ಧರ್ಮಸ್ಥಳ ಯೋಜನೆ ಬಡವರಿಗೆ ವರದಾನ
Team Udayavani, Jun 25, 2019, 1:13 PM IST
ದಾವಣಗೆರೆ: ಶಾಸಕ ಶಾಮನೂರು ಶಿವಶಂಕರಪ್ಪ ಆಟೋರಿಕ್ಷಾ ಕೀ ವಿತರಿಸಿದ ಸಂದರ್ಭ.
ದಾವಣಗೆರೆ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಡವರ ಪಾಲಿಗೆ ವರದಾನವಾಗಿದೆ ಎಂದು ದಾವಣಗೆರೆ ದಕ್ಷಿಣ ವಿಧಾನ ಸಭಾ ಕ್ಷೇತ್ರದ ಶಾಸಕ ಶಾಮನೂರು ಶಿವಶಂಕರಪ್ಪ ಸಂತಸ ವ್ಯಕ್ತಪಡಿಸಿದ್ದಾರೆ.
ಸೋಮವಾರ ಪದ್ಮಶ್ರೀ ಚಿಂದೋಡಿ ಲೀಲಾ ಕಲಾಕ್ಷೇತ್ರದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ದಾವಣಗೆರೆ ತಾಲೂಕಿನ ಪ್ರಗತಿ ಬಂಧು ಸ್ವ ಸಹಾಯ ಸಂಘಗಳ ಸದಸ್ಯರಿಗೆ ಜನಮಂಗಳ ಕಾರ್ಯಕ್ರಮದಡಿ ಸ್ವ ಸಹಾಯ ಸಂಘಗಳ ಸದಸ್ಯರಿಗೆ ವ್ಹೀಲ್ಚೇರ್, ಶಿಷ್ಯವೇತನ, ಆಟೋರಿಕ್ಷಾ ವಿತರಣಾ ಸಮಾರಂಭ ಉದ್ಘಾಟಿಸಿ ಮಾತನಾಡಿದ ಅವರು, ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ| ವೀರೇಂದ್ರ ಹೆಗ್ಗಡೆಯವರು ಜನರು ಸ್ವಾವಲಂಬಿ ಜೀವನ ನಡೆಸಲು ನೆರವಾಗುತ್ತಿರುವುದು ಶ್ಲಾಘನೀಯ ಎಂದರು.
ರಾಜ್ಯದ ಅನೇಕ ಕಡೆಯಲ್ಲಿ ಹಲವಾರು ಸಮಸ್ಯೆಗಳಿಗೆ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಮೂಲಕ ಸೂಕ್ತ ಪರಿಹಾರ ಒದಗಿಸಲಾಗುತ್ತಿದೆ. ಡಾ| ವೀರೇಂದ್ರ ಹೆಗ್ಗಡೆಯವರು ಅದರ ಹಿಂದಿನ ಪ್ರೇರಣಾ ಶಕ್ತಿ.
ಹಿಂದೆ ಶಿರಡಿ ಸಾಯಿಬಾಬಾ ದೇವಸ್ಥಾನದ ಮೂಲಕ ಬಡವರಿಗೆ ನೀರು ಒದಗಿಸಲಾಗುತ್ತಿತ್ತು. ಈಗ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಆ ಕೆಲಸ ಮಾಡುತ್ತಿದೆ. ಜಿಲ್ಲೆಯಲ್ಲಿಯೇ ಸಾಕಷ್ಟು ದೇವಸ್ಥಾನಗಳಿಗೆ ಆರ್ಥಿಕ ಸಹಾಯ ಮಾಡಲಾಗಿದೆ ಎಂದು ತಿಳಿಸಿದರು.
ಜಿಲ್ಲಾ ಪಂಚಾಯತ್ನಿಂದ ಒಂದು ಕುಡಿಯುವ ನೀರು ಘಟಕಕ್ಕೆ 12 ಲಕ್ಷ ರೂಪಾಯಿ ಖರ್ಚು ಮಾಡಲಾಗುತ್ತದೆ. ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯವರು ಬರೀ 4 ಲಕ್ಷಕ್ಕೇ ಕುಡಿಯುವ ನೀರಿನ ಘಟಕ ಮಾಡುತ್ತಾರೆ. ಅಗ್ಗದ ದರಲ್ಲಿ ಶುದ್ಧ ಕುಡಿಯುವ ನೀರಿನ ಘಟಕ ನಿರ್ಮಿಸಿಕೊಡಲಾಗಿದೆ. ದಾವಣಗೆರೆಯಲ್ಲಿ 25 ಘಟಕಗಳು ಇವೆ ಎಂದು ತಿಳಿಸಿದರು.
ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಮೂಲಕ 2,600 ಕೋಟಿಯಷ್ಟು ಸಹಾಯ ಮಾಡಲಾಗಿದೆ. ಕಡಿಮೆ ಬಡ್ಡಿದರದಲ್ಲಿ ಸಾಲ ನೀಡಿ ಸ್ವಾವಲಂಬಿ ಉದ್ಯೋಗ ಕಂಡುಕೊಂಡು ಉತ್ತಮ ಜೀವನ ನಡೆಸುವುದಕ್ಕೆ ಸಹಕಾರಿಯಾಗುತ್ತಿರುವುದು ಬಹಳ ಸಂತೋಷದ ವಿಚಾರ ಎಂದರು.
