ಪಾಲಿಕೆಯಲ್ಲಿ ಮತ್ತೆ ಅರಳಿದ ಕಮಲ

ಬಿ.ಜೆ.ಅಜಯಕುಮಾರ್‌ ಮೇಯರ್‌-ಸೌಮ್ಯ ಉಪ ಮೇಯರ್‌ ಕಾಂಗ್ರೆಸ್‌ನ ಮೂವರು ಪಾಲಿಕೆ ಸದಸ್ಯರು ಚುನಾವಣೆಗೆ ಗೈರು

Team Udayavani, Feb 20, 2020, 11:20 AM IST

20-February-03

ದಾವಣಗೆರೆ: ಕಾಂಗ್ರೆಸ್‌ ಸದಸ್ಯರ ಸಭಾತ್ಯಾಗ, ಮೂವರು ಸದಸ್ಯರ ಗೈರು, ಬಿಜೆಪಿ ಸದಸ್ಯರ ರಣೋತ್ಸಾಹದ ನಡುವೆ ಬುಧವಾರ ನಡೆದ ಚುನಾವಣೆಯಲ್ಲಿ ನೂತನ ಮೇಯರ್‌ ಆಗಿ ಬಿಜೆಪಿಯ 17ನೇ ವಾರ್ಡ್‌ ಸದಸ್ಯ ಬಿ.ಜೆ. ಅಜಯ್‌ ಕುಮಾರ್‌, ಉಪ ಮೇಯರ್‌ ಆಗಿ 13ನೇ ವಾರ್ಡ್‌ನ ಸೌಮ್ಯ ನರೇಂದ್ರಕುಮಾರ್‌ ಆಯ್ಕೆಯಾದರು.

ಸಾಕಷ್ಟು ಜಿದ್ದಾಜಿದ್ದಿ, ತೀವ್ರ ಪೈಪೋಟಿ ಮತ್ತು ಸಮಬಲದ ಕಾಳಗಕ್ಕೆ, ರಣರೋಚಕ ಕುತೂಹಲಕ್ಕೆ ಕಾರಣವಾಗಿದ್ದ ಮೇಯರ್‌, ಉಪ ಮೇಯರ್‌ ಚುನಾವಣೆಯಲ್ಲಿ ಕಾಂಗ್ರೆಸ್‌ನ 28ನೇ ವಾರ್ಡ್‌ ಸದಸ್ಯ ಜೆ.ಎನ್‌. ಶ್ರೀನಿವಾಸ್‌, 20ನೇ ವಾರ್ಡ್‌ನ ಯಶೋಧ ಉಮೇಶ್‌, 37ನೇ ವಾರ್ಡ್ ನ ಶ್ವೇತಾ ಜೆ.ಎನ್‌. ಶ್ರೀನಿವಾಸ್‌ ಗೈರು ಹಾಜರಿ ಬಿಜೆಪಿಯ ಗೆಲುವಿನ ಮಾರ್ಗವನ್ನು ಸುಲಭವಾಗಿಸಿತು. ಒಂದೊಮ್ಮೆ ಕಾಂಗ್ರೆಸ್‌ನ ಮೂವರು ಸದಸ್ಯರು ಚುನಾವಣಾ ಪ್ರಕ್ರಿಯೆಯಲ್ಲಿ ಪಾಲ್ಗೊಂಡಿದ್ದಲ್ಲಿ ಬಿಜೆಪಿ ಗೆಲುವು ಅಷ್ಟೊಂದು ಸುಲಭವಾಗಿರಲಿಲ್ಲ, ಜೆಡಿಎಸ್‌ ಸದಸ್ಯೆ ನೂರ್‌ಜಹಾನ್‌ ಹಾಗೂ 45ನೇ ವಾರ್ಡ್‌ನ ಪಕ್ಷೇತರ ಸದಸ್ಯ ಎಚ್‌.ಬಿ. ಉದಯ್‌ಕುಮಾರ್‌ ಕಾಂಗ್ರೆಸ್‌ ಪಾಳಯದಲ್ಲಿ ಗುರುತಿಸಿಕೊಂಡಿದ್ದರು. ಜೆಡಿಎಸ್‌ ಸದಸ್ಯೆ ನೂರ್‌ಜಹಾನ್‌ ಉಪ ಮೇಯರ್‌ ಸ್ಥಾನಕ್ಕೆ ನಾಮಪತ್ರ ಸಹ ಸಲ್ಲಿಸಿದ್ದರು. ಆದರೆ ಮೂವರು “ಕೆ’ç ಸದಸ್ಯರ ಗೈರು ಹಾಜರಿ ಬಿಜೆಪಿಗೆ ಪಾಲಿಕೆಯಲ್ಲಿ ಮತ್ತೂಮ್ಮೆ ಅಧಿಕಾರದ ಚುಕ್ಕಾಣಿ ಹಿಡಿಯಲು ಪರೋಕ್ಷವಾಗಿ ಸಹಕಾರಿಯಾಯಿತು.

