ಪೆಟ್ರೋಲ್-ಡೀಸೆಲ್ ಬೆಲೆ ಇಳಿಕೆಗೆ ಆಗ್ರಹಿಸಿ ಧರಣಿ
Team Udayavani, Feb 14, 2021, 3:35 PM IST
ದಾವಣಗೆರೆ: ಪೆಟ್ರೋಲ್ ಮತ್ತು ಡಿಸೇಲ್ ಬೆಲೆ ಏರಿಕೆಯಿಂದಾಗಿ ದೇಶಾದ್ಯಂತ ಅಗತ್ಯ ವಸ್ತುಗಳ ಬೆಲೆ ಗಗನಕ್ಕೇರಿದ್ದು, ಕೂಡಲೇ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಇಳಿಕೆ ಮಾಡಬೇಕು ಎಂದು ಆನಗೋಡು ಜಿಲ್ಲಾ ಪಂಚಾಯಿತಿ ಸದಸ್ಯ ಕೆ.ಎಸ್. ಬಸವಂತಪ್ಪ ಆಗ್ರಹಿಸಿದರು.
ಮಾಯಕೊಂಡ ಕ್ಷೇತ್ರದ ಅಣಜಿ ಗ್ರಾಮದಲ್ಲಿ ಕಾಂಗ್ರೆಸ್ನಿಂದ ಏರ್ಪಡಿಸಿದ್ದ ಬೃಹತ್ ಪ್ರತಿಭಟನೆ ಸಂದರ್ಭದಲ್ಲಿ ಅವರು ಮಾತನಾಡಿದರು. ಕೋವಿಡ್-19 ಸಮಯದಲ್ಲಿ ಕೃಷಿ ಕಾಯ್ದೆಯನ್ನು ಲೋಕಸಭೆಯಲ್ಲಾಗಲೀ, ಕೃಷಿ ತಜ್ಞರ ಜೊತೆಯಲ್ಲಾಗಲೀ ಇಲ್ಲವೇ ರೈತರೊಂದಿಗೆ ಚರ್ಚಿಸದೆ, ವಿರೋಧ ಪಕ್ಷದವರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳದೇ ಕೇವಲ ಆದೇಶದ ಮೂಲಕ ಕಾಯ್ದೆಯನ್ನು ಜಾರಿಗೊಳಿಸಿರುವುದು ಖಂಡನೀಯ. ದೇಶದ ರೈತರಿಗೆ ಮಾರಕವಾಗಿರುವ ಕೃಷಿ ಕಾಯ್ದೆಯನ್ನು ಕೂಡಲೇ ಹಿಂಪಡೆಯಬೇಕು ಎಂದು ಆಗ್ರಹಿಸಿದರು.
ಹಿಂದಿನ ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ರೈತರ ಸಾಲ ಮನ್ನಾ ಮಾಡಲಾಗಿತ್ತು. ಜೊತೆಗೆ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ವರ್ಗಗಳ ಕಲ್ಯಾಣಾಭಿವೃದ್ಧಿಗೆ ಶ್ರಮಿಸಿ ರೈತರ ಕೃಷಿ ಚಟುವಟಿಕೆ ಬೆಳವಣಿಗೆಗೆ ಸೂಕ್ತ ಕಾಯ್ದೆಗಳನ್ನು ಸಿದ್ದರಾಮಯ್ಯ ಸರ್ಕಾರ ಜಾರಿಗೆ ತಂದಿರುವುದನ್ನು ಮರೆಯಲಾಗದು ಎಂದರು.
ಎಪಿಎಂಸಿ ಅಧ್ಯಕ್ಷ ಎಸ್.ಬಿ. ಚಂದ್ರಶೇಖರ್ ಮಾತನಾಡಿ, ಎಪಿಎಂಸಿ ಕಾಯ್ದೆಯಿಂದ ರೈತರು ಬೀದಿಗೆ ಬರುವ ಪರಿಸ್ಥಿತಿ ಉಂಟಾಗಿದೆ.ಎಪಿಎಂಸಿಯನ್ನು ಮುಚ್ಚುವಂತಾಗಿದ್ದು ರೈತರ ಅನುಕೂಲಕ್ಕಿರುವ ಆವರ್ತ ನಿಧಿಯನ್ನು ಸಮರ್ಪಕವಾಗಿ ಬಳಸದೇ ರೈತರ ಬೆಳೆಗಳನ್ನು ಸಹ ಸೂಕ್ತ ಬೆಂಬಲ ಬೆಲೆಯಲ್ಲಿ ಖರೀದಿಸದೇ ಆವರ್ತ ನಿಧಿಯನ್ನು ಬೇರೆ ಉದ್ದೇಶಕ್ಕೆ ಬಳಸಿಕೊಂಡು ರೈತರಿಗೆ ಅನ್ಯಾಯ ಮಾಡುತ್ತಿದೆ ಎಂದು ಆರೋಪಿಸಿದರು.
