ಜಿಲ್ಲೆಯ ಅಭಿವೃದ್ಧಿ ಮುನ್ನೋಟ: 7ಕೆವಿಜನ್-2025 ಕಾರ್ಯಾಗಾರ
Team Udayavani, Oct 5, 2017, 2:13 PM IST
ದಾವಣಗೆರೆ: ಜಿಲ್ಲಾ ಮಟ್ಟದಲ್ಲಿ ವಿಜನ್- 2025 ಕುರಿತ ಅಭಿವೃದ್ಧಿ ಮುನ್ನೋಟದ ಬಗ್ಗೆ ಅಧಿಕಾರಿ, ಜನಪ್ರತಿನಿಧಿಗಳು,
ವಿಷಯತಜ್ಞರು ಇತರರೊಡನೆ ಚರ್ಚಿಸಿ, ರೂಪುರೇಷೆ ನೀಡುವ ಉದ್ದೇಶದ ಕಾರ್ಯಾಗಾರ ಅ. 7ರಂದು ಬಾಪೂಜಿ ಬಿ-ಸ್ಕೂಲ್ ಸಭಾಂಗಣದಲ್ಲಿ ನಡೆಯಲಿದೆ ಎಂದು ಜಿಲ್ಲಾಧಿಕಾರಿ ಡಿ.ಎಸ್. ರಮೇಶ್ ತಿಳಿಸಿದ್ದಾರೆ.
ಮುಂದಿನ 7 ವರ್ಷದಲ್ಲಿ ಸಮಗ್ರ ಅಭಿವೃದ್ಧಿ ದೃಷ್ಟಿಯೊಂದಿಗೆ ರಾಜ್ಯ ಸರ್ಕಾರ ರೂಪಿಸಿರುವ ವಿಜನ್- 2025ಗೆ ಸಂಬಂಧಿಸಿದಂತೆ ಜಿಲ್ಲಾ ಮಟ್ಟದಲ್ಲೂ ವಿಚಾರ ಸಂಕಿರಣ, ಸಂವಾದ ಏರ್ಪಡಿಸಿ, ಜಿಲ್ಲೆಯ ಸಮಗ್ರ ಅಭಿವೃದ್ಧಿಗೆ ಯಾವಾವ ಕ್ಷೇತ್ರದಲ್ಲಿ ಏನೆಲ್ಲಾ ಕಾರ್ಯಕ್ರಮ ರೂಪಿಸಬಹುದು ಎಂಬುದರ ಬಗ್ಗೆ ಚರ್ಚಿಸಿ, ಒಂದು ರೂಪುರೇಷೆ ಸಿದ್ಧಪಡಿಸಲಾಗುವುದು ಎಂದು ಬುಧವಾರ
ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.
ಶನಿವಾರ ಬೆಳಗ್ಗೆ 9ಕ್ಕೆ ಕಾರ್ಯಾಗಾರದ ಉದ್ಘಾಟನಾ ಸಮಾರಂಭದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಎಸ್.ಎಸ್. ಮಲ್ಲಿಕಾರ್ಜುನ್, ವಿಜನ್- 2025 ಮುಖ್ಯ ಕಾರ್ಯನಿರ್ವಾಹಕ ಅಧಿ ಕಾರಿ ರೇಣುಕಾ ಚಿದಂಬರಂ ಇತರರು ಭಾಗವಹಿಸುವರು. ಸಂಜೆ 5.30ರ ವರೆಗೆ ವಿವಿಧ ವಲಯಗಳ ತಜ್ಞರು, ಇತರರು ವಿಸ್ತೃತ ಚರ್ಚೆ ನಡೆಸುವರು ಎಂದು ತಿಳಿಸಿದರು.
ಸಮಗ್ರ ಅಭಿವೃದ್ಧಿ ಕುರಿತ ವಿಜನ್- 2025 ಡಾಕ್ಯುಮೆಂಟ್ ಸಿದ್ಧಪಡಿಸಲು ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ, ಆರೋಗ್ಯ, ಶಿಕ್ಷಣ, ಕೃಷಿ ಮತ್ತು ಕೃಷಿ ಸಂಬಂ ಧಿತ, ಕೈಗಾರಿಕೆ, ಆಡಳಿತ ಮತ್ತು ಕಾನೂನು ಸುವ್ಯವಸ್ಥೆ ಸೇರಿದಂತೆ 5 ವಲಯ ಗುರುತಿಸಲಾಗಿದೆ. ಕಾರ್ಯಾಗಾರದಲ್ಲಿ ಆಯಾಯ ವಲಯದ ಇಲಾಖಾ ಮಟ್ಟದ ಅಧಿಕಾರಿಗಳು, ಜನಪ್ರತಿನಿಧಿ ಗಳು, ತಜ್ಞರನ್ನೊಳಗೊಂಡ ಸಮಿತಿಗಳು ಚರ್ಚಿಸಲಿವೆ ಎಂದು ತಿಳಿಸಿದರು.
ವಿಜನ್- 2025 ಡಾಕ್ಯುಮೆಂಟ್ ಯೋಜನೆಯ ಕುರಿತು ಚರ್ಚೆಗಾಗಿ ಈಗಾಗಲೇ ತಜ್ಞರನ್ನು ಗುರುತಿಸಲಾಗಿದೆ. ಜಿಲ್ಲೆಯ ಮುಂದಿನ ಅಭಿವೃದ್ಧಿ ವಿಚಾರವಾಗಿ ರೂಪಿಸಿರುವ ವಿಜನ್-2025 ಒಂದು ಸರ್ಕಾರ-ಸಾರ್ವಜನಿಕರ ಸಹಭಾಗಿತ್ವ ಯೋಜನೆಯಂತೆ ಎಂದು ತಿಳಿಸಿದರು. ಹಿಂದುಳಿದ ವರ್ಗ ಇಲಾಖೆ ಜಿಲ್ಲಾ ಅಧಿಕಾರಿ ಎಸ್.ಆರ್. ಗಂಗಪ್ಪ ಇತರರು ಸುದ್ದಿಗೋಷ್ಠಿಯಲ್ಲಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್
Davanagere; ಪ್ರಧಾನಿ ಮೋದಿ ರ್ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ
Lok Sabha Election: ಮೋದಿಗೆ ಪರ್ಯಾಯ ನಾಯಕ ಮತ್ತೊಬ್ಬರಿಲ್ಲ… ಗಾಯಿತ್ರಿ ಸಿದ್ದೇಶ್ವರ
Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ
PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ
MUST WATCH
ಹೊಸ ಸೇರ್ಪಡೆ
Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್
ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು
Padubidri: ಹೆದ್ದಾರಿ ಮಧ್ಯೆ ಕೆಟ್ಟು ನಿಂತ ಲಾರಿ; ಸಂಚಾರಕ್ಕೆ ಅಡಚಣೆ
Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ
Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