ಚುನಾವಣಾ ಪ್ರಕ್ರಿಯೆಯಲ್ಲಿ ಒಟ್ಟು 59ಸದಸ್ಯರು ಹಾಜರಾಗಿದ್ದರು. ಮಧ್ಯದಲ್ಲಿ ಕಾಂಗ್ರೆಸ್‌ ಸದಸ್ಯರು, ಶಾಸಕರು, ವಿಧಾನ ಪರಿಷತ್ತು ಸದಸ್ಯರು, ಅಧಿಕಾರಿಗಳು ಸರ್ಕಾರದ ಏಜೆಂಟರಂತೆ ಕೆಲಸ ಮಾಡುತ್ತಿದ್ದಾರೆ ಎಂದು ಆರೋಪಿಸಿ ಸಭಾತ್ಯಾಗ ಮಾಡಿದ್ದರಿಂದ ಸಭೆಯಲ್ಲಿ ಹಾಜರಿದ್ದ 31 ಮಂದಿ ಮೇಯರ್‌, ಉಪ ಮೇಯರ್‌, ನಾಲ್ಕು ಸ್ಥಾಯಿ ಸಮಿತಿಗಳ ಸದಸ್ಯರ ಆಯ್ಕೆಗೆ ಮತದಾನ ಮಾಡಿದರು.

ಬೆಳಗ್ಗೆ 8.30 ರಿಂದ 10.30ರ ವರೆಗೆ ನಾಮಪತ್ರ ಸಲ್ಲಿಕೆಗೆ ಅವಕಾಶ ನೀಡಲಾಗಿತ್ತು. ಮೇಯರ್‌ ಸ್ಥಾನಕ್ಕೆ ಬಿಜೆಪಿಯಿಂದ ಬಿ.ಜೆ.ಅಜಯ್‌ಕುಮಾರ್‌ ಒಂದು ಜೊತೆ ನಾಮಪತ್ರ ಸಲ್ಲಿಸಿದರು. ಕೆ. ಪ್ರಸನ್ನಕುಮಾರ್‌ ಸೂಚಕರಾಗಿದ್ದರೆ, ರಾಕೇಶ್‌ ಜಾಧವ್‌ ಅನುಮೋದಕರಾಗಿದ್ದರು. ಕಾಂಗ್ರೆಸ್‌ನಿಂದ ಮೇಯರ್‌ ಸ್ಥಾನಕ್ಕೆ 22ನೇ ವಾರ್ಡ್‌ ಸದಸ್ಯ ದೇವರಮನೆ ಶಿವಕುಮಾರ್‌ 2 ಜೊತೆ ನಾಮಪತ್ರ ಸಲ್ಲಿಸಿದ್ದರು. ಗಡಿಗುಡಾಳ್‌ ಮಂಜುನಾಥ್‌ ಸೂಚಕ, ಕೆ. ಚಮನ್‌ಸಾಬ್‌ ಅನುಮೋದಕರಾಗಿದ್ದರು.

