ಮರಳುಗಾರಿಕೆ ಮಾಹಿತಿ ನೀಡಿದ್ದಕ್ಕೆ ಬಿಜೆಪಿ ಶಾಸಕರಿಗೆ ಜೀವ ಬೆದರಿಕೆ

Lok Sabha Election: ಕಾಂಗ್ರೆಸ್‌ನಿಂದ ಜನರಿಗೆ ಸುಳ್ಳಿನ ಗ್ಯಾರಂಟಿ: ಗಾಯಿತ್ರಿ ಸಿದ್ದೇಶ್ವರ

Lok Sabha Election: ಕಾಂಗ್ರೆಸ್‌ನಿಂದ ಜನರಿಗೆ ಸುಳ್ಳಿನ ಗ್ಯಾರಂಟಿ: ಗಾಯಿತ್ರಿ ಸಿದ್ದೇಶ್ವರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಧಾರವಾಡ: “ಶ್ರೀರಾಮ-ಕೃಷ್ಣರ ಜೀವನ ಇಂದಿಗೂ ಆದರ್ಶ’

ಧಾರವಾಡ: “ಶ್ರೀರಾಮ-ಕೃಷ್ಣರ ಜೀವನ ಇಂದಿಗೂ ಆದರ್ಶ’

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ

Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್‌ ಕುಮಾರ್‌ ಉದ್ಯಾವರ

ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್‌ ಕುಮಾರ್‌ ಉದ್ಯಾವರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.