ದತ್ತು ಶಾಲೆಗೆ ಬೇಕಿದೆ ಕಾಯಕಲ್ಪ

ಚನ್ನಗಿರಿ ಶಾಸಕ ಮಾಡಾಳ್‌ ವಿರೂಪಾಕ್ಷಪ್ಪರಿಂದ 3 ಶಾಲೆ ದತ್ತು ,88 ಲಕ್ಷ ರೂ. ವೆಚ್ಚದಲ್ಲಿ ಅಭಿವೃದಿ

Team Udayavani, Dec 25, 2020, 5:45 PM IST

ದತ್ತು ಶಾಲೆಗೆ ಬೇಕಿದೆ ಕಾಯಕಲ್ಪ

ದಾವಣಗೆರೆ: ಶಾಸಕರ ಪ್ರದೇಶಾಭಿವೃದ್ಧಿ ಯೋಜನೆಯಲ್ಲಿ ಚನ್ನಗಿರಿ ವಿಧಾನಸಭೆ ಕ್ಷೇತ್ರದ ಮೂರು ಸರ್ಕಾರಿ ಶಾಲೆಗಳನ್ನು ಶಾಸಕ ಮಾಡಾಳ್‌ ವಿರೂಪಾಕ್ಷಪ್ಪ ದತ್ತು ಪಡೆದಿದ್ದಾರೆ. ಚನ್ನೇಶಪುರ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ, ಎ.ಕೆ. ಕಾಲೋನಿಯ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಹಾಗೂ ಸಂತೇಬೆನ್ನೂರಿನ ಕರ್ನಾಟಕ ಪಬ್ಲಿಕ್‌ ಸ್ಕೂಲ್‌ ಅನ್ನುಶಾಸಕರು ದತ್ತು ಪಡೆದುಕೊಂಡಿದ್ದಾರೆ. ದತ್ತು ಪಡೆದ ಈಮೂರು ಶಾಲೆಗಳ ಅಭಿವೃದ್ಧಿಗಾಗಿ ಶಾಸಕರ ಪ್ರದೇಶಾಭಿವೃದ್ಧಿ ಯೋಜನೆಯಡಿ ಅನುದಾನ ಬಳಸಿಕೊಳ್ಳಲಾಗುತ್ತಿದೆ.

ಈ ಶಾಲೆಗಳಲ್ಲಿ ಕೈಗೊಳ್ಳಬಹುದಾದ ಅಗತ್ಯ ಸೌಲಭ್ಯಗಳಿಗೆ ಬೇಕಾಗಬಹುದಾದ ಅಂದಾಜುಪಟ್ಟಿ ತಯಾರಿಸಲಾಗಿದೆ. ಚನ್ನೇಶಪುರ ಸರ್ಕಾರಿಹಿರಿಯ ಪ್ರಾಥಮಿಕ ಶಾಲೆಗೆ 27 ಲಕ್ಷ ರೂ., ಎ.ಕೆ.ಕಾಲೋನಿ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಗೆ11 ಲಕ್ಷ ರೂ., ಸಂತೇಬೆನ್ನೂರಿನ ಕರ್ನಾಟಕಪಬ್ಲಿಕ್‌ ಸ್ಕೂಲ್‌ಗೆ 50 ಲಕ್ಷ ರೂ.ಗಳ ಅಂದಾಜುಪಟ್ಟಿ ತಯಾರಿಸಿ ಸರ್ಕಾರಕ್ಕೆ ಕಳುಹಿಸಲಾಗಿದೆ.ಒಟ್ಟು 88 ಲಕ್ಷ ರೂ.ಗಳ ವೆಚ್ಚದಲ್ಲಿ ಶಾಸಕರು ದತ್ತುಪಡೆದ ಮೂರು ಸರ್ಕಾರಿ ಶಾಲೆಗಳನ್ನು ಅಭಿವೃದ್ಧಿಪಡಿಸಲು ಉದ್ದೇಶಿಸಿದ್ದಾರೆ.

