ಅಭಿವೃದ್ಧಿಗಾಗಿ ಜೀವ ವೈವಿಧ್ಯಕ್ಕೆ ಧಕ್ಕೆ ಬೇಡ

ಕುಂದವಾಡ ಕೆರೆ ಮೋಜುಮಸ್ತಿ ತಾಣವಾಗದಿರಲಿ 

Team Udayavani, Jan 21, 2021, 5:29 PM IST

davanagere

ದಾವಣಗೆರೆ: ಅಭಿವೃದ್ಧಿ ಹೆಸರಿನಲ್ಲಿ ಕುಂದುವಾಡಕೆರೆ ಹಾಳು ಮಾಡಿ ಜೀವ ವೈವಿಧ್ಯಕ್ಕೆ ಧಕ್ಕೆಯನ್ನುಂಟುಮಾಡಬಾರದು. ಒಂದು ವೇಳೆ ಹಠಮಾರಿತನ ತೋರಿ ಕೆರೆ ಅಭಿವೃದ್ಧಿಗೆ ಮುಂದಾದರೆ ಈ ಬಗ್ಗೆ ರಾಷ್ಟ್ರೀಯ ಹಸಿರು ಮಂಡಳಿಯಲ್ಲಿ ದೂರು ದಾಖಲಿಸಲಾಗುವುದು ಎಂದು ಪರಿಸರವಾದಿಗಳು ಎಚ್ಚರಿಕೆ ನೀಡಿದರು.

ಈ ಕುರಿತು ಬುಧವಾರ ಸುದ್ದಿಗೋಷ್ಠಿ ನಡೆಸಿದ ಅವರು, ಕುಂದವಾಡ ಕೆರೆ ಅಭಿವೃದ್ಧಿಯಿಂದ ಕೆರೆ ಮೋಜುಮಸ್ತಿಯ ತಾಣಗಳಾಗಬಾರದು. ಹಾಗಾಗಿ ಅಭಿವೃದ್ಧಿಯಲ್ಲಿ ತೆಗೆದುಕೊಂಡಿರುವ ಕೆಲಸಗಳು ಅನವಶ್ಯಕವಾಗಿವೆ. ಕುಂದವಾಡ ಕೆರೆ ಜೀವವೈವಿಧ್ಯತೆಯ  ತಾಣವಾಗಿದ್ದು, ಇಲ್ಲಿ ಕಾಮಗಾರಿ ನಿರ್ವಹಿಸುವುದರಿಂದ  ಸ್ವಾಭಾವಿಕ ಪರಿಸರ ಹಾಳಾಗಿ ಜೀವವೈವಿಧ್ಯತೆಗೆ ತೊಂದರೆಯಾಗುತ್ತದೆ. ಇಲ್ಲಿ 150ಕ್ಕೂ ಹೆಚ್ಚು ವಿವಿಧ ಜಾತಿಯ ಹಕ್ಕಿಗಳು ದೇಶ ವಿದೇಶಗಳಿಂದ ಬರುತ್ತಿದ್ದು, ಇವುಗಳಿಗೆ ತೊಂದರೆಯಾಗುತ್ತದೆ ಎಂದರು.

