ಮಾ.15ರೊಳಗೆ ಸಂಪೂರ್ಣ ಅನುದಾನ ಬಳಸಿ

ಪ್ರಗತಿ ಪರಿಶೀಲನಾ ಸಭೆ ಉಳಿದರೆ ಅನುದಾನ ವಾಪಸ್‌ಗುಣಮಟ್ಟದ ಕೆಲಸವಾಗಲಿ

Team Udayavani, Feb 12, 2020, 11:22 AM IST

12-February-3

ದಾವಣಗೆರೆ: ಇಲಾಖೆಗಳ ಅನುದಾನ ವಾಪಸ್ಸಾಗದಂತೆ ಶೇ. 100 ರಷ್ಟು ಅನುದಾನವನ್ನು ಮಾ.15ರೊಳಗೆ ಬಳಕೆ ಮಾಡಬೇಕು ಎಂದು ಜಿಲ್ಲಾ ಪಂಚಾಯತ್‌ ಅಧ್ಯಕ್ಷೆ ಯಶೋಧಮ್ಮ ಮರುಳಪ್ಪ ಎಲ್ಲಾ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

ಮಂಗಳವಾರ ಜಿಲ್ಲಾ ಪಂಚಾಯತ್‌ ಸಭಾಂಗಣದಲ್ಲಿ ನಡೆದ ಮಾಸಿಕ ಪ್ರಗತಿ ಪರಿಶೀಲನಾ ಸಭೆ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಇಲಾಖೆಗಳಿಗೆ ಬಂದಿರುವ ಅನುದಾನ ಹಿಂದಕ್ಕೆ ಹೋಗದಂತೆ ನಿಗದಿತ ಕಾಲಾವಧಿಯಲ್ಲಿ ಸಂಪೂರ್ಣವಾಗಿ ಬಳಕೆ ಮಾಡಬೇಕು ಹಾಗೂ ಗುಣಮಟ್ಟದ ಕೆಲಸ ಮಾಡಬೇಕು ಎಂದು ಸೂಚಿಸಿದರು.

ಎಲ್ಲಾ ಇಲಾಖೆಗಳಿಗೆ ಬಿಡುಗಡೆ ಮಾಡಿರುವ ಅನುದಾನವನ್ನು ಮಾ. 15ರ ಒಳಗೆ ಬಳಕೆ ಮಾಡಲೇಬೇಕು. ಇಲ್ಲದೇ ಹೋದಲ್ಲಿ ಅನುದಾನ ವಾಪಸ್ಸಾಗಲಿದೆ. ಹಾಗಾಗಿ ಉಳಿದಿರುವ ಅಭಿವೃದ್ಧಿ, ಇತರೆ ಕೆಲಸಕ್ಕೆ ಬಳಕೆ ಮಾಡಬೇಕು ಎಂದು ಉಪ ಕಾರ್ಯದರ್ಶಿ ಬಿ. ಆನಂದ್‌ ಸೂಚಿಸಿದರು.

ಇಲಾಖೆಗಳಿಗೆ ಎಸ್‌ಸಿಪಿ, ಟಿಎಸ್‌ಪಿ ಯೋಜನೆಯಡಿ ಬಿಡುಗಡೆಯಾಗಿರುವ ಅನುದಾನ ಖರ್ಚು ಮಾಡಬೇಕು. ಆದರೆ, ಕೆಲವಾರು ಇಲಾಖೆಯಲ್ಲಿ ಬಳಕೆ ಮಾಡಲಾಗಿಲ್ಲ. ಮಾರ್ಚ್‌ ನಂತರ ಉಳಿಯಬಹುದಾದ ಅನುದಾನದ ಪ್ರತ್ಯೇಕವಾಗಿ ಮಾಹಿತಿ ನೀಡಿ ಎಂದು ಸಾಮಾಜಿಕ ನ್ಯಾಯ ಸ್ಥಾಯಿ ಸಮಿತಿ ಅಧ್ಯಕ್ಷ ಎನ್‌.ಲೋಕೇಶ್ವರ್‌ ಸೂಚಿಸಿದರು.

ಮಾದರಿ ಹಾಸ್ಟೆಲ್‌ ಮಾಡಿ: ಹಾಸ್ಟೆಲ್‌ಗ‌ಳಿಗೆ ಬಾಡಿಗೆ ಪಡೆಯುವ ಕಟ್ಟಡಗಳಲ್ಲಿ ವಿದ್ಯಾರ್ಥಿಗಳ ಸಂಖ್ಯೆಗೆ ಅನುಗುಣವಾಗಿ ಶೌಚಾಲಯ ಇತರೆ ಮೂಲಭೂತ ಸೌಲಭ್ಯಗಳು ಇರದ ಬಗ್ಗೆ ಸಾಕಷ್ಟು ದೂರು ಬಂದಿವೆ.