ಇದನ್ನೂ ಓದಿ:ಯಾರಿಗೂ ಸಂಶಯ ಬೇಡ, ಮೀಸಲಾತಿ ಬಗ್ಗೆ ಸೂಕ್ತ ನಿರ್ಧಾರ: ಸಿಎಂ ಯಡಿಯೂರಪ್ಪ
ಜಿಪಂ ಸದಸ್ಯ ಓಬಳಪ್ಪ, ಎಪಿಎಂಸಿ ಮಾಜಿ ಉಪಾಧ್ಯಕ್ಷ ರಾಜೇಂದ್ರ, ತಾಪಂ ಸದಸ್ಯ ಚಂದ್ರಪ್ಪ, ಕಾಂಗ್ರೆಸ್ ಮುಖಂಡ ಕೊಟ್ರೇಶ್ ನಾಯ್ಕ, ರಾಜಾ ನಾಯ್ಕ, ಅಂಜಿನಪ್ಪ, ಮಾಯಕೊಂಡ ರುದ್ರೇಶ್, ಕೊಗ್ಗನೂರು ಹನುಮಂತಪ್ಪ ಮತ್ತಿತತರು ಮಾತನಾಡಿ, ಪೆಟ್ರೋಲ್ ಮತ್ತು ಡಿಸೇಲ್ ಬೆಲೆ ಏರಿಕೆ ಮತ್ತು ಕೃಷಿ ಕಾಯ್ದೆಯನ್ನು ಹಿಂಪಡೆಯಲು ಆಗ್ರಹಿಸಿದರು.
ಪ್ರತಿಭಟನೆ ಮೆರವಣಿಗೆ ಗ್ರಾಮದ ದಿಗಂಬರ ದೇವಸ್ಥಾನದಿಂದ ಹೊರಟು ಗ್ರಾಮದ ಪ್ರಮುಖ ಬೀದಿಗಳಲ್ಲಿ ಸಂಚರಿಸಿತು. ಉಪತಹಶೀಲ್ದಾರರಿಗೆ ಮನವಿ ಸಲ್ಲಿಸಲಾಯಿತು. ತಾಪಂ ಮಾಜಿ ಸದಸ್ಯ ಶಂಭುಲಿಂಗಪ್ಪ, ಕಾಂಗ್ರೆಸ್ ಮುಖಂಡ ಆಲೂರು ವೀರಭದ್ರಪ್ಪ, ಆನಗೋಡು ಗ್ರಾಪಂ ಮಾಜಿ ಅಧ್ಯಕ್ಷ ರವಿ, ಅಣಜಿ ಗ್ರಾಪಂ ಅಧ್ಯಕ್ಷೆ ಜ್ಯೋತಿ ಶಶಿಕುಮಾರ್, ಪಿ.ಎನ್. ಶಿವಪ್ರಕಾಶ್, ಅಣಜಿಹೊನ್ನಪ್ಪ, ಬಸವಲಿಂಗಪ್ಪ, ರಾಮಗೊಂಡನಹಳ್ಳಿ ಶರಣಪ್ಪ, ಮೆಳ್ಳೆಕಟ್ಟೆ ಹನುಮಂತಪ್ಪ, ಆಲೂರು ಸೋಮಣ್ಣ, ಹುಲಿಕಟ್ಟೆ ಗ್ರಾಪಂ ಅಧ್ಯಕ್ಷ ಕರಿಯಪ್ಪ, ಬಸವರಾಜ್, ಜ್ಞಾನೇಶ್, ಮ್ಯಾಸರಹಳ್ಳಿ ಪ್ರಭು, ಗುಮ್ಮನೂರು ಲೋಕೇಶ್, ಸಿದ್ದನೂರು ಪ್ರಕಾಶ್, ಕಂದನಕೋವಿ ದೇವೇಂದ್ರಪ್ಪ, ಗ್ರಾ.ಪಂ. ಸದಸ್ಯರುಗಳು, ಕಾಂಗ್ರೆಸ್ ಮುಖಂಡರುಗಳು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Election: ಮಠಾಧೀಶರ ಆಶೀರ್ವಾದ ಪಡೆದ ಬಿಜೆಪಿ ಅಭ್ಯರ್ಥಿ ಗಾಯತ್ರಿ ಸಿದ್ದೇಶ್ವರ
Panchamasali ಎಂಬ ಕಾರಣಕ್ಕೆ ಯತ್ನಾಳ್ಗೆ ಸಿಎಂ ಅವಕಾಶ ನಿರಾಕರಣೆ: ವಚನಾನಂದ ಶ್ರೀ
Election Campaign: ಕಾಂಗ್ರೆಸ್ನಲ್ಲಿಲ್ಲ ಮೋದಿಗೆ ಸಮಾನ ನಾಯಕತ್ವ: ಗಾಯಿತ್ರಿ ಸಿದ್ದೇಶ್ವರ
Gayathri Siddeshwar: ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಗಾಯಿತ್ರಿ ಜನ್ಮದಿನ ಆಚರಣೆ
Eshwarappa ವಿರುದ್ಧ ಕ್ರಮದ ಬಗ್ಗೆ ಪಕ್ಷದಿಂದಲೇ ನಿರ್ಧಾರ: ಯಡಿಯೂರಪ್ಪ
MUST WATCH
ಹೊಸ ಸೇರ್ಪಡೆ
ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ
Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!
Kushtagi:ವಿದ್ಯುತ್ದೀಪದ ಕಂಬಗಳಿಗೆ ಬಲ್ಬ್ ಅಳವಡಿಸುವ ವೇಳೆ ಅವಘಡ; ಪುರಸಭೆ ಸಿಬ್ಬಂದಿಗೆ ಗಾಯ
Festivals: ಹಬ್ಬಗಳು ಮರೆಯಾಗುತ್ತಿವೆಯೇ?
Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್ರಿಂದ ಪರಿಶೀಲನೆ