ಬಸ್‌ ಚಾಲಕನ ಕೊಲೆ ಆರೋಪಿಗಳ ಬಂಧನ


Team Udayavani, Jul 20, 2017, 9:46 AM IST

20-DV-4.gif

ದಾವಣಗೆರೆ: ಅನೈತಿಕ ಸಂಬಂಧದ ಜಗಳದಲ್ಲಿ ನಡೆದಿದ್ದ ಖಾಸಗಿ ಬಸ್‌ ಚಾಲಕನ ಕೊಲೆ ಘಟನೆ ಬೇಧಿಸಿರುವ ಚನ್ನಗಿರಿ ಪೊಲೀಸರು,
ಪ್ರಕಟಣಕ್ಕೆ ಸಂಬಂಧಿಸಿದಂತೆ ಮಹಿಳೆ ಸೇರಿ ಮೂವರನ್ನು ಬಂಧಿಸಿದ್ದಾರೆ.

ಚನ್ನಗಿರಿ ತಾಲೂಕು ಮಲ್ಲಿಗೇನಹಳ್ಳಿ ಗ್ರಾಮದ ಬಸ್‌ ಚಾಲಕ ಸಿದ್ದೇಶ್‌ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಟ್ಟಕಡೂರು
ಗ್ರಾಮದ ಮಂಜುನಾಥ್‌ (34), ಶ್ರುತಿ (27) ಹಾಗೂ ಶವ ಸಾಗಿಸಲು ನೆರವಾಗಿದ್ದ ಗೋವಿಂದಪ್ಪ (38) ನನ್ನು ಬಂಧಿಸಲಾಗಿದೆ.
ಮೂಲತಃ ಮಲ್ಲಿಗೇನಹಳ್ಳಿ ಗ್ರಾಮದ ಸಿದ್ದೇಶ್‌ ಬೆಟ್ಟಕಡೂರು ಗ್ರಾಮದ ಶ್ರುತಿಯೊಂದಿಗೆ ಮೂರು ವರ್ಷದಿಂದ ಅನೈತಿಕ
ಸಂಬಂಧ ಹೊಂದಿದ್ದ. ಈ ನಡುವೆ ಕಳೆದ ಎರಡು ತಿಂಗಳನಿಂದ ಶ್ರುತಿ ಬೆಟ್ಟದಕಡೂರು ಗ್ರಾಮದ ಮಂಜುನಾಥನೊಂದಿಗೆ ಸಹ
ಸಂಬಂಧ ಹೊಂದಿದ್ಧಳು. 

ಈ ವಿಷಯ ತಿಳಿದ ಸಿದ್ದೇಶ್‌ ಕುಪಿತಗೊಂಡಿದ್ದ. ಅನೇಕ ಬಾರಿ ಆಕೆಯೊಂದಿಗೆ ಜಗಳವಾಡಿದ್ದನು. ಕೊಲೆಗೀಡಾಗುವ ದಿನ (ಜು.14)
ರಂದು ರಾತ್ರಿ ಆತ ಶ್ರುತಿಯ ಮನೆಗೆ ಹೋಗಿದ್ದ. ಅದೇ ಸಮಯಕ್ಕೆ ಮಂಜುನಾಥ ಸಹ ಬಂದಾಗ ಅವರಿಬ್ಬರ ನಡುವೆ ಗಲಾಟೆ ನಡೆದಿದೆ. ಒಂದು ಹಂತದಲ್ಲಿ ಮಂಜುನಾಥ್‌ ಹನಿ ನೀರಾವರಿಗೆ ಅಳವಡಿಸುವ ಡ್ರಿಪ್‌ ವೈರ್‌ನಿಂದ ಸಿದ್ದೇಶ್‌ನ ಕುತ್ತಿಗೆಗೆ ಹಾಕಿ ಕೊಲೆ ಮಾಡಿದ್ದಾನೆ. ಶ್ರುತಿ ಮತ್ತು ಮಂಜುನಾಥ್‌ ಸಿದ್ದೇಶ್‌ನ ಶವವನ್ನು ಮನೆಯ ಹಿಂಭಾಗದಲ್ಲೇ ಇರುವ ತೋಟದಲ್ಲಿ ಇಟ್ಟಿದ್ದರು.

