ದಾವಣಗೆರೆ: ಸಮಾಜಮುಖಿ ಸಂಶೋಧನೆಗೆ ಒತ್ತು ಕೊಡಿ: ಪ್ರೊ| ಇಂದುಮತಿ

ಸಂಶೋಧನೆಗಳ ಶಿಫಾರಸುಗಳು, ವಿಪುಲ ಅವಕಾಶ ಪಡೆಯುವಂತಾಗಬೇಕು

Team Udayavani, Mar 22, 2024, 5:46 PM IST

ದಾವಣಗೆರೆ: ಸಮಾಜಮುಖಿ ಸಂಶೋಧನೆಗೆ ಒತು ಕೊಡಿ: ಪ್ರೊ| ಇಂದುಮತಿ

ಉದಯವಾಣಿ ಸಮಾಚಾರ
ದಾವಣಗೆರೆ: ಸಮಾಜದ ಎಲ್ಲ ವರ್ಗಗಳ ಸಮಗ್ರ ಸುಸ್ಥಿರ ಅಭಿವೃದ್ಧಿಯ ದೂರದೃಷ್ಟಿಯಿಂದ ಕೂಡಿದ ಸಂಶೋಧನೆಗಳಿಗೆ ಸಂಶೋಧನಾ ವಿದ್ಯಾರ್ಥಿಗಳು ಪ್ರಥಮ ಆದ್ಯತೆ ನೀಡಬೇಕು ಎಂದು ದಾವಣಗೆರೆ ವಿಶ್ವವಿದ್ಯಾನಿಲಯದ ವಿಶ್ರಾಂತ ಕುಲಪತಿ ಪ್ರೊ| ಎಸ್‌. ಇಂದುಮತಿ ಕರೆ ನೀಡಿದರು.

ನವದೆಹಲಿಯ ಐಸಿಎಸ್‌ಎಸ್‌ ಆರ್‌ ಪ್ರಾಯೋಜಕತ್ವದಲ್ಲಿ ದಾವಣಗೆರೆ ವಿಶ್ವವಿದ್ಯಾನಿಲಯ ಅರ್ಥಶಾಸ್ತ್ರ ಅಧ್ಯಯನ
ವಿಭಾಗದ ವತಿಯಿಂದ ಗುರುವಾರ ನಡೆದ ಯುವ ಪ್ರಾಧ್ಯಾಪಕರ ಸಾಮರ್ಥ್ಯವೃದ್ಧಿ ಮತ್ತು ಸಂಶೋಧನಾ ವಿನ್ಯಾಸ ಹಾಗೂ ದತ್ತಾಂಶ ವಿಶ್ಲೇಷಣೆ ಕಾರ್ಯಾಗಾರದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು. ದೇಶದ ಅಭಿವೃದ್ಧಿ ಅನುಷ್ಠಾನದಲ್ಲಿ ಸಂಶೋಧನೆಗಳ ಶಿಫಾರಸುಗಳು, ವಿಪುಲ ಅವಕಾಶ ಪಡೆಯುವಂತಾಗಬೇಕು. ಪ್ರಸ್ತುತ ಮಾತ್ರವಲ್ಲ, ಭವಿಷ್ಯದ ದೃಷ್ಟಿಯಿಂದ ಸಂಶೋಧನೆಗಳು ನಡೆಯುವಂತಾಗಬೇಕು.

ಸದಾ ಸಮಾಜಮುಖಿ ಸಂಶೋಧನೆಗಳು ದೇಶದ ಗ್ರಾಮೀಣ ಜನರ ಆರ್ಥಿಕ, ಸಾಮಾಜಿಕ, ಶೈಕ್ಷಣಿಕ ಪರಸ್ಪ ಬೆಳವಣಿಗೆಗೆ ಪೂರಕವಾಗಿರಬೇಕು. ಅತಿ ಮುಖ್ಯವಾಗಿ ಪರಿಸರವನ್ನು ರಕ್ಷಿಸುವ, ಜನರನ್ನು ಸಂಕಷ್ಟದಿಂದ ಪಾರು ಮಾಡುವ ಜೊತೆಗೆ ಸ್ವಾವಲಂಬನೆಯ ಬದುಕಿಗೆ ಪ್ರೇರೇಪಿಸುವ ನಿಟ್ಟಿನಲ್ಲಿ ಯೋಜನೆಗಳು ಸಿದ್ಧವಾಗಬೇಕು. ಯಾವುದೇ ಸಂಶೋಧನೆಗೆ ಸಂಗ್ರಹಿಸುವ ದತ್ತಾಂಶಗಳು ವಾಸ್ತವ ನೆಲೆಯನ್ನು ಅರ್ಥೈಸುವಂತಿರಬೇಕು. ಸಮಸ್ಯೆಯ ಮೂಲವನ್ನು ಅರ್ಥ ಮಾಡಿಕೊಂಡು ಪರಿಹಾರ
ಕಂಡುಕೊಳ್ಳಬೇಕು ಎಂದು ಸಲಹೆ ನೀಡಿದರು.