ಹಾಸ್ಟೆಲ್‌ಗ‌ಳಿಗೆ ಭೇಟಿ ನೀಡಿದ್ದಾಗಲೂ ಈ ಸಮಸ್ಯೆ ಕಂಡು ಬಂದಿದೆ. ಹಾಗಾಗಿ ಯಾವುದೇ ಹಾಸ್ಟೆಲ್‌ ಗೆ ಕಟ್ಟಡವನ್ನು ಬಾಡಿಗೆ ಪಡೆಯುವಾಗ ಅಗತ್ಯ ಮೂಲಭೂತ ಸೌಲಭ್ಯ ಇರುವುದನ್ನ ಖಾತರಿ ಪಡಿಸಿಕೊಳ್ಳಬೇಕು. ಸ್ವಂತ ಕಟ್ಟಡ ಹೊಂದಿರುವ ಹಾಸ್ಟೆಲ್‌ಗ‌ಳಲ್ಲಿ ಸೌರ ವಿದ್ಯುತ್‌, ಇತರೆ ಸೌಲಭ್ಯ ಒದಗಿಸುವ ಮೂಲಕ ಮಾದರಿ ಹಾಸ್ಟೆಲ್‌ ಮಾಡಿ ಎಂದು ಉಪ ಕಾರ್ಯದರ್ಶಿ ಬಿ. ಆನಂದ್‌ ಸೂಚಿಸಿದರು.

ನಮಗೆ ತುರ್ತು ಮತ್ತು ಅನಿವಾರ್ಯವಾಗಿ ಬೇಕು ಎಂದು ಕಟ್ಟಡಗಳ ಬಾಡಿಗೆ ಪಡೆಯುತ್ತೇವೆ. ಅನೇಕ ಹಾಸ್ಟೆಲ್‌ಗ‌ಳು ಕಿಷ್ಕಿಂಧೆಯಂತೆ ಇರುತ್ತವೆ. ಮಕ್ಕಳನ್ನು ಜೈಲಿಗೆ ಹಾಕಿದಂತೆ ಇರುತ್ತದೆ. ಮಾಲೀಕರು ಸಹ ಹಾಸ್ಟೆಲ್‌ಗೆ ನೀಡಬೇಕು ಎಂದೇನು ಹೆಚ್ಚಾಗಿ ಶೌಚಾಲಯ ಇತರೆ ಮೂಲಭೂತ ಸೌಲಭ್ಯ ಒದಗಿಸಿರುವುದಿಲ್ಲ. ವಿದ್ಯಾರ್ಥಿಗಳ ಸಂಖ್ಯೆಗೆ ಅನುಗುಣವಾಗಿ ಶೌಚಾಲಯ, ಬಚ್ಚಲು ಮನೆ ಇತರೆ ಅಗತ್ಯ ಮೂಲಭೂತ ಸೌಲಭ್ಯ ಮಾಡಿಕೊಟ್ಟರೆ ಬಾಡಿಗೆಗೆ ಹೋಗಿ ಎಂದು ಸಾಮಾಜಿಕ ನ್ಯಾಯ ಸ್ಥಾಯಿ ಸಮಿತಿ ಅಧ್ಯಕ್ಷ ಎನ್‌. ಲೋಕೇಶ್ವರ್‌ ಸೂಚಿಸಿದರು.

ಕೆಲವು ಕಡೆ ವಿದ್ಯಾರ್ಥಿನಿಯರು ರಾತ್ರಿ ವೇಳೆ ಊಟಕ್ಕೆ ದೂರ ಹೋಗುವುದು ಇದೆ. ವಿದ್ಯಾರ್ಥಿನಿಯರಿಗೆ ಏನಾದರೂ ಅವಘಡವಾದಲ್ಲಿ ಸಂಬಂಧಿತ ಅಧಿಕಾರಿಗಳೇ ಹೊಣೆ ಆಗಬೇಕಾಗುತ್ತದೆ. ಹಾಗಾಗಿ ವಸತಿ ಇರುವ ಕಡೆಯೇ ಅಡುಗೆ ವ್ಯವಸ್ಥೆ ಮಾಡಬೇಕು ಎಂದು ಉಪ ಕಾರ್ಯದರ್ಶಿ ಬಿ. ಆನಂದ್‌ ಜಿಲ್ಲಾ ಹಿಂದುಳಿದ ವರ್ಗಗಳ ಜಿಲ್ಲಾ ಅಧಿಕಾರಿ ಎಸ್‌.ಆರ್‌. ಗಂಗಪ್ಪಗೆ ಸೂಚಿಸಿದರು.