ಇದನ್ನೂಓದಿ : ಸೀಶೆಲ್ಸ್, ಮಯಾನ್ಮಾರ್ ದೇಶಗಳಿಗೆ ಭಾರತದ ಕೋವಿಡ್ ಲಸಿಕೆ ರವಾನೆ

ಕೆರೆಯ ಜಲಚರಗಳು ಸಹ ನೀರಿಲ್ಲದೇ ಸಂಕಷ್ಟದಲ್ಲಿದ್ದು, ಈಗ ಕಾಮಗಾರಿ ಕೈಗೆತ್ತಿಕೊಂಡರೆ ಅವು ಸಹ ನಾಶವಾಗುತ್ತವೆ. ಸುತ್ತಲಿನ ಪೊದೆಗಳು, ಸಣ್ಣ ಗಿಡ-ಗಂಟಿಗಳು ಹಲವಾರು ಹಕ್ಕಿಗಳಿಗೆ ಗೂಡು ಕಟ್ಟಿಕೊಳ್ಳಲು, ನೂರಾರು ಚಿಟ್ಟೆ, ಕೀಟಗಳಿಗೆ ಆಹಾರ, ಆಶ್ರಯ ನೀಡಿವೆ. ಇದು ಪರಿಸರ ಅಧ್ಯಯನ ತಾಣವಾಗಬೇಕು. ಆದ್ದರಿಂದ ಜಿಲ್ಲಾಡಳಿತ ಈ ಕೆರೆ ಅಭಿವೃದ್ಧಿ ಹೆಸರಲ್ಲಿ ಜೀವ ಸಂಕುಲಕ್ಕೆ ಧಕ್ಕೆ ತರಬಾರದು ಎಂದು ಪರಿಸರವಾದಿಗಳು ವಿನಂತಿಸಿದರು.

ಕೇವಲ ಮಾನವ ಕೇಂದ್ರೀಕೃತವಾಗಿ ಕೆರೆ ಅಭಿವೃದ್ಧಿ ಕಾಮಗಾರಿ ಕೈಗೊಳ್ಳುವುದನ್ನು ಬಿಡಬೇಕು. ಜೀವಜಲಕ್ಕೆ ಅಪಾಯ ತಂದು ಜನರ ಜೀವದ ಜತೆ ಚೆಲ್ಲಾಟವಾಡಬಾರದು. ಕೆರೆಯನ್ನು ಮಾನವೀಯ ವಿಚಾರವಾಗಿ ನೋಡಬೇಕೇ ಹೊರತು ವಾಣಿಜ್ಯ ದೃಷ್ಟಿಯಿಂದ ನೋಡಿ ಲಾಭದ ಲೆಕ್ಕಾಚಾರ ಮಾಡಬಾರದು. ಯಾವುದೇ ಅಭಿವೃದ್ಧಿ ಕೆಲಸ ಮಾಡುವಾಗಲೂ ಸ್ಥಳೀಯರು, ಪರಿಸರ ತಜ್ಞರ ಅಭಿಪ್ರಾಯ ಸಂಗ್ರಹಿಸಬೇಕು. ಆದರೆ, ಜಿಲ್ಲಾಡಳಿತ ಕೆರೆ ಅಭಿವೃದ್ಧಿ ವಿಚಾರದಲ್ಲಿ ಪರಿಸರವಾದಿಗಳನ್ನು ಕಡೆಗಣಿಸಿದೆ ಎಂದರು. ವಿವಿಧ ಪರಿಸರ ಸಂಘಟನೆಗಳ ಪ್ರಮುಖರಾದ ಗೋಪಾಲಗೌಡ, ಗಿರೀಶ್‌ ದೇವರಮನೆ, ಸಿದ್ದಯ್ಯ, ಶಿವನಕೆರೆ ಬಸವಲಿಂಗಪ್ಪ ಇನ್ನಿತರರು ಸುದ್ದಿಗೋಷ್ಠಿಯಲ್ಲಿದ್ದರು.

ಇದನ್ನೂಓದಿ : ಶಿಥಿಲಾವಸ್ಥೆಯಲ್ಲಿ 25 ವರ್ಷ ಹಿಂದಿನ ನೀರಿನ ಟ್ಯಾಂಕ್‌

ಟಾಪ್ ನ್ಯೂಸ್

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

ಬಸ್ರೂರಿನ ಶಾಸನಗಳನ್ನು ಉಳಿಸುವವರಾರು?

ಬಸ್ರೂರಿನ ಶಾಸನಗಳನ್ನು ಉಳಿಸುವವರಾರು?

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?

IPL 2024; Chahal’s 200-wicket haul; First bowler to achieve this feat

IPL 2024; ಚಹಲ್‌ 200 ವಿಕೆಟ್‌ಗಳ ಕಮಾಲ್‌; ಈ ಸಾಧನೆಗೈದ ಮೊದಲ ಬೌಲರ್‌

Mangalore University; ಪದವಿಗೆ ಸೇರಲು 4 ತಿಂಗಳು ಕಾಯಬೇಕು!

