ಮಾಂಸದಂಗಡಿಗೆ ಸಹಾಯಧನ ಬೇಡ


Team Udayavani, Mar 25, 2017, 12:47 PM IST

dvg5.jpg

ಹರಪನಹಳ್ಳಿ: ಬಿಜೆಟ್‌ನಲ್ಲಿ ಮಾಂಸ ಮಾರಾಟಗಾರರಿಗೆ 1.20 ಲಕ್ಷ ರೂ. ಸಹಾಯಧನ ಘೋಷಿಸಿರುವುದು ಸರಿಯಲ್ಲ. ಬದಲಾಗಿ ರೈತರಿಗೆ ಮೇವು ಖರೀದಿಸಲು ಮತ್ತು ಸಂಗ್ರಹಿಸಲು ನೀಡಬೇಕು ಎಂದು ಬಾಲೇಹೊಸೂರು ದಿಂಗಾಲೇಶ್ವರ ಮಠದ ದಿಂಗಾಲೇಶ್ವರ ಸ್ವಾಮೀಜಿ ಒತ್ತಾಯಿಸಿದರು. 

ತಾಲೂಕಿನ ನಿಚ್ಚವನಹಳ್ಳಿ ಗ್ರಾಮದಲ್ಲಿ ಸದ್ಗುರು ಶಿವಯೋಗಿ ಹಾಲಸ್ವಾಮಿಗಳ ಪಟ್ಟಾಧಿಧಿಕಾರದ ಸಂಭ್ರಮಾಚರಣೆ ಮತ್ತು ಧರ್ಮ ಸಭೆಯ ಸಾನ್ನಿಧ್ಯ ವಹಿಸಿ ಅವರು ಆಶೀವರ್ಚನ ನೀಡಿದರು. ಮುಖ್ಯಮಂತ್ರಿಗಳು ದನ ಕಡಿಯುವವರಿಗಿಂತ ಕಾಯುವವರಿಗೆ ಸಹಾಯಧನ ನೀಡಬೇಕು. ಸರ್ಕಾರ ಕತ್ತರಿಸುವ ಕೆಲಸ ಬಿಡಿಸಿ ಕಾಯುವ ಕಾಯಕ ಮಾಡಿಸಬೇಕು.

ಶಾಸಕರು ಇದನ್ನು ಸಿಎಂ ಅವರ ಗಮನಕ್ಕೆ ತಂದು ಮಾಂಸದಂಗಡಿಗಳ ಸಹಾಯಧನ ನೀಡುವುದನ್ನು ಹಿಂಪಡೆದರೆ ಗೌರವಿಸುತ್ತೇವೆ, ಇಲ್ಲವಾದಲ್ಲಿ ವಿರೋಧಿಸುತ್ತೇವೆ ಎಂದರು. ಸ್ವಾಮೀಜಿಗಳು ಗ್ರಾಮಗಳ ತಾಪ ಕಡಿಮೆ ಮಾಡಬೇಕೆಯೇ ಹೊರತು ಸಂಪತ್ತು ಲೂಟಿ ಮಾಡಬಾರದು. ಭಕ್ತರ ನೋವು ಕಡಿಮೆ ಮಾಡಿ ಅಂಧಕಾರ, ಅಜ್ಞಾನವನ್ನು ಕಳೆಯಬೇಕು.

ಸ್ವಾಮೀಜಿಗಳು ಎಲ್ಲಾರನ್ನು ಸಮಾನಾಗಿ ಕಂಡು ಜಾತಿ ಬೋಧನೆ ಮಾಡದೇ ನೀತಿ ಬೋಧಿಧಿಸಬೇಕು. ಕಾವಿ ಎನ್ನುವುದು ಸಮಾನತೆಯ ಸಂಕೇತವಾಗಬೇಕು. ಹಿಂದೆ ಮಠಗಳು ಶಿಕ್ಷಣ ಸಂಸ್ಥೆಗಳನ್ನು ತೆರೆಯುವ ಅನಿವಾರ್ಯತೆ ಇತ್ತು. ಹಾಗಾಗಿ ವೀರಶೈವ ಮಠಗಳು ಶಿಕ್ಷಣ ಸಂಸ್ಥೆಗಳನ್ನು ತೆರೆದು ಶಿಕ್ಷಣ ನೀಡಿವೆ.