ತಡರಾತ್ರಿಯಲ್ಲಿ ಮಂಜುನಾಥ ತನ್ನ ಸ್ನೇಹಿತ ಬೆಟ್ಟದಕಡೂರಿನ ಗೋವಿಂದಪ್ಪನನ್ನು ಕರೆಸಿಕೊಂಡು, ಮೂವರು ಸೇರಿಕೊಂಡು ಶವವನ್ನು ಗ್ರಾಮದ ಹೊರ ವಲಯದ ಅಡಕೆ ತೋಟದಲ್ಲಿ ಎಸೆದು ಬಂದಿದ್ದರು. ಜು. 15 ರಂದು ಬೆಟ್ಟಕಡೂರು ಗ್ರಾಮದ ಹೊರ ವಲಯದ ಅಡಕೆ ತೋಟದಲ್ಲಿ ಖಾಸಗಿ ಬಸ್‌ ಚಾಲಕ ಸಿದ್ದೇಶ್‌ ಶವ ಪತ್ತೆಯಾಗಿತ್ತು. ಮೇಲ್ನೋಟಕ್ಕೆ ಕೊಲೆ ಎಂದು ಕಂಡು ಬಂದ ಹಿನ್ನೆಲೆಯಲ್ಲಿ ಕೊಲೆ ಪ್ರಕರಣ ದಾಖಲಿಸಿಕೊಂಡಿದ್ದ ಚನ್ನಗಿರಿ ಪೊಲೀಸರು, ಪ್ರಕರಣ ಭೇದಿಸಿ, ಮಂಗಳವಾರ ಮೂವರನ್ನು
ಬಂಧಿಸಿದ್ದಾರೆ ಎಂದು ಜಿಲ್ಲಾ ರಕ್ಷಣಾಧಿಕಾರಿ ಡಾ| ಭೀಮಾಶಂಕರ್‌ ಎಸ್‌. ಗುಳೇದ್‌ ಬುಧವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.
ಕೊಲೆ ಪ್ರಕರಣದ ಆರೋಪಿ ಶ್ರುತಿಗೆ 5 ಮತ್ತು 2 ವರ್ಷದ ಇಬ್ಬರು ಮಕ್ಕಳಿದ್ದಾರೆ. ಕೊಲೆ ಪ್ರಕರಣಕ್ಕೂ ಶ್ರುತಿಯ ಪತಿ
ಹನುಮಂತಪ್ಪನಿಗೆ ಯಾವುದೇ ಸಂಬಂಧವೇ ಇಲ್ಲ. ಕೊಲೆ ನಡೆದ ದಿನ ಹನುಮಂತಪ್ಪ ಮನೆಯಲ್ಲಿ ಇರಲಿಲ್ಲ ಎಂದು ಪ್ರಶ್ನೆಯೊಂದಕ್ಕೆ
ಉತ್ತರಿಸಿದರು.

ಕೊಲೆ ಪ್ರಕರಣ ಭೇದಿಸಿದ ಹೆಚ್ಚುವರಿ ಪೊಲೀಸ್‌ ಅಧೀಕ್ಷಕಿ ಯಶೋಧಾ ಎಸ್‌. ವಂಟಿಗೋಡಿ, ಗ್ರಾಮಾಂತರ ಉಪ ವಿಭಾಗ
ಉಪಾಧೀಕ್ಷಕ ಮಂಜುನಾಥ್‌ ಕೆ. ಗಂಗಲ್‌, ಚನ್ನಗಿರಿ ವೃತ್ತ ನಿರೀಕ್ಷಕ ಆರ್‌.ಆರ್‌. ಪಾಟೀಲ್‌, ಪಿಎಸ್‌ಐ ವೀರಬಸಪ್ಪ ಕುಸಲಾಪುರ,
ಸಿಬ್ಬಂದಿಗಳಾದ ರಾಮಚಂದ್ರ ಆರ್‌. ಜಾಧವ್‌, ರಮೇಶ್‌, ಬಿ.ಎಸ್‌. ರೂಪ್ಲಿಬಾಯಿ, ಹೊನ್ನೂರುಸಾಬ್‌, ಹನುಮಂತ ಕವಾಡಿ, ಶೋಭಾ, ಪದ್ಮಾವತಿ, ಎಸ್‌.ಆರ್‌. ರುದ್ರೇಶ್‌, ರವಿ ದಾದಾಪುರ, ರವೀಂದ್ರ, ಗುರುನಾಯ್ಕ, ರಘು, ರೇವಣ್ಣ, ಪರಮೇಶ್‌ನಾಯ್ಕ ಅವರಿಗೆ ನಗದು ಬಹುಮಾನ ನೀಡಲಾಗುವುದು ಎಂದು ತಿಳಿಸಿದರು.