ಇತ್ತೀಚಿನ ಅತ್ಯಾಧುನಿಕ ತಂತ್ರಜ್ಞಾನ ಮತ್ತು ತಂತ್ರಾಂಶಗಳು ಜನಸ್ನೇಹಿಯಾಗಿವೆ. ತಂತ್ರಜ್ಞಾನ ಮತ್ತು ತಂತ್ರಾಂಶಗಳು
ಸಂಶೋಧನೆಯ ಮಾಹಿತಿ ಸಂಗ್ರಹ ಹಾಗೂ ಫಲಿತಾಂಶ ಪಡೆಯಲು ಸಹಕಾರಿಯಾಗಿವೆ. ಸಂಶೋಧನಾರ್ಥಿಗಳು ಅಧ್ಯಯನ,
ಸಂಶೋಧನೆಯ ಜೊತೆಗೆ ತಂತ್ರಜ್ಞಾನ ಕೌಶಲಗಳನ್ನು ಅಳವಡಿಸಿಕೊಳ್ಳಬೇಕು. ಆ ಮೂಲಕ ಉತ್ತಮ ಗುಣಮಟ್ಟದ ಮತ್ತು
ಮೌಲ್ಯವ ರ್ಧಿತ ಫಲಿತಾಂಶವನ್ನು ಕಂಡುಕೊಳ್ಳಲು ಸಾಧ್ಯವಾಗುತ್ತದೆ. ತಂತ್ರಜ್ಞಾನ ಯುಗದಲ್ಲಿ ಡಿಜಿಟಲ್‌ ಸಾಕ್ಷರತೆ ಪ್ರಭಾವ ಹೆಚ್ಚಾಗುತ್ತಿದೆ.

ಇದು ಡಿಜಿಟಲ್‌ ಸಾಕ್ಷರತೆಯು ಅಂತರವನ್ನು ಹೆಚ್ಚಿಸುತ್ತಿದೆ. ಇದು ಬೆಳವಣಿಗೆಯ ವೇಗದ ಮೇಲೂ ಪರಿಣಾಮ ಬೀರುವ ಸಾಧ್ಯತೆ
ಹಿನ್ನೆಲೆಯಲ್ಲಿ ಸಂಶೋಧನೆ, ಅಧ್ಯಯನ ಅವಲೋಕನದ ಅಗತ್ಯವಿದೆ ಎಂದು ಅಭಿಪ್ರಾಯಪಟ್ಟರು. ಅಧ್ಯಕ್ಷತೆ ವಹಿಸಿದ್ದ ಕುಲಪತಿ ಪ್ರೊ| ಬಿ.ಡಿ. ಕುಂಬಾರ ಮಾತನಾಡಿ, ಸುಸ್ಥಿರತೆಯೊಂದಿಗೆ ನಾವೀನ್ಯತೆಯನ್ನೂ ಭವಿಷ್ಯದ ಚಿಂತನೆಯ ಪರಿಕಲ್ಪನೆಗಳ ಶ್ರೇಣಿಯನ್ನು ಪರಿಶೊಧೀಸುತ್ತವೆ.

ಹೊಸತನ ರೂಪಿಸುವ ಜೊತೆಗೆ ಸಾಮಾಜಿಕ ಜವಾಬ್ದಾರಿ ಮತ್ತು ಪರಿಸರ ಪ್ರಜ್ಞೆಯನ್ನೂ ಬೆಳೆಸಲು ಜಾಗೃತಿಯ ಆಂದೋಲನ
ಆಗಬೇಕಾಗಿದೆ. ದೇಶದ ಅಭಿವೃದ್ಧಿಯಲ್ಲಿ ಶಿಕ್ಷಣ, ಕೌಶಲ್ಯಗಳ ಕೊರತೆಗಳು ತೀವ್ರ ಹಿನ್ನಡೆಗೆ ಕಾರಣವಾಗುತ್ತಿವೆ. ಉದ್ಯೋಗಾಧಾರಿತ ಶಿಕ್ಷಣ ಮತ್ತು ಜೀವನಾಧಾರಿತ ಶಿಕ್ಷಣದ ಪರಿಕಲ್ಪನೆ ಯನ್ನು ಅರ್ಥ ಮಾಡಿಸಬೇಕಾಗಿದೆ. ವಾಸ್ತವದ ನೆಲೆಯಲ್ಲಿ ನಿಂತು ಭವಿಷ್ಯವನ್ನು ಕಟ್ಟುವ ಕೆಲಸ  ಆಗಬೇಕಾಗಿದೆ ಎಂದು ಆಶಿಸಿದರು. ಕಾರ್ಯಕ್ರಮದ ಸಂಯೋಜಕ ಹಾಗೂ
ಅರ್ಥಶಾಸ್ತ್ರ ಅಧ್ಯಯನ ವಿಭಾಗದ ಅಧ್ಯಕ್ಷ ಪ್ರೊ| ಹುಚ್ಚೇಗೌಡ ಪ್ರಾಸ್ತಾವಿಕವಾಗಿ ಮಾತನಾಡಿದರು. ವಿಭಾಗದ ಹಿರಿಯ
ಪ್ರಾಧ್ಯಾಪಕರಾದ ಪ್ರೊ| ಕೆ.ಬಿ. ರಂಗಪ್ಪ, ಪ್ರೊ| ಎಸ್‌. ಸುಚಿತ್ರಾ, ಪ್ರೊ| ಆರ್‌. ಮಾದಪ್ಪ ಇತರರರು ಇದ್ದರು.

