ತಿಂಗಳಿಗೊಮ್ಮೆ ಇಲಾಖಾ ವಿಚಾರಣೆ ಅದಾಲತ್‌; ಸರಕಾರಿ ನೌಕರರ ವಿಚಾರಣೆ ವಿಳಂಬ ತಡೆಗೆ ಹೊಸ ಕ್ರಮ


Team Udayavani, Mar 28, 2022, 7:05 AM IST

ತಿಂಗಳಿಗೊಮ್ಮೆ ಇಲಾಖಾ ವಿಚಾರಣೆ ಅದಾಲತ್‌; ಸರಕಾರಿ ನೌಕರರ ವಿಚಾರಣೆ ವಿಳಂಬ ತಡೆಗೆ ಹೊಸ ಕ್ರಮ

ದಾವಣಗೆರೆ: ಸರಕಾರಿ ನೌಕರರ ದುರ್ನಡತೆ, ಕರ್ತವ್ಯಲೋಪ ಮುಂತಾದ ಆರೋಪಗಳಿಗೆ ಸಂಬಂ ಧಿಸಿ ನಡೆಯುವ ಇಲಾಖಾ ವಿಚಾರಣೆ ಹಾಗೂ ಶಿಸ್ತುಕ್ರಮ ವಿಳಂಬವಾಗುವುದನ್ನು ತಡೆಯಲು  ಸರಕಾರ ಇದೇ ಮೊದಲ ಬಾರಿಗೆ ಇಲಾಖಾ ವಿಚಾರಣ ಅದಾಲತ್‌ ನಡೆಸಲು ನಿರ್ಧರಿಸಿದೆ.

ಸರಕಾರಿ ನೌಕರರ ಮೇಲಿನ ಆರೋಪಗಳಿಗೆ ಸಂಬಂಧಿಸಿದ ಇಲಾಖಾ ವಿಚಾರಣೆ ಪ್ರಕ್ರಿಯೆ ವಿಳಂಬ ತಡೆಯಲು ಜಿಲ್ಲಾಧಿಕಾರಿಗಳು, ಜಿಪಂ ಸಿಇಒ ಹಾಗೂ ಇಲಾಖಾ ಮುಖ್ಯಸ್ಥರು ಪ್ರತಿ ತಿಂಗಳು ಒಂದು ದಿನ  “ಇಲಾಖಾ ವಿಚಾರಣ ಅದಾಲತ್‌’ ನಡೆಸಲು ಸಿಬಂದಿ ಮತ್ತು ಆಡಳಿತ ಸುಧಾರಣ ಇಲಾಖೆಯ (ಸೇವಾ ನಿಯಮಾವಳಿ) ಅಧೀನ ಕಾರ್ಯದರ್ಶಿ ನಾಗರತ್ನಾ ವಿ. ಪಾಟೀಲ್‌ ಸುತ್ತೋಲೆ ಮೂಲಕ ಎಲ್ಲ ಜಿಲ್ಲಾ ಮುಖ್ಯಸ್ಥರಿಗೆ ನಿರ್ದೇಶಿಸಿದ್ದಾರೆ.

ಸರಕಾರಿ ನೌಕರರ ಮೇಲಿನ ಆಪಾದಿತ ದುರ್ನಡತೆಗೆ ಸಂಬಂಧಿಸಿದ ಕರ್ನಾಟಕ ನಾಗರಿಕ ಸೇವಾ ನಿಯಮಗಳು-1957ರ ನಿಯಮ 11ರಡಿ ವಿಚಾರಣೆ ನಡೆಸಿ ಶಿಸ್ತು ಕ್ರಮ ವಹಿಸಲು ಕಾಲಮಿತಿ ನಿಗದಿಪಡಿಸಲಾಗಿದೆ. ಆದರೂ ಇಲಾಖಾ ವಿಚಾರಣೆ ಪ್ರಕ್ರಿಯೆ ವಿಳಂಬವಾಗುತ್ತಿರುವುದನ್ನು ಗಮನಿಸಿದ ಸರಕಾರ, ಇದರಿಂದ ನೌಕರರ ಕರ್ತವ್ಯ ನಿರ್ವಹಣೆಗೆ ತೊಡಕಾಗಬಾರದೆಂದು ಅದಾಲತ್‌ ಮೂಲಕ ವಿಚಾರಣೆ  ಕ್ಷಿಪ್ರಗೊಳಿಸಲು ತೀರ್ಮಾನಿಸಿದೆ.

ಕಾಲಮಿತಿಯಲ್ಲಿ ವಿಚಾರಣೆ
“ವಿಚಾರಣ ಅದಾಲತ್‌’ನಲ್ಲಿ ಇಲಾಖೆಗಳಲ್ಲಿ ನಡೆಯುತ್ತಿರುವ ವಿಚಾರಣೆ ವಿಳಂಬವಾಗುತ್ತಿದೆಯೇ, ಹೌದಾಗಿದ್ದಲ್ಲಿ ಕಾರಣಗಳೇನು ಎಂಬುದನ್ನು ಪರಿಶೀಲಿಸಬೇಕು. ಸಾಮಾನ್ಯವಾಗಿ ಮಂಡನಾಧಿಕಾರಿಗಳು ಸರಕಾರಿ ನೌಕರರೇ ಆಗಿರುವುದರಿಂದ ನಿಗದಿತ  ಮಾದರಿಯಲ್ಲಿ ವಿವರ ಪಡೆದು  ವಿಳಂಬ ಸರಿ ಪಡಿಸಲು ಸೂಚಿಸಬೇಕು. ಅಗತ್ಯ ಬಿದ್ದಲ್ಲಿ ವಿಚಾರಣಾಧಿಕಾರಿ,  ಮಂಡನಾಧಿಕಾರಿ, ಆಪಾದಿತ ಹಾಗೂ ಸರಕಾರಿ ನೌಕರರಿಗೆ ಕಾಲಮಿತಿಯಲ್ಲಿ ವಿಚಾರಣೆ ಪೂರ್ಣಗೊಳಿ ಸಲು ನಿರ್ದೇಶಿಸಲು  ತಿಳಿಸಲಾಗಿದೆ.