ಉಪ ಮೇಯರ್‌ ಸ್ಥಾನಕ್ಕೆ 13ನೇ ವಾರ್ಡ್‌ನ ಬಿಜೆಪಿ ಸದಸ್ಯೆ ಸೌಮ್ಯ ನರೇಂದ್ರಕುಮಾರ್‌ ಸಲ್ಲಿಸಿದ ನಾಮಪತ್ರಕ್ಕೆ ಬಿ.ಎ. ಯಶೋಧ ಸೂಚಕರಾಗಿದ್ದರೆ, ಗೌರಮ್ಮ ಅನುಮೋದಕರಾಗಿದ್ದರು. ಕಾಂಗ್ರೆಸ್‌ನಿಂದ 15ನೇ ವಾರ್ಡ್‌ ಸದಸ್ಯೆ ಆಶಾ ಉಮೇಶ್‌ 2 ಜೊತೆ ನಾಮಪತ್ರ ಸಲ್ಲಿಸಿದ್ದರು. ಸೈಯದ್‌ ಚಾರ್ಲಿ ಸೂಚಕರಾಗಿದ್ದರು. ಸುಧಾ ಇಟ್ಟಿಗುಡಿ ಮಂಜುನಾಥ್‌ ಅನುಮೋದಕರಾಗಿದ್ದರು. ಜೆಡಿಎಸ್‌ನ ಬಿ. ನೂರ್‌ಜಹಾನ್‌ ಸಲ್ಲಿಸಿದ್ದ ನಾಮಪತ್ರಕ್ಕೆ ಶಿವಲೀಲಾ ಸೂಚಕರು, ಬಿ.ಎಚ್‌. ವಿನಾಯಕ ಪೈಲ್ವಾನ್‌ ಅನುಮೋದಕರಾಗಿದ್ದರು. ಚುನಾವಣಾಧಿಕಾರಿಯಾಗಿದ್ದ ಬೆಂಗಳೂರು ಪ್ರಾದೇಶಿಕ ಆಯುಕ್ತ ವಿ.ಪಿ. ಇಕ್ಕೇರಿ ಚುನಾವಣಾ ಪ್ರಕ್ರಿಯೆ ನಡೆಸಿದರು. ಉಚ್ಚ ನ್ಯಾಯಾಲಯದ ಆದೇಶದನ್ವಯ ಪ್ರತಿಯೊಂದು ಪ್ರಕ್ರಿಯೆಯನ್ನು ವೀಡಿಯೋ ಮಾಡಲಾಯಿತು. ನಾಲ್ಕು ಕಡೆ ಸಿಸಿ ಟಿವಿ ಅಳವಡಿಸಲಾಗಿತ್ತು. ಇಡೀ ಚುನಾವಣೆ ಪ್ರಕ್ರಿಯೆಯಿಂದ ಮಾಧ್ಯಮದವರನ್ನೂ ಹೊರಗಿಡಲಾಗಿತ್ತು.

ಮೇಯರ್‌, ಉಪ ಮೇಯರ್‌, ಸ್ಥಾಯಿ ಸಮಿತಿ ಸದಸ್ಯರ ಆಯ್ಕೆ ಪ್ರಕ್ರಿಯೆ ಪೂರ್ಣಗೊಂಡ ನಂತರವೇ ಮಾಧ್ಯಮದವರಿಗೆ ಅವಕಾಶ ಮಾಡಿಕೊಡಲಾಯಿತು. ಸ್ಥಳದ ಕೊರತೆ ಕಾರಣಕ್ಕೆ ಮಾಧ್ಯಮದವರಿಗೆ ಅವಕಾಶ ನೀಡಲಾಗಲಿಲ್ಲ ಎಂದು ಚುನಾವಣಾಧಿಕಾರಿ ಸಮಜಾಯಿಷಿ ನೀಡಿದರು. ಮೇಯರ್‌, ಉಪ ಮೇಯರ್‌ ಆಯ್ಕೆ ರಾಜ್ಯ ಉಚ್ಚ ನ್ಯಾಯಾಲಯದ ಅಂತಿಮ ತೀರ್ಪಿಗೆ ಒಳಪಟ್ಟಿದ್ದು, ಫೆ. 24 ರ ಉಚ್ಚ ನ್ಯಾಯಾಲಯದ ತೀರ್ಪಿನ ಮೇಲೆ ನೂತನ ಮೇಯರ್‌, ಉಪ ಮೇಯರ್‌ ಅಧಿಕಾರದ ಭವಿಷ್ಯ ನಿರ್ಧಾರವಾಗಲಿದೆ.

ಟಾಪ್ ನ್ಯೂಸ್

1-ckm-rsrt-close

Tourists ಗಮನಕ್ಕೆ: ಈ 2 ದಿನಗಳ ಕಾಲ ಚಿಕ್ಕಮಗಳೂರಿನ‌ ಎಲ್ಲ ಹೋಂ ಸ್ಟೇ, ರೆಸಾರ್ಟ್‌ ಬಂದ್!

