2 ತಿಂಗಳಲ್ಲಿ ನಗರದ ಮೂವತ್ತು ಕಡೆ ಸ್ಮಾರ್ಟ್‌ ಟಾಯ್ಲೆಟ್‌


Team Udayavani, Dec 30, 2018, 9:20 AM IST

30-december-14.jpg

ದಾವಣಗೆರೆ: ಸಾರ್ವಜನಿಕರು, ವಾಯುವಿಹಾರಿಗಳ ಅನುಕೂಲಕ್ಕಾಗಿ ಇನ್ನೆರಡು ತಿಂಗಳಲ್ಲಿ ನಗರದ 30 ಕಡೆ ಸ್ಮಾರ್ಟ್‌ ಟಾಯ್ಲೆಟ್‌ ನಿರ್ಮಿಸಲಾಗುವುದು ಎಂದು ಮಹಾನಗರಪಾಲಿಕೆ ಆಯುಕ್ತ ಮಂಜುನಾಥ್‌ ಆರ್‌. ಬಳ್ಳಾರಿ ತಿಳಿಸಿದ್ದಾರೆ. ಶನಿವಾರ, ಪಾಲಿಕೆಯಲ್ಲಿ ಮೇಯರ್‌ ಅಧ್ಯಕ್ಷತೆಯಲ್ಲಿ ನಡೆದ ಮಹಾನಗರಪಾಲಿಕೆ 2019-20ನೇ ಸಾಲಿನ ಆಯ-ವ್ಯಯ ಪಟ್ಟಿ ತಯಾರಿ ಸಂಬಂಧ ಎರಡನೇ ಸಲಹಾ ಸಭೆಯಲ್ಲಿ ಈ ವಿಷಯ ತಿಳಿಸಿದ ಅವರು, ಈಗಾಗಲೇ ಎಂ.ಸಿಸಿ ಬಿ ಬ್ಲಾಕ್‌ನ ಕಾಸಲ್‌ ಶ್ರೀನಿವಾಸ ಶ್ರೇಷ್ಠಿ ಉದ್ಯಾನದಲ್ಲಿ ಸ್ಮಾರ್ಟ್‌ಸಿಟಿಗೆ ತಕ್ಕಂತೆ ಸ್ಮಾರ್ಟ್‌ ಟಾಯ್ಲೆಟ್‌ ನಿರ್ಮಿಸಲಾಗಿದೆ. ಇದೇ ರೀತಿ ಇನ್ನೆರಡು ತಿಂಗಳಲ್ಲಿ 30 ಕಡೆ ನಿರ್ಮಿಸಲಾಗುವುದು ಎಂದು ಮೂತ್ರಾಲಯಗಳ ಸ್ಥಾಪನೆಗೆ ಬಗ್ಗೆ ಶಿವಯೋಗಿಸ್ವಾಮಿ ನೀಡಿದ ಸಲಹೆಗೆ ಪ್ರತಿಕ್ರಿಯಿಸಿದರು.

ಜಿಲ್ಲಾ ಸಣ್ಣ ಕೈಗಾರಿಕೆಗಳ ಸಂಘದ ಅಧ್ಯಕ್ಷ ಬಿ. ಶಂಭುಲಿಂಗಪ್ಪನವರ ಮನವಿ ಸ್ವೀಕರಿಸಿ ಉತ್ತರಿಸಿದ ಆಯುಕ್ತರು, ಮಹಾನಗರಪಾಲಿಕೆ ವ್ಯಾಪ್ತಿಯ ಕೈಗಾರಿಕೋದ್ಯಮಿಗಳನ್ನು ವಾಪಸ್‌ ಹೋಗಲು ಬಿಡುವುದಿಲ್ಲ. ಕೈಗಾರಿಕೆಗಳಿಗೆ ಕಂದಾಯ ವಿನಾಯಿತಿ ನೀಡುವ ಬಗ್ಗೆ ಪರಿಶೀಲಿಸುತ್ತೇವೆ. ಜೊತೆಗೆ ಕೈಗಾರಿಕೆಗೆ ಸಹಕಾರಿ ಆಗುವ ವಾತಾವರಣವನ್ನು ಕಲ್ಪಿಸಿಕೊಟ್ಟು ನಗರದ ಜನರ ಅಭಿವೃದ್ಧಿಗೆ ಅನುಕೂಲ ಮಾಡಿಕೊಡುತ್ತೇವೆ ಎಂದರು.

