ಪೋಷಕರ ನಿರೀಕ್ಷೆ ಹುಸಿಗೊಳಿಸದಿರಿ
Team Udayavani, Mar 16, 2022, 4:45 PM IST
ದಾವಣಗೆರೆ: ಪೋಷಕರ ನಿರೀಕ್ಷೆ, ಅಪೇಕ್ಷೆಗೆ ಅನುಗುಣವಾಗಿ ಉತ್ತಮ ಅಭ್ಯಾಸದ ಮೂಲಕ ಉತ್ತುಂಗಕ್ಕೇರಬೇಕು ಎಂದು ಕಲಾಕುಂಚ ಸಾಂಸ್ಕೃತಿಕ ಸಂಸ್ಥೆಯ ಸಂಸ್ಥಾಪಕ ಸಾಲಿಗ್ರಾಮ ಗಣೇಶ್ ಶೆಣೈ ಹೇಳಿದರು. ನಗರದ ಶ್ರೀ ಸಿದ್ಧಗಂಗಾ ವಿದ್ಯಾಸಂಸ್ಥೆಯಲ್ಲಿ ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳಿಗೆ ಏರ್ಪಡಿಸಿದ್ದ ಪರೀಕ್ಷಾ ಪೂರ್ವಭಾವಿ ಸಿದ್ಧತಾ ಕಾರ್ಯಾಗಾರದಲ್ಲಿ ಅವರು ಉಪನ್ಯಾಸ ನೀಡಿದರು. ಪೋಷಕರು ತಮ್ಮ ಮಕ್ಕಳು ವಿದ್ಯಾಭ್ಯಾಸದಲ್ಲಿ ಉತ್ತಮ ಅಂಕ ಪಡೆದು ಉನ್ನತ ಮಟ್ಟದ ಸಾಧನೆ ಮಾಡಿ ಉತ್ತುಂಗಕ್ಕೆ ಏರಬೇಕು ಎಂಬ ಆಕಾಂಕ್ಷೆಯೊಂದಿಗೆ ತುಂಬಾ ನಿರೀಕ್ಷೆ ಇಟ್ಟುಕೊಂಡಿರುತ್ತಾರೆ. ಅದನ್ನು ಈಡೇರಿಸುವತ್ತ ಎಲ್ಲ ಮಕ್ಕಳು ಗಮನ ನೀಡುವುದು ಮಾತ್ರವಲ್ಲ ಸಾಧಿಸಿ ತೋರಿಸಬೇಕು ಎಂದರು.
ಮಕ್ಕಳು ತಂದೆ-ತಾಯಿಗಳ ಅಪೇಕ್ಷೆಗೆ ಅನುಗುಣವಾಗಿ ಯಾವುದೇ ಅಡ್ಡ ದಾರಿ ಹಿಡಿಯದೆ ಓದಿನ ಕಡೆ ಹೆಚ್ಚಿನ ಆದ್ಯತೆ, ಮಾನ್ಯತೆ ಕೊಟ್ಟು ಸ್ಪಂದಿಸಬೇಕಾಗಿರುವುದು ಆದ್ಯ ಕರ್ತವ್ಯ. ಎಸ್ಸೆಸ್ಸೆಲ್ಸಿ ಪರೀಕ್ಷೆ ಬರೆಯುವ ಮಕ್ಕಳು ಯಾವುದೇ ರೀತಿಯ ಉಡಾಫೆ, ನಿರ್ಲಕ್ಷ ಮಾಡದೆ ಮುಂದಿನ ಭವ್ಯ ಭವಿಷ್ಯದ ನಾಂದಿ ಹಾಡುವ, ಭದ್ರವಾದ ಬುನಾದಿಗೆ ಪೂರಕವಾದ ಸಂದರ್ಭವನ್ನು ಗಂಭೀರವಾಗಿ ಪರಿಗಣಿಸಬೇಕು. ಚೆನ್ನಾಗಿ ವ್ಯಾಸಂಗ ಮಾಡಬೇಕು ಎಂದು ಸಲಹೆ ನೀಡಿದರು.
ಕಲಾಕುಂಚ ಮಹಿಳಾ ಸಂಸ್ಥೆಯ ಸಂಸ್ಥಾಪಕಿ ಜ್ಯೋತಿ ಗಣೇಶ್ ಶೆಣೈ, ಹೇಮಾ ಶಾಂತಪ್ಪ ಪೂಜಾರಿ, ಗಿರಿಜಮ್ಮ ನಾಗರಾಜ್, ಶಾರದಮ್ಮ ಶಿವನಪ್ಪ ಇತರರು ಇದ್ದರು. “ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಅತಿ ಹೆಚ್ಚು ಅಂಕ ಪಡೆದು ಉತ್ತಮ ಫಲಿತಾಂಶದೊಂದಿಗೆ ವ್ಯಾಸಂಗ ಮಾಡಿದ ಶಾಲೆಗೆ, ಪೋಷಕರಿಗೆ, ಹುಟ್ಟಿದ ಊರಿಗೆ ಕೀರ್ತಿ ತಂದು ಕೊಡುತ್ತೇವೆ’ ಎಂದು ವಿದ್ಯಾರ್ಥಿಗಳು ಪ್ರತಿಜ್ಞಾವಿಧಿ ಸ್ವೀಕರಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Panchamasali ಎಂಬ ಕಾರಣಕ್ಕೆ ಯತ್ನಾಳ್ಗೆ ಸಿಎಂ ಅವಕಾಶ ನಿರಾಕರಣೆ: ವಚನಾನಂದ ಶ್ರೀ
Election Campaign: ಕಾಂಗ್ರೆಸ್ನಲ್ಲಿಲ್ಲ ಮೋದಿಗೆ ಸಮಾನ ನಾಯಕತ್ವ: ಗಾಯಿತ್ರಿ ಸಿದ್ದೇಶ್ವರ
Gayathri Siddeshwar: ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಗಾಯಿತ್ರಿ ಜನ್ಮದಿನ ಆಚರಣೆ
Eshwarappa ವಿರುದ್ಧ ಕ್ರಮದ ಬಗ್ಗೆ ಪಕ್ಷದಿಂದಲೇ ನಿರ್ಧಾರ: ಯಡಿಯೂರಪ್ಪ
Davanagare: ಚುನಾವಣಾ ತರಬೇತಿಗೆ ಚಕ್ಕರ್; ಅನುಚಿತ ವರ್ತನೆಗೆ ಶಿಕ್ಷಕ ಅಮಾನತು