ಕೋವಿಡ್‌ ಮರಣ ಪ್ರಮಾಣ ಇಳಿಕೆ


Team Udayavani, Sep 24, 2020, 7:40 PM IST

ಕೋವಿಡ್‌ ಮರಣ ಪ್ರಮಾಣ ಇಳಿಕೆ

ದಾವಣಗೆರೆ: ಸಾರ್ವಜನಿಕರು ಇತ್ತೀಚೆಗೆ ಕೋವಿಡ್‌ ಸುರಕ್ಷತಾ ಕ್ರಮಗಳನ್ನು ಗಾಳಿಗೆ ತೂರುವ ಜತೆಗೆ ಕೋವಿಡ್‌-19 ತಪಾಸಣೆಗೂ ನಿರಾಕರಿಸುತ್ತಿರುವುದು ಕಂಡು ಬಂದಿದೆ. ಸಾರ್ವಜನಿಕರು ಕೋವಿಡ್ ಬಗ್ಗೆ ನಿರ್ಲಕ್ಷ್ಯ ತೋರದೆ ಸುರಕ್ಷತಾ ಕ್ರಮ ಅನುಸರಿಸುವ ಜೊತೆಗೆ ತಪಾಸಣೆಗೂ ಮುಂದಾಗಬೇಕು ಎಂದು ಜಿಲ್ಲಾಧಿಕಾರಿ ಮಹಾಂತೇಶ್‌ ಬೀಳಗಿ ಹೇಳಿದರು.

ಇಂಡಸ್ಟ್ರಿಯಲ್‌ ಏರಿಯಾದಲ್ಲಿರುವ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ರಾಜ್ಯ ಮಹಿಳಾ ನಿಲಯದಲ್ಲಿ ಬುಧವಾರ ನಡೆದ ವಿಶೇಷ ವಿವಾಹ ಕಾರ್ಯಕ್ರಮದ ಬಳಿಕ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು.

ಕೋವಿಡ್‌ ಹರಡುವಿಕೆಯನ್ನು ತಡೆಗಟ್ಟಲು ಸಾರ್ವಜನಿಕರು ಲಾಕ್‌ಡೌನ್‌ ಸಂದರ್ಭದಲ್ಲಿ ಅನುಸರಿಸಿದ ಮುಂಜಾಗ್ರತಾ ಕ್ರಮಗಳನ್ನು ಈಗ ಅನುಸರಿಸುತ್ತಿಲ್ಲ. ಇದರಿಂದ ಗ್ರಾಮೀಣ ಪ್ರದೇಶಗಳಲ್ಲಿಯೂ ಕೋವಿಡ್‌ ವ್ಯಾಪಕವಾಗಿ ಹರಡುವ ಸಾಧ್ಯತೆ ಇದೆ. ಗ್ರಾಮೀಣ ಪ್ರದೇಶಗಳಲ್ಲಿ ಅತಿ ಹೆಚ್ಚು ಪರೀಕ್ಷೆ ಮಾಡುತ್ತಿದ್ದು, ಹೆಚ್ಚಾಗಿ ಪಾಸಿಟಿವ್‌ ಬರುತ್ತಿದೆ. ಇದರಿಂದಾಗಿ ಮರಣ ಪ್ರಮಾಣ ಕಳೆದೊಂದು ವಾರದಿಂದ ಕಡಿಮೆಯಾಗುತ್ತಿದೆ. ಮರಣ ಪ್ರಮಾಣವನ್ನು ತಗ್ಗಿಸಲು ಸಾರ್ವಜನಿಕರು ಬೇಗ ಪರೀಕ್ಷೆಗೆ ಒಳಗಾಗಿ, ಕೋವಿಡ್‌ ನಿಯಂತ್ರಣಕ್ಕೆ ಸಹಕರಿಸಬೇಕಾಗಿದೆ ಎಂದು ಮನವಿ ಮಾಡಿದರು.

ಇತ್ತೀಚಿನ ದಿನಗಳಲ್ಲಿ ಹೆಚ್ಚು ಹೆಚ್ಚು ಮಾದರಿಗಳನ್ನು ಸಂಗ್ರಹಿಸಿ ಪರೀಕ್ಷೆ ನಡೆಸುವ ಪ್ರಮಾಣ ಹೆಚ್ಚು ಮಾಡಿದ್ದೇವೆ. 60 ವರ್ಷ ಮೇಲ್ಪಟ್ಟ ಹಾಗೂ ನಾನಾ ರೋಗಗಳಿಂದ ಬಳಲುತ್ತಿರುವವರ ಸಮೀಕ್ಷೆ ಮಾಡಿ ಅವರಿಗೆ ಕೋವಿಡ್‌ ಪರೀಕ್ಷೆ ನಡೆಸುತ್ತಿದ್ದೇವೆ. ಆದರೆ ಕೆಲವೆಡೆ ಇದಕ್ಕೆ ಸಾರ್ವಜನಿಕರಿಂದ ಸಹಕಾರ ದೊರೆಯುತ್ತಿಲ್ಲ. ರೋಗ ಬೇಗ ಪತ್ತೆಯಾದಲ್ಲಿ ಚಿಕಿತ್ಸೆ ನೀಡಿ ಬೇಗ ಗುಣಪಡಿಸಲು ಸಾಧ್ಯವಿದೆ. ಹೀಗಾಗಿ ಪರೀಕ್ಷೆಗೆ ಬಂದವರಲ್ಲಿ ರೋಗ ಲಕ್ಷಣಗಳು ಕಂಡುಬಂದರೆ ಚಿಕಿತ್ಸೆಯನ್ನು ತಕ್ಷಣವೇ ಪ್ರಾರಂಭಿಸುವ ಪದ್ಧತಿಯನ್ನು ಜಿಲ್ಲೆಯಲ್ಲಿ ಜಾರಿಗೊಳಿಸಿದ್ದೇವೆ ಎಂದರು.