ಸಿ.ಟಿ.ರವಿ

Vijayapura; ವಿಕಸಿತ ಭಾರತಕ್ಕೆ ವಿಶ್ವನಾಯಕ ಮೋದಿ ನಾಯಕತ್ವ ಅನಿವಾರ್ಯ: ಸಿ.ಟಿ.ರವಿ

ಶಿಕಾರಿಪುರದಲ್ಲೇ ಅಪ್ಪ ಮಕ್ಕಳ ಶಿಕಾರಿ ಮಾಡುತ್ತೇನೆ… ವಿಜಯೇಂದ್ರ ವಿರುದ್ಧ ಈಶ್ವರಪ್ಪ ಕಿಡಿ

ಶಿಕಾರಿಪುರದಲ್ಲೇ ಅಪ್ಪ ಮಕ್ಕಳ ಶಿಕಾರಿ ಮಾಡುತ್ತೇನೆ… ವಿಜಯೇಂದ್ರ ವಿರುದ್ಧ ಈಶ್ವರಪ್ಪ ಕಿಡಿ

Bengaluru: ಸೆ*ಕ್ಸ್‌ ವಿಡಿಯೋ ಮಾದರಿ ಲೈಂಗಿಕ ಕ್ರಿಯೆಗೆ ಒತ್ತಾಯ

Bengaluru: ಸೆ*ಕ್ಸ್‌ ವಿಡಿಯೋ ಮಾದರಿ ಲೈಂಗಿಕ ಕ್ರಿಯೆಗೆ ಒತ್ತಾಯ

ಯತ್ನಾಳ್

Loksabha Election; ಈಶ್ವರಪ್ಪ ಬಂಡಾಯವನ್ನು ರಾಜಾಹುಲಿ ಶಮನ ಮಾಡಲಿ: ಯತ್ನಾಳ್

ಲೋಕಸಭೆ ಚುನಾವಣೆ ಫಲಿತಾಂಶ ರಾಜ್ಯ ರಾಜಕಾರಣದ ಮೇಲೆ ದೊಡ್ಡ ಪರಿಣಾಮ ಬೀರಲಿದೆ: ಬೊಮ್ಮಾಯಿ

ಲೋಕಸಭೆ ಚುನಾವಣೆ ಫಲಿತಾಂಶ ರಾಜ್ಯ ರಾಜಕಾರಣದ ಮೇಲೆ ದೊಡ್ಡ ಪರಿಣಾಮ ಬೀರಲಿದೆ: ಬೊಮ್ಮಾಯಿ

LS polls: ನಾಳೆ ಸಿಎಂ, ಡಿಸಿಎಂ ಭೇಟಿಯಾಗಿ ಕಾಂಗ್ರೆಸ್ ಸೇರ್ಪಡೆ ಬಗ್ಗೆ ತೀರ್ಮಾನ; ಸಂಗಣ್ಣ

LS polls: ನಾಳೆ ಸಿಎಂ, ಡಿಸಿಎಂ ಭೇಟಿಯಾಗಿ ಕಾಂಗ್ರೆಸ್ ಸೇರ್ಪಡೆ ಬಗ್ಗೆ ತೀರ್ಮಾನ; ಸಂಗಣ್ಣ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Davanagare: ಚುನಾವಣಾ ತರಬೇತಿಗೆ ಚಕ್ಕರ್; ಅನುಚಿತ ವರ್ತನೆಗೆ ಶಿಕ್ಷಕ ಅಮಾನತು

