ವದಂತಿಗಳಿಗೆ ಕಿವಿಗೊಡದಿರಿ: ಮಹಾಂತೇಶ್‌


Team Udayavani, Sep 26, 2020, 6:55 PM IST

ವದಂತಿಗಳಿಗೆ ಕಿವಿಗೊಡದಿರಿ: ಮಹಾಂತೇಶ್‌

ಜಗಳೂರು: ಜಿಲ್ಲಾಡಳಿತದಿಂದ ಕೋವಿಡ್‌ ನ್ನು ಸಮರ್ಪಕವಾಗಿ ನಿಭಾಯಿಸುತ್ತಿದ್ದು, ವೆಂಟಿಲೇಟರ್‌ ಬೆಡ್‌ಗಳ ಕೊರತೆ  ಟೆಸ್ಟ್‌ ಮಾಡಿಸಿದರೆ ಹಣ ಬರುತ್ತದೆ ಎಂಬ ವದಂತಿಗಳಿಗೆ ಸಾರ್ವಜನಿಕರು ಕಿವಿಗೊಡಬಾರದು ಎಂದು ಜಿಲ್ಲಾಧಿಕಾರಿ ಮಹಾಂತೇಶ್‌ ಬೀಳಗಿ ಮನವಿ ಮಾಡಿದರು.

ಪಟ್ಟಣದ ಸರ್ಕಾರಿ ಆಸ್ಪತ್ರೆಗೆ ಭೇಟಿ ನೀಡಿ ಐಸೋಲೇಷನ್‌ ವಾರ್ಡ್‌ ಪರಿಶೀಲಿಸಿ ನಂತರ ಮಾತನಾಡಿದ ಅವರು, ಕೋವಿಡ್‌ ಪರೀಕ್ಷೆ ಮಾಡಿಸಿದರೆ ಹಣ ಬರುತ್ತದೆ ಎಂಬುದು ಸೇರಿದಂತೆ ಸಾಕಷ್ಟು ವದಂತಿಗಳು ಹಬ್ಬಿದ್ದು ಅವೆಲ್ಲಾ ಸುಳ್ಳು. ಹಾಗಾಗಿ ಸಾರ್ವಜನಿಕರು ಕಿವಿ ಕೊಡಬಾರದು. ಸೋಂಕಿತರ ಸಂಖ್ಯೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ರ್ಯಾಪಿಡ್‌ ಟೆಸ್ಟ್‌ಗಳನ್ನು ಕಡಿಮೆ ಮಾಡಿ ಗಂಟಲು ದ್ರವ ಪರೀಕ್ಷೆ ಒತ್ತು ನೀಡುವಂತೆ ಮತ್ತು ಪ್ರತಿನಿತ್ಯ 2500 ಟೆಸ್ಟ್‌ ಮಾಡಬೇಕು ಎಂದು ಸರಕಾರದ ಮುಖ್ಯ ಕಾರ್ಯದರ್ಶಿಗಳ ನಿರ್ದೇಶನವಾಗಿದೆ. ಹಾಗಾಗಿ ಪ್ರತಿಯೊಬ್ಬರು ಕೋವಿಡ್‌ ಪರೀಕ್ಷೆ ಮಾಡಿಸಿಕೊಳ್ಳಿ ಎಂದು ಸಲಹೆ ನೀಡಿದರು.

ವೈದ್ಯರು ಎಚ್ಚರದಿಂದ ಕರ್ತವ್ಯ ನಿರ್ವಹಿಸಬೇಕು. ಕೋವಿಡ್‌ ರೋಗಿಗಳ ಬಗ್ಗೆ ಹೆಚ್ಚು ಗಮನಹರಿಸಿ ಎಂದು ಸೂಚನೆ ನೀಡಿದರು. ಆಸ್ಪತ್ರೆಯ ಎಡಭಾಗದಲ್ಲಿ ಕೋವಿಡ್‌ ವಾರ್ಡ್‌ಗೆ ಪ್ರತ್ಯೇಕವಾಗಿ ನಿರ್ಮಾಣಗೊಳ್ಳುತ್ತಿರುವ ರ್‍ಯಾಂಪ್‌ ಕಾಮಗಾರಿ ಇನ್ನೂ 3 ದಿನದೊಳಗೆ ಪೂರ್ಣಗೊಳ್ಳಬೇಕು. ಕೋವಿಡ್‌ ರೋಗಿಗಳಿಗೆ ಯಾವುದೇ ತೊಂದರೆಯಾಗದಂತೆ ಮೇಲ್ಭಾಗದಲ್ಲಿ ಪ್ರತ್ಯೇಕ ವಾರ್ಡ್‌ಗಳಲ್ಲಿ ವ್ಯವಸ್ಥೆ ಕಲ್ಪಿಸಿ ಇತರೆ ರೋಗಿಗಳನ್ನು ಕೆಳಭಾಗದಲ್ಲಿರಿಸಿ ಚಿಕಿತ್ಸೆ ನೀಡಬೇಕು ಎಂದರು. ಆಂಬ್ಯುಲೆನ್ಸ್‌ ಕೊರತೆಯಿಂದ ಎಲ್ಲಾ ರೀತಿಯ ರೋಗಿಗಳಿಗೂ ಒಂದೇ ಆಂಬ್ಯುಲೆನ್ಸ್‌ ಬಳಕೆ ಮಾಡುತ್ತಿರುವುದು ಗಮನಕ್ಕೆ ಬಂದಿದ್ದು, ಕೂಡಲೇ ಬಗೆಹರಿಸಲಾಗುವುದು ಎಂದು ತಿಳಿಸಿದರು.

