ಪ್ರತಿಪಕ್ಷಗಳನ್ನು ಹಗುರವಾಗಿ ತೆಗೆದುಕೊಳ್ಳುವ ಪ್ರಯತ್ನ ಬೇಡ: ಯಡಿಯೂರಪ್ಪ


Team Udayavani, Sep 19, 2021, 3:45 PM IST

ಪ್ರತಿಪಕ್ಷಗಳನ್ನು ಹಗುರವಾಗಿ ತೆಗೆದುಕೊಳ್ಳುವ ಪ್ರಯತ್ನ ಬೇಡ: ಯಡಿಯೂರಪ್ಪ

ದಾವಣಗೆರೆ: ಯಾರೂ ಪ್ರತಿಪಕ್ಷಗಳನ್ನು ಹಗುರವಾಗಿ ತೆಗೆದುಕೊಳ್ಳುವ ಪ್ರಯತ್ನ ಮಾಡಬೇಡಿ. ಅವುಗಳಿಗೆ ಅವರದ್ದೇ ಲೆಕ್ಕಾಚಾರ; ಶಕ್ತಿ ಇದೆ. ರಾಜ್ಯದಲ್ಲಿ ಕಾಂಗ್ರೆಸ್ ಎದ್ದು ಕುಳಿತಿರುವುದರಿಂದ ನಾವು ಅಷ್ಟೇ ಪ್ರಬುದ್ಧವಾಗಿ ಹೆಜ್ಜೆ ಇಡಬೇಕಾಗಿದೆ ಎಂದು ನಿಕಟಪೂರ್ವ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹೇಳಿದರು.

ನಗರದಲ್ಲಿ ರವಿವಾರ ನಡೆದ ಬಿಜೆಪಿ ರಾಜ್ಯ ಕಾರ್ಯಕಾರಿಣಿ ಸಭೆ ಉದ್ಘಾಟನೆ ಸಮಾರಂಭದಲ್ಲಿ ಅವರು ಮಾತನಾಡಿದರು. ಕಾಂಗ್ರೆಸ್‌ನ ಮುಖಂಡರು ಬಿಜೆಪಿಯ ಕೆಲ ಮುಖಂಡರನ್ನು ಸಂಪರ್ಕ ಮಾಡುತ್ತಿರುವುದು ಎಲ್ಲರಿಗೂ ಗೊತ್ತಿದೆ. ಯಾರೂ ಇದಕ್ಕೆ ಅವಕಾಶ ಮಾಡಿಕೊಡದೆ, ಆತ್ಮವಿಶ್ವಾದಿಂದ ಮುನ್ನಡೆಯಬೇಕಾಗಿದೆ. ಬಿಜೆಪಿಯನ್ನು 140ಕ್ಕೂ ಹೆಚ್ಚು ಕ್ಷೇತ್ರಗಳಲ್ಲಿ ಗೆಲ್ಲಿಸುವ ಮೂಲಕ ಮತ್ತೊಮ್ಮೆ ಅಧಿಕಾರಕ್ಕೆ ತರುವ ಪ್ರಾಮಾಣಿಕ ಪ್ರಯತ್ನ ನಾವು ನೀವೆಲ್ಲ ಸೇರಿ ಮಾಡಬೇಕಾಗಿದೆ ಎಂದರು.

ಮುಂದೆ ನಡೆಯುವ ಹಾನಗಲ್, ಸಿಂಧಗಿ ವಿಧಾನಸಬೆ ಉಪಚುನಾವಣೆಯನ್ನು ಗೆಲ್ಲದಿದ್ದರೆ ಅದು ಮುಂದೆ ರಾಜ್ಯದಲ್ಲಿ ಯಾವ ಸಂದೇಶ ಹೋಗಬಹುದು ಎಂಬುದನ್ನು ಯೋಚನೆ ಮಾಡಬೇಕಾಗಿದೆ. ಎಲ್ಲರ ಶ್ರಮದಿಂದ ನಾವು ಈ ಉಪಚುನಾವಣೆಯಲ್ಲಿ ಗೆದ್ದರೆ ಕಾಂಗ್ರೆಸ್‌ಗೆ ದೊಡ್ಡ ಪಾಠ ಕಲಿಸಿದಂತಾಗುತ್ತದೆ. ಹಾನಗಲ್ ಹಾಗೂ ಸಿಂಧಗಿ ಉಪಚುನಾವಣೆ ನಮ್ಮ ಮುಂದಿರುವ ದೊಡ್ಡ ಅಗ್ನಿಪರೀಕ್ಷೆ. ಇದರ ಬಗ್ಗೆ ವಿಶೇಷ ಶ್ರಮವಹಿಸಬೇಕಾಗಿದೆ ಎಂದರು.