ಎಸ್‌ಸಿ, ಎಸ್‌ಟಿ ಜನರ ಮನೆಗಳಿಗೆ ಸೌರಫಲಕ ಅಳವಡಿಸಲು 20 ಲಕ್ಷ ರೂ, ಶುದ್ಧ ನೀರಿನ ಘಟಕಗಳಿಗಾಗಿ 25 ಲಕ್ಷ ರೂ. ಮೀಸಲಿರಿಸಲಾಗಿದೆ. ಎಸ್‌ಸಿ, ಎಸ್‌ಟಿ ಜನರ ಗೃಹ ಬಳಕೆ ನಳಗಳನ್ನು ಸಕ್ರಮಗೊಳಿಸಿ ತಿಂಗಳಿಗೆ 20 ರೂ. ಪಡೆಯಲಾಗುವುದು ಎಂದು ತಿಳಿಸಿದರು. ರಾಜ್ಯ, ರಾಷ್ಟ್ರೀಯ ಕ್ರೀಡಾಪಟುಗಳಿಗೆ ಹತ್ತು ಸಾವಿರ ಧನಸಹಾಯ ನೀಡಲಾಗುವುದು. 5 ಕಡೆ ಪ್ಯಾಡ್‌ ದಹಿಸುವ ಯಂತ್ರಗಳನ್ನು ಅಳವಡಿಸಲಾಗುವುದು. ಪಿ.ಜೆ. ಬಡಾವಣೆಯ ಸರ್‌.ಎಂ. ವಿಶ್ವೇಶ್ವರಯ್ಯ ಉದ್ಯಾನದ ಸ್ವಚ್ಛತೆಗಾಗಿ ಐವರು ಕಾರ್ಮಿಕರನ್ನು ನೇಮಿಸಲಾಗುವುದು. ಪೌರಕಾರ್ಮಿಕರಿಗೆ ಟವೆಲ್‌, ಜರ್ಕಿನ್‌, ಹೆಲ್ಮೆಟ್‌, ಶೂ ಅಥವಾ ಚರ್ಮದ ಚಪ್ಪಲಿಗಳನ್ನು ಇನ್ನೊಂದು ತಿಂಗಳಲ್ಲಿ ನೀಡಲಾಗುವುದು ಎಂದು ತಿಳಿಸಿದರು.

ನಂತರ ವಿಜ್ಞಾನ ಪರಿಷತ್‌ನ ಎಂ. ಗುರುಸಿದ್ದಸ್ವಾಮಿ, ಮಕ್ಕಳ ವಿಜ್ಞಾನ ಚಟುವಟಿಕೆಗೆ 5 ಲಕ್ಷ ರೂ. ಮೀಸಲಿಡಿ ಎಂದು ಮನವಿ ಮಾಡಿದರು. ಕೊಳಗೇರಿಗಳ ನಿವಾಸಿಗಳಿಗೆ ಹೆಚ್ಚಿನ ಅನುದಾನ ನೀಡಬೇಕು. ಮಂಡಕ್ಕಿ ಭಟ್ಟಿ ಪಾರ್ಕ್‌ ಅಭಿವೃದ್ಧಿಗೆ ಒತ್ತು ನೀಡಬೇಕು ಎಂದು ಸ್ಲಂ ಜನಾಂದೋಲನ ಸಂಘಟನೆಯ ರೇಣುಕಾ ಎಲ್ಲಮ್ಮ ಮನವಿ ಮಾಡಿದರು. ಚನ್ನಗಿರಿ ರಂಗಪ್ಪ ರಾಧಮ್ಮ ರಂಗಮಂದಿರದಲ್ಲಿ ಅವ್ಯವಹಾರಕ್ಕೆ ಆಸ್ಪದವಾಗದಂತೆ ಕ್ರಮ ವಹಿಸಲು ಕನ್ನಡಪರ ಹೋರಾಟಗಾರ ಕೆ.ಜಿ. ಶಿವಕುಮಾರ್‌ ಕೋರಿದರು.

ಪರಿಸರ ಸಂರಕ್ಷಣೆ ವೇದಿಕೆ ಜಿಲ್ಲಾ ಅಧ್ಯಕ್ಷ ಗಿರೀಶ್‌ ದೇವರಮನಿ ಮಾತನಾಡಿ, ಕುಂದುವಾಡ ಕೆರೆಯಲ್ಲಿ ಎಮ್ಮೆ ತೊಳೆಯುವುದು, ಮೀನು ಹಿಡಿಯುವುದಕ್ಕೆ ಕಡಿವಾಣ ಹಾಕಬೇಕು. ಈ ಕೆರೆಯನ್ನು ಮೀಸಲು ಸಂರಕ್ಷಿತ ಕೆರೆ ಪ್ರದೇಶವಾಗಿಸಲು ಜಿಲ್ಲಾಡಳಿತಕ್ಕೆ ಶಿಫಾರಸು ಮಾಡಬೇಕು ಎಂದು ಒತ್ತಾಯಿಸಿದರು.