ಸರ್ಕಾರವೇ ಎಲ್ಲ ತರಹದ ಶಿಕ್ಷಣವನ್ನು ನೀಡುತ್ತಿರುವುದರಿಂದ ಇದರ ಅವಶ್ಯತೆ ಮಠಗಳಿಗಿಲ್ಲ. ಆದರೆ ಎಲ್ಲಿಯೇ ಸಾಗಿದರೂ ಮರಗಳ ಕೆಳಗೆ ಹೋಗುವಂತಹ ಕೆಲಸವನ್ನು ಮಠಗಳು ಮಾಡುವುದು ಅಗತ್ಯ ಎಂದರು. ಗಿಡ ನೆಡುವ ಕಾರ್ಯಗಳು ಹೆಚ್ಚಾಗಿ ನಡೆಯಬೇಕು. ಖಾದಿ ಅಭಿವೃದ್ಧಿ ಮಾಡಬೇಕು. ಖಾಕಿ ಅಭಿವೃದ್ಧಿ ಕಾರ್ಯಗಳನ್ನು ಕಾಯುವ ಕಾಯಕ ಮಾಡಬೇಕು.

ಕಾವಿಧಾರಿಗಳು ನಾಡಿನಲ್ಲಿ ಐಕ್ಯತೆ ಉಂಟು ಮಾಡುವುದು, ಎಲ್ಲರೂ ಸಮಾನರು ಎನ್ನುವುದನ್ನು ಸಾರಬೇಕು. ಈ ಮೂವರು ತಮ್ಮ ಕರ್ತವ್ಯಗಳನ್ನು ಸರಿಯಾಗಿ ಪಾಲಿಸದಿದ್ದಲ್ಲಿ ಜಗತ್ತು ಮೂರಾಬಟ್ಟೆಯಾಗಲಿದೆ. ಮಾಜಿ ಉಪಮುಖ್ಯಮಂತ್ರಿ ದಿ| ಎಂ.ಪಿ.ಪ್ರಕಾಶ್‌ ಅವರ ವಟುಗಳ ಪಾಠ ಶಾಲೆ ತೆರೆಯುವ ಕನಸು ನನಸು ಮಾಡಲು ತಾವು ಜೋಳಿಗೆ ಹಾಕಲು ಸಿದ್ಧ ಎಂದು ತಿಳಿಸಿದರು. 

ಶಾಸಕ ಎಂ.ಪಿ.ರವೀಂದ್ರ ಮಾತನಾಡಿ, ವೀರಶೈವ ಮಠಗಳು ಅನ್ನ ದಾಸೋಹದ ಜೊತೆಗೆ ಜ್ಞಾನ ದಾಸೋಹ ನೀಡಿವೆ. ಹಾಲಸ್ವಾಮೀಜಿಗಳ ಮಠ ಎಲ್ಲಾ ಭಕ್ತ ಸಮೂಹ ಹೊಂದಿದೆ. ನಮ್ಮ ತಂದೆ ಎಂ.ಪಿ.ಪ್ರಕಾಶ್‌ ಅವರು ವಟುಗಳ ಪಾಠ ಶಾಲೆ ತೆರೆಯುವ ಕನಸು  ಹೊಂದಿದ್ದರು. ಅದು ನನಸಾಗಲಿಲ್ಲ, ದಿಂಗಾಲೇಶ್ವರ ಶ್ರೀಗಳ ನೇತೃತ್ವದಲ್ಲಿ ಅದನ್ನು ಸಕಾರಗೊಳಿಸಲಾಗುವುದು ಎಂದರು. 

ಅಗಡಿ ಅಕ್ಕಿಮಠದ ಗುರುಲಿಂಗ ಸ್ವಾಮೀಜಿ, ರಾಮಘಟ್ಟ ರೇವಣಸಿದ್ದೇಶ್ವರ ಶ್ರೀ, ನಿಚ್ಚವ್ವನಹಳ್ಳಿ ಹಾಲಸ್ವಾಮೀಜಿ, ಜಿಪಂ ಉಪಾಧ್ಯಕ್ಷ ಡಿ.ಸಿದ್ದಪ್ಪ, ಸದಸ್ಯ ಎಚ್‌.ಬಿ. ಪರುಶುರಾಮಪ್ಪ, ತಾಪಂ ಸದಸ್ಯರಾದ ಹುಲಿಕಟ್ಟಿ ಚಂದ್ರಪ್ಪ, ಓ.ರಾಮಪ್ಪ, ಟಿ.ಎಚ್‌.ಎಂ. ವಿರೂಪಾಕ್ಷಯ್ಯ, ಕೋಡಿಹಳ್ಳಿ ಭೀಮಪ್ಪ, ಎಂ.ವಿ.ಅಂಜಿನಪ್ಪ, ಎ.ಎಂ.ವಿಶ್ವನಾಥ್‌, ಅಬ್ದುಲ್‌ ರಹೀಮಾನಸಾಬ್‌, ವೆಂಕಟೇಶ್‌, ಸಿ.ಜಾವೀದ್‌, ವಸಂತಪ್ಪ, ಮಂಜುನಾಥ್‌, ಶಶಿಧರಸ್ವಾಮಿ ಮತ್ತಿತರರಿದ್ದರು.  

