ಅನಧಿಕೃತ ಮೆಕ್ಕೆಜೋಳ ಬಿತ್ತನೆ ಬೀಜ ಮಾರಿದಲ್ಲಿ ಕ್ರಿಮಿನಲ್ ಮೊಕದ್ದಮೆ
Team Udayavani, May 25, 2020, 3:33 PM IST
ಸಾಂದರ್ಭಿಕ ಚಿತ್ರ
ದಾವಣಗೆರೆ: ಇತ್ತೀಚಿನ ದಿನಗಳಲ್ಲಿ ಕಳಪೆ/ಬಿಡಿ ಬಿತ್ತನೆ ಬೀಜದ ಹಾವಳಿ (ಪ್ರಮಾಣ) ಹೆಚ್ಚಾಗುತ್ತಿದ್ದು, ಅಂತಹ ಬಿತ್ತನೆ ಬೀಜ ಮಾರಾಟಗಾರರ ವಿರುದ್ಧ ಕಠಿಣ ಕ್ರಮದ ಎಚ್ಚರಿಕೆ ನೀಡಿರುವ ಕೃಷಿ ಇಲಾಖೆ, ಅನಧಿಕೃತ ಬಿತ್ತನೆ ಬೀಜ ಖರೀದಿಸದಂತೆ ರೈತರಲ್ಲಿ ಮನವಿ ಮಾಡಿದೆ.
ಪ್ರಸ್ತುತ ಜಿಲ್ಲೆಯಲ್ಲಿ ಉತ್ತಮ ಮಳೆಯಾಗುತ್ತಿದ್ದು, ರೈತರು ಬಿತ್ತನೆಗೆ ಭೂಮಿ ಸಿದ್ಧತೆ ಮಾಡಿಕೊಳ್ಳುತ್ತಿದ್ದಾರೆ. ಜಿಲ್ಲೆಯಲ್ಲಿ ಭತ್ತ ಮತ್ತು ಮೆಕ್ಕೆಜೋಳ ಮುಖ್ಯ ಬೆಳೆಗಳಾಗಿದ್ದು, ಮೆಕ್ಕೆಜೋಳ ಬೀಜ ಖರೀದಿಗೆ ಸ್ಥಳೀಯ ರೈತ ಸಂಪರ್ಕ ಕೇಂದ್ರ, ಮಾರಾಟ ಮಳಿಗೆಗಳಿಗೆ ಆಗಮಿಸುತ್ತಿದ್ದಾರೆ. ಹಲವರು ಬಿಡಿ ಬೀಜಗಳನ್ನು ವಿವಿಧ ಭಾಗಗಳಿಂದ ಸಂಗ್ರಹಿಸಿ, ರೈತರಿಗೆ ಮಾರಾಟ ಮಾಡುತ್ತಿರುವುದು ಗಮನ ಬಂದಿದೆ. ಬಿಡಿ ಬೀಜಗಳನ್ನು ಖರೀದಿಸಿ, ಬಿತ್ತನೆ ಮಾಡಿ ತೊಂದರೆ ಮತ್ತು ನಷ್ಟ ಅನುಭವಿಸಿದಲ್ಲಿ ಯಾವುದೇ ದಾಖಲೆಗಳು ಇಲ್ಲದಿರುವುದರಿಂದ ಪರಿಹಾರ ಪಡೆಯಲು ಅರ್ಹರಾಗುವುದಿಲ್ಲ. ಆದ್ದರಿಂದ ಉತ್ತಮ ಗುಣಮಟ್ಟದ ದೃಢೀಕೃತ ಬಿತ್ತನೆ ಬೀಜಗಳನ್ನು ಅಧಿಕೃತ ಮಾರಾಟಗಾರರು ಮತ್ತು ರೈತ ಸಂಪರ್ಕ ಕೇಂದ್ರಗಳಿಂದ ಮಾತ್ರ ಖರೀದಿಸಿ ಬಿತ್ತನೆ ಮಾಡಲು ರೈತರಲ್ಲಿ ಕೋರಲಾಗಿದೆ.
ಅನಧಿಕೃತ ಲೂಸ್ ಮೆಕ್ಕೆಜೋಳ ಬಿತ್ತನೆ ಬೀಜ ಖರೀದಿಸುವವರು, ದಾಸ್ತಾನು ಮಾಡಿ ಮಾರಾಟ ಮಾಡುವವರು ಕಂಡುಬಂದರೆ ಸ್ಥಳೀಯ ರೈತ ಸಂಪರ್ಕ ಕೇಂದ್ರದ ಕೃಷಿ ಅಧಿಕಾರಿ ಹಾಗೂ ಸಂಬಂಧಪಟ್ಟ ತಾಲ್ಲೂಕಿನ ಸಹಾಯಕ ಕೃಷಿ ನಿರ್ದೇಶಕರನ್ನ ಸಂಪರ್ಕಿಸಿ, ದೂರು ದಾಖಲಿಸಿದಲ್ಲಿ ಅಂತಹವರ ವಿರುದ್ಧ ಕ್ರಿಮಿನಲ್ ಮೊಕದ್ದಮೆ ಹೂಡಿ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಕೃಷಿ ಜಂಟಿ ನಿರ್ದೇಶಕ ಶರಣಪ್ಪ ಮುದಗಲ್ ಪ್ರಕಟಣೆ ಮೂಲಕ ಎಚ್ಚರಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Election: ಮಠಾಧೀಶರ ಆಶೀರ್ವಾದ ಪಡೆದ ಬಿಜೆಪಿ ಅಭ್ಯರ್ಥಿ ಗಾಯತ್ರಿ ಸಿದ್ದೇಶ್ವರ
Panchamasali ಎಂಬ ಕಾರಣಕ್ಕೆ ಯತ್ನಾಳ್ಗೆ ಸಿಎಂ ಅವಕಾಶ ನಿರಾಕರಣೆ: ವಚನಾನಂದ ಶ್ರೀ
Election Campaign: ಕಾಂಗ್ರೆಸ್ನಲ್ಲಿಲ್ಲ ಮೋದಿಗೆ ಸಮಾನ ನಾಯಕತ್ವ: ಗಾಯಿತ್ರಿ ಸಿದ್ದೇಶ್ವರ
Gayathri Siddeshwar: ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಗಾಯಿತ್ರಿ ಜನ್ಮದಿನ ಆಚರಣೆ
Eshwarappa ವಿರುದ್ಧ ಕ್ರಮದ ಬಗ್ಗೆ ಪಕ್ಷದಿಂದಲೇ ನಿರ್ಧಾರ: ಯಡಿಯೂರಪ್ಪ
MUST WATCH
ಹೊಸ ಸೇರ್ಪಡೆ
Lok Sabha Election: ‘ಬಿವೈಆರ್ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’
ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ
Kushtagi: ನಿರೀಕ್ಷಿತ ಫಲಿತಾಂಶ ಬಾರದ ಹಿನ್ನೆಲೆ ಮನನೊಂದು ವಿದ್ಯಾರ್ಥಿನಿ ಆತ್ಮಹತ್ಯೆ
Vijayapura: ಸಿಡಿಲು ಬಡಿದು ಓರ್ವನಿಗೆ ಗಾಯ, ಮೂರು ಜಾನುವಾರು ಸಾವು
Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್