ನಿವೃತ್ತ ಸರಕಾರಿ ನೌಕರರ ವಿರುದ್ಧದ ಇಲಾಖಾ ವಿಚಾರಣೆಗಳಲ್ಲಿ ಅವರಿಂದ ಸರಕಾರಕ್ಕೆ ಆರ್ಥಿಕ ನಷ್ಟ ಉಂಟಾಗಿ ಆ ಮೊತ್ತದ ವಸೂಲಾತಿಗೆ ಇರುವ ಅವಕಾಶ ಹಾಗೂ ಅವರಿಂದ ಘೋರ ನಿರ್ಲಕ್ಷéದ ಅಪರಾಧ ಆಗಿದೆಯೇ ಎಂಬುದನ್ನು ಪರಿಶೀಲಿಸಬೇಕು. ಇಲ್ಲದಿದ್ದಲ್ಲಿ ಅಂಥ  ವಿಚಾರಣೆಗಳನ್ನು  ಮುಗಿಸಲು  ಕ್ರಮ ಕೈಗೊಳ್ಳಲು ಸೂಚಿಸಲಾಗಿದೆ.

ವಿಚಾರಣೆ ವಿಳಂಬಕ್ಕೂ ಶಿಸ್ತುಕ್ರಮ
ಇಲಾಖಾ ಹಂತದಲ್ಲಿವಿಚಾರಣೆ ಕಡತ ನಿರ್ವಹಣೆಯಲ್ಲಿ ವಿಳಂಬವಾಗುತ್ತಿದೆಯೋ ಎಂಬುದನ್ನು ಪರಿಶೀಲಿಸಿ ಅವರಿಗೆ ಸೂಕ್ತ ಸಲಹೆ ನೀಡಬೇಕು.  ಬಳಿಕವೂ ವಿಳಂಬವಾಗುತ್ತಿದ್ದಲ್ಲಿ ಅಂಥ ಸರಕಾರಿ ನೌಕರರ ವಿರುದ್ಧವೇ ಕರ್ತವ್ಯಲೋಪದ ಆಧಾರರ ಮೇಲೆ ಶಿಸ್ತಿನ ಕ್ರಮ ಪ್ರಾರಂಭಿಸಬೇಕು. ವಿಚಾರಣಾಧಿಕಾರಿಗಳಾಗಿ ನಿವೃತ್ತ ಸರಕಾರಿ ನೌಕರರನ್ನು ನೇಮಿಸಿದಲ್ಲಿ ಹಾಗೂ ಯಾವುದಾದರೂ ನಿರ್ದಿಷ್ಟ ವಿಚಾರಣಾಧಿಕಾರಿಯಿಂದ ವಿಚಾರಣೆ ವಿಳಂಬವಾದರೆ ಅಂಥವರಿಗೆ ಮುಂದಿನ ಯಾವುದೇ ಇಲಾಖಾ ವಿಚಾರಣೆಯನ್ನು  ವಹಿಸದಂತೆ ಎಚ್ಚರಿಕೆ ವಹಿಸಬೇಕು.

-ಎಚ್‌.ಕೆ. ನಟರಾಜ

ಟಾಪ್ ನ್ಯೂಸ್

1-adasdsad

Davanagere; ಪ್ರಧಾನಿ ಮೋದಿ ರ್‍ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

1-wewqewqewq

Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ

1-aaaa

Vijaypura:ರಾಹುಲ್ ಗಾಂಧಿ ನಿರ್ಗಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ

1-sadsadad

CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-aaaa

Vijaypura:ರಾಹುಲ್ ಗಾಂಧಿ ನಿರ್ಗಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

LS Polls: ರಾಜ್ಯದಲ್ಲಿ ಕಾಂಗ್ರೆಸ್‌ ವಿರೋಧಿ ಅಲೆ: ರಾಘವೇಂದ್ರ

LS Polls: ರಾಜ್ಯದಲ್ಲಿ ಕಾಂಗ್ರೆಸ್‌ ವಿರೋಧಿ ಅಲೆ: ರಾಘವೇಂದ್ರ

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-adasdsad

Davanagere; ಪ್ರಧಾನಿ ಮೋದಿ ರ್‍ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

1-wewqewqewq

Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ

1-aaaa

Vijaypura:ರಾಹುಲ್ ಗಾಂಧಿ ನಿರ್ಗಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ

ಕೇಂದ್ರದಿಂದ 16 ಲಕ್ಷ ಕೋಟಿ ಉದ್ಯಮಿ ಸಾಲ ಮನ್ನಾ:ಎಸ್‌.ವರಲಕ್ಷ್ಮೀ

ಕೇಂದ್ರದಿಂದ 16 ಲಕ್ಷ ಕೋಟಿ ಉದ್ಯಮಿ ಸಾಲ ಮನ್ನಾ:ಎಸ್‌.ವರಲಕ್ಷ್ಮೀ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.