ಪ್ರತಿಪಕ್ಷಗಳನ್ನು ಹಗುರವಾಗಿ ತೆಗೆದುಕೊಳ್ಳುವ ಪ್ರಯತ್ನ ಬೇಡ: ಯಡಿಯೂರಪ್ಪ
Team Udayavani, Sep 19, 2021, 3:45 PM IST
ದಾವಣಗೆರೆ: ಯಾರೂ ಪ್ರತಿಪಕ್ಷಗಳನ್ನು ಹಗುರವಾಗಿ ತೆಗೆದುಕೊಳ್ಳುವ ಪ್ರಯತ್ನ ಮಾಡಬೇಡಿ. ಅವುಗಳಿಗೆ ಅವರದ್ದೇ ಲೆಕ್ಕಾಚಾರ; ಶಕ್ತಿ ಇದೆ. ರಾಜ್ಯದಲ್ಲಿ ಕಾಂಗ್ರೆಸ್ ಎದ್ದು ಕುಳಿತಿರುವುದರಿಂದ ನಾವು ಅಷ್ಟೇ ಪ್ರಬುದ್ಧವಾಗಿ ಹೆಜ್ಜೆ ಇಡಬೇಕಾಗಿದೆ ಎಂದು ನಿಕಟಪೂರ್ವ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹೇಳಿದರು.
ನಗರದಲ್ಲಿ ರವಿವಾರ ನಡೆದ ಬಿಜೆಪಿ ರಾಜ್ಯ ಕಾರ್ಯಕಾರಿಣಿ ಸಭೆ ಉದ್ಘಾಟನೆ ಸಮಾರಂಭದಲ್ಲಿ ಅವರು ಮಾತನಾಡಿದರು. ಕಾಂಗ್ರೆಸ್ನ ಮುಖಂಡರು ಬಿಜೆಪಿಯ ಕೆಲ ಮುಖಂಡರನ್ನು ಸಂಪರ್ಕ ಮಾಡುತ್ತಿರುವುದು ಎಲ್ಲರಿಗೂ ಗೊತ್ತಿದೆ. ಯಾರೂ ಇದಕ್ಕೆ ಅವಕಾಶ ಮಾಡಿಕೊಡದೆ, ಆತ್ಮವಿಶ್ವಾದಿಂದ ಮುನ್ನಡೆಯಬೇಕಾಗಿದೆ. ಬಿಜೆಪಿಯನ್ನು 140ಕ್ಕೂ ಹೆಚ್ಚು ಕ್ಷೇತ್ರಗಳಲ್ಲಿ ಗೆಲ್ಲಿಸುವ ಮೂಲಕ ಮತ್ತೊಮ್ಮೆ ಅಧಿಕಾರಕ್ಕೆ ತರುವ ಪ್ರಾಮಾಣಿಕ ಪ್ರಯತ್ನ ನಾವು ನೀವೆಲ್ಲ ಸೇರಿ ಮಾಡಬೇಕಾಗಿದೆ ಎಂದರು.
ಮುಂದೆ ನಡೆಯುವ ಹಾನಗಲ್, ಸಿಂಧಗಿ ವಿಧಾನಸಬೆ ಉಪಚುನಾವಣೆಯನ್ನು ಗೆಲ್ಲದಿದ್ದರೆ ಅದು ಮುಂದೆ ರಾಜ್ಯದಲ್ಲಿ ಯಾವ ಸಂದೇಶ ಹೋಗಬಹುದು ಎಂಬುದನ್ನು ಯೋಚನೆ ಮಾಡಬೇಕಾಗಿದೆ. ಎಲ್ಲರ ಶ್ರಮದಿಂದ ನಾವು ಈ ಉಪಚುನಾವಣೆಯಲ್ಲಿ ಗೆದ್ದರೆ ಕಾಂಗ್ರೆಸ್ಗೆ ದೊಡ್ಡ ಪಾಠ ಕಲಿಸಿದಂತಾಗುತ್ತದೆ. ಹಾನಗಲ್ ಹಾಗೂ ಸಿಂಧಗಿ ಉಪಚುನಾವಣೆ ನಮ್ಮ ಮುಂದಿರುವ ದೊಡ್ಡ ಅಗ್ನಿಪರೀಕ್ಷೆ. ಇದರ ಬಗ್ಗೆ ವಿಶೇಷ ಶ್ರಮವಹಿಸಬೇಕಾಗಿದೆ ಎಂದರು.