ಪ.ಪಂ ಜೆಸಿಬಿ ದುರಸ್ತಿಯಲ್ಲಿದ್ದು, ಕೋವಿಡ್‌ ರೋಗಿಗಳ ಶವಸಂಸ್ಕಾರಕ್ಕೆ ತೊಂದರೆಯಾಗುತ್ತಿದೆ ಎಂಬ ದೂರಿನ ಬಗ್ಗೆ ತಕ್ಷಣವೇ ಜೆಸಿಬಿ ರಿಪೇರಿ ಮಾಡಿಸಲು ಮುಖ್ಯಾಧಿಕಾರಿ ರಾಜು ಬಣಕಾರ್‌ ಅವರಿಗೆ ಜಿಲ್ಲಾಧಿಕಾರಿಗಳು ಸೂಚನೆ ನೀಡಿದರು.

ಫೈನಾನ್ಸ್‌ಗಳ ಮೇಲೆ ನಿಗಾವಹಿಸಿ: ಗ್ರಾಮೀಣ ಭಾಗದಲ್ಲಿ ಯಾವುದೇ ಕೋವಿಡ್ ಬಗ್ಗೆ ಮುಂಜಾಗ್ರತಾ ಕ್ರಮಗಳಾದ ಸಾನಿಟೈಸರ್‌, ಮಾಸ್ಕ್ ಸಾಮಾಜಿಕ ಅಂತರವಿಲ್ಲದೆ ಸಾಲ ವಸೂಲಾತಿಗೆ ಹೋಗುತ್ತಿರುವ ಮಾಹಿತಿ ಬಂದಿದ್ದು, ಕೂಡಲೇ ತಹಶೀಲ್ದಾರ್‌ ಹಾಗೂ ಡಿವೈಎಸ್ಪಿ ಅವರು ಫೈನಾನ್ಸ್‌ ಸಂಸ್ಥೆಗಳ ಮುಖ್ಯಸ್ಥರ ಜತೆ ಸಭೆ ನಡೆಸಿ ಎಚ್ಚರಿಕೆ ನೀಡಿರಿ ಎಂದು ಸೂಚಿಸಿದರು.

ತಹಶೀಲ್ದಾರ್‌ ಡಾ.ನಾಗವೇಣಿ, ಪಪಂ ಮುಖ್ಯಾಧಿಕಾರಿ ರಾಜು ಡಿ. ಬಣಕಾರ್‌, ಕಂದಾಯ ನಿರೀಕ್ಷಕ ಕುಬೇಂದ್ರನಾಯ್ಕ, ಡಾ.ಸಂಜಯ್‌ ಹಿರಿಯ ಶುಶ್ರೂಷಕಿ ಮೀನಾಕ್ಷಮ್ಮ, ಮಹಾದೇವಮ್ಮ ಕಿರಿಯ ಆರೋಗ್ಯ ಸಹಾಯಕ ಪಿ.ಎಂ. ರುದ್ರೇಶ್‌ ಉಪಸ್ಥಿತರಿದ್ದರು.

ಟಾಪ್ ನ್ಯೂಸ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂ…ಆದರೆ…

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Election: ಮೋದಿಗೆ ಪರ್ಯಾಯ ನಾಯಕ ಮತ್ತೊಬ್ಬರಿಲ್ಲ… ಗಾಯಿತ್ರಿ ಸಿದ್ದೇಶ್ವರ

Lok Sabha Election: ಮೋದಿಗೆ ಪರ್ಯಾಯ ನಾಯಕ ಮತ್ತೊಬ್ಬರಿಲ್ಲ… ಗಾಯಿತ್ರಿ ಸಿದ್ದೇಶ್ವರ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Vijayendra (2)

PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ

Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್

Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್

Gayatri Siddeshwar: ಸಮಗ್ರ ನೀರಾವರಿ ಸೌಲಭ್ಯಕ್ಕೆ ಆದ್ಯತೆ; ಗಾಯಿತ್ರಿ

Gayatri Siddeshwar: ಸಮಗ್ರ ನೀರಾವರಿ ಸೌಲಭ್ಯಕ್ಕೆ ಆದ್ಯತೆ; ಗಾಯಿತ್ರಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

ಏ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

LS Polls: ರಾಜ್ಯದಲ್ಲಿ ಕಾಂಗ್ರೆಸ್‌ ವಿರೋಧಿ ಅಲೆ: ರಾಘವೇಂದ್ರ

LS Polls: ರಾಜ್ಯದಲ್ಲಿ ಕಾಂಗ್ರೆಸ್‌ ವಿರೋಧಿ ಅಲೆ: ರಾಘವೇಂದ್ರ

Lok Sabha Election: ಮೋದಿಗೆ ಪರ್ಯಾಯ ನಾಯಕ ಮತ್ತೊಬ್ಬರಿಲ್ಲ… ಗಾಯಿತ್ರಿ ಸಿದ್ದೇಶ್ವರ

Lok Sabha Election: ಮೋದಿಗೆ ಪರ್ಯಾಯ ನಾಯಕ ಮತ್ತೊಬ್ಬರಿಲ್ಲ… ಗಾಯಿತ್ರಿ ಸಿದ್ದೇಶ್ವರ

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.