ಎ.ಕೆ. ಕಾಲೋನಿ ಸ.ಕಿ. ಪ್ರಾ ಶಾಲೆ: 11ಲಕ್ಷ ರೂ. :  ತಾಲೂಕಿನ ಎ.ಕೆ. ಕಾಲೋನಿ ಸ.ಕಿ.ಪ್ರಾ ಶಾಲೆಯಲ್ಲಿ 1-5ನೇ ತರಗತಿ ನಡೆಯುತ್ತಿದ್ದು, 80ಕ್ಕೂ ಹೆಚ್ಚು ಮಕ್ಕಳಿದ್ದಾರೆ. ಪ್ರಸ್ತುತ ಇಲ್ಲಿ ಒಂದೇ ಕೊಠಡಿಇದ್ದು ಮಕ್ಕಳಿಗೆ ಹತ್ತಿರದ ದೇವಸ್ಥಾನ, ಕಲ್ಯಾಣ ಮಂಟಪದಲ್ಲಿ ಪಾಠಮಾಡಲಾಗುತ್ತಿದೆ. ಈ ಮೊದಲು ಶಾಲೆಗೆ ನಾಲ್ಕು ಕೊಠಡಿಗಳು ಇದ್ದವು.ಇದರಲ್ಲಿ ಶಿಥಿಲಾವಸ್ಥೆಯಲ್ಲಿದ್ದ ಮೂರು ಕೊಠಡಿಗಳನ್ನು ನೆಲಸಮಮಾಡಲಾಗಿದೆ. ಎರಡು ಕೊಠಡಿಗಳು ನಿರ್ಮಾಣ ಹಂತದಲ್ಲಿವೆ. ಪ್ರಸ್ತುತಶಾಸಕರ 11ಲಕ್ಷ ರೂ.ಗಳ ಅನುದಾನದಲ್ಲಿ ಕೊಠಡಿ ಮರು ನಿರ್ಮಾಣ ಮಾಡಲು ಅಂದಾಜು ಪಟ್ಟಿ ತಯಾರಿಸಲಾಗಿದೆ.

ಶಾಲೆಗೆ ಕೊಠಡಿ ಸಮಸ್ಯೆ ಕಾಡುತ್ತಿದೆ. ಪ್ರಸ್ತುತ ಪಾಠ ಮಾಡಲು ಒಂದೇ ಕೊಠಡಿ ಇದೆ. ಈಗ ನಿರ್ಮಾಣವಾಗುತ್ತಿರುವಕೊಠಡಿಗಳ ಜತೆಗೆ ಇನ್ನೂಎರಡು ಕೊಠಡಿಗಳ ಅವಶ್ಯಕತೆ ಇದೆ. ಅಡುಗೆ ಕೋಣೆಯೂ ಶಿಥಿಲಾವಸ್ಥೆಯಲ್ಲಿದ್ದು ಮರು ನಿರ್ಮಾಣವಾಗಬೇಕಿದೆ. 25-30 ಡೆಸ್ಕ್ ಸಹ ಬೇಕಾಗಿವೆ. -ಚಂದ್ರಪ್ಪ ಎಂ., ಮುಖ್ಯ ಶಿಕ್ಷಕರು

ಸಂತೆಬೆನ್ನೂರು ಪಬ್ಲಿಕ್‌ ಸ್ಕೂಲ್‌: 50ಲಕ್ಷ ರೂ. :  ಸಂತೆಬೆನ್ನೂರು ಸರ್ಕಾರಿ ಕರ್ನಾಟಕ ಪಬ್ಲಿಕ್‌ ಸ್ಕೂಲ್‌ನಲ್ಲಿ ಎಲ್‌ಕೆಜಿಯಿಂದ 12ನೇ ತರಗತಿವರೆಗೆ 1200 ಮಕ್ಕಳಿದ್ದು, ಕೊಠಡಿ ಸಮಸ್ಯೆ ಕಾಡುತ್ತಿದೆ. ಇಲ್ಲಿ ಪ್ರಸ್ತುತ 13 ಕೊಠಡಿಗಳಿದ್ದು ಇವುಗಳಲ್ಲಿನಾಲ್ಕು ಶಿಥಿಲವಾಗಿವೆ. ಶಾಲೆಗೆಪ್ರಯೋಗಾಲಯ, ಗ್ರಂಥಾಲಯ,ಶಿಕ್ಷಕರ ಕೊಠಡಿ, ಪ್ರಾಚಾರ್ಯ ಹಾಗೂಉಪಪ್ರಾಚಾರ್ಯರ ಕೊಠಡಿಗಳನಿರ್ಮಾಣ ಆಗಬೇಕಾಗಿದೆ. ಪ್ರಸ್ತುತಶಾಸಕರು 50 ಲಕ್ಷ ರೂ.ಗಳ ಅನುದಾನ ನಿಗದಿಪಡಿಸಿದ್ದು ಇದರಲ್ಲಿ ಸಭಾಭವನ,ಶಾಲಾ ಕೊಠಡಿ ನಿರ್ಮಾಣಕ್ಕೆಕ್ರಿಯಾಯೋಜನೆ ತಯಾರಿಸಲಾಗಿದೆ.