ಒಬ್ಬನೇ ಪ್ರವಾಸ ಮಾಡಲು ಸಾಧ್ಯವೇ?
ಯಡಿಯೂರಪ್ಪ ರಾಜ್ಯ ಪ್ರವಾಸದ ಬಗ್ಗೆ ಹೆಚ್ಚು ಚರ್ಚೆಯಾಗುತ್ತಿದೆ. ಆದರೆ, ನಾನು ಒಬ್ಬನೇ ಪ್ರವಾಸ ಮಾಡಲು ಸಾಧ್ಯವೇನು? ನಮ್ಮ ಜತೆ ಶಾಸಕರು, ಸಂಸದರು. ನಾಯಕರು, ಸ್ಥಳೀಯ ಮುಖಂಡರು, ಕಾರ್ಯಕರ್ತರು ಎಲ್ಲರೂ ಸಹಜವಾಗಿ ಇರುತ್ತಾರೆ. ನಾಲ್ಕಾರು ತಂಡಗಳ ಮೂಲಕ ಪ್ರವಾಸ ಮಾಡುತ್ತೇವೆ ಎಂದು ಬಿಎಸ್ ವೈ ಹೇಳಿದರು.
ಮಂದಿರ ಕೆಡವಲು ಬಿಡೆವು
ರಾಜ್ಯದಲ್ಲಿ ಇನ್ನು ಮುಂದೆ ಮಂದಿರಗಳನ್ನು ಕೆಡವಲು ಅವಕಾಶ ಕೊಡುವುದಿಲ್ಲ. ಮುಂದೆ ಹೀಗಾಗದಂತೆ ಎಚ್ಚರ ವಹಿಸುತ್ತೇವೆ. ಮಂದಿರಗಳನ್ನು ಉಳಿಸಲು ಅಗತ್ಯ ಎಲ್ಲ ಕಾನೂನುಕ್ರಮ ಕೈಗೊಳ್ಳುತ್ತೇವೆ. ಜತೆಗೆ ಅಗತ್ಯಬಿದ್ದರೆ ಸುಪ್ರಿಂ ಕೋರ್ಟ್ಗೂ ಮೇಲ್ಮನವಿ ಮಾಡಲಾಗುವುದು. ಈಗಾಗಲೇ ನಡೆದ ಒಂದೆರಡು ಘಟನೆ ಮನಸ್ಸಲ್ಲಿಟ್ಟುಕೊಂಡು ಯಾವ ಕಾರ್ಯಕರ್ತರೂ ಚಿಂತೆ, ಆತಂಕ ಪಡುವುದು ಬೇಡ ಎಂದು ಯಡಿಯೂರಪ್ಪ ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ
Lok Sabha Polls: “ಮೋದಿ ಮತ್ತೊಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ
Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್
Lok Sabha Election: ಸೀನಿಯರ್ ಖೂಬಾಗೆ ಜ್ಯೂನಿಯರ್ ಖಂಡ್ರೆ ಸವಾಲು
Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…
MUST WATCH
ಹೊಸ ಸೇರ್ಪಡೆ
Delhi Police: ಮಾರುತಿ ಸ್ವಿಫ್ಟ್ ಕಾರಿನಲ್ಲಿ 30ಕ್ಕೂ ಅಧಿಕ ಕುರಿ, ಮೇಕೆ ಸಾಗಾಟ!
BJP 2025ರಲ್ಲಿ ಹಿಂದುಳಿದ ಸಮುದಾಯಗಳ ಮೀಸಲಾತಿ ತೆಗೆದು ಹಾಕಲಿದೆ: ರೇವಂತ್ ರೆಡ್ಡಿ
Kannada Cinema; ಬ್ಯಾಡ್ ಬಾಯ್ಸ್ ಬಂದ್ರು..! ವಿದ್ಯಾರ್ಥಿ ವಿದ್ಯಾರ್ಥಿನಿಯರ ಹಾಡಿದು…
Patna: ಹೋಟೆಲ್ ನಲ್ಲಿ ಭಾರಿ ಅಗ್ನಿ ಅವಘಡ, 6 ಮಂದಿ ಸಜೀವ ದಹನ, ಹಲವರಿಗೆ ಗಾಯ
Rural Life: ಗ್ರಾಮೀಣ ಬದುಕಿನ ಮೆಲುಕು