ಟಾಪ್ ನ್ಯೂಸ್

Shivrajkumar is frustrated with social media

Sandalwood: ಸೋಷಿಯಲ್‌ ಮೀಡಿಯಾ ವಿರುದ್ಧ ಶಿವರಾಜ್ ಕುಮಾರ್ ಬೇಸರ

Netherlands Trip: ಹೀಗೊಂದು ನಿಶ್ಶಬ್ದ ಪಯಣ!

Netherlands Trip: ಹೀಗೊಂದು ನಿಶ್ಶಬ್ದ ಪಯಣ!

7-modi

ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಬಂದ ಬಳಿಕ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ: ಪ್ರಧಾನಿ ಮೋದಿ

1-wqe-qweq

Congress Protest; ಕೇಳಿದ್ದು 18,172 ಕೋಟಿ ರೂ. ಕೊಟ್ಟಿದ್ದು 3,400 ಕೋಟಿ ರೂ. ಮಾತ್ರ

Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ

Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ

6-Fibromyalgia

Fibromyalgia: ಫೈಬ್ರೊಮಯಾಲ್ಜಿಯಾ ಜತೆಗೆ ಜೀವನ

ಗುಜರಾತ್ ಗೆ ಆರ್ ಸಿಬಿ ಸವಾಲು: ತಂಡಕ್ಕೆ ಮರಳಿದ ಗ್ಲೆನ್ ಮ್ಯಾಕ್ಸವೆಲ್

IPL 2024; ಗುಜರಾತ್ ಗೆ ಆರ್ ಸಿಬಿ ಸವಾಲು: ತಂಡಕ್ಕೆ ಮರಳಿದ ಗ್ಲೆನ್ ಮ್ಯಾಕ್ಸವೆಲ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Davanagere ಮೋದಿ ಸಮಾವೇಶ: ಬಿಸಿಲಿನ ನಡುವೆಯೂ ಸೇರಿದ ಸಹಸ್ರಾರು ಜನರು

Davanagere ಮೋದಿ ಸಮಾವೇಶ: ಬಿಸಿಲಿನ ನಡುವೆಯೂ ಸೇರಿದ ಸಹಸ್ರಾರು ಜನರು

ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ

Davanagere; ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ

randeep surjewala

Davanagere; ವಿಧಾನಸಭೆ ಸೋಲಿನ ಕಾರಣದಿಂದ ಬರಪರಿಹಾರ ನೀಡದೆ ಮೋದಿ-ಶಾ ಸೇಡು: ಸುರ್ಜೆವಾಲ ಆರೋಪ

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

1-adasdsad

Davanagere; ಪ್ರಧಾನಿ ಮೋದಿ ರ್‍ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Chikkaballapur: 13.63 ಕೋಟಿ ರೂ. ಚುನಾವಣಾ ಅಕ್ರಮ ಮದ್ಯ ಜಪ್ತಿ!

Chikkaballapur: 13.63 ಕೋಟಿ ರೂ. ಚುನಾವಣಾ ಅಕ್ರಮ ಮದ್ಯ ಜಪ್ತಿ!

Shivrajkumar is frustrated with social media

Sandalwood: ಸೋಷಿಯಲ್‌ ಮೀಡಿಯಾ ವಿರುದ್ಧ ಶಿವರಾಜ್ ಕುಮಾರ್ ಬೇಸರ

Netherlands Trip: ಹೀಗೊಂದು ನಿಶ್ಶಬ್ದ ಪಯಣ!

Netherlands Trip: ಹೀಗೊಂದು ನಿಶ್ಶಬ್ದ ಪಯಣ!

10

ಕುತ್ತಿಗೆಗೇ ಬಂತು… ಕುತ್ತಿಗೆ ಸ್ಪ್ರಿಂಗ್‌ ಇದ್ದಂತೆ…

7-modi

ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಬಂದ ಬಳಿಕ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ: ಪ್ರಧಾನಿ ಮೋದಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.