ಶಾಲೆಯಲ್ಲಿ ಮಕ್ಕಳ ಸಂಖ್ಯೆ ಹೆಚ್ಚಾಗಿರುವುದರಿಂದ ಕೊಠಡಿಗಳ ಸಮಸ್ಯೆ ಹೆಚ್ಚಾಗಿದೆ. ಉಳಿದಂತೆ ಪ್ರಯೋಗಾಲಯ, ಗ್ರಂಥಾಲಯ, ಶೌಚಾಲಯಗಳ ನಿರ್ಮಾಣವೂ ಆಗಬೇಕಿದೆ. – ಜಯಣ್ಣ ಎಂ.ಎನ್‌., ಉಪ ಪ್ರಾಚಾರ್ಯರು

ಚನ್ನೇಶಪುರ ಸ.ಹಿ.ಪ್ರಾ. ಶಾಲೆ: 27ಲಕ್ಷ ರೂ. : ಚನ್ನೇಶಪುರ ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ 1-7ನೇತರಗತಿಯವರೆಗೆ 84ಕ್ಕಿಂತ ಹೆಚ್ಚುವಿದ್ಯಾರ್ಥಿಗಳಿದ್ದು, ಶೌಚಾಲಯ ಸಮಸ್ಯೆ ಇದೆ. ಶಾಲೆಯಲ್ಲಿ ಈಗಿರುಶೌಚಾಲಯಗಳು ಹಾಳಾಗಿದ್ದು ಮರು  ನಿರ್ಮಾಣದ ಅಗತ್ಯವಿದೆ. ಬಾಲಕರಿಗೆಹಾಗೂ ಬಾಲಕಿಯರಿಗೆ ಪ್ರತ್ಯೇಕತಲಾ ಎರಡೆರಡು ಶೌಚಾಲಯಕಟ್ಟಡದ ಅಗತ್ಯತೆ ಇದೆ. ಶಾಸಕರುನಿಗದಿಪಡಿಸಿದ 27 ಲಕ್ಷ ರೂ.ಗಳ ಅನುದಾನದಲ್ಲಿ ಎರಡು ಹೆಚ್ಚುವರಿಕೊಠಡಿ ಹಾಗೂ ಸುಣ್ಣ ಬಣ್ಣಕ್ಕೆ ಅಂದಾಜು ಪಟ್ಟಿ ತಯಾರಿಸಲಾಗಿದೆ.

ಶಾಲೆಯಲ್ಲಿ ಮುಖ್ಯವಾಗಿ ಶೌಚಾಲಯ ನಿರ್ಮಾಣ ಆಗಬೇಕಾಗಿದ್ದು, ಒಟ್ಟುನಾಲ್ಕು ಶೌಚಾಲಯ ಆಗಬೇಕಾಗಿದೆ. ಇನ್ನುಳಿದಂತೆ ಹೆಚ್ಚುವರಿ ಕೊಠಡಿ ಸೇರಿದಂತೆ ಇನ್ನಿತರ ಸೌಲಭ್ಯಕ್ಕಾಗಿ ಕ್ರಿಯಾಯೋಜನೆ ತಯಾರಿಸಿ ಕಳುಹಿಸಲಾಗಿದೆ. -ನಾಗರಾಜ ಕೆ.ಸಿ., ಅಧ್ಯಕ್ಷರು, ಶಾಲಾಭಿವೃದ್ಧಿ ಸಮಿತಿ