ಕೆಲವು ಹಾಸ್ಟೆಲ್‌ಗ‌ಳಲ್ಲಿ ಮಂಚ ನೀಡಿದ್ದರೆ, ಹಾಸಿಗೆ ನೀಡಿಲ್ಲ. ಕೆಲ ಹಾಸ್ಟೆಲ್‌ಗ‌ಳಲ್ಲಿ ಹಾಸಿಗೆ ನೀಡಿದ್ದರೆ ಮಂಚ ನೀಡಿಲ್ಲ ಏಕೆ ಎಂದು ಅಧ್ಯಕ್ಷೆ ಯಶೋಧಮ್ಮ ಮರುಳಪ್ಪ ಪ್ರಶ್ನಿಸಿದರು. ಸ್ವಂತ ಕಟ್ಟಡ ಹೊಂದಿರುವ ಹಾಸ್ಟೆಲ್‌ಗ‌ಳಿಗೆ ಜೂನ್‌ಗೆ ಮಂಚ, ಹಾಸಿಗೆ ಒದಗಿಸಲಾಗುವುದು ಎಂದು ಸಮಾಜ ಕಲ್ಯಾಣ ಇಲಾಖೆ ಉಪ ನಿರ್ದೇಶಕ ಶಿವಾನಂದ್‌ ಕುಂಬಾರ್‌ ತಿಳಿಸಿದರು.

ಟಾಪ್ ನ್ಯೂಸ್

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

1-WQEWQEWQ

Eshwarappa ಅವರಿಂದ ನಾನೇನು ಕಲಿಯಬೇಕಾಗಿಲ್ಲ: ಗೀತಾ ಶಿವರಾಜ್ ಕುಮಾರ್

Vijayendra (2)

PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ

Lokayukta

Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

1-asaa

Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Vijayendra (2)

PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ

Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್

Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್

Gayatri Siddeshwar: ಸಮಗ್ರ ನೀರಾವರಿ ಸೌಲಭ್ಯಕ್ಕೆ ಆದ್ಯತೆ; ಗಾಯಿತ್ರಿ

Gayatri Siddeshwar: ಸಮಗ್ರ ನೀರಾವರಿ ಸೌಲಭ್ಯಕ್ಕೆ ಆದ್ಯತೆ; ಗಾಯಿತ್ರಿ

Harihara ಬಿಜೆಪಿ ಶಾಸಕ ಬಿ.ಪಿ.ಹರೀಶ್‌ಗೆ ಜೀವ ಬೆದರಿಕೆ,

Harihara ಬಿಜೆಪಿ ಶಾಸಕ ಬಿ.ಪಿ.ಹರೀಶ್‌ಗೆ ಜೀವ ಬೆದರಿಕೆ

bp harish

Harihara; ಅಕ್ರಮ ಮರಳುಗಾರಿಕೆ ಮಾಹಿತಿ ನೀಡಿದ್ದಕ್ಕೆ ಬಿಜೆಪಿ ಶಾಸಕರಿಗೆ ಜೀವ ಬೆದರಿಕೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

12

B.S.Yediyurappa: ಶಾಸಕ ಪ್ರಭು ಚವ್ಹಾಣ ಹೆಸರು ಹೇಳುತ್ತಿದ್ದಂತೆ ಬಿಎಸ್‌ವೈ ಗರಂ

Shimoga: ಈಶ್ವರಪ್ಪ ಪರ ಪ್ರಚಾರ ನಡೆಸಿದ್ದ ಮಹಿಳೆ ಮೇಲೆ ಹಲ್ಲೆ- ದೂರು1

Shimoga: ಈಶ್ವರಪ್ಪ ಪರ ಪ್ರಚಾರ ನಡೆಸಿದ್ದ ಮಹಿಳೆ ಮೇಲೆ ಹಲ್ಲೆ- ದೂರು

Bramavara: “ನನ್ನನ್ನು ಕ್ಷಮಿಸಿ’ ಎಂದು ಹೇಳಿ ನಾಪತ್ತೆ

Bramavara: “ನನ್ನನ್ನು ಕ್ಷಮಿಸಿ’ ಎಂದು ಹೇಳಿ ನಾಪತ್ತೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.