ಟಾಪ್ ನ್ಯೂಸ್

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ, ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ… ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

ಕಾಂಗ್ರೆಸ್‌ಗೆ ಶಾಕ್: ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಕ್ಷಯ್ ಕಾಂತಿ ಬಾಮ್

ಕಾಂಗ್ರೆಸ್‌ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

laxmi-hebbalkar

Belagavi; ಪ್ರಧಾನಿ ಮೋದಿ ಯಾಕೆ ಪ್ರಜ್ವಲ್ ‌ವರ್ತನೆ ಖಂಡಿಸಲಿಲ್ಲ…: ಲಕ್ಷ್ಮೀ ಹೆಬ್ಬಾಳ್ಕರ್

Bengaluru: ಇನ್‌ಸ್ಟಾದಲ್ಲಿ ಯುವತಿ ನಗ್ನ ಫೋಟೋ ವೈರಲ್‌; ಅಪರಿಚಿತನ ಮೇಲೆ ಕೇಸು

Bengaluru: ಇನ್‌ಸ್ಟಾದಲ್ಲಿ ಯುವತಿ ನಗ್ನ ಫೋಟೋ ವೈರಲ್‌; ಅಪರಿಚಿತನ ಮೇಲೆ ಕೇಸು

Chamarajanagara: ಇಂಡಿಗನತ್ತದಲ್ಲಿ ಮರುಮತದಾನ ಆರಂಭ

Chamarajanagara: ಇಂಡಿಗನತ್ತದಲ್ಲಿ ಮರುಮತದಾನ ಆರಂಭ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Davanagere; ಸಮಾವೇಶ ನಡೆದ ಮೈದಾನ ಸ್ವಚ್ಛಗೊಳಿಸಿದ ಗಾಯಿತ್ರಿ ಸಿದ್ದೇಶ್ವರ

Davanagere; ಸಮಾವೇಶ ನಡೆದ ಮೈದಾನ ಸ್ವಚ್ಛಗೊಳಿಸಿದ ಗಾಯಿತ್ರಿ ಸಿದ್ದೇಶ್ವರ

ನಾರಿಶಕ್ತಿ ವಿರೋಧಿಸುವ ಕಾಂಗ್ರೆಸ್‌ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ

ನಾರಿ ಶಕ್ತಿ ವಿರೋಧಿಸುವ ಕಾಂಗ್ರೆಸ್‌ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ

1-eewqeqwe

Davanagere;ಬೆಣ್ಣೆದೋಸೆಯೊಂದಿಗೆ ವಿಜಯೋತ್ಸವ ಆಚರಿಸಲು ಸಿದ್ಧತೆ ಮಾಡಿಕೊಳ್ಳಿ: ಮೋದಿ

Davanagere ಮೋದಿ ಸಮಾವೇಶ: ಬಿಸಿಲಿನ ನಡುವೆಯೂ ಸೇರಿದ ಸಹಸ್ರಾರು ಜನರು

Davanagere ಮೋದಿ ಸಮಾವೇಶ: ಬಿಸಿಲಿನ ನಡುವೆಯೂ ಸೇರಿದ ಸಹಸ್ರಾರು ಜನರು

ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ

Davanagere; ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ, ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ… ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

ಕಾಂಗ್ರೆಸ್‌ಗೆ ಶಾಕ್: ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಕ್ಷಯ್ ಕಾಂತಿ ಬಾಮ್

ಕಾಂಗ್ರೆಸ್‌ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

Davanagere; ಸಮಾವೇಶ ನಡೆದ ಮೈದಾನ ಸ್ವಚ್ಛಗೊಳಿಸಿದ ಗಾಯಿತ್ರಿ ಸಿದ್ದೇಶ್ವರ

Davanagere; ಸಮಾವೇಶ ನಡೆದ ಮೈದಾನ ಸ್ವಚ್ಛಗೊಳಿಸಿದ ಗಾಯಿತ್ರಿ ಸಿದ್ದೇಶ್ವರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.