ನನ್ನ ಕ್ಷೇತ್ರದಲ್ಲಿ ಮೂರು ಸರ್ಕಾರಿ ಶಾಲೆಗಳನ್ನುಅಭಿವೃದ್ಧಿಪಡಿಸಲು ದತ್ತುಪಡೆದಿದ್ದೇನೆ. ಪ್ರಸ್ತುತ ದತ್ತುಶಾಲೆಗಳ ಅಭಿವೃದ್ಧಿಗೆ 88 ಲಕ್ಷ ರೂ.ಗಳ ಅನುದಾನನಿಗದಿಪಡಿಸಿದ್ದು ಬೇರೆ ಯೋಜನೆಗಳ ಅಡಿಯೂಅನುದಾನ ಒದಗಿಸಿಕೊಟ್ಟು ಇನ್ನಷ್ಟು ಸೌಲಭ್ಯ ಕಲ್ಪಿಸಿ ದತ್ತು ಶಾಲೆಗಳನ್ನು ಮಾದರಿಯನ್ನಾಗಿಸುವ ಗುರಿ ಇದೆ. -ಮಾಡಾಳ್‌ ವಿರೂಪಾಕ್ಷಪ್ಪ, ಶಾಸಕರು, ಚನ್ನಗಿರಿ ಕ್ಷೇತ್ರ

 

-ಎಚ್‌.ಕೆ. ನಟರಾಜ

ಟಾಪ್ ನ್ಯೂಸ್

10-hunasagi-crime

Crime; ಹುಣಸಗಿ: ನೀರಿನ ವಿಚಾರಕ್ಕೆ ಶುರುವಾದ ಜಗಳ ಕೊಲೆಯಲ್ಲಿ ಅಂತ್ಯ

Stock Market: ಬಾಂಬೆ ಷೇರುಪೇಟೆ ಸೂಚ್ಯಂಕ ಸಾರ್ವಕಾಲಿಕ ದಾಖಲೆ ಮಟ್ಟದ ಏರಿಕೆ

Stock Market: ಬಾಂಬೆ ಷೇರುಪೇಟೆ ಸೂಚ್ಯಂಕ ಸಾರ್ವಕಾಲಿಕ ದಾಖಲೆ ಮಟ್ಟದ ಏರಿಕೆ

Kalaburagi: ನನ್ನ ಹೆಣದ ಮೇಲೆ ಬಿಜೆಪಿ ಚುನಾವಣೆ ಮಾಡಲು ಹೊರಟಿದೆ: ಪ್ರಿಯಾಂಕ್

Kalaburagi: ನನ್ನ ಹೆಣದ ಮೇಲೆ ಬಿಜೆಪಿ ಚುನಾವಣೆ ಮಾಡಲು ಹೊರಟಿದೆ: ಪ್ರಿಯಾಂಕ್

9-joshi

ದಿಂಗಾಲೇಶ್ವರ ಸ್ವಾಮೀಜಿಗೆ ತಪ್ಪು ತಿಳಿವಳಿಕೆಯಾಗಿದ್ದರೆ ಸರಿಪಡಿಸುವೆ: ಸಚಿವ ಪ್ರಹ್ಲಾದ ಜೋಶಿ

ಲೋಕಸಭಾ ಚುನಾವಣೆ: ಈ ಬಾರಿ ತೆಲಂಗಾಣದಲ್ಲಿ 10ಕ್ಕೂ ಅಧಿಕ ಕ್ಷೇತ್ರಗಳಲ್ಲಿ ಗೆಲುವು; ಅಭಯ ಪಾಟೀಲ

ಲೋಕಸಭಾ ಚುನಾವಣೆ: ಈ ಬಾರಿ ತೆಲಂಗಾಣದಲ್ಲಿ 10ಕ್ಕೂ ಅಧಿಕ ಕ್ಷೇತ್ರಗಳಲ್ಲಿ ಗೆಲುವು; ಅಭಯ ಪಾಟೀಲ

8-gadag

Gadag: ಭ್ರಷ್ಟ ಅಧಿಕಾರಿಗೆ ಬಿಸಿ ಮುಟ್ಟಿಸಿದ ಲೋಕಾಯುಕ್ತ ಅಧಿಕಾರಿಗಳು

Arunachal Village: ಕೇವಲ ಒಂದು ಮತಕ್ಕಾಗಿ ಚುನಾವಣಾ ಅಧಿಕಾರಿಗಳ 40 ಕಿ.ಮೀ ಕಾಲ್ನಡಿಗೆ!