ಒಬ್ಬನೇ ಪ್ರವಾಸ ಮಾಡಲು ಸಾಧ್ಯವೇ?

ಯಡಿಯೂರಪ್ಪ ರಾಜ್ಯ ಪ್ರವಾಸದ ಬಗ್ಗೆ ಹೆಚ್ಚು ಚರ್ಚೆಯಾಗುತ್ತಿದೆ. ಆದರೆ, ನಾನು ಒಬ್ಬನೇ ಪ್ರವಾಸ ಮಾಡಲು ಸಾಧ್ಯವೇನು? ನಮ್ಮ ಜತೆ ಶಾಸಕರು, ಸಂಸದರು. ನಾಯಕರು, ಸ್ಥಳೀಯ ಮುಖಂಡರು, ಕಾರ್ಯಕರ್ತರು ಎಲ್ಲರೂ ಸಹಜವಾಗಿ ಇರುತ್ತಾರೆ. ನಾಲ್ಕಾರು ತಂಡಗಳ ಮೂಲಕ ಪ್ರವಾಸ ಮಾಡುತ್ತೇವೆ ಎಂದು ಬಿಎಸ್ ವೈ ಹೇಳಿದರು.

ಮಂದಿರ ಕೆಡವಲು ಬಿಡೆವು

ರಾಜ್ಯದಲ್ಲಿ ಇನ್ನು ಮುಂದೆ ಮಂದಿರಗಳನ್ನು ಕೆಡವಲು ಅವಕಾಶ ಕೊಡುವುದಿಲ್ಲ. ಮುಂದೆ ಹೀಗಾಗದಂತೆ ಎಚ್ಚರ ವಹಿಸುತ್ತೇವೆ. ಮಂದಿರಗಳನ್ನು ಉಳಿಸಲು ಅಗತ್ಯ ಎಲ್ಲ ಕಾನೂನುಕ್ರಮ ಕೈಗೊಳ್ಳುತ್ತೇವೆ. ಜತೆಗೆ ಅಗತ್ಯಬಿದ್ದರೆ ಸುಪ್ರಿಂ ಕೋರ್ಟ್‌ಗೂ ಮೇಲ್ಮನವಿ ಮಾಡಲಾಗುವುದು. ಈಗಾಗಲೇ ನಡೆದ ಒಂದೆರಡು ಘಟನೆ ಮನಸ್ಸಲ್ಲಿಟ್ಟುಕೊಂಡು ಯಾವ ಕಾರ್ಯಕರ್ತರೂ ಚಿಂತೆ, ಆತಂಕ ಪಡುವುದು ಬೇಡ ಎಂದು ಯಡಿಯೂರಪ್ಪ ಹೇಳಿದರು.

ಟಾಪ್ ನ್ಯೂಸ್

Delhi Police: ಮಾರುತಿ ಸ್ವಿಫ್ಟ್‌ ಕಾರಿನಲ್ಲಿ 30ಕ್ಕೂ ಅಧಿಕ ಕುರಿ, ಮೇಕೆ ಸಾಗಾಟ!

Delhi Police: ಮಾರುತಿ ಸ್ವಿಫ್ಟ್‌ ಕಾರಿನಲ್ಲಿ 30ಕ್ಕೂ ಅಧಿಕ ಕುರಿ, ಮೇಕೆ ಸಾಗಾಟ!