Davanagare: ಚುನಾವಣಾ ತರಬೇತಿಗೆ ಚಕ್ಕರ್; ಅನುಚಿತ ವರ್ತನೆಗೆ ಶಿಕ್ಷಕ ಅಮಾನತು

ನಾಮಪತ್ರ ಸಲ್ಲಿಸಿದ ದಾವಣಗೆರೆ ಲೋಕಸಭಾ ಬಿಜೆಪಿ ಅಭ್ಯರ್ಥಿ ಗಾಯಿತ್ರಿ ಸಿದ್ದೇಶ್ವರ

ನಾಮಪತ್ರ ಸಲ್ಲಿಸಿದ ದಾವಣಗೆರೆ ಲೋಕಸಭಾ ಬಿಜೆಪಿ ಅಭ್ಯರ್ಥಿ ಗಾಯಿತ್ರಿ ಸಿದ್ದೇಶ್ವರ

Davanagere: ನಾಮಪತ್ರ ಸಲ್ಲಿಸಿದ ಬಿಜೆಪಿ- ಕಾಂಗ್ರೆಸ್ ಅಭ್ಯರ್ಥಿಗಳು

Davanagere: ನಾಮಪತ್ರ ಸಲ್ಲಿಸಿದ ಬಿಜೆಪಿ- ಕಾಂಗ್ರೆಸ್ ಅಭ್ಯರ್ಥಿಗಳು

Lok Sabha Election: ಜಗಳೂರನ್ನು ಬರಪೀಡಿತ ಪಟ್ಟಿಯಿಂದ ಹೊರ ತರುವೆ: ಗಾಯತ್ರಿ ಸಿದ್ದೇಶ್ವರ

Lok Sabha Election: ಜಗಳೂರನ್ನು ಬರಪೀಡಿತ ಪಟ್ಟಿಯಿಂದ ಹೊರ ತರುವೆ: ಗಾಯತ್ರಿ ಸಿದ್ದೇಶ್ವರ

Davanagere; ಕಾಂಗ್ರೆಸ್ ಸಂಧಾನ ವಿಫಲ; ನಾಮಪತ್ರ ಹಿಂಪಡೆಯಲು ವಿನಯ್ ಕುಮಾರ್ ನಕಾರ

Davanagere; ಕಾಂಗ್ರೆಸ್ ಸಂಧಾನ ವಿಫಲ; ನಾಮಪತ್ರ ಹಿಂಪಡೆಯಲು ವಿನಯ್ ಕುಮಾರ್ ನಕಾರ

MUST WATCH

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

udayavani youtube

ಕೇಕ್ ಪ್ರಿಯರಿಗೆ ಹೇಳಿ ಮಾಡಿಸಿದ ಜಾಗ ಔರಾ .

ಹೊಸ ಸೇರ್ಪಡೆ

aditya;s kangaroo movie

Aditya; ಟ್ರೇಲರ್ ನಲ್ಲಿ ‘ಕಾಂಗರೂ’ ದರ್ಶನ; ಮೇ.3ರಂದು ತೆರೆಗೆ

1-ckm-rsrt-close

Tourists ಗಮನಕ್ಕೆ: ಈ 2 ದಿನಗಳ ಕಾಲ ಚಿಕ್ಕಮಗಳೂರಿನ‌ ಎಲ್ಲ ಹೋಂ ಸ್ಟೇ, ರೆಸಾರ್ಟ್‌ ಬಂದ್!

Fraud: ಮದುವೆ ಆಗದೇ ದೈಹಿಕ ಸಂಪರ್ಕ ಬೆಳೆಸಿ ಮಹಿಳಾ ಟೆಕಿಗೆ ವಂಚನೆ

Fraud: ಮದುವೆ ಆಗದೇ ದೈಹಿಕ ಸಂಪರ್ಕ ಬೆಳೆಸಿ ಮಹಿಳಾ ಟೆಕಿಗೆ ವಂಚನೆ

ಸಿ.ಟಿ.ರವಿ

Vijayapura; ವಿಕಸಿತ ಭಾರತಕ್ಕೆ ವಿಶ್ವನಾಯಕ ಮೋದಿ ನಾಯಕತ್ವ ಅನಿವಾರ್ಯ: ಸಿ.ಟಿ.ರವಿ

ಶಿಕಾರಿಪುರದಲ್ಲೇ ಅಪ್ಪ ಮಕ್ಕಳ ಶಿಕಾರಿ ಮಾಡುತ್ತೇನೆ… ವಿಜಯೇಂದ್ರ ವಿರುದ್ಧ ಈಶ್ವರಪ್ಪ ಕಿಡಿ

ಶಿಕಾರಿಪುರದಲ್ಲೇ ಅಪ್ಪ ಮಕ್ಕಳ ಶಿಕಾರಿ ಮಾಡುತ್ತೇನೆ… ವಿಜಯೇಂದ್ರ ವಿರುದ್ಧ ಈಶ್ವರಪ್ಪ ಕಿಡಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.