Arunachal Village: ಕೇವಲ ಒಂದು ಮತಕ್ಕಾಗಿ ಚುನಾವಣಾ ಅಧಿಕಾರಿಗಳ 40 ಕಿ.ಮೀ ಕಾಲ್ನಡಿಗೆ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮೋದಿ 3ನೇ ಬಾರಿ ಪ್ರಧಾನಿಯಾಗಲು ಸಹಕರಿಸಿ: ಗಾಯತ್ರಿ ಸಿದ್ದೇಶ್ವರ

ಮೋದಿ 3ನೇ ಬಾರಿ ಪ್ರಧಾನಿಯಾಗಲು ಸಹಕರಿಸಿ: ಗಾಯತ್ರಿ ಸಿದ್ದೇಶ್ವರ

ಕರ್ತವ್ಯ ಲೋಪ: ಪರೀಕ್ಷಾ ಕೇಂದ್ರದ ಕೊಠಡಿ ಮೇಲ್ವಿಚಾರಕ ರಿಯಾಜ್ ಅಹಮದ್ ಅಮಾನತು

ಕರ್ತವ್ಯ ಲೋಪ: ಪರೀಕ್ಷಾ ಕೇಂದ್ರದ ಕೊಠಡಿ ಮೇಲ್ವಿಚಾರಕ ರಿಯಾಜ್ ಅಹಮ್ಮದ್ ಅಮಾನತು

1-dvg

Election Campaign: ಮೋದಿಯವರಿಂದ ಮಹಿಳಾ ಶಕ್ತಿಗೆ ಮುನ್ನುಡಿ

Davanagere: ಬಿಜೆಪಿ ಅಸಮಾಧಾನ ತಣಿಸಿದ ಬಿಎಸ್ ವೈ; ರವೀಂದ್ರನಾಥ್ ಗೆ ಚುನಾವಣೆ ಹೊಣೆ

Davanagere: ಬಿಜೆಪಿ ಅಸಮಾಧಾನ ತಣಿಸಿದ ಬಿಎಸ್ ವೈ; ರವೀಂದ್ರನಾಥ್ ಗೆ ಚುನಾವಣೆ ಹೊಣೆ

Gayatri Siddeshwar: ಮೋದಿ ಕೈ ಬಲಪಡಿಸಲು ಬಿಜೆಪಿ ಗೆಲ್ಲಿಸಿ; ಗಾಯತ್ರಿ

Gayatri Siddeshwar: ಮೋದಿ ಕೈ ಬಲಪಡಿಸಲು ಬಿಜೆಪಿ ಗೆಲ್ಲಿಸಿ; ಗಾಯತ್ರಿ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

RC 17: ಮತ್ತೆ ಒಂದಾದ ರಂಗಸ್ಥಳಂ ತಂಡ

RC 17: ಮತ್ತೆ ಒಂದಾದ ರಂಗಸ್ಥಳಂ ತಂಡ

10-hunasagi-crime

Crime; ಹುಣಸಗಿ: ನೀರಿನ ವಿಚಾರಕ್ಕೆ ಶುರುವಾದ ಜಗಳ ಕೊಲೆಯಲ್ಲಿ ಅಂತ್ಯ

Stock Market: ಬಾಂಬೆ ಷೇರುಪೇಟೆ ಸೂಚ್ಯಂಕ ಸಾರ್ವಕಾಲಿಕ ದಾಖಲೆ ಮಟ್ಟದ ಏರಿಕೆ

Stock Market: ಬಾಂಬೆ ಷೇರುಪೇಟೆ ಸೂಚ್ಯಂಕ ಸಾರ್ವಕಾಲಿಕ ದಾಖಲೆ ಮಟ್ಟದ ಏರಿಕೆ

Bharjari Ghandu: ಹುಯ್ಯೋ ಹುಯ್ಯೋ ಮಳೆರಾಯ…

Bharjari Ghandu: ಹುಯ್ಯೋ ಹುಯ್ಯೋ ಮಳೆರಾಯ…

Kollywood: ಸ್ಟೈಲಿಶ್‌ ಲುಕ್‌ನಲ್ಲಿ ಜಯಂ ರವಿ

Kollywood: ಸ್ಟೈಲಿಶ್‌ ಲುಕ್‌ನಲ್ಲಿ ಜಯಂ ರವಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.