ಜಿಲ್ಲೆಯಲ್ಲಿ ಈ ವರ್ಷ ವಾಡಿಕೆಗಿಂತ ಸುಮಾರು ಶೇ. 50 ರಷ್ಟು ಹೆಚ್ಚು ಮಳೆಯಾಗಿದೆ. ಜಿಲ್ಲೆಯ ಎಲ್ಲ ತಾಲೂಕುಗಳಲ್ಲಿಯೂ ಈ ವರ್ಷ ವಾಡಿಕೆಗಿಂತ ಹೆಚ್ಚು ಮಳೆಯಾಗಿದ್ದು, ಎಲ್ಲ ತಾಲೂಕುಗಳನ್ನು ಅತಿವೃಷ್ಟಿ ಪೀಡಿತ ತಾಲೂಕುಗಳ ಪಟ್ಟಿಗೆ ಸೇರ್ಪಡೆಗೊಳಿಸಲು ಸರ್ಕಾರಕ್ಕೆ ಈಗಾಗಲೇ ಪ್ರಸ್ತಾವನೆ ಸಲ್ಲಿಸಲಾಗಿದೆ. ಹೆಚ್ಚು ಮಳೆಯಿಂದಾಗಿ ಜಿಲ್ಲೆಯಲ್ಲಿ ಸುಮಾರು 165 ಮನೆಗಳಿಗೆ ಹಾನಿಯಾಗಿದ್ದು ಸಂತ್ರಸ್ತರಿಗೆ ಶೀಘ್ರ ಪರಿಹಾರ ನೀಡಲಾಗುವುದು. – ಮಹಾಂತೇಶ್‌ ಬೀಳಗಿ, ಜಿಲ್ಲಾಧಿಕಾರಿ

ಟಾಪ್ ನ್ಯೂಸ್

Seat next to parents for children under 12 years on the plane?

DGCA: ವಿಮಾನದಲ್ಲಿ 12 ವರ್ಷದೊಳಗಿನ ಮಕ್ಕಳಿಗೆ ಪೋಷಕರ ಪಕ್ಕ ಆಸನ?

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Udupi-Chikmagalur Lok Sabha constituency: ಯುವ ಮತದಾರರ ಚುನಾವಣೆ ಉತ್ಸಾಹ

Udupi-Chikmagalur: ಯುವ ಮತದಾರರ ಚುನಾವಣೆ ಉತ್ಸಾಹ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಚೌಟರನ್ನು ದಾಖಲೆಯ ಅಂತರದಿಂದ ಗೆಲ್ಲಿಸಿ: ತಮಿಳುನಾಡು ಬಿಜೆಪಿ ಅಧ್ಯಕ್ಷ ಅಣ್ಣಾಮಲೈ

Puttur; ಚೌಟರನ್ನು ದಾಖಲೆಯ ಅಂತರದಿಂದ ಗೆಲ್ಲಿಸಿ: ಅಣ್ಣಾಮಲೈ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Harihara ಬಿಜೆಪಿ ಶಾಸಕ ಬಿ.ಪಿ.ಹರೀಶ್‌ಗೆ ಜೀವ ಬೆದರಿಕೆ,

Harihara ಬಿಜೆಪಿ ಶಾಸಕ ಬಿ.ಪಿ.ಹರೀಶ್‌ಗೆ ಜೀವ ಬೆದರಿಕೆ

bp harish

Harihara; ಅಕ್ರಮ ಮರಳುಗಾರಿಕೆ ಮಾಹಿತಿ ನೀಡಿದ್ದಕ್ಕೆ ಬಿಜೆಪಿ ಶಾಸಕರಿಗೆ ಜೀವ ಬೆದರಿಕೆ

Lok Sabha Election: ಕಾಂಗ್ರೆಸ್‌ನಿಂದ ಜನರಿಗೆ ಸುಳ್ಳಿನ ಗ್ಯಾರಂಟಿ: ಗಾಯಿತ್ರಿ ಸಿದ್ದೇಶ್ವರ

Lok Sabha Election: ಕಾಂಗ್ರೆಸ್‌ನಿಂದ ಜನರಿಗೆ ಸುಳ್ಳಿನ ಗ್ಯಾರಂಟಿ: ಗಾಯಿತ್ರಿ ಸಿದ್ದೇಶ್ವರ

1-wqeqwe

Davanagere: ಮತದಾನ ಜಾಗೃತಿ ಲಾಂಛನದಲ್ಲಿ ಅಪರೂಪದ ಪ್ರಾಣಿ ಚಿತ್ರ ಬಳಕೆ

Neha Hiremath Case; Protest by BJP-JDS-ABVP across the state

Neha Hiremath Case; ಬಿಜೆಪಿ-ಜೆಡಿಎಸ್-ಎಬಿವಿಪಿಯಿಂದ ರಾಜ್ಯದೆಲ್ಲೆಡೆ ಪ್ರತಿಭಟನೆ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

Seat next to parents for children under 12 years on the plane?

DGCA: ವಿಮಾನದಲ್ಲಿ 12 ವರ್ಷದೊಳಗಿನ ಮಕ್ಕಳಿಗೆ ಪೋಷಕರ ಪಕ್ಕ ಆಸನ?

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Udupi-Chikmagalur Lok Sabha constituency: ಯುವ ಮತದಾರರ ಚುನಾವಣೆ ಉತ್ಸಾಹ

Udupi-Chikmagalur: ಯುವ ಮತದಾರರ ಚುನಾವಣೆ ಉತ್ಸಾಹ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.