ಇದಕ್ಕೆ ಉತ್ತರಿಸಿದ ಆಯುಕ್ತರು, ಜನರು ಕೆರೆಯನ್ನು ಮಲೀನ ಮಾಡಬಾರದು. ಈ ರೀತಿ ಮಾಡುವುದರಿಂದ ವಾಯುವಿಹಾರಿಗಳಿಗೆ ತೊಂದರೆ ಆಗುತ್ತದೆ. ಕೆರೆಯ ಸುತ್ತಮುತ್ತ ಪ್ಲಾಸ್ಟಿಕ್‌ ಬಳಕೆಗೆ ನಿಷೇಧ ಹೇರಿದ್ದು, ನೀರುಕಾಗೆಗಳಿಗಾಗಿ ಜಾಲಿ ಮರಗಳನ್ನು ಉಳಿಸಲಾಗಿದೆ ಎಂದರು. ಅಶೋಕರಸ್ತೆಯ ಲಿಂಗೇಶ್ವರ ದೇವಸ್ಥಾನದ ಹತ್ತಿರ ಅಂಡರ್‌ಪಾಸ್‌ ನಿರ್ಮಿಸಬೇಕು ಎಂದು ಅಸ್ಲಂಖಾನ್‌ ಮನವಿ ಮಾಡಿದರು.

ಗಾಂಧಿ ನಗರದಲ್ಲಿ ಗ್ರಂಥಾಲಯ, ಪೌರಕಾರ್ಮಿಕರ ಮಕ್ಕಳಿಗೆ ಪ್ರತ್ಯೇಕ ಶಾಲೆ, ಶಾಲಾವಾಹನ, ಶೈಕ್ಷಣಿಕ ಸಾಲ ಯೋಜನೆ ಜಾರಿಗೊಳಿಸಲು ಚಿದಾನಂದ್‌ ಕೋರಿದರು. ಅಕ್ರಮ ನಲ್ಲಿಗಳ ಸಂಪರ್ಕಕ್ಕೆ ಕಡಿವಾಣ ಹಾಕಬೇಕು. ಕೆಟಿಜೆ ನಗರದ ಸಮುದಾಯ ಭವನ ಪೂರ್ಣಗೊಳಿಸಬೇಕು ಎಂದು ಸೋಮಲಾಪುರ ಹನುಮಂತಪ್ಪ ಸಲಹೆ ನೀಡಿದರು. ಉಪಮೇಯರ್‌ ಚಮನ್‌ಸಾಬ್‌, ಪಾಲಿಕೆ ಸದಸ್ಯರಾದ ಗೋಣೆಪ್ಪ, ಎಂ. ಹಾಲೇಶ್‌ ಕುಂದುವಾಡ ತಿಪ್ಪಣ್ಣ, ಇತರರು ಸಭೆಯಲ್ಲಿ ಭಾಗವಹಿಸಿದ್ದರು.

ಟಾಪ್ ನ್ಯೂಸ್

15

ರಾಹುಲ್ ಗಾಂಧಿ ಹೋದಲ್ಲೆಲ್ಲಾ ನಾವು ಗೆದ್ದಿದೀವಿ: ಬಳ್ಳಾರಿಯಲ್ಲಿ ನಮ್ಮ ಗೆಲುವು ನಿಶ್ಚಿತ

Bommai BJP

Congress ತುಷ್ಟೀಕರಣ ರಾಜಕೀಯಕ್ಕೆ ಮುಸ್ಲಿಂ ಮೀಸಲಾತಿಗೆ ಬೆಂಬಲಿಸುತ್ತದೆ: ಬೊಮ್ಮಾಯಿ

ಭಾರತದಲ್ಲಿ ರಿಲೀಸ್‌ಗೂ ಮುನ್ನ ʼಮಂಕಿ ಮ್ಯಾನ್‌ʼ ಹೆಚ್‌ ಡಿ ಕಾಪಿ ಲೀಕ್: ವಿಳಂಬ ಯಾಕೆ?

ಭಾರತದಲ್ಲಿ ರಿಲೀಸ್‌ಗೂ ಮುನ್ನ ʼಮಂಕಿ ಮ್ಯಾನ್‌ʼ ಹೆಚ್‌ ಡಿ ಕಾಪಿ ಲೀಕ್: ವಿಳಂಬ ಯಾಕೆ?