ಹೆಚ್ಚುವರಿ ಪೊಲೀಸ್‌ ಅಧೀಕ್ಷಕಿ ಯಶೋಧಾ ಎಸ್‌. ವಂಟಿಗೋಡಿ, ಗ್ರಾಮಾಂತರ ಉಪ ವಿಭಾಗ ಉಪಾಧೀಕ್ಷಕ ಮಂಜುನಾಥ್‌ ಕೆ.
ಗಂಗಲ್‌, ಚನ್ನಗಿರಿ ವೃತ್ತ ನಿರೀಕ್ಷಕ ಆರ್‌.ಆರ್‌. ಪಾಟೀಲ್‌, ಪಿಎಸ್‌ಐ ವೀರಬಸಪ್ಪ ಕುಸಲಾಪುರ ಸುದ್ದಿಗೋಷ್ಠಿಯಲ್ಲಿದ್ದರು.

ಟಾಪ್ ನ್ಯೂಸ್

gayi

Davanagere; ಗಾಯಿತ್ರಿ ಸಿದ್ದೇಶ್ವರ್‌ ಅಂತಿಮ ನಾಮಪತ್ರ ಸಲ್ಲಿಕೆ; ಭರ್ಜರಿ ಮೆರವಣಿಗೆ

4-shirva

Rain: ಕಟಪಾಡಿ-ಶಿರ್ವ ರಾಜ್ಯ ಹೆದ್ದಾರಿ; ಮೊದಲ ಮಳೆಯ ಅವಾಂತರ; ರಸ್ತೆ ಕೆಸರುಮಯ

Gadag ಬೆಳ್ಳಂಬೆಳಗ್ಗೆ ವರುಣಾರ್ಭಟ ಆರಂಭ; ಮುಂಗಾರು ನಿರೀಕ್ಷೆ ಹೆಚ್ಚಿಸಿದ ಅಶ್ವಿನಿ ಮಳೆ

Gadag ಬೆಳ್ಳಂಬೆಳಗ್ಗೆ ವರುಣಾರ್ಭಟ ಆರಂಭ; ಮುಂಗಾರು ನಿರೀಕ್ಷೆ ಹೆಚ್ಚಿಸಿದ ಅಶ್ವಿನಿ ಮಳೆ

Boat Capsizes In Odisha’s Mahanadi River

Mahanadi River Tragedy: ಮಗುಚಿದ 50 ಜನರಿದ್ದ ದೋಣಿ; ಇಬ್ಬರು ಸಾವು; ಎಂಟು ಮಂದಿ ನಾಪತ್ತೆ

Tamil Nadu BJP chief Annamalai demands re-poll due to missing voter names

Loksabha Election; ತಮಿಳುನಾಡಿನಲ್ಲಿ ಮರು ಮತದಾನಕ್ಕೆ ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ಆಗ್ರಹ

3-blthngady

ತಾಲೂಕಿನೆಲ್ಲೆಡೆ ಮುಂಜಾನೆ ಭಾರಿ ಮಳೆ;ಕೆಸರುಮಯ ರಾಷ್ಟ್ರೀಯ ಹೆದ್ದಾರಿಯಾಗಿಸಿದ ಗುತ್ತಿಗೆದಾರರು

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

gayi

Davanagere; ಗಾಯಿತ್ರಿ ಸಿದ್ದೇಶ್ವರ್‌ ಅಂತಿಮ ನಾಮಪತ್ರ ಸಲ್ಲಿಕೆ; ಭರ್ಜರಿ ಮೆರವಣಿಗೆ

1-weqwewqe

Davangere: 10 ರೂ.ಗಳ ನಾಣ್ಯ ರೂಪದಲ್ಲಿ 25 ಸಾವಿರ ರೂ. ಠೇವಣಿ ಕಟ್ಟಿದ ಅಭ್ಯರ್ಥಿ!