BJP 2025ರಲ್ಲಿ ಹಿಂದುಳಿದ ಸಮುದಾಯಗಳ ಮೀಸಲಾತಿ ತೆಗೆದು ಹಾಕಲಿದೆ: ರೇವಂತ್ ರೆಡ್ಡಿ

BJP 2025ರಲ್ಲಿ ಹಿಂದುಳಿದ ಸಮುದಾಯಗಳ ಮೀಸಲಾತಿ ತೆಗೆದು ಹಾಕಲಿದೆ: ರೇವಂತ್ ರೆಡ್ಡಿ

Patna: ಹೋಟೆಲ್ ನಲ್ಲಿ ಭಾರಿ ಅಗ್ನಿ ಅವಘಡ, 6 ಮಂದಿ ಸಜೀವ ದಹನ, ಹಲವರಿಗೆ ಗಾಯ

Patna: ಹೋಟೆಲ್ ನಲ್ಲಿ ಭಾರಿ ಅಗ್ನಿ ಅವಘಡ, 6 ಮಂದಿ ಸಜೀವ ದಹನ, ಹಲವರಿಗೆ ಗಾಯ

ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ

Loksabha; ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ

ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್‌ಗೆ ಸೂಚನೆ

ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್‌ಗೆ ಸೂಚನೆ

Anil Kumble Reveals His IPL Bid 2008

IPL: ಆರ್ ಸಿಬಿ ತಂಡಕ್ಕಾಗಿ ಮಲ್ಯ ಅಂದು…..: ವಿಶೇಷ ಘಟನೆ ನೆನೆದ ಅನಿಲ್ ಕುಂಬ್ಳೆ

11-belthangady

LS Polls: ಬೆಳ್ತಂಗಡಿ ತಾಲೂಕಿನ ಉಜಿರೆಯ ಮಸ್ಟರಿಂಗ್ ಕೇಂದ್ರಕ್ಕೆ ದ.ಕ. ಜಿಲ್ಲಾಧಿಕಾರಿ ಭೇಟಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

siddaramaiah

Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ‌ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ‌

Lok Sabha Polls: “ಮೋದಿ ಮತ್ತೂಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ

Lok Sabha Polls: “ಮೋದಿ ಮತ್ತೊಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ

Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್

Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Delhi Police: ಮಾರುತಿ ಸ್ವಿಫ್ಟ್‌ ಕಾರಿನಲ್ಲಿ 30ಕ್ಕೂ ಅಧಿಕ ಕುರಿ, ಮೇಕೆ ಸಾಗಾಟ!

Delhi Police: ಮಾರುತಿ ಸ್ವಿಫ್ಟ್‌ ಕಾರಿನಲ್ಲಿ 30ಕ್ಕೂ ಅಧಿಕ ಕುರಿ, ಮೇಕೆ ಸಾಗಾಟ!

BJP 2025ರಲ್ಲಿ ಹಿಂದುಳಿದ ಸಮುದಾಯಗಳ ಮೀಸಲಾತಿ ತೆಗೆದು ಹಾಕಲಿದೆ: ರೇವಂತ್ ರೆಡ್ಡಿ

BJP 2025ರಲ್ಲಿ ಹಿಂದುಳಿದ ಸಮುದಾಯಗಳ ಮೀಸಲಾತಿ ತೆಗೆದು ಹಾಕಲಿದೆ: ರೇವಂತ್ ರೆಡ್ಡಿ

We Are The Bad Boys song from Vidyarthi Vidyarthiniyare

Kannada Cinema; ಬ್ಯಾಡ್‌ ಬಾಯ್ಸ್ ಬಂದ್ರು..! ವಿದ್ಯಾರ್ಥಿ ವಿದ್ಯಾರ್ಥಿನಿಯರ ಹಾಡಿದು…

Patna: ಹೋಟೆಲ್ ನಲ್ಲಿ ಭಾರಿ ಅಗ್ನಿ ಅವಘಡ, 6 ಮಂದಿ ಸಜೀವ ದಹನ, ಹಲವರಿಗೆ ಗಾಯ

Patna: ಹೋಟೆಲ್ ನಲ್ಲಿ ಭಾರಿ ಅಗ್ನಿ ಅವಘಡ, 6 ಮಂದಿ ಸಜೀವ ದಹನ, ಹಲವರಿಗೆ ಗಾಯ

14-fusion

Rural Life: ಗ್ರಾಮೀಣ ಬದುಕಿನ ಮೆಲುಕು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.