1-wqqwqwe

West Bengal; ಮಗಳನ್ನು ಕಂಡು ಕಣ್ಣೀರಿಟ್ಟ ಶೇಖ್ ಷಹಜಹಾನ್: ಬಿಜೆಪಿ ವ್ಯಂಗ್ಯ

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

2-hubli

Neha Case: ನ್ಯಾಯಾಂಗ ಬಂಧನದಲ್ಲಿದ್ದ ಆರೋಪಿ ಸಿಐಡಿ ವಶಕ್ಕೆ

Udupi: ಅನುಮತಿಯಿಲ್ಲದೆ ಪೋಸ್ಟರ್‌ ಅಭಿಯಾನ; ಬಿಜೆಪಿ ಯುವ ಮೋರ್ಚಾ ಮುಖಂಡರ ವಿರುದ್ಧ ಕೇಸ್

Udupi: ಅನುಮತಿಯಿಲ್ಲದೆ ಪೋಸ್ಟರ್‌ ಅಭಿಯಾನ; ಬಿಜೆಪಿ ಯುವ ಮೋರ್ಚಾ ಮುಖಂಡರ ವಿರುದ್ಧ ಕೇಸ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Gayatri Siddeshwar: ಸಮಗ್ರ ನೀರಾವರಿ ಸೌಲಭ್ಯಕ್ಕೆ ಆದ್ಯತೆ; ಗಾಯಿತ್ರಿ

Gayatri Siddeshwar: ಸಮಗ್ರ ನೀರಾವರಿ ಸೌಲಭ್ಯಕ್ಕೆ ಆದ್ಯತೆ; ಗಾಯಿತ್ರಿ

Harihara ಬಿಜೆಪಿ ಶಾಸಕ ಬಿ.ಪಿ.ಹರೀಶ್‌ಗೆ ಜೀವ ಬೆದರಿಕೆ,

Harihara ಬಿಜೆಪಿ ಶಾಸಕ ಬಿ.ಪಿ.ಹರೀಶ್‌ಗೆ ಜೀವ ಬೆದರಿಕೆ

bp harish

Harihara; ಅಕ್ರಮ ಮರಳುಗಾರಿಕೆ ಮಾಹಿತಿ ನೀಡಿದ್ದಕ್ಕೆ ಬಿಜೆಪಿ ಶಾಸಕರಿಗೆ ಜೀವ ಬೆದರಿಕೆ

Lok Sabha Election: ಕಾಂಗ್ರೆಸ್‌ನಿಂದ ಜನರಿಗೆ ಸುಳ್ಳಿನ ಗ್ಯಾರಂಟಿ: ಗಾಯಿತ್ರಿ ಸಿದ್ದೇಶ್ವರ

Lok Sabha Election: ಕಾಂಗ್ರೆಸ್‌ನಿಂದ ಜನರಿಗೆ ಸುಳ್ಳಿನ ಗ್ಯಾರಂಟಿ: ಗಾಯಿತ್ರಿ ಸಿದ್ದೇಶ್ವರ

1-wqeqwe

Davanagere: ಮತದಾನ ಜಾಗೃತಿ ಲಾಂಛನದಲ್ಲಿ ಅಪರೂಪದ ಪ್ರಾಣಿ ಚಿತ್ರ ಬಳಕೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wqeqwewq

Congress ನಿಂದ ಬದುಕು; ಬಿಜೆಪಿಯದ್ದು ಭಾವನೆಗಳ ಚೆಲ್ಲಾಟ: ಡಾ| ಭಂಡಾರಿ

15

ರಾಹುಲ್ ಗಾಂಧಿ ಹೋದಲ್ಲೆಲ್ಲಾ ನಾವು ಗೆದ್ದಿದೀವಿ: ಬಳ್ಳಾರಿಯಲ್ಲಿ ನಮ್ಮ ಗೆಲುವು ನಿಶ್ಚಿತ

Bommai BJP

Congress ತುಷ್ಟೀಕರಣ ರಾಜಕೀಯಕ್ಕೆ ಮುಸ್ಲಿಂ ಮೀಸಲಾತಿಗೆ ಬೆಂಬಲಿಸುತ್ತದೆ: ಬೊಮ್ಮಾಯಿ

ಭಾರತದಲ್ಲಿ ರಿಲೀಸ್‌ಗೂ ಮುನ್ನ ʼಮಂಕಿ ಮ್ಯಾನ್‌ʼ ಹೆಚ್‌ ಡಿ ಕಾಪಿ ಲೀಕ್: ವಿಳಂಬ ಯಾಕೆ?

ಭಾರತದಲ್ಲಿ ರಿಲೀಸ್‌ಗೂ ಮುನ್ನ ʼಮಂಕಿ ಮ್ಯಾನ್‌ʼ ಹೆಚ್‌ ಡಿ ಕಾಪಿ ಲೀಕ್: ವಿಳಂಬ ಯಾಕೆ?

3-

Bagalkote: ಯತ್ನಾಳ ಗೊಡ್ಡ ಎಮ್ಮಿ ಇದ್ದಂಗ: ಕಾಶಪ್ಪನವರ ಟೀಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.