1-wwqwqe

BJP ಶ್ರೀರಾಮುಲು, ಗಾಯತ್ರಿ ಸಿದ್ದೇಶ್ವರ್ ಈಗಾಗಲೇ ಗೆದ್ದಿದ್ದಾರೆ: ಜನಾರ್ದನ ರೆಡ್ಡಿ

Davanagere; ಮುಖ್ಯಮಂತ್ರಿ ಜವಾಬ್ದಾರಿಯಿಂದ ಹೇಳಿಕೆ ನೀಡಬೇಕು: ಎಂ.ಪಿ. ರೇಣುಕಾಚಾರ್ಯ

Davanagere; ಮುಖ್ಯಮಂತ್ರಿ ಜವಾಬ್ದಾರಿಯಿಂದ ಹೇಳಿಕೆ ನೀಡಬೇಕು: ಎಂ.ಪಿ. ರೇಣುಕಾಚಾರ್ಯ

Lok Sabha Election: ಮಠಾಧೀಶರ ಆಶೀರ್ವಾದ ಪಡೆದ ಬಿಜೆಪಿ ಅಭ್ಯರ್ಥಿ ಗಾಯಿತಿ ಸಿದ್ದೇಶ್ವರ

Lok Sabha Election: ಮಠಾಧೀಶರ ಆಶೀರ್ವಾದ ಪಡೆದ ಬಿಜೆಪಿ ಅಭ್ಯರ್ಥಿ ಗಾಯತ್ರಿ ಸಿದ್ದೇಶ್ವರ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Chain theft: ಒಂಟಿ ಮಹಿಳೆಯರ ಸರ ಕದಿಯುತ್ತಿದ್ದ 5 ಬಂಧನ; 10.82 ಲಕ್ಷದ ವಸ್ತು ಜಪ್ತಿ

Chain theft: ಒಂಟಿ ಮಹಿಳೆಯರ ಸರ ಕದಿಯುತ್ತಿದ್ದ 5 ಬಂಧನ; 10.82 ಲಕ್ಷದ ವಸ್ತು ಜಪ್ತಿ

Hubli;ತಪ್ಪಿತಸ್ಥರಿಗೆ ಶಿಕ್ಷೆ ಆಗಲೇಬೇಕು: ನೇಹಾ ಮನೆಗೆ ಫಕೀರ ಸಿದ್ಧರಾಮೇಶ್ವರ ಶಿವಯೋಗಿ ಭೇಟಿ

Hubli;ತಪ್ಪಿತಸ್ಥರಿಗೆ ಶಿಕ್ಷೆ ಆಗಲೇಬೇಕು: ನೇಹಾ ಮನೆಗೆ ಫಕೀರ ಸಿದ್ಧರಾಮೇಶ್ವರ ಶಿವಯೋಗಿ ಭೇಟಿ

gayi

Davanagere; ಗಾಯಿತ್ರಿ ಸಿದ್ದೇಶ್ವರ್‌ ಅಂತಿಮ ನಾಮಪತ್ರ ಸಲ್ಲಿಕೆ; ಭರ್ಜರಿ ಮೆರವಣಿಗೆ

4-shirva

Rain: ಕಟಪಾಡಿ-ಶಿರ್ವ ರಾಜ್ಯ ಹೆದ್ದಾರಿ; ಮೊದಲ ಮಳೆಯ ಅವಾಂತರ; ರಸ್ತೆ ಕೆಸರುಮಯ

Gadag ಬೆಳ್ಳಂಬೆಳಗ್ಗೆ ವರುಣಾರ್ಭಟ ಆರಂಭ; ಮುಂಗಾರು ನಿರೀಕ್ಷೆ ಹೆಚ್ಚಿಸಿದ ಅಶ್ವಿನಿ ಮಳೆ

Gadag ಬೆಳ್ಳಂಬೆಳಗ್ಗೆ ವರುಣಾರ್ಭಟ ಆರಂಭ; ಮುಂಗಾರು ನಿರೀಕ್ಷೆ ಹೆಚ್ಚಿಸಿದ ಅಶ್ವಿನಿ ಮಳೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.