Mangalore University; ಪದವಿಗೆ ಸೇರಲು 4 ತಿಂಗಳು ಕಾಯಬೇಕು!

Andhra ಟಿಡಿಪಿ ಅಭ್ಯರ್ಥಿ ಆಸ್ತಿ ಬರೋಬ್ಬರಿ 5,785 ಕೋ.ರೂ.!

Andhra ಟಿಡಿಪಿ ಅಭ್ಯರ್ಥಿ ಆಸ್ತಿ ಬರೋಬ್ಬರಿ 5,785 ಕೋ.ರೂ.!

ಕಾಂಗ್ರೆಸ್‌ ವಿರುದ್ಧ ಮೋದಿ ಈಗ ದೇಶ ವಿಭಜನೆ ಅಸ್ತ್ರ ಪ್ರಯೋಗ

Loksabha election; ಕಾಂಗ್ರೆಸ್‌ ವಿರುದ್ಧ ಮೋದಿ ಈಗ ದೇಶ ವಿಭಜನೆ ಅಸ್ತ್ರ ಪ್ರಯೋಗ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Harihara ಬಿಜೆಪಿ ಶಾಸಕ ಬಿ.ಪಿ.ಹರೀಶ್‌ಗೆ ಜೀವ ಬೆದರಿಕೆ,

Harihara ಬಿಜೆಪಿ ಶಾಸಕ ಬಿ.ಪಿ.ಹರೀಶ್‌ಗೆ ಜೀವ ಬೆದರಿಕೆ

bp harish

Harihara; ಅಕ್ರಮ ಮರಳುಗಾರಿಕೆ ಮಾಹಿತಿ ನೀಡಿದ್ದಕ್ಕೆ ಬಿಜೆಪಿ ಶಾಸಕರಿಗೆ ಜೀವ ಬೆದರಿಕೆ

Lok Sabha Election: ಕಾಂಗ್ರೆಸ್‌ನಿಂದ ಜನರಿಗೆ ಸುಳ್ಳಿನ ಗ್ಯಾರಂಟಿ: ಗಾಯಿತ್ರಿ ಸಿದ್ದೇಶ್ವರ

Lok Sabha Election: ಕಾಂಗ್ರೆಸ್‌ನಿಂದ ಜನರಿಗೆ ಸುಳ್ಳಿನ ಗ್ಯಾರಂಟಿ: ಗಾಯಿತ್ರಿ ಸಿದ್ದೇಶ್ವರ

1-wqeqwe

Davanagere: ಮತದಾನ ಜಾಗೃತಿ ಲಾಂಛನದಲ್ಲಿ ಅಪರೂಪದ ಪ್ರಾಣಿ ಚಿತ್ರ ಬಳಕೆ

Neha Hiremath Case; Protest by BJP-JDS-ABVP across the state

Neha Hiremath Case; ಬಿಜೆಪಿ-ಜೆಡಿಎಸ್-ಎಬಿವಿಪಿಯಿಂದ ರಾಜ್ಯದೆಲ್ಲೆಡೆ ಪ್ರತಿಭಟನೆ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

ಬಸ್ರೂರಿನ ಶಾಸನಗಳನ್ನು ಉಳಿಸುವವರಾರು?

ಬಸ್ರೂರಿನ ಶಾಸನಗಳನ್ನು ಉಳಿಸುವವರಾರು?

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?

IPL 2024; Chahal’s 200-wicket haul; First bowler to achieve this feat

IPL 2024; ಚಹಲ್‌ 200 ವಿಕೆಟ್‌ಗಳ ಕಮಾಲ್‌; ಈ ಸಾಧನೆಗೈದ ಮೊದಲ ಬೌಲರ್‌

Mangalore University; ಪದವಿಗೆ ಸೇರಲು 4 ತಿಂಗಳು ಕಾಯಬೇಕು!

Mangalore University; ಪದವಿಗೆ ಸೇರಲು 4 ತಿಂಗಳು ಕಾಯಬೇಕು!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.