ಉದ್ಯಮಿ ಹಂಸರಾಜ್ ಮಾತನಾಡಿ, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ದಾವಣಗೆರೆಯಲ್ಲಿ 10 ಸಾವಿರಕ್ಕೂ ಹೆಚ್ಚು ಜನರಿಗೆ ಸಹಾಯ ಮಾಡಲಾಗಿದೆ. ಸ್ವಸಹಾಯ ಸಂಘಗಳು ಸೌಲಭ್ಯಗಳನ್ನು ಸದುಪಯೋಗ ಪಡಿಸಿಕೊಂಡು ಮಾದರಿ ಆಗಬೇಕು ಎಂದು ಆಶಿಸಿದರು.
ಗುರು ಮೋಟಾರ್ಸ್ ಮಾಲೀಕ ಎನ್.ಎಂ. ಗುರುಸಿದ್ದಯ್ಯ ಮಾತನಾಡಿ, ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ 380 ಆಟೋರಿಕ್ಷಾ, 26 ಸಾವಿರ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ, 1,750 ಅಂಗವಿಕಲರಿಗೆ ಸಲಕರಣೆ ನೀಡಲಾಗಿದೆ ಎಂದು ತಿಳಿಸಿದರು.
ಹೋಟೆಲ್ ಉದ್ಯಮಿ ಅಣಬೇರು ರಾಜಣ್ಣ, ಶ್ರೀ ದುರ್ಗಾಂಬಿಕಾ ದೇವಸ್ಥಾನ ಧರ್ಮದರ್ಶಿ ಗೌಡ್ರ ಚನ್ನಬಸಪ್ಪ, ಯೂನಿಯನ್ ಬ್ಯಾಂಕ್ ಮ್ಯಾನೇಜರ್ ಶ್ರೀನಿವಾಸ ರೆಡ್ಡಿ, ಮಲ್ಲಿಕಾರ್ಜುನ ಕೈಗಾರಿಕಾ ತರಬೇತಿ ಸಂಸ್ಥೆ ಪ್ರಾಚಾರ್ಯ ಎನ್.ಜಿ. ಚಂದ್ರಶೇಖರ್, ಎಸ್ಕೆಡಿಆರ್ಡಿಪಿ ನಿರ್ದೇಶಕ ಜಯಂತ್ ಪೂಜಾರಿ, ಯೋಜನಾಧಿಕಾರಿ ಸಿ.ಎಚ್.ಪದ್ಮಯ್ಯ, ಎಚ್.ಬಾಬು, ಸಿದ್ದೇಶ್, ವಿಜೇಂದ್ರ, ವಿಶಾಲ ಇತರರು ಇದ್ದರು.
34 ಜನರಿಗೆ ವ್ಹೀಲ್ಚೇರ್, 40 ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ, 16 ಮಂದಿಗೆ ಆಟೋರಿಕ್ಷಾ, ವಾಟರ್ ಬೆಡ್ ವಿತರಿಸಲಾಯಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
LS Polls: ಸಂಸದರ ಅಭಿವೃದ್ಧಿ ಕಾರ್ಯದಿಂದ ಕಾಂಗ್ರೆಸ್ಗೆ ನಡುಕ: ಗಾಯತ್ರಿ
Gayatri Siddeshwar: ಕೈ ಸರ್ಕಾರದ ಗ್ಯಾರಂಟಿ ತಾತ್ಕಾಲಿಕ; ಗಾಯಿತ್ರಿ
Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ
Davanagere; ಸಮಾವೇಶ ನಡೆದ ಮೈದಾನ ಸ್ವಚ್ಛಗೊಳಿಸಿದ ಗಾಯಿತ್ರಿ ಸಿದ್ದೇಶ್ವರ
ನಾರಿ ಶಕ್ತಿ ವಿರೋಧಿಸುವ ಕಾಂಗ್ರೆಸ್ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ
MUST WATCH
ಹೊಸ ಸೇರ್ಪಡೆ
ಇನ್ಸ್ಟಾ ಪ್ರೊಫೈಲ್ ಮಾಯೆ: ಯುವತಿ ಎಂದು 45ರ ಆಂಟಿ ಜೊತೆ 20ರ ಯುವಕನ ಚಾಟ್: ಮುಂದೆ ಆದದ್ದು..
NewsClick ಸ್ಥಾಪಕ ಪ್ರಬೀರ್ ವಿರುದ್ಧ 8,000 ಪುಟಗಳ ಆರೋಪಪಟ್ಟಿ; ಭಯೋತ್ಪಾದನೆಗೆ ನೆರವು!
T20 ವಿಶ್ವಕಪ್ ಗೆ ಆಸ್ಟ್ರೇಲಿಯಾ ತಂಡ ಪ್ರಕಟ; ಅನುಭವಿ ಆಟಗಾರನಿಗಿಲ್ಲ ಚಾನ್ಸ್
Politics: ಡಿಕೆಶಿ ಹೆಸರು ಹೇಳದಿದ್ದರೆ ಕೆಲವರಿಗೆ ನಿದ್ದೆ ಬರಲ್ಲ : ರಾಮಲಿಂಗಾರೆಡ್ಡಿ
ದೆಹಲಿಯ 50 ಕ್ಕೂ ಹೆಚ್ಚಿನ ಶಾಲೆಗಳಿಗೆ ಬಾಂಬ್ ಬೆದರಿಕೆ ಇ-ಮೇಲ್: ಪೋಷಕರಿಗೆ ಆತಂಕ